Homeಸಿನಿಮಾರಾಜಾ ರವಿವರ್ಮನ ಕುಂಚದಂಚಿನ ಕ್ರಾಂತಿಯ ರಂಗು

ರಾಜಾ ರವಿವರ್ಮನ ಕುಂಚದಂಚಿನ ಕ್ರಾಂತಿಯ ರಂಗು

- Advertisement -
- Advertisement -

ತಲುಪಲೇಬೇಕಾದ ಸತ್ಯಕ್ಕೆ ಅಡೆತಡೆಗಳು ಜಾಸ್ತಿ. ಸುಳ್ಳು ಸಮೀಪಿಸಿದಷ್ಟು ಸಲೀಸಾಗಿ ಅದು ನಮ್ಮನ್ನು ತಲುಪದು. ನಮ್ಮ ಜೊತೆಗೇ ಕಾಲುನೀಡಿ ಹೆಜ್ಜೆಹಾಕುತ್ತಿರುವ ವರ್ತಮಾನದ ಸುಳ್ಳು ನಿಜಗಳ ನಡುವಿನ ಅಂತರವೇ ಇಷ್ಟೊಂದು ವಿಪರೀತವಿರುವಾಗ ಆಗಿಹೋದ, ನಾವ್ಯಾರು ಸಾಕ್ಷಿಯಾಗದ ಇತಿಹಾಸದಲ್ಲಿರುವ ಸತ್ಯಗಳಿಗೆ ಅದಿನ್ನೇನೆಲ್ಲಾ ಶೋಷಣೆಗಳಿರಬೇಡ; ತಡೆಗೋಡೆಗಳ ನಿರ್ಬಂಧವಿರಬೇಡ. ಪೂರ್ವಗ್ರಹ ಮತ್ತು ಸ್ವಾರ್ಥಗಳ ಹಳುವಿಗೆ ಸಿಲುಕದ ಚಿತ್ರಿಕೆಗಳು ಮಾತ್ರ ಇತಿಹಾಸಕ್ಕೆ ಪುರಾಣವನ್ನು ಆರೋಪಿಸದೆ ಇತಿಹಾಸವಾಗಿಯೇ ಕಟ್ಟಿಕೊಡಬಲ್ಲವು. ಅಂತಹ ದೃಶ್ಯಕಾವ್ಯದ ಸಾಲಿನಲ್ಲಿ ನಿಲ್ಲುವಂತಹ ಸಿನಿಮಾ ಹಿಂದಿಯ `ರಂಗ್ ರಸಿಯಾ’. ಇದರ ಇಂಗ್ಲಿಷ್ ಅವತರಿಣಿಕೆಯ ಹೆಸರು `ದಿ ಕಲರ್ಸ್ ಆಫ್ ಫ್ಯಾಶನ್’. `ಮಂಗಲ್ ಪಾಂಡೆ-ದಿ ರೈಸಿಂಗ್’ನಂತಹ Pಚಿಣioಣಡಿiಛಿ ಊisಣoಡಿiಛಿಚಿಟ ಸಿನಿಮಾ ನೀಡಿದ್ದ ಕೇತನ್ ಮೆಹ್ತಾ ನಿರ್ದೇಶನದ ಈ ಸಿನಿಮಾದ ಇಂಗ್ಲಿಷ್ ಅವತರಿಣಿಕೆ 2008ರಲ್ಲೇ ಲಂಡನ್ ಸಿನಿಮೋತ್ಸವದಲ್ಲಿ ಬಿಡುಗಡೆಯಾದರು ಹಿಂದಿ ರೂಪ ಇಂಡಿಯಾದಲ್ಲಿ ಬಿಡುಗಡೆಯಾದದ್ದು 2014ರಲ್ಲಿ. ಆ ಕಥೆಯ ಮಡಿಕೆಯಲ್ಲಿರುವ ಸತ್ಯಗಳು ಕಲಾ ಜಗತ್ತಿನ ಕುರಿತಾಗಿ ನಮಗಿರುವ ಇತಿಹಾಸದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುತ್ತವೆ.
