Homeಮುಖಪುಟಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

ಈ ಬೀದಿಗಳಲ್ಲೆವೂ ಮಹಿಳೆಯರವು, ಹಗಲು ಮತ್ತು ಇರುಳು : ಸ್ತ್ರೀವಾದಿ ಚಿಂತಕಿ ವೋಲ್ಗಾ ಪ್ರತಿಪಾದನೆ

- Advertisement -
- Advertisement -

ಮಹಿಳೆಯರು ಇಂಥ ಬಟ್ಟೆಗಳನ್ನು ಹಾಕಿಕೊಳ್ಳಬಾರದು, ರಾತ್ರಿವೇಳೆ ಹೆಣ್ಣು ಮಕ್ಕಳು ಹೊರಗೆ ಬರಬಾರದು ಎನ್ನುವ ವಾದಕ್ಕೆ ನಮ್ಮದು ಪ್ರತಿವಾದ ಇದೆ. ಅದೆಂದರೆ ರಾತ್ರಿವೇಳೆ ಪುರುಷರನ್ನೇ ಮನೆಯಲ್ಲಿ ಕೂಡಿಹಾಕಿ ರಾತ್ರಿಗಳನ್ನು, ಬೀದಿಗಳನ್ನು ನಾವು ವಶಪಡಿಸಿಕೊಳ್ಳಬೇಕು. ಏಕೆಂದರೆ ‘ಈ ಬೀದಿಗಳಲ್ಲೆವೂ ನಮ್ಮವು ಹಗಲು ಮತ್ತು ಇರುಳು’ ಎಂದು ಖ್ಯಾತ ಸ್ತ್ರೀವಾದಿ ಚಿಂತಕಿ ವೋಲ್ಗಾರವರು ಪ್ರತಿಪಾದಿಸಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿಕ್ಸೂಚಿ ಭಾಷಣದಲ್ಲಿ ಅವರು ಮಾತನಾಡಿದರು.

ಹೈದರಾಬಾದ್ ನ ಪ್ರಖ್ಯಾತ ಸ್ತ್ರೀವಾದಿ ಚಿಂತಕಿ ಮತ್ತು ಹೋರಾಟಗಾರ್ತಿಯಾದ ಅವರು, ‘ಮಹಿಳಾ ಬದುಕಿನ ಪಲ್ಲಟಗಳು’ ವಿಷಯದ ಕುರಿತು ಮಾತನಾಡಿ, ಈ ಶೀರ್ಷಿಕೆ ನಾವು ಬದುಕಿತ್ತಿರುವ ಸನ್ನಿವೇಶದಲ್ಲಿ ಅತ್ಯಂತ ಅಗತ್ಯದ ವಿಷಯವಾಗಿದೆ. ಮಹಿಳೆಯರು ಹೋರಾಟದಲ್ಲಿ ಚಾರಿತ್ರಿಕ ಏಳುಬೀಳುಗಳನ್ನು ಅನುಭವಿಸಿದ್ದಾರೆ. ಆದರೆ ಅದು ನಿರಂತರವಾಗಿ ನಡೆಯುತ್ತಲೇ ಇದೆ ಎಂದರು.

8 ಗಂಟೆಯ ಕೆಲಸಕ್ಕಾಗಿ, ವೋಟಿನ ಹಕ್ಕಿಗಾಗಿ, ಆಹಾರಕ್ಕಾಗಿ ನಡೆದ ದಿಟ್ಟ, ಧೀರೋಧಾತ್ತ ಹೋರಾಟ ನಡೆಸಿದ್ದಕ್ಕಾಗಿ ಅಂತರಾಷ್ಟ್ರೀಯ ಮಹಿಳಾ ದಿನವನ್ನಾಗಿ ಘೋಷಿಸಲಾಯಿತು. ಆಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದ ವರ್ಷ. ಮಹಿಳಾ ದೃಷ್ಟಿಯಿಂದ ಇದು ವಿಶೇಷವಾಗಿದ್ದು. ಏಕೆಂದರೆ ಪ್ರಪಂಚ ಮಹಿಳೆಯರನ್ನು ಮನುಷ್ಯರೆಂದು ಗುರುತಿಸಲು ಸಾಧ್ಯವಾಯಿತು. ಇದು ಹೋರಾಟದಿಂದ ಸಾಧ್ಯವಾಗಿದೆ ಎಂದರು.

