Homeಮುಖಪುಟತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

- Advertisement -
- Advertisement -

“ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ” ಕಣ್ಣನ್ ಗೋಪಿನಾಥ್ ಹೇಳಿದ ಈ ಸಾಲುಗಳು ಮಕ್ಕಳ ಹೊತ್ತೂಟಕ್ಕೆಂದು ಝಡಿ ಮಳೆಯು ಲೆಕ್ಕಿಸದೆ ತಂಬಾಕು ಹೊಲದಲ್ಲಿ ದುಡಿವ ನನ್ನ ಹಳ್ಳಿಯ ತಾಯಂದಿರಿಂದ ಹಿಡಿದು ದೆಲ್ಲಿಯಲ್ಲಿ ಭಾರತೀಯ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಸಹಿಷ್ಣುತೆಗೆ ಎದುರಾಗಿರುವ ಗ್ರಹಣವನ್ನು ದೂರ ಮಾಡಿ ತಮ್ಮ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಶಾಹೀನ್‌ಬಾಗ್ ನ ಹೆಣ್ಣುಗಳವರೆಗು ಅಕ್ಷರಶಃ‌ ಸರ್ವಕಾಲಿಕ ಸತ್ಯ.

ಸ್ವತಂತ್ರ ಭಾರತದ ಇತಿಹಾಸದಲ್ಲೆ ಬಲಿಷ್ಟ ಸರ್ಕಾರವೆಂದು ಮಾಧ್ಯಮಗಳಿಂದ ಬಿಂಬಿತವಾಗಿರುವ ಹಾಲಿ ಕೇಂದ್ರ ಸರ್ಕಾರಕ್ಕೆ ದೆಹಲಿಯಲ್ಲಿ ಅರವತ್ತನಾಲ್ಕು ದಿನಗಳಿಂದ ನಡೆಯುತ್ತಿರುವ ಶಾಂತಿಯುತ ಮಹಿಳಾ ಪ್ರತಿಭಟನೆಯು ಗೋಧಿ ಮೀಡಿಯಾದ ಅಬ್ಬರದ ಪ್ರಚಾರದ ನಡುವೆ, ವಿರೋಧ ಪಕ್ಷಗಳ ದುರ್ಬಲತೆಯ ನಡುವೆ, ಆರು ವರ್ಷಗಳಿಂದ ಎಲ್ಲಾ ಹೋರಾಟಗಳನ್ನು ದಮನಿಸಿದ್ದ ಈ ಸರ್ಕಾರವನ್ನು ಗಂಭೀರವಾಗಿ ನಿದ್ದೆಗೆಡಿಸಿ ದೆಹಲಿಯ ಚುನಾವಣೆಯ ಬಹು ಚರ್ಚಿತ ವಿಷಯವಾಗಿ, ಭಾಜಾಪ ಪಕ್ಷದ ಸೋಲಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದ ನಿರ್ಣಾಯಕ ಅಂಗವಾಗಿ ಮಹಿಳಾ ಪ್ರತಿಭಟನಾ ಶಕ್ತಿಯನ್ನು ಜಗತ್ತಿಗೆ ನೆನಪಿಸಿದ ಕೀರ್ತಿ, ಪ್ರಬಲ ಕೇಂದ್ರ ಸರ್ಕಾರಕ್ಕೆ ನಾರಿ ಶಕ್ತಿಯನ್ನು ರುಜುವಾತು ಮಾಡಿದ ಹಿರಿಮೆ ಶಾಹೀನ್ ಬಾಗ್‌ ಹೆಣ್ಣುಗಳಿಗೆ ಸಲ್ಲುತ್ತದೆ.