ಅದು ಭಾರತೀಯ ಆಧುನಿಕ ಕಲಾಜಗತ್ತಿನ ಪಿತಾಮಹಾ ರಾಜಾ ರವಿವರ್ಮನ ಬದುಕನ್ನಾಧರಿಸಿದ ಬಯೋಪಿಕ್. ನಮ್ಮ ಇತಿಹಾಸಕ್ಕೊಂದು ಕೆಟ್ಟ ಚಾಳಿ ಇದೆ. ಘಟನಾ ಸರಣಿಗಳನ್ನು ವಸ್ತುನಿಷ್ಠವಾಗಿ ಕಟ್ಟಿಕೊಡದೆ, ತನಗೆ ಬೇಕಾದ್ದನ್ನು ಮಾತ್ರ, ಬೇಕಾದ ಬಗೆಯಲ್ಲಿ ದಾಖಲಿಸಿಕೊಂಡು ಮುಂದಿನ ತಲೆಮಾರುಗಳಿಗೆ ಆ ಅರ್ಧಸತ್ಯವನ್ನಷ್ಟೆ ದಾಟಿಸಿಬಿಡುವ ಚಾಳಿ. ರವಿವರ್ಮನನ್ನು ನಾನು ಇಂತಹುದೇ ಇತಿಹಾಸದ ಮೂಲಕ ಗ್ರಹಿಸಿದ್ದು ಸಹಾ ಅರ್ಧಂಬರ್ಧವಾಗಿಯೇ. ಆತನೊಬ್ಬ ಅದ್ಭುತ ಚಿತ್ರಕಲಾವಿದ, ಭಾರತದ ಕಲಾವಂತಿಕೆಯನ್ನು ವಿದೇಶಿಗರ ಮುಂದೆ ಎತ್ತಿಹಿಡಿದವ, ಬಣ್ಣಗಳನ್ನು ಪಳಗಿಸಿ ಅವುಗಳಿಗೆ ಜೀವ ತುಂಬುವ ಈ ಕುಂಚಬ್ರಹ್ಮನಿಗೆ ಭಾರತೀಯರು ತಮ್ಮ ಅಭಿಮಾನವನ್ನು ಧಾರೆ ಎರೆದಿದ್ದರು, ಇತ್ಯಾದಿಯಾಗಿ ಗ್ರಹಿಸಿದ್ದೆನೆ ಹೊರತು ತನ್ನ ಕಲಾಕೃತಿಗಳ ಮೂಲಕ ಆತ ಹುಟ್ಟುಹಾಕಿದ ಸಾಮಾಜಿಕ ಕ್ರಾಂತಿ, ಸ್ತ್ರೀವಾದದ ಹೊಸ ಮನ್ವಂತರ, ಅದಕ್ಕೆ ಪ್ರತಿಯಾಗಿ ಕಂದಾಚಾರಿಗಳಿಂದ ಆತ ಅನುಭವಿಸಿದ ಯಾತನೆ, ಆಗಿನ ಕಾಲಕ್ಕೆ ಬ್ರಿಟಿಷ್ ಚಮಚಾಗಿರಿಯಲ್ಲೆ ನೆಲೆ ಭದ್ರ ಮಾಡಿಕೊಂಡಿದ್ದ ದೇಸಿ ಬಂಡವಾಳಿಗರು ಆತ ಮತ್ತು ಆತನ ಕಲಾಕೃತಿಗಳಿಗೆ ಮಾಡಿದ ದ್ರೋಹಗಳ ಬಗ್ಗೆ ನನಗೆ ಅಂದಾಜೇ ಇರಲಿಲ್ಲ. ರಂಗ್ ರಸಿಯಾ ಸಿನಿಮಾ ರವಿವರ್ಮನ ಅಂತಹ ಮತ್ತೊಂದು ಮಗ್ಗುಲನ್ನು ಮನೋಜ್ಞವಾಗಿ ಪರಿಚಯಿಸಿದ್ದಲ್ಲದೆ ಇವತ್ತು ಇಂಡಿಯಾದಲ್ಲಿ ನಡೆಯುತ್ತಿರೊ ಯಥಾಸ್ಥಿತಿವಾದಿಗಳ ಅತಿರೇಕಗಳನ್ನು ಸಾರಾಸಗಟಾಗಿ ಅರ್ಥ ಮಾಡಿಕೊಳ್ಳಲು ಐತಿಹ್ಯಪೂರ್ಣ ಹಿನ್ನೋಟವನ್ನೂ ಕಟ್ಟಿಕೊಟ್ಟಿತು.
