Homeಮುಖಪುಟನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ನೂರಾರು ಮರಗಳನ್ನು ಕಡಿದು ತೋಟ ನಾಶ ಮಾಡಿದ ತಹಶೀಲ್ದಾರ್‌ ಕ್ರಮದ ವಿರುದ್ಧ ಸಿದ್ದಮ್ಮನವರು ಧರಣಿ ಆರಂಭಿಸಿದ್ದಾರೆ. ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ ಎಂದು ಗೋಳಿಡುತ್ತಿದ್ದ ಆಕೆಯ ಪ್ರತಿಭಟನೆಗೆ ಗ್ರಾಮಸ್ಥರು ಸಾಥ್‌ ನೀಡಿದ್ದಾರೆ.

ಮಾರ್ಚ್‌ 06ರಂದು ತಾನೇ ನೀರು ಹೊಯ್ದು ಬೆಳೆಸಿದ್ದ ಸಿದ್ದಮ್ಮ ಅವರಿಗೆ ಸೇರಿದ್ದ ತೆಂಗು ಮತ್ತು ಅಡಿಕೆ ಮರಗಳು ಕಣ್ಣೆದುರೇ ನೆಲಕ್ಕುರುಳಿವೆ. ಜಿಲ್ಲಾಧಿಕಾರಿ ಆದೇಶವನ್ನೇ ಧಿಕ್ಕರಿಸಿದ ತಹಶೀಲ್ದಾರ್ ಮುಂದೆ ನಿಂತು ಸಿದ್ದಮ್ಮನವರಿಗೆ ಸೇರಿದ ಅಡಿಕೆ ಮತ್ತು ತೆಂಗಿನ ಮರಗಳನ್ನು ಕಡಿಸಿಹಾಕಿದ್ದಾರೆ. ತಾನು ಸಲಹಿದ  ಫಲ ನೀಡುತ್ತಿದ್ದ ಮರಗಳು ಕಡಿದ್ದನ್ನು ನೋಡಿ ಸಿದ್ದಮ್ಮ ಮಕ್ಕಳು ಕಳೆದುಕೊಂಡಂತೆ ಅಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲ ತಾಣದಲ್ಲಿ ವೈರಲ್‌ ಆಗಿದ್ದವು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದಲ್ಲಿ ಕೋಡಿಕೆಂಪಮ್ಮ ದೇವಾಲಯದ ಜಾತ್ರೆ ಇತ್ತು. ಆ ಜಾತ್ರೆ ನಡೆಯುವ ಜಾಗದ ಭೂಮಿ ವಿವಾದದಲ್ಲಿತ್ತು  ಆ ಜಮೀನನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಆದರೆ ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿಯ ಲೋಪದಿಂದಾಗಿ ಸಿದ್ದಮ್ಮ ಅವರ ತೋಟವನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಗಿದೆ. ಸಿದ್ದಮ್ಮನವರ ತೋಟದ ಪ್ರಕರಣ ನ್ಯಾಯಾಲಯದಲ್ಲಿದ್ದು ಯಥಾಸ್ಥಿತಿ ಕಾಪಾಡುವಂತೆ ನ್ಯಾಯಾಲಯ ಸೂಚಿಸಿದ್ದರೂ ತಹಶೀಲ್ದಾರ್ ಕೂಡ ಅದನ್ನು ಪರಿಶೀಲಿಸುವ ಗೋಜಿಗೆ ಹೋಗದೆ ಮಹಿಳಾ ರೈತರೊಬ್ಬರ ತೋಟವನ್ನು ಧ್ವಂಸ ಮಾಡಲಾಗಿದೆ.

ಮಾರ್ಚ್‌ 06ರ ಬೆಳಿಗ್ಗೆ ಸಿದ್ದಮ್ಮ ಅವರು ತೋಟಕ್ಕೆ ಹೋದ ಗುಬ್ಬಿ ತಹಶೀಲ್ದಾರ್ 170 ಅಡಿಕೆ ಗಿಡಗಳು ಮತ್ತು 25 ತೆಂಗಿನ ಮರಗಳನ್ನು ಕಡಿಸಿ ಹಾಕಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ. ತಹಶೀಲ್ದಾರ್ ಧೋರಣೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿ ಕ್ರೂರವಾಗಿ ನಡೆದುಕೊಂಡಿದ್ದಾರೆ ಎಂದು ಟೀಕೆ ವ್ಯಕ್ತವಾಗಿದೆ.