 

ಭಾರತದಲ್ಲಿ ಸ್ವಾತಂತ್ರ್ಯಾನಂತರ 70ರ‌ ದಶಕ ಹೊರತುಪಡಿಸಿ ಬಹುಕಾಲ ಭಾರತದ ಮಹಿಳಾ ದನಿ ಮರೆಯಾಗಿದ್ದದ್ದು ಒಂದು ರೀತಿಯ ವಿಪರ್ಯಾಸ. ಭಾರತದಲ್ಲಿ ಮಹಿಳಾಪರ ಸಂಗತಿಗಳು ಮುನ್ನೆಲೆಗೆ ಬಂದದ್ದು 70ರ ದಶಕದಲ್ಲಿ. 1971ರಲ್ಲಿ ವಿಶ್ವಸಂಸ್ಥೆಯ ಸೂಚನೆಯ ಮೇರೆಗೆ ಮಹಿಳೆಯರ ಸ್ಥಿತಿಗತಿಗಳನ್ನು ಪರಿಶೀಲಿಸಲು ‘ಕಮಿಟಿ ಆನ್ ದಿ ಸ್ಟೇಟಸ್ ಆಫ್ ವಿಮೆನ್ ಇನ್ ಇಂಡಿಯಾ’ ಎಂಬ ಸಮಿತಿಯೊಂದನ್ನು ರಚಿಸಲಾಯಿತು.

ಹಿರಿಯ ಮಹಿಳಾ ಹೋರಾಟಗಾರರಿದ್ದಂತಹ ಈ ಸಮಿತಿ ಭಾರತದ ತುಂಬೆಲ್ಲಾ ಓಡಾಡಿ ಎಲ್ಲಾ ಸ್ಥರಗಳ ಮಹಿಳೆಯರ ಬದುಕಿನ ಸ್ಥಿತಿಗತಿಗಳನ್ನು ಖುದ್ದಾಗಿ ಅವಲೋಕಿಸಿದಾಗ ಕಂಡಂತಹ ಆಘಾತಕಾರಿ‌ ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ‘ಸಮಾನತೆಯೆಡೆಗೆ’ ಎಂಬ ವರದಿಯನ್ನು ಈ ಸಮಿತು ಬಿಡುಗಡೆ ಮಾಡಿತು. ಈ ವರದಿ ಭಾರತದ ಮಹಿಳಾಪರ ಮತ್ತು ಪ್ರಜಾತಾಂತ್ರಿಕ ವಲಯಗಳಲ್ಲಿ ಬಹುಚರ್ಚಿತ ವಿಚಾರವಾಯಿತು. ಅನೇಕ ಸ್ವಾಯತ್ತ ಮಹಿಳಾ ಸಂಘಟನೆಗಳು ಆರಂಭವಾದವು. ಶಿಕ್ಷಣ, ಉದ್ಯೋಗಾವಕಾಶ, ಲೈಂಗಿಕ ಕಿರುಕುಳ ಮುಕ್ತ ಔದ್ಯೋಗಿಕ ವಾತಾರವಣ ಮೊದಲಾದ ಅನೇಕ ಅಂಶಗಳು ಧ್ವನಿಸಲು ಶುರುವಾದವು.

ಆರ್ಥಿಕ ಸಧೃಡತೆ ಮಹಿಳಾ ಸಬಲೀಕರಣಕ್ಕೆ ಮೂಲ ಅಸ್ತ್ರ ಎಂಬುದನ್ನು ಸಮಾಜ ಕಂಡುಕೊಂಡಿತು.
ವರದಕ್ಷಿಣೆ ಕಿರುಕುಳ, ಅತ್ಯಾಚಾರಗಳು ಮೊದಲಾದವುಗಳ ವಿರುದ್ಧ ಯಾವುದೇ ಸಂಘಟನೆಯಲ್ಲಿರಲಿ ಅಥವಾ ಇಲ್ಲದಿರಲಿ ಮಹಿಳೆಯರು ಬೀದಿಗಿಳಿದರು. ಮಹಿಳೆಯರ ಕುರಿತ ಸಾಮಾಜಿಕ ಸಂವೇದನೆ ಹೆಚ್ಚಾಗುತ್ತ ಬಂದ ಪರಿಣಾಮ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಲವು ಮಹಿಳಾಪರ ಕಾಯ್ದೆಗಳು, ಮಹಿಳಾ ಅಧ್ಯಯನ ಕೇಂದ್ರಗಳು, ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಲೇಬೇಕಾದದ್ದು ಅನಿವಾರ್ಯವಾಯಿತು. ಅಷ್ಟೆಯಲ್ಲ‌ ವಿಶ್ವಸಂಸ್ಥೆ 1975ರಲ್ಲಿ ಮಾರ್ಚ್ 08ನ್ನು ಅಂತರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿ, ಆ ವರ್ಷವನ್ನು ಮಹಿಳಾ ವರ್ಷ, ಆ ದಶಕವನ್ನು ಮಹಿಳಾ ದಶಕ ಎಂದೂ ಘೋಷಿಸಿತು.