ರವಿವರ್ಮ, ಇಲ್ಲಿಗೆ ಅಜಮಾಸು ನೂರೈವತ್ತು ವರ್ಷಗಳ ಹಿಂದೆ ಬಾಳಿದ ಮನುಷ್ಯ. ಆಗ ಭಾರತ ಬ್ರಿಟಿಷ್ ವಸಾಹತುಷಾಹಿ ಹಿಡಿತದಲ್ಲಿತ್ತು ಎನ್ನುವುದು ಎಷ್ಟು ಸತ್ಯವೋ, ಮೂಢ ಕಂದಾಚಾರಿಗಳ ಕಪಿಮುಷ್ಟಿಯಲ್ಲಿತ್ತು ಎನ್ನುವುದೂ ಅಷ್ಟೇ ಸತ್ಯ. ಆತ ಕೇರಳದ ಪ್ರಾಂತೀಯ ರಾಜ ಮನೆತನವೊಂದರ ಅಳಿಯ. ಆದರೂ ಅಸ್ಪೃಶ್ಯ ಜಾತಿಯ ಕಾಮಿನಿ ಎಂಬ ಸುಂದರಿಯನ್ನು ತನ್ನ ಕಲಾಕೃತಿಗೆ ರೂಪದರ್ಶಿಯಾಗಿಸಿಕೊಳ್ಳುವ ಮೂಲಕ ಕಂದಾಚಾರವನ್ನು ಧಿಕ್ಕರಿಸಿದ. ಅದಕ್ಕಾಗಿ ತನ್ನ ಮೇಲ್ವರ್ಗದ ಸಮುದಾಯದಿಂದ ಮತ್ತು ಸ್ವತಃ ತನ್ನ ಮಡದಿಯಿಂದ ತಿರಸ್ಕøತನಾದರು ಕಲೆ ಮತ್ತು ಕಲಾಸ್ಫೂರ್ತಿಯ ವಿಚಾರದಲ್ಲಿ ತಾನಿಟ್ಟ ಆ ಕ್ರಾಂತಿಕಾರಿ ಹೆಜ್ಜೆಯ ಬಗ್ಗೆ ಯಾವತ್ತೂ ಅಳುಕು ಪಡಲಿಲ್ಲ. ನಂತರ, ಕಲೆಯ ಕತ್ತುಹಿಸುಕುವ ಅಂಥಾ ವಾತಾವರಣದಲ್ಲಿ ಇರಲಾಗದೆ ಮುಂಬೈ ನಗರಿಯತ್ತ ಮುಖ ಮಾಡುತ್ತಾನೆ.
