Homeಕರ್ನಾಟಕಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

ಎಲ್ಲೆಡೆ ಕೊರೋನ ಭೀತಿ : ಮಾಸ್ಕ್ ಸಿಗದೆ ಜನರ ಪರದಾಟ

- Advertisement -
- Advertisement -

ಭಾರತದಲ್ಲಿ 31 ಜನರಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದ್ದು, ಜನ ಸಂದಣಿ ಇರುವ ಕಡೆಗೆ ಹೋಗಲು ಹೆದರಿಕೊಳ್ಳುತ್ತಿದ್ದಾರೆ. ಒಂದೊಮ್ಮೆ ಹೋಗಲೇ ಬೇಕಾದರೆ ಮಾಸ್ಕ್ ಧರಿಸಿ ಹೋಗುತ್ತಿರುವುದು ಸಾಮಾನ್ಯ ಸಂಗತಿಯಾಗಿದೆ. ಕೊರೋನ ವೈರಸ್ ಹರಡುವ ಮತ್ತು ಜನರು ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಪ್ರಚಾರವನ್ನು ನಡೆಸುತ್ತಿದೆ. ಹೀಗಾಗಿ ಜನರು ಎಚ್ಚರ ವಹಿಸುವ ಜೊತೆಗೆ ಸ್ವಲ್ಪಮಟ್ಟಿನ ಭೀತಿಗೂ ಒಳಗಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್‌ ಶಾ ಈ ಬಾರಿ ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಕುರಿತು ವದಂತಿ ಹಬ್ಬಿಸಿದರೆ ಶಿಕ್ಷೆ ಅನುಭವಿಸಬೇಕು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ  ನೀಡಿದೆ. ಹೀಗಾಗಿ ಜನರು ಜಾಗೃತಿಗೊಳ್ಳಲು ಮತ್ತು ಭೀತಿಗೊಳ್ಳಲು ಪುಷ್ಟಿ ನೀಡಿದೆ. ಸರ್ಕಾರಗಳು ಮತ್ತು ಆರೋಗ್ಯ ಇಲಾಖೆಯ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಯಾವುದೇ ಸರ್ಕಾರ ಇದ್ದರೂ ಜನರು ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ಜಾಗೃತಿ ಮೂಡಿಸಲೇಬೇಕು. ಆದರೆ ಇದೇ ಜನರ ಭೀತಿಗೆ ಕಾರಣವೂ ಆಗಬಾರದು ಅಲ್ಲವೇ?

ಮುಖ್ಯ ಸಂಗತಿಯೆಂದರೆ ತುಮಕೂರಿನಲ್ಲಿ ಕೊರೋನ ವೈರಸ್ ಭೀತಿ ಹೆಚ್ಚಾದಂತೆ ಕಂಡುಬರುತ್ತಿದೆ. ಇದೇ ಉದ್ದೇಶದಿಂದ ಮಾಸ್ಕ್ ಧರಿಸುವವರ ಸಂಖ್ಯೆ ಹೆಚ್ಚಾಗತೊಡಗಿದೆ. ಶಾಲೆಗೆ ಹೋಗುವ  ಮಕ್ಕಳಿಗೆ ಮಾಸ್ಕ್ ಹಾಕದೆ ಕಳಿಸುತ್ತಿಲ್ಲ. ಅಷ್ಟರಮಟ್ಟಿಗೆ ಜಾಗೃತಿ ಮತ್ತು ಭೀತಿ ಜಯರನ್ನು ಕಾಡತೊಡಗಿದೆ. ತುಮಕೂರು ನಗರದಲ್ಲಿ ಎಲ್ಲೆಂದರಲ್ಲಿ ರಸ್ತೆಗಳನ್ನು ಬಗೆದಿರುವುದರಿಂದ ಧೂಳು ಕೂಡ ಹೆಚ್ಚಾಗಿದೆ. ವಾಹನಗಳು ಮುಂದೆ ಸಾಗಿದರೆ ಸಾಕು ಸುಯ್ ಅಂತ ಧೂಳು ಮೆತ್ತಿಕೊಳ್ಳುತ್ತದೆ. ಧೂಳಿನಿಂದ ರಕ್ಷಣೆ ಪಡೆಯಲು ಜನರು ಮಾಸ್ಕ್ ಧರಿಸುವಂತಹ ಪರಿಸ್ಥಿತಿ ಬಂದಿದೆ. ಕೊರೋನ ಭೀತಿ ಒಂದು ಕಡೆಯಾದರೆ ಧೂಳಿನ ಭೀತಿ ಮತ್ತೊಂದು ಕಡೆ.  ಇಲ್ಲಿನ ಆರೋಗ್ಯ ಇಲಾಖೆ ಕೊರೋನ ವೈರಸ್ ಬಂದವರಿಗಾಗಿ ಚಿಕಿತ್ಸೆ ನೀಡಲು ಹತ್ತು ಹಾಸಿಗೆಯ ಕೊಠಡಿ ಸಿದ್ದಮಾಡಿಟ್ಟುಕೊಂಡಿದೆ. ಆದರೆ ಧೂಳಿನ ಬಗ್ಗೆ ಜಾಗೃತಿ ಮೂಡಿಸುವ ಗೋಜಿಗೆ ಹೋಗಿಲ್ಲ.