ಅಡಿಕೆ ಮತ್ತು ತೆಂಗಿನ ಮರಗಳು ನೆಲಕ್ಕೆ ಬಿದ್ದಿರುವುದನ್ನು ನೋಡಿದ ಸಿದ್ದಮ್ಮ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಗೊಳೋ ಎಂದು ಕಣ್ಣೀರು ಕರೆಯುತ್ತಿದ್ದಾರೆ. ಗುಬ್ಬಿ ತಾಲೂಕು ತಹಶೀಲ್ದಾರ್ ಏಕಾಏಕಿ ತೋಟಕ್ಕೆ ಬಂದು ನಿರ್ದಯವಾಗಿ ಮರಗಳನ್ನು ಕಡಿಸಿರುವುದು ಆಕೆಯನ್ನು ಕೆರಳುವಂತೆ ಮಾಡಿದೆ. ಇನ್ನೊಂದೆಡೆ ತಪ್ಪು ಮಾಡಿ ತಹಶೀಲ್ದಾರ್‌ ಇಕ್ಕಟ್ಟಿಗೆ ಸಿಲುಕಿದ್ದಾರೆ.

ತಾಲೂಕು ದಂಡಾಧಿಕಾರಿ ಮತ್ತು ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಿಗ ರೈತರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ. ರೈತರ ಬೆಳೆದ ಬೆಳೆಯನ್ನು ಅಧಿಕಾರಿಯೇ ಮುಂದೆ ನಿಂತು ಕತ್ತರಿಸಿಹಾಕಲು ಅನುವು ಮಾಡಿಕೊಟ್ಟಿದ್ದಾರೆ. ಆ ತಹಶೀಲ್ದಾರ್ ಗೆ ಮರಗಳನ್ನು ಕಡಿಸುವ ಮನಸ್ಸು ಹೇಗೆ ಬಂತು ಎಂದು ರೈತರು  ಕಿಡಿಕಾರಿದ್ದಾರೆ.

ಈ ಕುರಿತು ಶಾಸಕ ಎಸ್‌.ಆರ್‌ ಶ್ರೀನಿವಾಸ್‌ ಪ್ರತಿಕ್ರಿಯೆ ನೀಡಿ ಹತ್ತು ಮರಗಳನ್ನು ಕಡಿದುಬಿಟ್ಟಿದ್ದಾರೆ ಅಷ್ಟೇ. ಏನೂ ತೊಂದರೆಯಾಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ತಹಶೀಲ್ದಾರ್‌ ಎಂ ಮಮತಾ ನಾವು ಜಿಲ್ಲಾಧಿಕಾರಿ ಆದೇಶ ಪಾಲಿಸದ್ದೇವೆ ಅಷ್ಟೇ. ಮರಗಳ ತೆರವಿಗೂ ಮುನ್ನ ನಾಲ್ಕು ಅರ್ಚಕರ ಸಹಿ ಪಡೆದಿದ್ದೇವೆ ಎಂದು ಸಬೂಬು ಹೇಳುತ್ತಿದ್ದಾರೆ.

ಇದೆಲ್ಲದರಿಂದ ಕೆರಳಿರುವ ಸಿದ್ದಮ್ಮ ಮನೆ ಮುಂದೆ ಅಂಬೇಡ್ಕರ್‌ ಫೋಟೊ ಇಟ್ಟುಕೊಂಡು ಧರಣಿ ಆರಂಭಿಸಿದ್ದಾರೆ. ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡದಿದ್ದಲ್ಲಿ ತುಮಕೂರಿಗೆ ಬಂದು ಹೋರಾಟ ನಡೆಸುತ್ತೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...