ಕಾಲಕ್ಕೆ ತಕ್ಕಂತೆ ಸಮಸ್ಯೆಗಳ ಸ್ವರೂಪ ಭಿನ್ನವಾಗಿರುತ್ತದೆ, ಸಮಸ್ಯೆಗೆ ತಕ್ಕಂತೆ ಹೋರಾಟದ ಸ್ವರೂಪವೂ ಭಿನ್ನವಾಗುವುದು ಅನಿವಾರ್ಯವಾಗುತ್ತದೆ. ಹೋರಾಟದ ಸ್ವರೂಪಕ್ಕೆ ತಕ್ಕಂತೆ ಪ್ರತಿಫಲಗಳು ಭಿನ್ನವಾಗುತ್ತವೆ. ಎಪ್ಪತ್ತರ ದಶಕದಲ್ಲಿ ಪ್ರಮುಖವಾಗಿ ಭಾರತ ಮತ್ತಿತರ ದೇಶಗಳಲ್ಲಿ ನಡೆದ ಮಹಿಳಾ ಹೋರಾಟದಿಂದಾಗಿ ಆ ಇಡೀ ದಶಕ ಮಹಿಳಾ ದಶಕವಾದಂತೆಯೆ ಈ ಇಡೀ ವರ್ಷ ಭಾರತದಲ್ಲಿ ಮಹಿಳಾ ವರ್ಷವೆ ಆಗಲಿದೆ.
ಈ ಮಹಿಳಾ‌‌ ವರ್ಷದ ಪ್ರತಿರೋಧ ವರ್ಷಧಾರೆ ಪ್ರಾರಂಭವಾದದ್ದು ಡಿಸೆಂಬರ್ 15, 2019ರಂದು‌ ದೆಹಲಿಯ ಜಾಮಿಯ ಮಿಲ್ಲಿಯ ವಿಶ್ವವಿದ್ಯಾಲಯದಲ್ಲಿ NPR NRC CAA ವಿರೋಧಿಸಿ ದಿಟ್ಟ ಪ್ರತಿಭಟನೆ ನಡೆಯಿತು. ನಂತರ ಪೊಲೀಸರು ಕ್ಯಾಂಪಸ್ಸಿನೊಳಗೆ ನುಗ್ಗಿ‌ ಗೂಂಡಾವರ್ತನೆಯೊಂದಿಗೆ ಕೈಗೆ ಸಿಕ್ಕ ಸಿಕ್ಕವರನ್ನು ಥಳಿಸಿದರು. ಆಗ ಒಬ್ಬ ಹುಡುಗನನ್ನು ಹೊಡೆಯುತ್ತಿದ್ದ ಪೊಲೀಸರನ್ನು ತಡೆದು ನಿಲ್ಲಿಸಿ ಎಚ್ಚರಿಕೆ ನೀಡಿದ ಜಾಮಿಯಾ ಮಿಲ್ಲಿಯಾ‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ಕೇರಳಾದ ಲದೀದ ಫ಼ರ್ಜ಼ಾನ ಮತ್ತು ಆಯಿಶಾ ರೆನ್ನ
ಎಂಬ ಇವರಿಬ್ಬರು ಜಾಮಿಯಾ ಹೋರಾಟದ ಚಹರೆಗಳಾದರು.