ಅಲ್ಲೂ ಆತ ತನ್ನ ಕಲಾಕೃತಿಗಳಿಗೆ ಸ್ಫೂರ್ತಿಯಾಗಿ ಅಯ್ಕೆ ಮಾಡಿಕೊಳ್ಳುವುದು, ಈ ಸಮಾಜದ ಬಲಿಪಶುವಾಗಿ ಈ ಸಮಾಜದಿಂದಲೇ ನಿಕೃಷ್ಟವಾಗಿ ಕಾಣಲ್ಪಡುವ ಒಬ್ಬ ವೇಶ್ಯೆಯನ್ನು! ಹೆಸರು ಸುಗಂಧ. ಅವಳನ್ನೇ ತನ್ನ ಕಲಾಕೃತಿಗಳ ಪ್ರೇರಣೆಯಾಗಿಸಿಕೊಂಡು ಸರಸ್ವತಿ, ಲಕ್ಷ್ಮಿಯರಂತಹ ಹಿಂದೂ ಧಾರ್ಮಿಕ ಪುರಾಣದ ದೇವತೆಗಳನ್ನಲ್ಲದೆ ಮಹಾಭಾರತ, ರಾಮಾಯಣದ ಸನ್ನಿವೇಶಗಳನ್ನು ಬಣ್ಣಗಳಲ್ಲಿ ಬಂಧಿಯಾಗಿಸುತ್ತಾನೆ. ತನ್ನ ಕೃತಿಗಳು ಅರಮನೆಯಲ್ಲೊ, ಐಷಾರಾಮಿ ಸಂಗ್ರಹಾಲಯಗಳಲ್ಲೊ ತೂಗುಹಾಕಿಸಿಕೊಂಡು ಕೆಲವೇ ಜನರ ಸ್ವತ್ತಾಗಿ ಶ್ರೇಷ್ಠ ಕಲಾಕೃತಿಗಳು ಅನ್ನಿಸಿಕೊಳ್ಳುವುದಕ್ಕಿಂತ ಸಾಮಾನ್ಯ ಜನರ ಕಣ್ಣುಗಳಿಗು ಎಟಕಿ, ಅವರ ಅಭಿವ್ಯಕ್ತಿಗಳಿಗೆ ತೆರೆದುಕೊಳ್ಳುವ ಸಾರ್ಥಕ ಕೃತಿಗಳಾಗಬೇಕೆನ್ನುವುದು ರವಿವರ್ಮನ ಹಂಬಲ. ಇವತ್ತು ಮನೆಮನೆಗಳಲ್ಲಿ ದೇವಾನುದೇವತೆಗಳ ಮೂರ್ತ ಆಕಾರಗಳುಳ್ಳ ಫೋಟೊಗಳು ರಾರಾಜಿಸುತ್ತಿವೆ. ಆದರೆ ಹಿಂದೂ ಪುರಾಣಗಳಲ್ಲಿ ಕೇವಲ ವರ್ಣನೆಯಾಗಿದ್ದ, ದೇವಾಲಯಗಳ ಮೂರ್ತಿ ಕೆತ್ತನೆಯ ಹೊರತು ಸಾಮಾನ್ಯ ಜನರ ಕಲ್ಪನೆಯಿಂದ ದೇವರ ರೂಪವನ್ನೆ ಕಿತ್ತುಕೊಂಡಿದ್ದ ಆ ಕಾಲಘಟ್ಟದಲ್ಲಿ ಜನರ ಕಲ್ಪನಾ ವಲಯದೊಳಕ್ಕೆ ‘ಮನುಷ್ಯರೂಪಿ’ ದೇವರನ್ನು ರವಿವರ್ಮ ತರಲು ಮುಂದಾದದ್ದು ದೊಡ್ಡ ಕ್ರಾಂತಿಯೇ ಆಗಿತ್ತು. ತನ್ನ ಕಲಾಕೃತಿಗಳ ಮೂಲಕ ಸಾಮಾನ್ಯ ಜನ ಮತ್ತು ದೇವರ ನಡುವಿನ ಅಂತರವನ್ನು ಕಿರಿದುಗೊಳಿಸಿದ ಅವನ ಕ್ರಮ, ಅಷ್ಟೂದಿನ ಮಧ್ಯವರ್ತಿಗಳ ಸೋಗು ಹಾಕಿಕೊಂಡು ಸುಲಿಗೆ ಮಾಡುತ್ತಿದ್ದ ಕಂದಾಚಾರಿಗಳ ಕಣ್ಣು ಕೆಂಪಗಾಗುವಂತೆ ಮಾಡಿತ್ತು. ಹಾಗಾಗಿ ದೇವರನ್ನು ಮನುಷ್ಯ ರೂಪಿನಲ್ಲಿ ಚಿತ್ರಿಸಿದ್ದು ಧರ್ಮನಿಂದನೆ, ಅದರಲ್ಲೂ ಒಬ್ಬ ವೇಶ್ಯೆಯ ರೂಪನ್ನು ಹಿಂದೂ ದೇವತೆಗಳಿಗೆ ಲೇಪಿಸಿದ್ದು ಧರ್ಮದ್ರೋಹ, ಪುರಾಣ ಪಾತ್ರಗಳನ್ನು ಅಶ್ಲೀಲವಾಗಿ ಚಿತ್ರಿಸಿ ಜನರ ಭಾವನೆಗಳನ್ನು ಘಾಸಿಗೊಳಿಸಿದ್ದಾನೆ ಅಂತೆಲ್ಲ ರವಿವರ್ಮನ ಮೇಲೆ ಕೇಸು ದಾಖಲಿಸಿ ನ್ಯಾಯಾಲಯದ ಕಟಕಟೆಗು ತಂದು ನಿಲ್ಲಿಸುತ್ತಾರೆ.
