Homeಮುಖಪುಟಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಪ್ರಣಯ್‌ ಕೊಲೆಗಾರ, ಅಮೃತಾಳ ತಂದೆ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಅಂತರ್ಜಾತಿ ವಿವಾಹ: ಪ್ರಣಯ್‌ ಹತ್ಯೆ, ಒಂಟಿಯಾದ ಅಮೃತ, ಆರೋಪಿಯಾದ ಆಕೆಯ ತಂದೆ ಆತ್ಮಹತ್ಯೆ, ದೇಶದ ಜಡ್ಡಗಟ್ಟಿದ ಜಾಸ್ತಿ ವ್ಯವಸ್ಥೆ... ಒಂದಕ್ಕೊಂದು ಸೇರಿಕೊಂಡ ಗೋಜಲುಗಳು

- Advertisement -
- Advertisement -

ಅಮೃತಾ- ಪ್ರಣಯ್‌ ಅಂತರ್ಜಾತಿ ವಿವಾಹದ ಕಾರಣಕ್ಕೆ ತೆಲಂಗಾಣವಲ್ಲದೇ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪ್ರಣಯ್ ಹತ್ಯೆಯ ಮುಖ್ಯ ಆರೋಪಿಯಾಗಿದ್ದ ಅಮೃತಾಳ ತಂದೆ ಮಾರುತಿರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಷ್ಟಕ್ಕೆ ಕೆಲವರು ನ್ಯಾಯ ಸಿಕ್ಕಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಈ ದೇಶದ ಜಾತಿ ವ್ಯವಸ್ಥೆ ಅಷ್ಟು ಸುಲಭವಲ್ಲ ಎಂಬುದು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದೆ.

ಕಳೆದ ವರ್ಷ ತೆಲಂಗಾಣದ ನಲ್ಗೋಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ತಳಸಮುದಾಯ ಹುಡುಗ ಪ್ರಣಯ್ ಮತ್ತು ಮೇಲ್ಜಾತಿಯ ಹುಡುಗಿ ಅಮೃತ ಪ್ರೀತಿಸಿದ್ದರು. ಪ್ರಣಯಪಕ್ಷಿಗಳಿಂತಿದ್ದ ಈ ಮುದ್ದಾದ ಜೋಡಿ ಮದುವೆಯಾದ ಕಾರಣಕ್ಕೆ ಅಮೃತರವರ ತಂದೆ ಮಾರುತಿ ರಾವ್ ಸಿಟ್ಟಿನಿಂದ ಅವರನ್ನು ದೂರ ಇಟ್ಟು ಬೆದರಿಕೆ ಹಾಕಿದ್ದರು.


ಇದನ್ನೂ ಓದಿ : ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?


ನಂತರ ಗರ್ಭಿಣಿ ಸಂದರ್ಭದಲ್ಲಿ ಅಮೃತಳನ್ನು ಆಸ್ಫತ್ರೆಗೆ ಕರೆದುಕೊಂಡು ಬಂದ ಪ್ರಣಯ್‌ನನ್ನು ಅಮೃತಾಳ ತಂದೆ ಮಾರುತಿರಾವ್ ಮತ್ತು ಆತನ ಗೂಂಡಾಗಳು 2018 ಸೆಪ್ಟೆಂಬರ್ 14ರಂದು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಡೀ ದೇಶ ಬೆಚ್ಚಿ ಬೀಳುವಂತಹ ಜಾತಿ ದುರಹಾಂಕಾರದ ಹತ್ಯೆ ಇದಾಗಿತ್ತು. ಇದಕ್ಕೆ ಜಾತಿಧರ್ಮ ನೋಡದೇ ಹಲವಾರು ಜನ ಈ ದುಷ್ಕೃತ್ಯವನ್ನು ಖಂಡಿಸಿದ್ದರು.

ಆ ಸಂದರ್ಭದಲ್ಲಿ ನೊಂದು ಬೆಂದು ಒಂಟಿಯಾದ ಅಮೃತಾ ಏನು ಮಾಡಬೇಕು? ತುಂಬು ಗರ್ಭಿಣಿಯಾದ ಅವಳು ತನ್ನ ಗಂಡನನ್ನು ತನ್ನ ಕಣ್ಣಾರೆ ಕೊಂದ ಅಪ್ಪನ ಮನೆಗೆ ಹೋಗಬೇಕೆ? ಇಲ್ಲ ತನ್ನ ಗಂಡನಿಲ್ಲದಿದ್ದರೂ ಗಂಡನ ಮನೆಯಲ್ಲಿ ಇರಬೇಕೆ ಎಂಬುದರ ಕುರಿತು ಗೊಂದಲಗೊಂಡಳು. ಆದರೆ ಕೊನೆಗೆ ತನ್ನ ಅಪ್ಪನ ವಿರುದ್ಧ ದೂರು ನೀಡಿ ತನ್ನ ಗಂಡನ ಮನೆಯಲ್ಲಿಯೇ ಉಳಿದುಕೊಂಡಳು. ಪ್ರಣಯ್‌ನ ತಂದೆ ತಾಯಿಯರು ಸಹ ಮಗ ಬಲಿಯಾದರೂ ಸೊಸೆ ಅಮೃತಾಳನ್ನು ಮನೆ ಮಗಳಂತೆ ನೋಡಿಕೊಳ್ಳಲು ಆರಂಭಿಸಿದರು. ಅಮೃತಾಗೆ ಮುದ್ದಾದ ಗಂಡು ಮಗು ಹುಟ್ಟಿದೆ. ಆ ಮಗುವಿಗೆ ನಿಹಾನ್‌ ಎಂದು ಹೆಸರಿಡಲಾಗಿದೆ.

