HomeಮುಖಪುಟCAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

CAA, NPR, NRC ಜಾರಿಯು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ: ಶಬ್ನಂ ಹಶ್ಮಿ

- Advertisement -
- Advertisement -

ಕೇಂದ್ರ ಸರ್ಕಾರವು CAA, NPR, NRC ಜಾರಿ ಮಾಡುತ್ತಿರುವುದು ಕೂಡಿ ಬಾಳುವ ಆಶಯದ ಮೇಲೆ ದಾಳಿಯಾಗಿದೆ ಎಂದು ಚಿಂತಕಿ ಮತ್ತು ಹೋರಾಟಗಾರ್ತಿ ಶಬ್ನಂ ಹಶ್ಮಿ ಆರೋಪಿಸಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯು ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, CAA, NPR, NRC ಯಿಂದ ಈ ದೇಶದ ಪ್ರಜೆಗಳೇ ಪೌರತ್ವ ಸಾಬೀತು ಮಾಡಬೇಕು ಎನ್ನುವ ದುಸ್ಥಿತಿ ಬಂದಿದೆ. ಭಾರತದ ಬಹುತೇಕ ಮಹಿಳೆಯರ ಬಳಿ ಆಸ್ತಿಯು ಇಲ್ಲ, ದಾಖಲೆಗಳು ಇಲ್ಲ. ಹಾಗಾಗಿ ಮಹಿಳೆಯರು ಮೊದಲ ಬಲಿಪಶುಗಳಾಗುತ್ತಾರೆ ಎಂದರು.

ಇದರಿಂದ ಹಿಂದೂಗಳಿಗೆ ಏನೂ ಆಪಾಯವಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಅಸ್ಸಾಮಿನ ಉದಾಹರಣೆಯನ್ನು ನೋಡಿ ದಾಖಲೆ ನೀಡಲಾಗದ 19 ಲಕ್ಷ ಜನರಲ್ಲಿ ಸುಮಾರು 14 ಲಕ್ಷ ಜನರು ಹಿಂದೂಗಳಾಗಿದ್ದಾರೆ. ಪ್ರಜಾತಂತ್ರದ ಮೇಲೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಇದರ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ನಾವು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಾಸುದಾರರು, ಗಾಂಧೀಜಿಯವರ ವಾರಸುದಾರರು, ನೇಣಿಗೆ ಕೊರಳೊಡ್ಡಿದ ಶಹೀದ್ ಭಗತ್ ಸಿಂಗ್‌ರವರ ವಾರಸುದಾರರು. ನಾವು ಯಾರಿಗೂ ಹೆದರುವುದಿಲ್ಲ. ಯಾರಿಗೂ ಹೆದರಬೇಕಾಗಿಲ್ಲ ಎಂದು ಕರೆ ನೀಡಿದರು.

1950ರ ದಶಕದಲ್ಲಿ ಕೇರಳದ ಮಹಿಳೆಯರು ಎದೆಮೇಲೆ ಬಟ್ಟೆ ಹಾಕಿಕೊಳ್ಳುವಂತಿರಲಿಲ್ಲ. ಹಾಗೇನಾದರೂ ಬಟ್ಟೆ ಹಾಕಿಕೊಂಡರೆ ತೆರಿಗೆಯನ್ನು ಕಟ್ಟಬೇಕಿತ್ತು. ಬಟ್ಟೆ ಹಾಕಿಕೊಂಡಿದ್ದ ನಂಗೇಲಿ ಎಂಬ ಮಹಿಳೆಯನ್ನು ತೆರಿಗೆ ಕೇಳಲು ಬಂದಾಗ ಆಕೆ ತನ್ನ ಎದೆಯನ್ನೇ ಕೊಯ್ದು ಕೊಟ್ಟಳು. ಇದರಿಂದಾಗಿ ಆಕೆ ಪ್ರಾಣವನ್ನೇ ಕಳೆದುಕೊಂಡಳು. ಆ ನಂತರ ಇದರ ವಿರುದ್ದ ಹೋರಾಟದ ಕಿಚ್ಚು ಹತ್ತಿಕೊಂಡಿತು. ಹಾಗೆಯೇ ತಮಗೆ ಅಗಾಧವಾದ ಅವಮಾನಗಳು ಎದುರಾದರೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಸಾವಿತ್ರಿ ಬಾಯಿ ಫುಲೆ ಅವರನ್ನು ನೆನಪು ಮಾಡಿಕೊಳ್ಳಬೇಕು ಎಂದರು.

1909 ರಲ್ಲಿ ನ್ಯೂಯಾರ್ಕ್‌ನ ದುಡಿಯುವ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟದ ನೆನಪಿನಲ್ಲಿ ಮಹಿಳಾ ದಿನಾಚರಣೆ ಅಸ್ತಿತ್ವಕ್ಕೆ ಬಂದಿದೆ. 1910 ರ ನಂತರವೂ ಮಹಿಳಾ ಹಕ್ಕುಗಳಿಗಾಗಿ ಹಲವು ಹೋರಾಟಗಳು ಜರುಗಿವೆ. ಈ ಹೋರಾಟದಲ್ಲಿ ಅಸಂಖ್ಯ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರನ್ನೂ ನಾವು ಮರೆಯಬಾರದು ಎಂದರು.

ಅಂದು ನಮ್ಮ ಸಮಾನತೆಗಾಗಿ ಹೋರಾಡಿ ಅಂಬೇಡ್ಕರ್ ಸಂವಿಧಾನವನ್ನು ಬರೆದರು. ಸಮಾಜದಲ್ಲಿ ಇಂದು ನಾವು ಭ್ರೂಣ ಹತ್ಯೆಗಳನ್ನು ನೋಡುತ್ತಿದ್ದೇವೆ. ವರದಕ್ಷಿಣೆ ತಗೆದುಕೊಳ್ಳುವಂತ ಗಂಡಸರ ಮನಸ್ಥಿತಿ ಎಂಥದ್ದು ಇರಬಹುದು? ಇಂಕ್ವಿಲಾಬ್ ಜಿಂದಾಬಾದ್ ಎಂದು ಹೊರಗೆ ಹೇಳುವುದು ಸುಲಭ ಆದರೆ ಮನೆಯೋಳಗೆ ಬಂದರೆ ಹಲವಾರು ವಿಚಾರಗಳಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹಾಗಾಗಿ ಮನೆಯೊಳಗಿನ ಹೋರಾಟ ಮತ್ತಷ್ಟು ಕಷ್ಟವಾಗಿದೆ ಎಂದರು.

ನಾನು ಮತ್ತು ನನ್ನ ಗಂಡ ವರದಕ್ಷಿಣೆ ತಗೆದುಕೊಳ್ಳುವ ಮದುವೆಗಳಿಗೆ ಹೋಗುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ದೊಡ್ಡ ಬದಲಾವಣೆ ತರೋಲ್ಲ ಅಂತ ಗೊತ್ತು. ಆದರೂ ನಾವು ಇದನ್ನು ಮಾಡುತ್ತೇವೆ. ನೀವು ಕೂಡ ಈ ರೀತಿಯಾಗಿ ಮಾಡಬೇಕು. ಮನೆಯಲ್ಲಿ ನಡೆಯುವ ದೌರ್ಜನ್ಯದ ವಿರುದ್ಧ ದನಿ ಎತ್ತಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...