Homeಕರ್ನಾಟಕಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

ಮಹಿಳೆಯ ತೆಂಗು, ಅಡಿಕೆ ತೋಟ ನಾಶ : ಬಲಾಢ್ಯ ವ್ಯಕ್ತಿಗಳ ಕೈವಾಡದಿಂದ ಕಮರಿದ ಬದುಕು

- Advertisement -
- Advertisement -

ಗ್ರಾಮ ಲೆಕ್ಕಿಗ ಮತ್ತು ಕಂದಾಯಾಧಿಕಾರಿ ದ್ವೇಷ ಮತ್ತು ಬಲಾಢ್ಯರ ಕೈವಾಡಕ್ಕೆ ತಿಪ್ಪೂರಿನ ಸಿದ್ದಮ್ಮನ ತೆಂಗು, ಅಡಿಕೆ ಮರಗಳು ಬಲಿಯಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಶಾಸಕರು ಮತ್ತು ತಹಶೀಲ್ದಾರ್ ಮೇಲೆ ಒತ್ತಡ ತಂದು ನೂರಕ್ಕೂ ಹೆಚ್ಚು ಫಲಭರಿತ ಅಡಿಕೆ ಮತ್ತು 25 ತೆಂಗಿನ ಮರಗಳನ್ನು ಕಡಿದು ಹಾಕಲಾಗಿದೆ.  ತಿಪ್ಪೂರುಪಾಳ್ಯದ ಬಲಾಢ್ಯ ವ್ಯಕ್ತಿಯೇ ಇಡೀ ಘಟನೆಗೆ ಕಾರಣ ಎಂದು ಎಲ್ಲರೂ ಬೊಟ್ಟುಮಾಡುತ್ತಿದ್ದಾರೆ. ಆ ವ್ಯಕ್ತಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಆ ವ್ಯಕ್ತಿಯ ಕೈವಾಡವಿಲ್ಲದೆ ಯಾವುದೂ ನಡೆಯುವುದಿಲ್ಲ. ಹೀಗಾಗಿ ಆ ವ್ಯಕ್ತಿಯ ಹೆಸರನ್ನು ಹೇಳಲು ಎಲ್ಲರಿಂದಲೂ ಹಿಂಜರಿಕೆ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ತಿಪ್ಪೂರು ಗ್ರಾಮದ ಸರ್ವೇ ನಂಬರ್ 113ರಲ್ಲಿ 5 ಎಕರೆ 11 ಗುಂಟೆ ಜಮೀನು ಇದೆ. ಈ ಕೋಡಿಕೆಂಪಮ್ಮ ದೇವಿಗೆ ನಾಯಕ ಸಮುದಾಯದವರು ಪೂಜಾರರು. ಹಾಗಾಗಿ ಈ ಇನಾಂತಿ ಭೂಮಿಯನ್ನು ಪೂಜಾರಿ ಕುಟುಂಬಗಳೇ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಹೀಗಿರುವಾಗ ಪೂಜಾರಿ ಕುಟುಂಬದ ಅಣ್ಣತಮ್ಮಂದಿರ ನಡುವೆ ದಾಯಾದಿ ಕಲಹ ನಡೆಯುತ್ತದೆ. ಈ ಪ್ರಕರಣ ಪೊಲೀಸ್ ಮತ್ತು ಕೋರ್ಟ್ ಮೆಟ್ಟಿಲೇರುತ್ತದೆ. ಇದೇ ಕಾರಣಕ್ಕೆ ಕಳೆದ ಮೂರು ದಶಕಗಳಿಂದಲೂ ಕೋಡಿಕೆಂಪಮ್ಮ ದೇವಿಯ ಜಾತ್ರೆಯ ನಡೆದಿರಲಿಲ್ಲ.

ಆ ನಂತರ 2005ರ ಸುಮಾರಿನಲ್ಲಿ ಗ್ರಾಮಸ್ಥರು ಮಧ್ಯಸ್ಥಿಕೆ ವಹಿಸಿ ಕೋಡಿಕೆಂಪಮ್ಮ ದೇವಿ ಜಾತ್ರೆ ನಡೆಸಲು ಪೂಜಾರಿ ಕುಟುಂಬಗಳ ನಡುವೆ ಸಂಧಾನ ಮಾಡಿದರು. ಸಂಧಾನ ಯಶಸ್ವಿಯಾಗಿ ಆಗಿನಿಂದ ವರ್ಷವರ್ಷ ಜಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಕೆಂಪಮ್ಮದೇವಿಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡುತ್ತ ಬರುತ್ತಿದ್ದು ಕಾಲ ಕಳೆದಂತೆ 5 ಎಕರೆ 11 ಗುಂಟೆಯಲ್ಲೂ 16 ಕುಟುಂಬಗಳು ಅಡಿಕೆ ಮತ್ತು ತೆಂಗಿನ ತೋಟ ಬೆಳೆಸಿದರು. ಫಲವತ್ತಾದ ಭೂಮಿಯಾದ್ದರಿಂದ ತೆಂಗು ಮತ್ತು ಅಡಿಕೆ ಫಸಲು ಹುಲುಸಾಗಿ ಬೆಳೆಯಿತು.