ಸ್ತ್ರೀಯರಿಗೆ ಓದುವ ಅವಕಾಶ ಇತ್ತೀಚೆಗೆ ಮಾತ್ರ ದೊರೆಯಿತು. ಹಿಂದಿನ ಕಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಬೇಕು ಎನ್ನುವ ವಾದದ ಹಿಂದೆ ಒಂದು ಸ್ವಾರ್ಥವಿತ್ತು. ಮಹಿಳೆ ಶಿಕ್ಷಣ ಕಲಿತರೆ ಮನೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಾಳೆ ಮತ್ತು ಮಕ್ಕಳಿಗೆ ಪಾಠ ಹೇಳಿಕೊಡುತ್ತಾಳೆ ಎನ್ನುವುದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಎಲ್ಲಾ ವಿವಿಗಳಲ್ಲಿ ಮಹಿಳಾ ಅಧ್ಯಯನ ಮತ್ತು ಸ್ತ್ರೀವಾದಿ ವಿಭಾಗಗಳನ್ನು ಹುಟ್ಟಿಹಾಕಬೇಕು. ಆಗ ಮಾತ್ರ ಮಹಿಳಾ ವಿಚಾರಗಳು ಹರಡಲು ಸಾಧ್ಯವಾಗುತ್ತದೆ ಎಂದರು.

ಮಹಿಳೆಯರ ಮೇಲೆ ನಡೆದ ದೌರ್ಜನ್ಯಗಳು ನೂರಾರು. ಆಂಧ್ರ ಪ್ರದೇಶದಲ್ಲಿ ಮಹಿಳೆಯರಿಗೆ ರಾತ್ರಿ ಶಾಲೆಗಳನ್ನು ತೆರೆಯುತ್ತಿದ್ದರು. ಅದರಲ್ಲಿ ಸರಾಯಿ ಅಂಗಡಿಗಳನ್ನು ಮಹಿಳೆಯರು ಮುಚ್ಚಿಸುವ ಪಾಠವೊಂದಿತ್ತು. ಅದನ್ನು ಓದಿಕೊಂಡ ಮಹಿಳೆಯರು ಅದೇ ರೀತಿಯ ದೊಡ್ಡ ಹೋರಾಟ ಮಾಡುತ್ತಾರೆ. ಈ ಹೋರಾಟವನ್ನು ಮಾಡಿದವರು ವಿದ್ಯಾವಂತರಲ್ಲ, ಗ್ರಾಮೀಣ ಹೆಣ್ಣು ಮಕ್ಕಳು. ಅವರು ಪೊಲೀಸರ ಮಧ್ಯೆ ಹೋರಾಟ ನಡೆಸಿದರು. ಸೆರೆಮನೆಯಲಿದ್ದು ಶ್ರಮಿಸಿದ್ದಾರೆ ಮತ್ತು ಕಲಿತಿದ್ದಾರೆ. ಮಹಿಳಾ ಸಂಘಗಳು ಬೆಳೆದರೆ ಸರ್ಕಾರದ ವಿರುದ್ಧ ನಿಲ್ಲುತ್ತಾರೆ ಎಂದು ಸರ್ಕಾರಗಳು ದಬ್ಬಾಳಿಕೆ ಆರಂಭಿಸಿದರೂ ಮಹಿಳೆಯರು ದಿಟ್ಟತೆಯಿಂದ ಹೋರಾಡಿದ್ದಾರೆ ಎಂದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡರವರು ಉದ್ಘಾಟನಾ ಭಾಷಣದಲ್ಲಿ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತ ವಿಚಾರ ಸಂಕಿರಣದ ಉದ್ಘಾಟನೆಯನ್ನು ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಂತೋಷವಾಗಿದೆ, ನನಗೆ ಹೆಮ್ಮೆಯಾಗಿದೆ.
ಇಂದಿಗೆ ಎಂಟು ವರ್ಷಗಳ ಹಿಂದೆ ಮಹಿಳಾ ಬದುಕಿನ ದೌರ್ಜನ್ಯಗಳು, ಆಯಾಮಗಳು ಎಂಬ ವಿಷಯದ ಕುರಿತು ಮಂಗಳೂರಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಂಡಿದ್ದೆವು. ಅಲ್ಲಿಂದ ನಮ್ಮ ಈ ವೇದಿಕೆ ಆರಂಭಗೊಂಡಿದೆ ಎಂದರು.