ಕೋರ್ಟ್ ಆವರಣದಲ್ಲೆ ಅವನ ಮೇಲೆ ಹಲ್ಲೆ ಮಾಡುತ್ತಾರೆ, ಅವನ ಪ್ರಿಂಟಿಂಗ್ ಪ್ರೆಸ್ ಗೆ ಬೆಂಕಿಯಿಟ್ಟು ಧ್ವಂಸ ಮಾಡುತ್ತಾರೆ, ಆತ ಮನೆಯಿಂದ ಹೊರಬರುವುದಕ್ಕು ಆಗದಂತೆ ಅವನ ವಿರುದ್ಧ ಪ್ರತಿಭಟನೆಗಳನ್ನು ಹೆಣೆಯುತ್ತಾರೆ. ನಗ್ನತೆ ಎಂದರೆ ಕೇವಲ ಅಶ್ಲೀಲತೆ ಮಾತ್ರವಲ್ಲ, ಅದರಲ್ಲಿ ಸೌಂದರ್ಯದ ರಸಿಕತೆಯೂ ಇರುತ್ತೆ. ಪ್ರಪಂಚಕ್ಕೆ ಕಾಮಶಾಸ್ತ್ರದ ಕೊಡುಗೆ ಕೊಟ್ಟ ನೆಲದ ದೇವಾಲಯಗಳು ತಮ್ಮ ಮೈಮೇಲೆ ‘ಮೈಥುನ’ದ ಕಲಾವಂತಿಕೆಯನ್ನು ಹೊತ್ತುಕೊಂಡರು ಪವಿತ್ರ ಎನಿಸಿಕೊಂಡಿವೆಯೇ ಹೊರತು ಮೈಲಿಗೆಯೆನಿಸಿಲ್ಲ. ಸ್ತ್ರೀಯನ್ನು ತಮ್ಮ ಕಾಮತೃಷೆಯ ವಸ್ತುವಾಗಿಸಿಕೊಂಡವರಿಗೆ ಅವಳ ಸೌಂದರ್ಯ ಅಶ್ಲೀಲತೆಯಾಗಿ ಕಾಣಿಸುತ್ತದೆಯೇ ವಿನಾಃ ಸೌಂದರ್ಯೋಪಾಸಕರಿಗಲ್ಲ. ಇನ್ನು ಶತಶತಮಾನಗಳಿಂದ ಶೂದ್ರ ಸಮುದಾಯಗಳನ್ನು ದೇವಾಲಯಗಳಿಂದ ಹೊರಗಿಟ್ಟು ಅವರ ಮನಸ್ಸಿನಲ್ಲಿ ದೇವರ ಆಕಾರಕ್ಕೆ ಆಸ್ಪದವನ್ನೇ ಕೊಡದ ಸಮಾಜದ ಅಸಮಾನತೆಯನ್ನು ಧಿಕ್ಕರಿಸಿ ದೇವರನ್ನೆ ಅಂತವರ ಬಳಿಹೊಯ್ದ ರವಿವರ್ಮ ಧರ್ಮದ್ರೋಹಿ ಆಗುವುದಕ್ಕೆ ಸಾಧ್ಯವೇ ಇಲ್ಲ. ಹರಿಜನರಿಗೆ ದೇವಾಲಯ ಪ್ರವೇಶವನ್ನು ಮೇಲ್ವರ್ಗಗಳು ನಿರಾಕರಿಸಿದ್ದನ್ನು ಪ್ರತಿಭಟಿಸಿ ಅಂತಹ ದೇವಾಲಯಗಳಿಗೆ ಪ್ರತಿಯಾಗಿ ಹರಿಜನ ದೇವಾಲಯಗಳನ್ನು ನಿರ್ಮಿಸುವ ಮೂಲಕ ದೇವರನ್ನೆ ತಳಸಮುದಾಯದವರ ಬಳಿ ಕರೆತಂದ ನಾರಾಯಣ ಗುರುಗಳ ಧಾರ್ಮಿಕ ರೂಪದ ಸಾಮಾಜಿಕ ಚಳವಳಿ ರವಿವರ್ಮನ ಈ ಹೆಜ್ಜೆಯೊಂದಿಗೆ ಸಾಮ್ಯತೆ ಹೊಂದುತ್ತದೆ. ಇಂತಹ ತರ್ಕಗಳೆಲ್ಲ ವಾದ ಪ್ರತಿವಾದಿಸಲ್ಪಟ್ಟ ನಂತರ ನ್ಯಾಯಾಲಯ ಕೂಡ ಆತನನ್ನು ಆರೋಪಮುಕ್ತ ಗೊಳಿಸುತ್ತದೆ. ಅಷ್ಟರಲ್ಲಾಗಲೆ ರವಿವರ್ಮನೊಳಗಿನ ಕಲಾವಿದ ಈ ಜಂಜಡಗಳಿಂದ ಜರ್ಝರಿತನಾಗಿರುತ್ತಾನೆ. ಇವತ್ತು ಅವನನ್ನು ಕೊಂಡಾಡುವ ಇದೇ ಸಮಾಜ ಅವತ್ತು ಅವನ ಕಲಾಪ್ರೌಢಿಮೆಯನ್ನು ಅರ್ಥ ಮಾಡಿಕೊಂಡಿದ್ದರೆ ಅವನ ಕುಂಚ ಇನ್ನೂ ಎಂತೆಂಥ ಕಲಾಕುಸುಮಗಳನ್ನು ಅರಳಿಸುತ್ತಿತ್ತೊ. ಈ ಸಮಾಜ ಅದೇ ತಪ್ಪನ್ನು ಇವತ್ತಿಗೂ ಪುನರಾವರ್ತಿಸುತ್ತಿದೆ. ಆದರೆ ರವಿವರ್ಮನ ಜಾಗದಲ್ಲಿ ಎಂ.ಎಫ್. ಹುಸೇನೊ, ಅಮೀರ್ ಖಾನೊ, ಶಿಲುಬೆಗೇರುತ್ತಿದ್ದಾರಷ್ಟೆ!
ರಂಜಿತ್ ದೇಸಾಯಿಯವರ ರಾಜಾ ರವಿವರ್ಮ ಕೃತಿಯನ್ನಾಧರಿಸಿದ ಈ ಸಿನಿಮಾವನ್ನು ನಿರ್ದೇಶಕ ಕೇತನ್ ಮೆಹ್ತಾ ರವಿವರ್ಮನ ಕಲಾಕೃತಿಗಳಷ್ಟೆ ನವಿರಾಗಿ ಕಟ್ಟಿಕೊಡಲು ಯತ್ನಿಸಿದ್ದಾರೆ. ರವಿವರ್ಮನ ಪಾತ್ರದಲ್ಲಿ ರಣದೀಪ್ ಹೂಡಾ ಗಮನ ಸೆಳೆಯುವುದು ನಿಜವಾದರು ಇಡೀ ಸಿನಿಮಾವನ್ನು ಆವರಿಸುವುದು ಸುಗಂಧಾ ಪಾತ್ರದ ಒಳಹೊಕ್ಕ ನಂದನಾ ಸೇನ್. ವೇಶ್ಯೆಯ ಪಾತ್ರದಲ್ಲಿ ರವಿವರ್ಮನ ಕಲಾರಸಿಕತೆಗೆ ತನ್ನನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡು, ಆತನ ಊರ್ವಶಿ-ಪುರೂರವ ಪ್ರೇಮಕಾವ್ಯದ ಕಲ್ಪನೆಗೆ ರೂಪವಾಗಲು ತನ್ನ ಸ್ತ್ರೀ ಸೌಂದರ್ಯವನ್ನು ಕ್ಯಾಮೆರಾ ಮುಂದೆ ತೆರೆದಿಟ್ಟು ನಗ್ನಳಾಗುವ ಆಕೆಯ ವೃತ್ತಿಪರತೆ ಸಿನಿಮಾದ ಅದ್ಭುತ ಕ್ಷಣಗಳಲ್ಲಿ ಒಂದು. ಮೂಲ ರವಿವರ್ಮನ ಕಲಾಕೃತಿಗಳಲ್ಲಿ ಕಾಣಸಿಗುವಂತೆ ಈ ದೃಶ್ಯದಲ್ಲು ಅಶ್ಲೀಲತೆಯನ್ನು ಹಿಮ್ಮೆಟ್ಟಿಸಿ ಸೌಂದರ್ಯ ರಸಿಕತೆಯೆ ನೋಡಗರ ಮನಸ್ಸನ್ನು ಆವರಿಸುವಂತೆ ಮಾಡುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ.
