Homeಮುಖಪುಟಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಹೆಣ್ಣು ಭ್ರೂಣ ಹತ್ಯೆ ಎಂಬುದು ಸಾವಿರ ಕೋಟಿ ದಂಧೆಯಾಗಿದೆ: ಭಾನು ಮುಷ್ತಾಕ್

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

- Advertisement -
- Advertisement -

ಮೂಢನಂಬಿಕೆಗೆ ಬಲಿಯಾಗಬೇಡಿ. ಪಿತೃಪ್ರಾಧ್ಯನತೆಯ ಎಲ್ಲಾ ಮೌಲ್ಯಗಳನ್ನು ನಮ್ಮ ತಲೆಯಲ್ಲಿ ತುಂಬುತ್ತಿರುವುದೇ ಮೂಢನಂಬಿಕೆಗಳ ಮೂಲಕ. ಇದರಿಂದ ತಾವು ಮಾಡಬೇಕೆನ್ನುವ ಕೆಟ್ಟ ಕೆಲಸಗಳನ್ನು ಮಹಿಳೆಯರ ಮೂಲಕ ಮಾಡಿಸಲಾಗುತ್ತದೆ. ಇದರಿಂದ ನಮ್ಮನ್ನು ನೂರು-ಐನೂರು ವರ್ಷಕ್ಕೆ ಹಿಂದಕ್ಕೆ ತಳ್ಳಲ್ಲಿಕ್ಕೆ ಇದನ್ನು ಬಳಸುತ್ತಿದ್ದಾರೆ. ಹಾಗಾಗಿ ಮೂಡನಂಬಿಕೆಗಳಿAದ ದೂರ ಇರಬೇಕೆಂದು ಹಿರಿಯ ವಕೀಲೆ ಮತ್ತು ಲೇಖಕಿಯಾದ ಬಾನು ಮುಷ್ತಕ್ ಕರೆ ನೀಡಿದರು.

ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ವತಿಯಿಂದ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೌಟುಂಬಿಕೆ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಅವರು ಮಾತನಾಡಿದರು.

ಕುಟುಂಬದ ಒಳಗೆ ಯಾರು ದೌರ್ಜನ್ಯ ನಡೆಸುತ್ತಾರೆ? ಎಂಬ ಪ್ರಶ್ನೆಗಳು ಬಹಳ ಬರುತ್ತವೆ. ಅಪ್ಪನೇ ತನ್ನ ಮಗಳನ್ನು ಅತ್ಯಾಚಾರ ಮಾಡಿರುವ ಹಲವು ಪ್ರಕರಣಗಳು ನನ್ನ ಮುಂದಿವೆ. ಇಂದು ಹಲವು ಸಾವಿರ ಪಟ್ಟು ಕೌಟುಂಬಿಕ ಹಿಂಸೆ ಜಾಸ್ತಿಯಾಗಿದೆ. ಮಗು ಹುಟ್ಟುವುದಕ್ಕೆ ಮುಂಚಿತವಾಗಿಯೇ ಹತ್ಯೆ ಮಾಡುವುದು ಇಂದು ಒಂದು ಸಾವಿರ ಕೋಟಿ ಮೌಲ್ಯದ ದಂಧೆಯಾಗಿದೆ. ಒಬ್ಬ ಹೆಣ್ಣು ಮಗಳನ್ನು ಹುಟ್ಟುವುದಕ್ಕೆ ಅವಕಾಶ ಕೊಡದ ಸಂದರ್ಭದಲ್ಲಿ ಇನ್ನು ಹುಟ್ಟಿದ ಮೇಲೆ ಯಾವ ಯಾವ ರೀತಿ ಹಿಂಸೆ ಕೊಡುತ್ತಾರೆ ನೀವೆ ಯೋಚಿಸಿ? ಎಂದು ಅಭಿಪ್ರಾಯಪಟ್ಟರು.

ಈ ವಿಭಿನ್ನವಾದ ಹಿಂಸೆಗಳಲ್ಲಿ ಮಹಿಳೆಯರನ್ನು ದ್ವಿತಿಯ ದರ್ಜೆಯ ಪ್ರಜೆಯನ್ನಾಗಿ ಮಾಡಿ ಹತ್ತಿಕ್ಕುವ ವ್ಯವಸ್ಥೆ ಇಂದಿಗೂ ಕೂಡ ಜಾರಿಯಲಿದೆ. ನಮ್ಮ ಸಮಾಜ ಆಧುನಿಕವಾದಷ್ಟು ಕೂಡ ಮತೀಯವಾಗಿ ನರಳುತ್ತಿದೆ ಎಂದರು.

ಸ್ತ್ರೀ ಶಿಕ್ಷಣ ನಿರಾಕರಣೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ವಿವಾಹ ಸಂಬಂಧಿತ ನೋಂದಣಿಗೆ ವಿರೋಧ, ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ವಿರೋಧ, ಆಸ್ತಿ ಹಕ್ಕು, ಅತ್ಯಾಚಾರ.. ಮರ್ಯಾದೆಹೀನ ಹತ್ಯೆ.. ಇವೆಲ್ಲವೂ ಕೌಟುಂಬಿಕ ಹಿಂಸೆ ಕೆಳಗೆ ಬರುತ್ತವೆ ಆದರೆ ಆಧುನಿಕ ಸಮಾಜ ಇದೆಲ್ಲವನ್ನು ಗಮನಿಸುತ್ತಿಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಮಂಡ್ಯ ಜಿಲ್ಲೆಯ ಸ್ಮೃತಿ ಎಂಬ ಹೆಣ್ಣು ಮಗಳು ನನ್ನ ಬರಹಗಳ ಕುರಿತು ಸಂಶೋಧನೆ ನಡೆಸಿದ್ದಳು. ಬಹಳ ಪ್ರತಿಭಾವಂತಳಾದ ಆಕೆ ದಲಿತ ಯುವಕನ ಜೊತೆ ಮದುವೆಯಾಗಿದ್ದಕ್ಕೆ ಕೊಲೆ ಮಾಡಲಾಗಿದೆ. ಅಂದರೆ ಮರ್ಯಾದೇಹೀನ ಹತ್ಯೆ ಇಂದಿಗೂ ಚಾಲ್ತಿಯಲ್ಲಿರುವುದು ದುರಂತ ಎಂದರು.

2005 ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ಬಂತು. ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಒಡಂಬಡಿಕೆಗಳ ಅಂಗವಾಗಿ ಕಾನೂನಾಗಿದೆ. ಇಂದಿರಾ ಜೈಸಿಂಗ್ ಎಂಬ ಹಿರಿಯ ವಕೀಲೆ, ಸಾಮಾಜಿಕ ಹೋರಾಟಗಾರ್ತಿ ಈ ಕಾಯ್ದೆಯನ್ನು ಬೆಂಬಲಿಸಿದ್ದಕ್ಕೆ ಆಕೆಯನ್ನು ಟ್ರೋಲ್ ಮಾಡಲಾಯಿತು.. ಇದು ನಮ್ಮ ಸಮಾಜ ಮಹಿಳೆಯರ ಕುರಿತು ವರ್ತಿಸುವ ಪರಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಾನುಪಾತದಲ್ಲಿ ಈಗ ಬಹಳ ತಾರತಮ್ಯವುಂಟಾಗುತ್ತಿದ್ದು, ದಿನೇ ದಿನೇ ಹೆಣ್ಣು ಮಕ್ಕಳ ಲಿಂಗಾನುಪಾತ ಕುಸಿಯುತ್ತಿದೆ. 498ಎ ಕಾಯ್ದೆಯ ಆಧಾರದಲ್ಲಿ ಸುಳ್ಳು ಕೇಸುಗಳು ದಾಖಲಾಗುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದರಂಗತೆ ಡಿವೈಎಸ್ಪಿ ಒಪ್ಪಿಗೆ ನೀಡಿದ ನಂತರವೇ ಕೇಸು ದಾಖಲಿಸಬೇಕೆಂಬ ನಿಯಮ ಬಂದಿತು. ಬಹಳಷ್ಟು ಹೋರಾಟಗಳ ನಂತರ ಅದನ್ನು ಹಿಂತೆಗೆದುಕೊಳ್ಳಲಾಗಿದೆ. ಅಂದರೆ ಈ ಕಾನೂನುಗಳು ದುರುಪಯೋಗವಾಗುತ್ತಿವೆ ಎಂಬ ಆರೋಪಗಳಿವೆ. ಈ ಕಾನೂನುಗಳ ಅಡಿಯಲ್ಲಿ ಸುಳ್ಳು ಕೇಸು ಹಾಕಿದರೆ ಕಾನೂನು ಉಲ್ಟಾ ಹೊಡೆದು ನೈಜ ಹಿಂಸೆ ಅನುಭವಿಸದವರಿಗೂ ನ್ಯಾಯ ಸಿಗುವುದು ದುಸ್ತರವಾಗುತ್ತದೆ. ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಮನವಿ ಮಾಡಿದರು.

