Homeಮುಖಪುಟಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಎನ್‌ಪಿಆರ್, ಜನಗಣತಿ ಕುರಿತು ಜನರ ಆತಂಕ ನಿವಾರಿಸುವಂತೆ ಸರಕಾರಕ್ಕೆ ಸಂಸದೀಯ ಸಮಿತಿ ಸೂಚನೆ

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು.

- Advertisement -
- Advertisement -

ಎನ್‌ಪಿಆರ್ ಮತ್ತು ಜನಗಣತಿಯ ಪ್ರಕ್ರಿಯೆ ಆರಂಭಿಸುವ ಮೊದಲು ಸಾರ್ವಜನಿಕರ ಆತಂಕ ನಿವಾರಣೆಗೆ ಸೂಕ್ತ ಯೋಜನೆಯೊಂದನ್ನು ರೂಪಿಸುವಂತೆ ಸಂಸದೀಯ ಸಮಿತಿಯೊಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.

ಮುಂಬರಲಿರುವ ಎನ್‌ಪಿಆರ್ ಮತ್ತು ಜನಗಣತಿಯ ಕುರಿತು ಜನರಿಗೆ ಅತೃಪ್ತಿ ಮತ್ತು ಭಯವಿದ್ದು, ಯಾವುದೇ ಮಾಹಿತಿ ಸಂಗ್ರಹ ಆರಂಭಿಸುವ ಮೊದಲು ಈ ಭಯವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದೀಯ ಸಮಿತಿಯು ಸರಕಾರಕ್ಕೆ ಸಲಹೆ ಮಾಡಿದೆ. ಈ ಸಲಹೆಯನ್ನು ಮಾಡಿರುವುದು ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ.

ಜನಗಣತಿಯು ಸರಾಗವಾಗಿ ನಡೆಯುವಂತೆ ಒಂದು ದಾರಿಯನ್ನು ಕೇಂದ್ರ ಗೃಹ ಸಚಿವಾಲಯ ಕಂಡುಕೊಳ್ಳಬೇಕು; ಇಲ್ಲವಾದರೆ ಹಲವಾರು ರಾಜ್ಯಗಳಲ್ಲಿ ಇಡೀ ಪ್ರಕ್ರಿಯೆಯೇ ಬುಡಮೇಲಾಗಬಹುದು ಎಂದು ಸಮಿತಿಯು ಎಚ್ಚರಿಕೆ ನೀಡಿದೆ.

ಎನ್‌ಪಿಆರ್ ಎಂದರೇನು?: ಗೃಹ ಸಚಿವಾಲಯದ ವಾದ

ರಾಷ್ಟ್ರೀಯ ಒಮ್ಮತಕ್ಕೆ ಬರುವ ಸಲುವಾಗಿ ಎನ್‌ಪಿ‌ಆರ್‌ಗೆ ಸಂಬಂಧಿಸಿದಂತೆ ಇರುವ ವಿವಿಧ ವಿಷಯಗಳ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಪೂರ್ಣವಾಗಿ ಮನವರಿಕೆ ಮಾಡಬೇಕು ಎಂದು ಈ ಬಹುಪಕ್ಷೀಯ ಸಮಿತಿ ಹೇಳಿದೆ. ಈ ರೀತಿಯ ಒಮ್ಮತವು ದೇಶಾದ್ಯಂತ ಜನರಲ್ಲಿ ಇರುವ ಭಯವನ್ನು ನಿವಾರಿಸಿ, ಸಂಪೂರ್ಣ ಸ್ಪಷ್ಟತೆ ಮೂಡಿಸುವುದರಿಂದ ಸರಾಗವಾಗಿ ಈ ಪ್ರಕ್ರಿಯೆ ನಡೆಯಲು ಅನುಕೂಲವಾಗುವುದು ಎಂದು ಸಮಿತಿಯು ಹೇಳಿದೆ.

