Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಆಪ್‌ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಬಿಜೆಪಿ ಸಹವಾಸ, ಜನಸಾಮಾನ್ಯರಿಗೆ ಉಪವಾಸ.. ಕಾರು, ಬೈಕು ಮ್ಯೂಸಿಯಂನಲ್ಲಿ, ಸೈಕಲ್‌ ಬಂಡಿ ರೋಡಿನಲ್ಲಿ, ಬಿಜೆಪಿ ನಿನ್ನ ಕಾಲದಲ್ಲಿ” ಎಂಬಂತಹ ಬ್ಯಾನರ್‌ ಫ್ಲೆಕಾರ್ಡುಗಳನ್ನಿಡಿದು, ಸೈಕಲ್‌ ಮತ್ತು ಕುದುರೆ ಬಂಡಿ ಮೇಲೆ ಸವಾರಿ ಮಾಡುವ ಮೂಲಕ ಆಪ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕ್ರಮವಾಗಿ ₹ 1.59 ಹಾಗೂ 1.60 ಕ್ಕೆ ಏರಿಸಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದರು.

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.


ಈ ಹಿಂದಿನ ಸಮ್ಮಿಶ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕೇವಲ 10 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಆಕಾಶ ಭೂಮಿ ಒಂದಾಗುವಂತೆ ಕೂಗಾಡಿದ್ದ ಇದೇ ಬಿಜೆಪಿ ಮಂದಿ ಇಂದು ಬಾಯಿಗೆ ಕಡುಬು ತುರುಕಿ ಕೊಂಡಿರುವುದನ್ನು ನೋಡಿದರೆ, ‘ತಾನು ಕಳ್ಳ ಪರರನ್ನು ನಂಬ’ ಎನ್ನುವ ಸ್ಥಿತಿಯನ್ನು ಬಿಜೆಪಿಯವರು ತಲುಪಿದ್ದಾರೆ ಎನ್ನಬಹುದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಕಿಡಿಕಾರಿದರು.

15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರುವ ಪಾಲು ಕಡಿತ ಆಗಿದೆ. ಜಿಎಸ್‌ಟಿ ಪರಿಹಾರವೂ ಸಹ ಕಡಿಮೆ ಆಗಿದ್ದು ಇದರಿಂದ ರಾಜ್ಯಕ್ಕೆ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ. ಇದರ ಪರಿಣಾಮ, ಸಾರ್ವಜನಿಕರು ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಮೇಲೆ ಸಾಗಾಣೆ ವೆಚ್ಚ ಹೆಚ್ಚಾಗಿ, ಇವುಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿಯೂ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ‘ಸ್ವರ್ಗ’ ಮಾಡಲಾಗುವುದು, ‘ಸಿಂಗಾಪುರ’ ಮಾಡಲಾಗುವುದು ಎನ್ನುತ್ತಿದ್ದ ಜನ ಪ್ರತಿನಿಧಿಗಳ ಗಾಢ ನಿದ್ದೆಯಿಂದ ಇನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ ಎಂದು ಟೀಕಿಸಿದರು.

ನೀ ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎನ್ನುವ ಒಪ್ಪಂದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಬಂದಂತೆ ಕಾಣುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಇದುವರೆಗೂ ಸಹ ಈ ಎರಡೂ ಪಕ್ಷಗಳು ದಿವ್ಯ ಮೌನವಹಿಸಿರುವುದು ನೋಡಿದರೆ ಯಾರಿಗೂ ಜನರ ಹಿತಾಸಕ್ತಿ ಇಲ್ಲವೇ ಇಲ್ಲ ಎನ್ನಬಹುದು ಎಂದರು.

ಪ್ರಪಂಚದ 4ನೇ ಅತೀದೊಡ್ಡ ಗುಜುರಾತಿನ ತೈಲ ಘಟಕವನ್ನು ಸಂಪೂರ್ಣವಾಗಿ ರಿಲಯನ್ಸ್ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಿರುವ ಮೋದಿ ಸರ್ಕಾರ, ದೇಶದ ಬಡ ಜನರ ಬೆನ್ನಿನ ಮೇಲೆ ಬಾರ ಹಾಕಿ, ಹಾಕಿ ಗೂನಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಹೆಚ್ಚಳದ ಮೂಲಕ ತೈಲ ಕಂಪನಿಗಳ ಒಡೆಯರ ಜೇಬು ತುಂಬಿಸುತ್ತಿರುವ ಈ ಕ್ರಮವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ಈ ಬಜೆಟ್‌ಗೆ ಅನುಮೋದನೆ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಪಕ್ಷದ ಸ್ಥಳಿಯ ಮುಖಂಡರಾದ ಸೀತಾರಂ ಗುಂಡಪ್ಪ, ಆಯೂಬ್‌ ಖಾನ್, ಜಗದೀಶ್ ಚಂದ್ರ, ಲಕ್ಷ್ಮಿಕಾಂತ್ ರಾವ್, ಶರತ್ ಖಾದ್ರಿ, ಚನ್ನಪ್ಪ ಗೌಡ, ರವಿಚಂದ್ತ, ಫೀರೋಜ್ ಖಾನ್ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...