ಔದ್ಯೋಗಿಕ ನೆಲೆಯಲ್ಲಿ ಮಹಿಳಾ ಬದುಕಿನ ಪಲ್ಲಟಗಳು ವಿಷಯದ ಕುರಿತು ಸಾಮಾಜಿಕ ಕಾರ್ಯಕರ್ತೆ ಎಸ್.ಸತ್ಯಾರವರು ಮಾತನಾಡಿ “ಸ್ವಾತಂತ್ರ್ಯವೇ ಅಭಿವೃದ್ದಿ ಎಂದು ಅರ್ಥಶಾಸ್ತ್ರಜ್ಞ ಅಮರ್ತ್ಯಸೆನ್ ಹೇಳಿದ್ದಾರೆ. ವಿಶ್ವಸಂಸ್ಥೆಯು ನಾನು ಸಮಾನತೆಯ ತಲೆಮಾರಿನವಳು ಎಂಬ ಘೋಷಣೆ ನೀಡಿದೆ. ಎಲ್ಲರೂ ಸಮಾನರು ವಿಶ್ವ ಆರ್ಥಿಕ ವೇದಿಕೆ ನೀಡಿದೆ. ಆದರೆ ಇದೇ ಪರಿಸ್ಥಿತಿ ಮುಂದುವರೆದರೆ ಔದ್ಯೋಗಿಕ ಕ್ಷೇತ್ರದಲ್ಲಿ ಸಮಾನತೆ ಬರಬೇಕಾದರೆ 108 ವರ್ಷಗಳು ಬೇಕು ಸಂಶೋಧನಾ ವರದಿಗಳು ಹೇಳುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.
187 ರಾಷ್ಟ್ರಗಳು ಲಿಂಗತಾರತಮ್ಯವನ್ನು ನಿಯಂತ್ರಿಸಲು ಕಾಯ್ದೆ ಕಾನೂನುಗಳನ್ನು ರೂಪಿಸಿವೆ. ಲಿಂಗ ತಾರತಮ್ಯದ ವಿಚಾರದಲ್ಲಿ ಭಾರತ ಕೇವಲ 25% ಮಾತ್ರ ಶ್ರಮಿಸಿದೆ. ಸಮಾನ ವೇತನ ಎಂಬದು ಇನ್ನು ಮಹಿಳೆಯರ ಪಾಲಿಗೆ ಕನಸಿನ ಮಾತಾಗಿದೆ. ಕೆಲಸದ ಸ್ಥಳದಲ್ಲಿ ಹಿಂಸೆ ಮುಂದುವರೆದಿದೆ.

ವೇತನಸಹಿತ ಕೆಲಸ ಮತ್ತು ವೇತನ ರಹಿತ ಕೆಲಸ ಎಂಬ ಎರಡು ವಿಭಾಗಗಳಿವೆ.. ಪಾಲನೆ ಮತ್ತು ಪೋಷಣೆ ಮಾಡುವ ಕೆಲಸ ಅನುತ್ಪಾದಕ ಕ್ಷೇತ್ರ ಎನ್ನಲಾಗುತ್ತಿದೆ. ಅಂಗನವಾಡಿಯಿಂದ ಹಿಡಿದು ಐಟಿ ಕಂಪನಿಗಳನ್ನು ಮಕ್ಕಳನ್ನು ನೋಡಿಕೊಳ್ಳುವ, ರೋಗಿಗಳನ್ನು, ವಿಕಲಚೇತನರನ್ನು ನೋಡಿಕೊಳ್ಳುವ ಕೆಲಸವನ್ನು ಮಹಿಳೆಯರು ಮಾಡುತ್ತಿದ್ದಾರೆ. ಇದನ್ನು ಮಾನವೀಯ ಕೆಲಸವಾಗಿದ್ದರೆ ಉತ್ಪಾದನಾ ಕ್ಷೇತ್ರವಲ್ಲವೇ? ಇದಕ್ಕೆ ಏಕೆ ಮೌಲ್ಯವನ್ನು ನಿಗಧಿಪಡಿಸುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಇಂದು ಉದ್ಯೋಗಗಳು ಮಹಿಳೆಯರಿಗೆ ಆಯ್ಕೆಯಾಗಿಲ್ಲ ಬದಲಿಗೆ ಹೇರಿಕೆಯಾಗಿವೆ. ತಂತ್ರಜ್ಞಾನ ಸ್ಪಲ್ಪ ಮಟ್ಟಿಕೆ ಮಹಿಳೆಯರನ್ನು ಸುಧಾರಿಸಿದರೂ ಸಹ ಅವರನ್ನು ಮತ್ತೆ ಅವರನ್ನು ಕೆಲವೇ ಕ್ಷೇತ್ರಗಳಿಗೆ ಸೀಮಿತಗೊಳಿಸಿತು. ಖಾಸಗೀಕರಣ ಮತ್ತು ಜಾಗತೀಕರಣದ ಜೊತೆಗೆ ಕೋಮುವಾದ ಮತ್ತು ದೌರ್ಜನ್ಯಗಳು ಮಹಿಳೆಯನ್ನು ಮುಂದೆ ಹೋಗದಂತೆ ತಡೆಹಿಡಿಯಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾಮಾಜಿಕ ಮತ್ತು ಸಾಮಾಜಿಕ ನೆಲೆಯಿಂದ ಮಹಿಳಾ ಬದುಕು ಪಲ್ಲಟಗಳು ವಿಷಯದ ಕುರಿತು ಸಬಿತಾ ಬನ್ನಾಡಿಯವರು ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...