ಹೊಸದಾಗಿ ಮಾಹಿತಿ ಸಂಗ್ರಹ ಕಾರ್ಯಕ್ರಮಕ್ಕೆ ತಗಲುವ ಶ್ರಮ ಮತ್ತು ವೆಚ್ಚ ಮರುಕಳಿಸದಂತೆ ಮಾಡಲು ಆಧಾರ್ ಮಾಹಿತಿಗಳನ್ನೇ ಎನ್‌ಪಿಆರ್ ನವೀಕರಣಕ್ಕೆ ಬಳಸಿಕೊಳ್ಳುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಸಮಿತಿ ಹೇಳಿದೆ.

1955ರ ಪೌರತ್ವ ಕಾಯಿದೆಯ ಆಧಾರದಲ್ಲಿ- 2003ರ ಪೌರತ್ವ ನಿಯಮಗಳ ಅನ್ವಯ 2010ರಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಅಥವಾ ಎನ್‌ಪಿಆರ್ ಮಾಡಲಾಗಿತ್ತು ಮತ್ತು 2015ರಲ್ಲಿ ಅದನ್ನು ನವೀಕರಣ ಮಾಡಲಾಗಿತ್ತು.

“ಹುಟ್ಟು, ಸಾವು ಮತ್ತು ವಲಸೆ ಇತ್ಯಾದಿ ಕಾರಣಗಳಿಂದ ರಾಷ್ಟ್ರೀಯ ಅಂಕಿಅಂಶಗಳನ್ನು ಮತ್ತೊಮ್ಮೆ ನವೀಕರಣ ಮಾಡಬೇಕಾದ ಅಗತ್ಯವಿದ್ದು, ಸರಕಾರ ಎನ್‌ಪಿಆರ್ ನವೀಕರಣದ ನಿರ್ಧಾರ ಕೈಗೊಂಡಿದೆ” ಎಂದು ಗೃಹ ಸಚಿವಾಲಯ ವಾದಿಸಿತು.

ಎನ್‌ಪಿಆರ್ ನವೀಕರಣ ನಡೆಯುತ್ತಿದ್ದು, ಅದನ್ನು ಹೊಸದಾಗಿ ಮಾಡುತ್ತಿಲ್ಲವಾದುದರಿಂದ, ಆಧಾರ್ ಮಾಹಿತಿ ಸಂಗ್ರಹ ( ಡಾಟಾ ಬೇಸ್) ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಯಾವುದೇ ಮರುಕಳಿಕೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಗೃಹ ಸಚಿವಾಲಯ ವಾದಿಸಿತು.

ಅದಲ್ಲದೇ “ಆಧಾರ್ ವೈಯಕ್ತಿಕ ಮಾಹಿತಿಯನ್ನು ಹೊಂದಿದ್ದು, ಎನ್‌ಪಿಆರ್ ಕೌಟುಂಬಿಕ ಮಾಹಿತಿಯನ್ನು ಹೊಂದಿರುತ್ತದೆ. ಆಧಾರ್ ಮಾಹಿತಿ ಸಂಗ್ರಹದಿಂದ ಕೌಟುಂಬಿಕ ಮಾಹಿತಿ ಸಂಗ್ರಹ ಸ್ಥಾಪಿಸಲು ಪ್ರತೀ ಮನೆಗೆ ಭೇಟಿ ನೀಡುವ ಅಗತ್ಯವಿದೆ” ಎಂದೂ ಗೃಹ ಸಚಿವಾಲಯ ವಾದಿಸಿತು.