ಈ ಮಧ್ಯೆ ಜಮೀನು ಯಾರಿಗೆ ಸೇರಬೇಕು ಎನ್ನುವ ವಿವಾದದ ಕುರಿತು ಗುಬ್ಬಿಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಯಿತು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿತು. ತಹಶೀಲ್ದಾರ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳಿಗೆ ಕೋಡಿಕೆಂಪಮ್ಮ ದೇವಾಲಯದ ಬಳಿ ಇರುವ ತೆಂಗು ಮತ್ತು ಅಡಿಕೆ ಗಿಡಗಳನ್ನು ಕಡಿಸುವಂತೆ ಸೂಚನೆ ನೀಡಿರುವುದು ಈ ಎಲ್ಲಾ ಅವಾಂತರಗಳಿಗೆ ಕಾರಣ ಎಂದು ತಿಳಿದುಬಂದಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ತಿಪ್ಪೂರುಪಾಳ್ಯದ  ಆ ಬಲಾಢ್ಯ ವ್ಯಕ್ತಿ ತೆರೆಮರೆಯಲ್ಲಿ ಇದೆಲ್ಲವನ್ನೂ ನಿಯಂತ್ರಿಸುತ್ತಿದ್ದು ಜೆಡಿಎಸ್ ಮತ್ತು ಬಿಜೆಪಿಯ ಸಹಾಯದಿಂದ ತಹಶೀಲ್ದಾರ್ ಮೇಲೆ ಒತ್ತಡ ಹಾಕಿಸಿದ್ದಾರೆ. ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರು ಈ ಪ್ರಕರಣದ ಹಿಂದೆ ಬಲವಾಗಿ ನಿಂತುಕೊಂಡಿದ್ದಾರೆ ಎಂಬ ಆರೋಪವಿದೆ. ಬಲಾಢ್ಯ ಜಾತಿಗಳು ನಡೆಸಿರುವ ಕೂಟಕ್ಕೆ ಸಿದ್ದಮ್ಮ ಅವರ ಬದುಕು ಕಳಾಹೀನವಾಗಿದೆ. ಹೋದ ಮರಗಳನ್ನು ತಂದು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ನಾಯಕ ಸಮುದಾಯಕ್ಕೆ ಸೇರಿರುವ ಸಿದ್ದಮ್ಮ ಬಲಾಢ್ಯರು ಹೆಣೆದ ಜಾಲಕ್ಕೆ ಬಿದ್ದಿದ್ಧಾರೆ.

ಕೋಡಿ ಕೆಂಪಮ್ಮ ದೇವಿಗೆ ಬಹುತೇಕ ಲಿಂಗಾಯತರು ನಡೆದುಕೊಳ್ಳುತ್ತಾರೆ. ಒಕ್ಕಲಿಗರು, ತಿಗಳರು ಮತ್ತು ದಲಿತ ಸಮುದಾಯವೂ ನಡೆದುಕೊಳ್ಳುತ್ತದೆ. ಈ ಚಿತಾವಣೆಯನ್ನು ನೋಡಿದರೆ ಬಲಾಢ್ಯ ಜಾತಿಗಳು ಇಡೀ ದೇವಾಲಯದ ಉಸ್ತುವಾರಿಯನ್ನು ತಮ್ಮ ತೆಕ್ಕೆಗೆ ತೆದುಕೊಂಡು ಫಲವತ್ತಾದ ಭೂಮಿಯನ್ನು ತಮ್ಮ ವಶಕ್ಕೆ ಪಡೆಯುವ ಹುನ್ನಾರ ನಡೆಸಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಿಪ್ಪೂರುಪಾಳ್ಯದ ಆ ಬಲಾಢ್ಯ ವ್ಯಕ್ತಿ ದೇವಾಲಯದ ಆಡಳಿತವನ್ನು ಹಿಡಿಯವ ಭಾಗದ ಸಂಚು ಇದಾಗಿದೆ.