2012ರ ನಿರ್ಭಯ ಪ್ರಕರಣ ಮತ್ತು ಅದಕ್ಕೂ ಮುಂಚೆ ಮಂಗಳೂರಿನ ಹೋಮ್‌ಸ್ಟೇ ಮೇಲೆ ಅಮಾನುಷ ದಾಳಿಗೆ ವಿರುದ್ಧವಾಗಿ ನಾವು ಮಾರ್ಚ್ 2013ರಲ್ಲಿ ಈ ವೇದಿಕೆಯನ್ನು ಹುಟ್ಟುಹಾಕಿದೆವು. ಮಂಗಳೂರು, ಮೈಸೂರು, ಬೆಂಗಳೂರು, ವಿಜಯಪುರ, ಕೊಪ್ಪಳ, ಶಿವಮೊಗ್ಗ ಮತ್ತು ಧಾರವಾಡದಲ್ಲಿ ಇದುವರೆಗೂ ವೇದಿಕೆಯು ಪ್ರತಿ ವರ್ಷ ಮಹಿಳಾ ದಿನ ಆಚರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ನಡದು ಬಂದಿದ್ದೇವೆ ಎಂದರು.

ನಿರ್ಭಯಾ ಅತ್ಯಚಾರದ ಅಪರಾಧಿಗಳು ಇಂದು ಜೈಲಿನಲ್ಲಿದ್ದಾರೆ. ಗಲ್ಲಿಗೆ ಹೋಗುತ್ತಿದ್ದಾರೆ. ಆದರೆ ತಮ್ಮ ಕೃತ್ಯದ ಬಗ್ಗೆ ಅವರಿಗೆ ಪಶ್ಚಾತಾಪವಿಲ್ಲ ಎನ್ನುವುದು ದುಃಖದ ಸಂಗತಿ ಎಂದರು.

ಮಹಿಳೆಯರನ್ನು ಭೋಗದ ಸರಕನ್ನಾಗಿ ನೋಡುವುದು, ಅವರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವುದು ಚಿಂತೆಯ ಸಂಗತಿಯಾಗಿದೆ. ಇದಕ್ಕೆ ಸಮಾಜ, ನ್ಯಾಯಾಲಯ ಮತ್ತು ಮಹಿಯರು ಹೇಗೆ ಪ್ರತಿಕ್ರಿಯಿಸಬೇಕು ಎಂಬುದರ ಹುಡುಕಾಟ, ನಿರಂತರ ಶೋಧ ನಮ್ಮದಾಗಿದೆ.
ನಮ್ಮ ಈ ಪ್ರಯತ್ನದೊಂದಿಗೆ ಈ ಸಮಾಜದ ಯುವ ಪೀಳಿಗೆ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಸಂಗತಿ. ದುಡಿಯುವ ವರ್ಗದ ಮಹಿಳೆಯರಿಂದ ಹಿಡಿದು ಬೌಧ್ಧಿಕ ವರ್ಗದವರೆಗೂ ಎಲ್ಲಾ ಸ್ಥರದ ಜನತೆ ಈ ಒಕ್ಕೂಟಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಶಕ್ತಿಯನು ಹಿಮ್ಮಡಿಗೊಳಿಸಿದೆ ಎಂದರು.

2013ರಿಂದ 2020ಕ್ಕೆ ಬರುವಷ್ಟರಲ್ಲಿ ಕಾಲದ ಚಕ್ರ ಸ್ವಲ್ಪ ನಮ್ಮ ಕಡೆ ತಿರುಗಿದೆ. ಆರಂಭದ ವರ್ಷಗಳಲ್ಲಿ ಇದ್ದ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ತಿಳಿವಾಗಿದೆ. ಹಿಂದೆ ಮಹಿಳೆಯರ ಪರವಾಗಿ ಒಂದು ಕಾರ್ಯಕ್ರಮ ಮಾಡಲು ವಿ.ವಿಯ ಕುಲಪತಿಗಳನ್ನು ಮನವೊಲಿಸಬೇಕಿತ್ತು, ಅವರ ಬಳಿ ಬೇಡಿಕೊಳ್ಳಬೇಕಿತ್ತು. ಆದರೆ ಈಗ ಅಷ್ಟು ಕಷ್ಟವಾಗುತ್ತಿಲ್ಲ. ನಿರ್ಧಾರ ತೆಗೆದುಕೊಳ್ಳುವ ಹಲವು ಜಾಗಗಳಲ್ಲಿ ಮಹಿಳೆಯರೇ ಬಂದಿರುವುದು ಪರಿಸ್ಥಿತಿಯನ್ನು ಅಲ್ಪ ಸುಧಾರಿಸಿದೆ ಎಂದು ತಿಳಿಸಿದರು.