ಆಧಾರ್, ಮತದಾರರ ಗುರುತುಚೀಟಿ, ಪಾಸ್‌ಪೋರ್ಟ್ ಸಂಖ್ಯೆ, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿಗಳ ನಡುವೆ ಕಳೆದುಹೋಗಿರುವ ಕೊಂಡಿಯನ್ನು ಎನ್‌ಪಿಆರ್ ಮರಳಿ ಸ್ಥಾಪಿಸುವುದು, ಮತ್ತು ಮಾಹಿತಿಯ ಮರುಕಳಿಕೆಯನ್ನು ಕೂಡಾ ಅದು ನಿವಾರಿಸುವುದು ಎಂದು ಕೂಡಾ ಗೃಹ ಸಚಿವಾಲಯ ವಾದಿಸಿತು. ಎನ್‌ಪಿಆರ್ ಮಾಹಿತಿಯನ್ನು ಇನ್ನಷ್ಟು ವಿಶ್ವಾಸಾರ್ಹಗೊಳಿಸಿ, ಭವಿಷ್ಯದಲ್ಲಿ ವಿವಿಧ ಯೋಜನೆಗಳ ಅನುಷ್ಟಾನದ ವೇಳೆ ಸರಕಾರದ ಸಂಪನ್ಮೂಲಗಳನ್ನು ಉಳಿತಾಯ ಮಾಡುವುದು ಎಂದೂ ಗೃಹ ಸಚಿವಾಲಯ ವಾದಿಸಿತು.

ಜನನ ಮತ್ತು ಮರಣದ ಮಾಹಿತಿಗಳನ್ನು ಸಂಪರ್ಕಿಸಿ ಪ್ರಸ್ತುತ ಕಾಲದ ಜನಸಂಖ್ಯೆಯ ಪ್ರಸ್ತುತ ಕಾಲದ ಮಾಹಿತಿ ಸಂಗ್ರಹ ಸರಕಾರದ ಆಶಯವಾಗಿದೆ ಎಂದೂ ಗೃಹ ಸಚಿವಾಲಯ ವಾದಿಸಿದೆ.

ದೇಶದಾದ್ಯಂತ ಎಪ್ರಿಲ್ 1ರಿಂದ ಜನಗಣತಿಯ ಜೊತೆಯಲ್ಲಿ ಎನ್‌ಪಿಆರ್ ನಡೆಸುವ ಯೋಜನೆಯೇನೋ ಇದೆ. ಆದರೆ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಮುಂತಾದ ಪ್ರತಿಪಕ್ಷಗಳಿರುವ ರಾಜ್ಯಗಳು ತಾವು ಎನ್‌ಪಿಆರ್ ಮಾಹಿತಿ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ.

ಎನ್‌ಪಿಆರ್ ಎಂಬುದು ಎನ್‌ಆರ್‌ಸಿಯ ಪೂರ್ವಭಾವಿ ಕಾರ್ಯಕ್ರಮ ಎಂದು ಪ್ರತಿಪಕ್ಷಗಳ ಆರೋಪವಾದರೆ, ರಾಷ್ಟ್ರೀಯ ಪೌರತ್ವ ದಾಖಲಾತಿ ಕುರಿತು ಯಾವುದೇ ನಿರ್ಧಾರವನ್ನು ಈ ತನಕ ತೆಗೆದುಕೊಳ್ಳಲಾಗಿಲ್ಲ ಎಂದು ಬಿಜೆಪಿ ನೇತೃತ್ವದ ಸರಕಾರ ಹೇಳುತ್ತಿದೆ.

ಕೇಳಲಾಗಲಿರುವ ಪ್ರಶ್ನಾವಳಿಯಲ್ಲಿ ಹೆತ್ತವರ ಜನನ ಸ್ಥಳ, ಜನನ ದಿನಾಂಕ ಇತ್ಯಾದಿ ಮಾಹಿತಿಗಳ ಕುರಿತು ಪ್ರಶ್ನೆಗಳನ್ನು ಹೊಸದಾಗಿ ಸೇರಿಸಿರುವುದಕ್ಕೆ ಹಲವಾರು ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಕೃಪೆ: ಕಮಲ್‌ಜಿತ್‌ ಕೌರ್‌ ಸಂಧು, ಇಂಡಿಯಾ ಟುಡೆ
ಕನ್ನಡಕ್ಕೆ : ನಿಖಿಲ್‌ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...