ಕೊರೋನ ವೈರಸ್ ಮತ್ತು ಧೂಳಿನಿಂದ ರಕ್ಷಣೆ ಪಡೆಯಲು ಜನರು ಕಳೆದೊಂದು ವಾರದಿಂದಲೂ ಮಾಸ್ಕ್ ಖರೀದಿಸಿತ್ತಿದ್ದು ಈಗ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಉಂಟಾಗಿದೆ. ಮೆಡಿಕಲ್ ಶಾಪ್ ಗಳಲ್ಲಿ ಮಾಸ್ಕ್ ಕೇಳಿದರೆ ಸ್ಟಾಕ್ ಇಲ್ಲ ಎಂಬ ಉತ್ತರ ಬರುತ್ತದೆ. ಕೊರೋನಾ ವೈರಸ್ ಹರಡುತ್ತದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಗಳನ್ನು ಖರೀದಿಸಿದರು. ನಮ್ಮ ಅಂಗಡಿಯಲ್ಲಿದ್ದ ಮಾಸ್ಕ್ ನ್ನು 20 ರೂ. 60 ರೂ. 150 ರೂಗಳಿಗೆ ಮಾರಾಟ ಮಾಡಿದೆವು. ಈಗ ಇಡೀ ತುಮಕೂರಿನಲ್ಲಿ ಮಾಸ್ಕ್ ಗಳ ಕೊರತೆ ಇದೆ. ಜನರು ಬಂದು ಕೇಳಿ ವಾಪಸ್ ಹೋಗುತ್ತಿದ್ದಾರೆ. ಇರೋವರಿಗೂ ಮಾರಾಟ ಮಾಡಿದೆ. ಈಗ ಸಿಗುತ್ತಿಲ್ಲ. ಎಲ್ಲಾ ಕಡೇನೂ ಇದೇ ಪರಿಸ್ಥಿತಿ ಇದೆ. ನೀವೇ ನೋಡ್ತಾ ಇದ್ದೀರಲ್ಲ. ಅಂಗಡಿನಲ್ಲಿ ಕುಳಿತಿರೋಕೆ ಆಗುತ್ತಿಲ್ಲ. ಧೂಳು. ನಗರಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೇಸಿಗೆ ಬೇರೆ. ಧೂಳಿನಿಂದ ಹಲವು ರೋಗಗಳು ಬರುತ್ತವೆ ಜೊತೆಗೆ ಕೊರೋನಾ ಭೀತಿ ಬೇರೆ. ಏನ್ ಮಾಡೋದು ಹೇಳಿ ಎನ್ನುತ್ತಾರೆ ವಾಸವಿ ಮೆಡಿಕಲ್‌ನ ಕುಮಾರ್.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಸ್ಕ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಅವುಗಳ ಬೆಲೆ ಗಗನಕ್ಕೇರಿದೆ. ಕೆಲವು ಶಾಲೆಗಳು ಪ್ರತಿಯೊಂದು ಮಗುವಿಗೂ ಮಾಸ್ಕ್ ಧರಿಸಿ ಬರುವುದನ್ನು ಕಡ್ಡಾಯ ಮಾಡಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಮಾಸ್ಕ್ ಗಳಿಗೆ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಖಾಸಗಿ ಶಾಲೆಗಳು ಮಕ್ಕಳಿಗೆ ಮಾಸ್ಕ್ ಕೊಡುತ್ತಿವೆ. ಹೀಗಾಗಿ ಮಾಸ್ಕ್ ಗಳು ಸಿಗುತ್ತಿಲ್ಲ. ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಮಾಸ್ಕ್ ಗಳ ಕೊರತೆ ಉಂಟಾಗಿದ್ದು ಇದಕ್ಕೆ ಆಯಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಇಲಾಖೆಗಳು ಕ್ರಮ ಕೈಗೊಂಡಂತೆ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...