ವಿಚಾರಣೆಯ ವೇಳೆ ವಕೀಲರು ಪ್ರಶ್ನೆಗಳ ಮೂಲಕ ಸುಗಂಧಿಗೆ ಮುಜುಗರ ತಂದಿತ್ತಾಗ ಆಕೆ ನೊಂದು ನುಡಿಯುವ “ನನ್ನಂತ ನತದೃಷ್ಟೆಯನ್ನು ಆ ವ್ಯಕ್ತಿ ದೇವತೆಯಾಗಿಸಿದ. ಆದರೆ ನಿಮ್ಮ ಸಮಾಜ ಏನು ಮಾಡಿತು? ನನ್ನನ್ನು ವೇಶ್ಯೆಯಾಗಿಸಿ ಖುಷಿಪಟ್ಟಿತು!” ಮಾತು ಸಿನಿಮಾದ ವೈಚಾರಿಕ ಸೌಂದರ್ಯವನ್ನು ಕಟ್ಟಿಕೊಡುತ್ತದೆ. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಸುಗಂಧಿ ಈ ಸಮಾಜದ ಸ್ತ್ರೀ ಬಲಿಪಶು ಪರಂಪರೆಯ ರೂಪಕವಾಗಿ ಕಾಡುತ್ತಾಳೆ. ಆಕೆಯ ಸಾವಿನ ನಂತರವು ಸಿನಿಮಾ ಕೊಂಚಹೊತ್ತು ಸರಿದಾಡುತ್ತದಾದರು ಗಂಭೀರ ನೋಡುಗರಿಗೆ ಸುಗಂಧಿಯ ಪಾತ್ರ ನಿರ್ಗಮನವೇ ಸಿನಿಮಾದ ದಿ ಎಂಡ್‍ನಂತೆ ಕಾಡುತ್ತದೆ. ಸುಗಂಧಿ ಯಾವ ಪರಿ ಪ್ರೇಕ್ಷಕನನ್ನು ಆವರಿಸುತ್ತಾಳೆಂದರೆ ಒಂದು ಹಂತದಲ್ಲಿ ಸಿನಿಮಾದ ಹೀರೊ ರವಿವರ್ಮನೆ ಆಕೆಯ ಪಾಲಿನ ಖಳನಾಯಕನಂತೆ ಭಾಸವಾಗಿಬಿಡುತ್ತಾನೆ. ನನಗಂತೂ ಹಾಗನ್ನಿಸಿತು. ಬಹುಶ ಸಿನಿಮಾ ನೋಡಿದರೆ ಅಥವಾ ಈಗಾಗಲೇ ನೋಡಿದ್ದರೆ ನಿಮಗೂ ಹಾಗೇ ಅನ್ನಿಸಬಹುದು. ಸಮಯ ಸಿಕ್ಕಾಗ ಒಮ್ಮೆ ಆ ಸಿನಿಮಾ ನೋಡಿ.

– ಗಿರೀಶ್ ತಾಳಿಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...