ಎಳೆಯ ತಲೆಮಾರು, ಯುವಜನತೆ ನಮಗೆ ತುಂಬಾ ಪೂರಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರಗಳು ತರಗತಿಯ ಒಳಗೆ ನಮಗೆ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ನಮ್ಮ ಒಕ್ಕೂಟದ ಹೆಸರು ಈಗ ಸ್ವಲ್ಪ ನಮ್ಮ ಬದುಕಿನ ಭಾಗ ಅನ್ನುತ್ತಿರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

ಸಮಾವೇಶ ನಡೆಯುವ ಜಿಲ್ಲೆಯ ಸ್ಥಳೀಯ ಸಮಸ್ಯೆಯನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆ ಪ್ರತಿ ವರ್ಷ ಕಾರ್ಯಕ್ರಮ ರೂಪಿಸುತ್ತಿದೆ. ಮಂಡ್ಯ ಜಿಲ್ಲೆಯು ಕೈಗಾರೀಕರಣದ ಹೊಡೆತಕ್ಕೆ ಸಿಲುಕಿದೆ. ಕೃಷಿ ಬಿಕ್ಕಟ್ಟು ಎದುರಾಗಿದೆ. ಇದೆಲ್ಲದರಿಂದ ಮಹಿಳೆಯರು ನಲುಗಿದ್ದಾರೆ. ಪುರುಷ ಪ್ರಧಾನ ಮತ್ತು ಊಳಿಗಮಾನ್ಯ ಮನಸ್ಥಿತಿ ಇನ್ನೂ ಇಲ್ಲಿ ಜೀವಂತವಾಗಿದೆ. ಇವುಗಳನ್ನು ಎದರಿಸುವ ಬಗೆ ಕುರಿತು ಇಂದು ವಿಚಾರ ಸಂಕಿರಣ ನಡೆಯಲಿದೆ ಎಂದರು.

ಜನರನ್ನು ಗಾಢವಾಗಿ ಪ್ರಭಾವಿಸಿದ ಮಹಿಳೆಯರ ಪಡಿಯಚ್ಚು ನಿರ್ಮಾಣದಲ್ಲಿ, ಮಹಿಳೆಯರು ಗೌರವಿಸುವ ಆದರೆ ಅವರದಲ್ಲದ ಪುರಾಣಗಳನ್ನು ಒದುವುದು, ಅರ್ಥಮಾಡಿಕೊಳ್ಳುವುದು, ಅದನ್ನು ಒಡೆದು ಪುನರ್‌ರಚಿಸುವುದಕ್ಕೆ ಭಾರತೀಯ ಎಲ್ಲಾ ಭಾಷೆಯ ಮಹಿಳಾ ಲೇಖಕರು ಶ್ರಮಿಸಿದ್ದಾರೆ. ದೇಹಮೂಲದಿಂದ ಮಾತ್ರ ಪ್ರಕಟಗೊಳ್ಳುತ್ತಿದ್ದ ಮಹಿಳೆಯ ವ್ಯಕ್ತಿತ್ವವನ್ನು ಮನೋಮೂಲದಿಂದ ಅರ್ಥ ಮಾಡಿಕೊಳ್ಳುವಂತೆ ಶ್ರಮಿಸುತ್ತಿದ್ದಾರೆ. ಆ ಆಶಯಕ್ಕೆ ಜಯ ಸಿಗಲಿ ಎಂದರು.

ರೈತನಾಯಕಿ ಸುನಂದಾ ಜಯರಾಂ ಸಂವಿಧಾನದ ಪೀಠಿಕೆ ಓದಿ ಚಾಲನೆ ನೀಡಿದರು. ಹೆಣ್ಣೋಟದ ಹೆಗ್ಗಳಿಕೆ ಪುಸ್ತಕ ಬಿಡುಗಡೆಯಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...