ಜಾಮಿಯಾದ ಮೇಲಾದ ಹಲ್ಲೆಯನ್ನು ವಿರೋಧಿಸಿ ಮಕ್ಕಳ ಭವಿಷ್ಯಕ್ಕಾಗಿ‌ ಎಂಬ ಧ್ಯೇಯವಾಕ್ಯದೊಂದಿಗೆ ದೆಹಲಿಯ ಸೆಕ್ಟರ್ -13ರಲ್ಲಿ ರಾತ್ರೋರಾತ್ರಿ ದೀಪ ಹಿಡಿದು ನಿಂತ ತಾಯಂದಿರ ಹೋರಾಟ ಶಾಹೀನ್ ಬಾಗ್‌ ಆಗಿ ಬೆಳೆಯಿತು. ಈ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪಂಥೀಯ ಕೋಮುವಾದಿ ಶಕ್ತಿಗಳು ಲಾಟಿಚಾರ್ಜ್, ಗೋಲಿಬಾರ್, ಗಲಭೆಗಳನ್ನು ನಡೆಸಿದರು ಸಹ ಕುಗ್ಗದೆ ಮುನ್ನುಗಿದೆ.

ಶಾಹೀನ್ ಬಾಗ್‌ನ ಹೋರಾಟದ ಮಾದರಿಯಲ್ಲೆ ದೇಶದ ತುಂಬೆಲ್ಲಾ‌ ಶಾಹೀನ್ ಬಾಗ್‌ಗಳು ಪ್ರಾರಂಭವಾಗಿವೆ.
ದಾವಣಗೆರೆ, ರಾಯಚೂರು, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗ, ಭದ್ರಾವತಿ ಸೇರಿದಂತೆ ಬೆಂಗಳೂರಿನ ಬಿಲಾಲ್ ಬಾಗ್‌ ಕರ್ನಾಟಕ ರಾಜ್ಯದ ತುಂಬೆಲ್ಲಾ ಮಹಿಳಾ ನೇತೃತ್ವದ ಹೋರಾಟಗಳು ಮುನ್ನೆಲೆಯಲ್ಲಿವೆ.

ಒಂದು ಕಡೆ ಶಾಹೀನ್ ಬಾಗ್‌ ಹೋರಾಟವನ್ನು ಮಹಿಳೆಯರು ಮುನ್ನಡೆಸುತ್ತಿದ್ದರೆ ದೇಶದ ತುಂಬೆಲ್ಲಾ ಮಹಿಳೆಯರು ಬುರ್ಕಾ-ಬಿಂದಿ ಹೋರಾಟದ ಮೂಲಕ ಧರ್ಮಾತೀತ ರೂಪವನ್ನು ಚಳುವಳಿಗೆ ನೀಡುತ್ತಿದ್ದಾರೆ. ಮತ್ತೊಂದೆಡೆ ಬೀದಿ ತುಂಬೆಲ್ಲಾ ರಂಗೋಲಿ ಬಿಡಿಸಿ ಕೇಂದ್ರದ ಕರಾಳ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆಯ ಜಾಥಗಳನ್ನು ಹೊರಟ ಸ್ತ್ರೀಯರು, ಕವಿತೆ, ಕವನ, ಚಿತ್ರಕಲೆ ಹೀಗೆ ವಿಭಿನ್ನ ಆಯಾಮಗಳಲ್ಲಿ ಪ್ರತಿಭಟನೆಯನ್ನು ಮಹಿಳೆಯರು ತೆರೆದಿಡುತ್ತಿರುವುದು ವಿಶ್ವದ ಭವಿಷ್ಯವನ್ನು ಕಟ್ಟುಕೊಡುವ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ.

ಒಂದೆಡೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ, ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಹೋರಾಡುತ್ತಿದ್ದರೆ ಬೇಟಿ ಬಚಾವ್ ಬೇಟಿ ಪಡಾವ್ ಎನ್ನುವ ಸರ್ಕಾರ ಓದುವ ಹಕ್ಕಿಗಾಗಿಯೆ ಶುಲ್ಕ ಕಡಿಮೆ ಮಾಡಿ ಎಂದು ಕೇಳಿದ ಜೆ.ಎನ್.ಯುವಿನ ವಿದ್ಯಾರ್ಥಿಗಳ ಮೇಲೆ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಶಿ ಘೋಷ್ ಎನ್ನುವ ಹೆಣ್ಣು ಮಗಳ ಮೇಲೆ ಮಾಡಿದ ಹಲ್ಲೆ ಮಾಡಿತು. ಆಕೆಗೆ ಸಾಂತ್ವಾನ ಹೇಳಲು ಹೋದ ದೀಪಿಕಾ ಪಡುಕೋಣೆಯ ಬಗ್ಗೆ ಆಡಿದ ಮಾತುಗಳು ಈ ಸಂಸ್ಕೃತಿ ರಕ್ಷಕರ ಮುಖವಾಡದ ಅನಾವರಣವನ್ನು ಮಾಡಿದ್ದು ಒಂದೆಡೆಯಾದರೆ ಆಯಿಶಿ ಘೋಷ್, ದೀಪಿಕಾ ಪಡುಕೋಣೆಯಂತಹ ಹೆಣ್ಣುಗಳು ಪ್ರಭುತ್ವದ ಎದುರಿಗೆ ತೋರಿದ ಧೈರ್ಯ ನಿಜಕ್ಕೂ ಭರವಸೆಯ ಕಿರಣ.

ಇಷ್ಟೆಲ್ಲದರ ನಡುವೆ ಮಹಿಳಾ ಹೋರಾಟಗಳು ಸಿಂಪತಿಯ ಕಾರಣದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದಕ್ಕಿಂತ ಹಸಿ ಹಸಿ ಸುಳ್ಳು ಮತ್ತೊಂದಿಲ್ಲ. ಮಹಿಳಾ ಪ್ರತಿಭಟನೆ, ಹೋರಾಟ ಈ ಮಟ್ಟಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರಣ ಹೆಣ್ಣೊಳಗಿನ ನೈಜ ಕಾಳಜಿ, ಧೃಡತೆ, ಸ್ಥೈರ್ಯ ಮತ್ತು ಗೆದ್ದೆ ಗೆಲ್ಲುವೆವೆಂಬ ಅಚಲ ನಂಬಿಕೆ. ತಿಂಗಳಾನುಗಟ್ಟಲೆ ಅಲುಗಾಡದೆ ಕೂತಲ್ಲೆ ಕೂರುವ ಮನೋಸ್ಥೈರ್ಯ, ಹೋರಾಟದ ಕಿಚ್ಚು ಹೆಣ್ಣಿನಲ್ಲಿ ಮಾತ್ರ ಕಾಣಲು ಸಾಧ್ಯ.

ನಾಲ್ಕುನೂರು ವರ್ಷದ ಇತಿಹಾಸದಲ್ಲೆ ಕಂಡು ಕೇಳರಿಯದ ಐದು ಡಿಗ್ರಿ ಸೆನ್ಸಸ್ ಚಳಿಯಲ್ಲು ವಯಸ್ಸಿನ ಪರಿಮಿತಿಯಿಲ್ಲದೆ, ಯಾವ ಬೆದರಿಕೆಗೂ ಕುಗ್ಗದೆ ಜಗ್ಗದೆ ಹೋರಾಡುತ್ತಿರುವ, ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

(ಲೇಖಕಿ ಕವಯತ್ರಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...