Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...