Homeಮುಖಪುಟಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ಆಪ್‌ನಿಂದ ವಿಶಿಷ್ಠ ಪ್ರತಿಭಟನೆ..

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಆಪ್‌ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

“ಬಿಜೆಪಿ ಸಹವಾಸ, ಜನಸಾಮಾನ್ಯರಿಗೆ ಉಪವಾಸ.. ಕಾರು, ಬೈಕು ಮ್ಯೂಸಿಯಂನಲ್ಲಿ, ಸೈಕಲ್‌ ಬಂಡಿ ರೋಡಿನಲ್ಲಿ, ಬಿಜೆಪಿ ನಿನ್ನ ಕಾಲದಲ್ಲಿ” ಎಂಬಂತಹ ಬ್ಯಾನರ್‌ ಫ್ಲೆಕಾರ್ಡುಗಳನ್ನಿಡಿದು, ಸೈಕಲ್‌ ಮತ್ತು ಕುದುರೆ ಬಂಡಿ ಮೇಲೆ ಸವಾರಿ ಮಾಡುವ ಮೂಲಕ ಆಪ್‌ ಕಾರ್ಯಕರ್ತರು ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಜಮಾಯಿಸಿದ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕ್ರಮವಾಗಿ ₹ 1.59 ಹಾಗೂ 1.60 ಕ್ಕೆ ಏರಿಸಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದರು.

ಖಾಲಿಯಾಗಿರುವ ಬೊಕ್ಕಸವನ್ನು ಭರ್ತಿ ಮಾಡಲು ಜನ ಸಾಮಾನ್ಯರ ಮೇಲೆ ಹೊರೆ ಹಾಕುತ್ತಿರುವುದು ಯಾವ ನ್ಯಾಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.


ಈ ಹಿಂದಿನ ಸಮ್ಮಿಶ್ರ ಸರ್ಕಾರ ತೈಲ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕೇವಲ 10 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಆಕಾಶ ಭೂಮಿ ಒಂದಾಗುವಂತೆ ಕೂಗಾಡಿದ್ದ ಇದೇ ಬಿಜೆಪಿ ಮಂದಿ ಇಂದು ಬಾಯಿಗೆ ಕಡುಬು ತುರುಕಿ ಕೊಂಡಿರುವುದನ್ನು ನೋಡಿದರೆ, ‘ತಾನು ಕಳ್ಳ ಪರರನ್ನು ನಂಬ’ ಎನ್ನುವ ಸ್ಥಿತಿಯನ್ನು ಬಿಜೆಪಿಯವರು ತಲುಪಿದ್ದಾರೆ ಎನ್ನಬಹುದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷರಾದ ಮೋಹನ್ ದಾಸರಿ ಕಿಡಿಕಾರಿದರು.

15 ನೇ ಹಣಕಾಸು ಆಯೋಗದ ಅನುದಾನ ಹಾಗೂ ಕೇಂದ್ರದ ತೆರಿಗೆಯಲ್ಲಿ ರಾಜ್ಯಕ್ಕೆ ಬರುವ ಪಾಲು ಕಡಿತ ಆಗಿದೆ. ಜಿಎಸ್‌ಟಿ ಪರಿಹಾರವೂ ಸಹ ಕಡಿಮೆ ಆಗಿದ್ದು ಇದರಿಂದ ರಾಜ್ಯಕ್ಕೆ ಸುಮಾರು ₹ 15 ಸಾವಿರ ಕೋಟಿ ನಷ್ಟವಾಗಿದೆ. ಇದರ ಪರಿಣಾಮ, ಸಾರ್ವಜನಿಕರು ದಿನನಿತ್ಯ ಬಳಕೆ ಮಾಡುವ ಅಗತ್ಯ ವಸ್ತುಗಳ ಮೇಲೆ ಸಾಗಾಣೆ ವೆಚ್ಚ ಹೆಚ್ಚಾಗಿ, ಇವುಗಳ ಬೆಲೆ ಗಗನಕ್ಕೆ ಏರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿಯೂ ಬಿಜೆಪಿ, ಕೇಂದ್ರದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯವನ್ನು ‘ಸ್ವರ್ಗ’ ಮಾಡಲಾಗುವುದು, ‘ಸಿಂಗಾಪುರ’ ಮಾಡಲಾಗುವುದು ಎನ್ನುತ್ತಿದ್ದ ಜನ ಪ್ರತಿನಿಧಿಗಳ ಗಾಢ ನಿದ್ದೆಯಿಂದ ಇನ್ನೂ ಎಚ್ಚರಗೊಂಡಂತೆ ಕಾಣುತ್ತಿಲ್ಲ ಎಂದು ಟೀಕಿಸಿದರು.

ನೀ ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎನ್ನುವ ಒಪ್ಪಂದಕ್ಕೆ ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಬಂದಂತೆ ಕಾಣುತ್ತಿದೆ. ಜನಸಾಮಾನ್ಯರು ಸಂಕಷ್ಟದಲ್ಲಿದ್ದರೂ ಇದುವರೆಗೂ ಸಹ ಈ ಎರಡೂ ಪಕ್ಷಗಳು ದಿವ್ಯ ಮೌನವಹಿಸಿರುವುದು ನೋಡಿದರೆ ಯಾರಿಗೂ ಜನರ ಹಿತಾಸಕ್ತಿ ಇಲ್ಲವೇ ಇಲ್ಲ ಎನ್ನಬಹುದು ಎಂದರು.

ಪ್ರಪಂಚದ 4ನೇ ಅತೀದೊಡ್ಡ ಗುಜುರಾತಿನ ತೈಲ ಘಟಕವನ್ನು ಸಂಪೂರ್ಣವಾಗಿ ರಿಲಯನ್ಸ್ ಕಂಪೆನಿಗೆ ಸಬ್ಸಿಡಿ ಆಧಾರದಲ್ಲಿ ನಡೆಸಲು ಅನುಮತಿ ನೀಡಿರುವ ಮೋದಿ ಸರ್ಕಾರ, ದೇಶದ ಬಡ ಜನರ ಬೆನ್ನಿನ ಮೇಲೆ ಬಾರ ಹಾಕಿ, ಹಾಕಿ ಗೂನಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ತೆರಿಗೆ ಹೆಚ್ಚಳದ ಮೂಲಕ ತೈಲ ಕಂಪನಿಗಳ ಒಡೆಯರ ಜೇಬು ತುಂಬಿಸುತ್ತಿರುವ ಈ ಕ್ರಮವನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಬಡ ಮತ್ತು ಮಧ್ಯಮ ವರ್ಗದ ಜನರ ಬಗ್ಗೆ ನೈಜ ಕಾಳಜಿ ಇದ್ದರೆ ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ಈ ಬಜೆಟ್‌ಗೆ ಅನುಮೋದನೆ ನೀಡಬಾರದು ಎಂದು ಅವರು ಆಗ್ರಹಿಸಿದರು.

ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ಪಕ್ಷದ ಸ್ಥಳಿಯ ಮುಖಂಡರಾದ ಸೀತಾರಂ ಗುಂಡಪ್ಪ, ಆಯೂಬ್‌ ಖಾನ್, ಜಗದೀಶ್ ಚಂದ್ರ, ಲಕ್ಷ್ಮಿಕಾಂತ್ ರಾವ್, ಶರತ್ ಖಾದ್ರಿ, ಚನ್ನಪ್ಪ ಗೌಡ, ರವಿಚಂದ್ತ, ಫೀರೋಜ್ ಖಾನ್ ಮುಂತಾದವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...