ನಾಯಕ ಸಮುದಾಯಕ್ಕ ಸೇರಿದ 16 ಕುಟುಂಬಗಳು ಈ 5 ಎಕರೆ 11 ಗುಂಟೆ ಜಮೀನನ್ನು ಮೊದಲಿಂದಲೂ ಮಾಡಿಕೊಂಡು ಬರುತ್ತಿವೆ. ಆರಂಭದಲ್ಲಿ ಸದರಿ ಭೂಮಿಯಲ್ಲಿ ಮರಾವಳಿ ಬೆಳೆಸಬಾರದು ಎಂದು ನಿರ್ಧಾರ ಆಗಿದ್ದರೂ, ಕಾಲಕಳೆದಂತೆ ತೆಂಗು ಮತ್ತು ಅಡಿಕೆ ಸಸಿಗಳನ್ನು ಇಟ್ಟು ಬೆಳೆಸಿದರು. ಹಲವು ಬಾರಿ ಫಸಲನ್ನು ಕೊಯ್ದುಕೊಂಡರು. ದೇವಾಲಯದ  ಸಮೀಪವೇ ಇರುವ ಜಮೀನಿನಲ್ಲಿ ತೋಟವಿದ್ದರೂ ಜನರೂ ಕೂಡ ಕಳೆದ 15 ವರ್ಷಗಳಿಂದ ಜಾತ್ರೆಯನ್ನು ಮಾಡಿಕೊಂಡು ಬಂದಿದ್ದಾರೆ.

ಆದರೆ ಈಗ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮತ್ತು ಬಿಜೆಪಿ ಮುಖಂಡರ ಒತ್ತಡಕ್ಕೆ ಒಳಗಾಗಿರುವ ತಹಶೀಲ್ದಾರ್ ಮಮತ ಏಕಾಏಕಿ ಆದೇಶ ಹೊರಡಿಸಿ ತೆಂಗು, ಅಡಿಕೆ ಮರಗಳಿಗೆ ಕೊಡಲಿಪಟ್ಟು ಬಿದ್ದಿದೆ. ಹೆಚ್ಚು ಜನರು ಜಾತ್ರೆಗೆ ಸೇರುವ (ಲಿಂಗಾಯತ, ಒಕ್ಕಲಿಗರು) ಹಿನ್ನೆಲೆಯಲ್ಲಿ ಅಲ್ಲಿಗೆ ಹೆಚ್ಚು ವಾಹನಗಳು ಬರುತ್ತವೆ. ಹಾಗಾಗಿ ವಿಶಾಲ ಜಾಗ ಬೇಕು ಎಂಬ ನೆಪ ಒಡ್ಡಿ ತೋಟ ಕಡಿದಿದ್ದಾರೆ. ತೋಟವನ್ನು ಕಡಿಯುವುದಾದರೆ 5 ಎಕರೆ 11 ಗುಂಟೆಯಲ್ಲಿರುವ ಎಲ್ಲವನ್ನೂ ಕತ್ತರಿಸಿ ಹಾಕಲಿ. ಮಳೆಗಾಲದಲ್ಲಿ ಬೇಕಾದರೆ ಆ ಕುಟುಂಬಗಳು ಆ ಭೂಮಿಯಲ್ಲಿ ಮಾಡಿಕೊಂಡು ತಿನ್ನಲಿ ಎನ್ನುತ್ತಾರೆ ಕೆಲವರು.

ಇಡೀ ಪ್ರಕರಣವನ್ನು ಗಮನಿಸಿದರೆ ಬಲಾಢ್ಯ ಜಾತಿಗಳು ಕೋಡಿಕೆಂಪಮ್ಮ ದೇವಾಲಯ ಮತ್ತು ಇನಾಂತಿ ಜಮೀನಿನ ಮೇಲೆ ಕಣ್ಣಿಟ್ಟಿವೆ. ದೇವಾಲಯವನ್ನು ಅಭಿವೃದ್ಧಿಪಡಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುವ ಹುನ್ನಾರಗಳು ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ನಾಯಕ ಸಮುದಾಯ ತೋಟಗಾರಿಕೆ ಬೆಳೆಯಲ್ಲಿ ಲಾಭ ಮಾಡಿಕೊಂಡು ಆರ್ಥಿಕವಾಗಿ ಸಬಲರಾದರೆ ತಮ್ಮ ಹಿಡಿತ ತಪ್ಪಿಹೋಗುತ್ತದೆ ಎಂಬ ಕಾರಣಕ್ಕೆ ಪಿತೂರಿ ನಡೆಸಲಾಗುತ್ತಿದೆ ಎಂದು ಹೆಸರು ಹೇಳಲು ಇಚ್ಚಿಸದೆ ಕೆಲವರು ತಿಳಿಸಿದ್ದಾರೆ.

ಈಗ ಸಿದ್ದಮ್ಮ ತನಗೆ ನ್ಯಾಯಬೇಕು ಎಂದು ಧರಣಿ ಕೂತಿದ್ದಾಳೆ: ಹತ್ತಾರು ಜನ ಆಕೆಯ ಬೆಂಬಲಕ್ಕೆ ನಿಂತಿದ್ದಾರೆ. ಹೋರಾಟವನ್ನು ತುಮಕೂರಿನವರೆಗೂ ಒಯ್ಯುವುದಾಗಿ ಆಕೆ ಶಪಥ ಮಾಡಿದ್ದಾಳೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...