Homeಸಿನಿಮಾಕ್ರೀಡೆಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

ಮಹಿಳಾ ಟಿ20 ವಿಶ್ವಕಪ್: ಫೈನಲ್ ನಲ್ಲಿ ಮುಗ್ಗರಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ನಡೆದ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು 85 ರನ್ನುಗಳ ಅಂತರದಲ್ಲಿ ಸೋಲುವ ಮೂಲಕ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ ತಂಡವು 20 ಓವರುಗಳಲ್ಲಿ 184/4 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದಕ್ಕುತ್ತರವಾಗಿ 185 ರನ್‌ಗಳ ಸವಾಲು ಬೆನ್ನಟ್ಟಿದ ಭಾರತ 19.1 ಓವರಿನಲ್ಲಿ ಕೇವಲ 99 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಮುಗ್ಗರಿಸಿತು.

ಟಾಸ್ ಗೆದ್ದ ಆಸ್ಟ್ರೇಲಿಯ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಲಿಸಾ ಹೀಲಿ ಮತ್ತು ಬೆಥ್ ಮೂನಿ ಕ್ರಮವಾಗಿ 75, 78 ರನ್ ಗಳಿಸಿದರಿಂದ ಆಸ್ಟ್ರೇಲಿಯಾ ತಂಡವು 20 ಓವರಿಗೆ 184 ರನ್ನುಗಳನ್ನು ಪೇರಿಸಿಲು ಸಾಧ್ಯವಾಯಿತು.

ಉತ್ತಮ ಆಟವಾಡುತ್ತಿದ್ದ ಅಲಿಸಾ ಭಾರತದ ರಾಧಾ ಯಾದವ್ ಅವರ ಎಸೆತಕ್ಕೆ ವೇದ ಕೃಷ್ಣಮೂರ್ತಿ ಅವರಿಗೆ ಕ್ಯಾಚ್ ಕೊಟ್ಟು ಔಟಾದರು. ಬೆಥ್ ಮೂನಿ ಕೊನೆವರೆಗೂ ಔಟಾಗದೆ 78 ರನ್ನುಗಳನ್ನು ತಂಡಕ್ಕೆ ನೀಡಿದರು.

185 ರನ್‌ಗಳ ಗುರಿ ಬೆನ್ನ ಭಾರತ, ಶಫಾಲಿ ವರ್ಮ ಮತ್ತು ಸ್ಮೃತಿ ಮಂದನ ಮೊದಲಿಗರಾಗಿ ಬ್ಯಾಟ್ ಬೀಸಿ ಬಹುಬೇಗನೇ ಔಟಾದರು. ನಂತರ ದೀಪ್ತಿ ಶರ್ಮ, ವೇದ ಕೃಷ್ಣಮೂರ್ತಿ, ರೀಚಾ ಘೋಷ್ ಕ್ರಮವಾಗಿ 33, 19, 18 ರನ್ನುಗಳನ್ನು ನೀಡಿದರೂ ಭಾರತ ತಂಡವೂ 19.1 ಓವರಿನಲ್ಲಿ 99 ರನ್ನುಗಳನ್ನಷ್ಟೇ ಪೇರಿಸಲು ಸಾಧ್ಯವಾಗಿ ಸೋಲೊಪ್ಪಿಕೊಂಡಿತು.

ಸಂಕ್ಷಿಪ್ತ ಪಟ್ಟಿ:

ಆಸ್ಟ್ರೇಲಿಯಾ 184/4 (20.0 / 20)

ಅಲಿಸಾ ಹೀಲಿ 75 ರನ್ (39 ಬಾಲ್ ಗಳಲ್ಲಿ)
ಬೆತ್ ಮೂನಿ ಅಜೇಯ 78 ರನ್ (54 ಬಾಲ್ ಗಳಲ್ಲಿ)
ಮೆಗ್ ಲ್ಯಾನಿಂಗ್ 16 ರನ್ (15 ಬಾಲ್ ಗಳಲ್ಲಿ)
ಆಶ್ಲೀ ಗಾರ್ಡ್ನರ್ 2 ರನ್ (3 ಬಾಲ್ ಗಳಲ್ಲಿ)
ರಾಚೆಲ್ ಹೇನ್ಸ್ 4 ರನ್ (5 ಬಾಲ್ ಗಳಲ್ಲಿ)
ನಿಕೋಲಾ ಕ್ಯಾರಿ ಅಜೇಯ 5 ರನ್ (5 ಬಾಲ್ ಗಳಲ್ಲಿ)
ಹೆಚ್ಚುವರಿ 4 ರನ್ಗಳು
ಒಟ್ಟು 184/4 20.0

ಭಾರತ 99 (19.1 / 20)

ಶಫಾಲಿ ವರ್ಮಾ 2 ರನ್ (3 ಬಾಲ್ ಗಳಲ್ಲಿ)

ಸ್ಮೃತಿ ಮಂದಾನ 11 ರನ್ (8 ಬಾಲ್ ಗಳಲ್ಲಿ)

ತಾನಿಯಾ ಭಾಟಿಯಾ 2 ರನ್ (4 ಬಾಲ್ ಗಳಲ್ಲಿ)
ಜೆಮಿಮಾ ರೊಡ್ರಿಗಸ್ 2 ರನ್

ಹರ್ಮನ್‌ಪ್ರೀತ್ ಕೌರ್ 4 ರನ್ (7 ಬಾಲ್ ಗಳಲ್ಲಿ)

ದೀಪ್ತಿ ಶರ್ಮಾ 33 ರನ್ (35 ಬಾಲ್ ಗಳಲ್ಲಿ)

ವೇದ ಕೃಷ್ಣಮೂರ್ತಿ 19 ರನ್ (24 ಬಾಲ್ ಗಳಲ್ಲಿ)

ರಿಚಾ ಘೋಷ್ 18 ರನ್ (18 ಬಾಲ್ ಗಳಲ್ಲಿ)

ಶಿಖಾ ಪಾಂಡೆ 2 ರನ್ (4 ಬಾಲ್ ಗಳಲ್ಲಿ)

ರಾಧಾ ಯಾದವ್ 1ರನ್ (2 ಬಾಲ್ ಗಳಲ್ಲಿ)

ಪೂನಂ ಯಾದವ್ 1 ರನ್ (5 ಬಾಲ್ ಗಳಲ್ಲಿ)

ರಾಜೇಶ್ವರಿ ಗಾಯಕ್ವಾಡ್ ಅಜೇಯ 1 ರನ್ (3 ಬಾಲ್ ಗಳಲ್ಲಿ)

ಹೆಚ್ಚುವರಿ 5 ರನ್ಗಳು
ಒಟ್ಟು 99/10 (19.1 / 20)

ಫಲಿತಾಂಶ ಆಸ್ಟ್ರೇಲಿಯಾಕ್ಕೆ 85ರನ್‌ಗಳ ಗೆಲುವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...