ಈಗ ಒಂದೂವರೆ ವರ್ಷದ ಬಳಿಕ ಆ ಪ್ರಕರಣದ ಪ್ರಮುಖ ಆರೋಪಿ ಮಾರುತಿರಾವ್‌ ಆತ್ಮಹತ್ಯೆ ಮಾಡಿಕೊಳ್ಳುವಾಗ ಬರೆದ ಪತ್ರದಲ್ಲಿ “ಗಿರಿಜಾ (ಹೆಂಡತಿ) ಕ್ಷಮಿಸು, ಅಮೃತ(ಮಗಳು) ಅಮ್ಮನ ಹತ್ತಿರ ಬಾ’ ಎಂದು ಮನವಿ ಮಾಡಿದ್ದಾನೆ.

ಈಗ ಬಹಳಷ್ಟು ಜಾತಿವಾದಿಗಳು ಅಮೃತಾ ಮೇಲೆ ಮುಗಿಬಿದ್ದಿದ್ದಾರೆ. ನಿನ್ನಿಂದಾಗಿ ನಮ್ಮ ಸಮದಾಯದ ಮಾನ ಮರ್ಯಾದೆ ಹಾಳಾಗಿದ್ದಲ್ಲದೇ ನಿನ್ನ ಅಪ್ಪನ ಸಾವಿಗೂ ನೀನೇ ಕಾರಣಳಾಗಿದ್ದೀಯ. ನಿನ್ನ ತಾಯಿ ಒಂಟಿಯಾಗಲು ನೀನೇ ಕಾರಣಳಾಗಿದ್ದೀಯ.. ಈಗಲಾದರೂ ನಿನ್ನ ತವರು ಮನೆಗೆ ಬಂದು ನಿನ್ನ ಒಬ್ಬಂಟಿ ತಾಯಿಯನ್ನು ನೋಡಿಕೊ ಎಂದು ಉಪದೇಶಗಳನ್ನು ನೀಡುತ್ತಿದ್ದಾರೆ.

ನಿನ್ನ ತಂದೆ ಪಶ್ಚಾತಾಪಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನಿನಗೆ ಪಶ್ಚಾತಾಪವಿಲ್ಲ ನೋಡು ಎಂದು ಹಂಗಿಸುತ್ತಿದ್ದಾರೆ. ಒಟ್ಟಿನಲ್ಲಿ ತನ್ನ ಮಗಳನ್ನೇ ಕೊಂದ ಕೊಲೆಗಡುಕ, ಜಾತಿ ಕ್ರಿಮಿ ಮಾರುತಿರಾವ್‌ ಮೇಲೆ ಅನುಕಂಪ ತೋರಿಸುತ್ತಾ, ಸಂತ್ರಸ್ತೆಯಾದ ಅಮೃತಾಳನ್ನೇ ವಿಲನ್‌ ಮಾಡಲು ನೋಡುತ್ತಿದ್ದಾರೆ.

ವಾಸ್ತವವೇನು

ಅಮೃತಾ ದೂರು ನೀಡಿದ ನಂತರ ಮಾರುತಿರಾವ್ ಮತ್ತು ಆತನ ಸಹಚರರ ಮೇಲೆ ಬಲವಾದ ಕೇಸುಗಳು ಬಿದ್ದಿದ್ದು ಕೋರ್ಟ್‍ಗೆ ಅಲೆಯುತ್ತಿದ್ದ. ಇತ್ತಿಚೆಗೆ ಅಮೃತಾಳನ್ನು ತನ್ನ ಮನೆಗೆ ಬಂದರೆ ಆಸ್ತಿಯೆಲ್ಲ ಬರೆದುಕೊಡುವುದಾಗಿ ಹೇಳಿ ಬೆದರಿಕೆ ಹಾಕಿಸಿದರು ಅಮೃತಾ ಜಗ್ಗದೇ ಮತ್ತೆ ಈ ಬೆದರಿಕೆಯ ವಿಚಾರದ ಕುರಿತು ಪೋಲೀಸರಿಗೆ ದೂರು ನೀಡಿದ್ದಳು. ಮಾರುತಿರಾವ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು ಸಾಕಷ್ಟು ಆಸ್ತಿ ಮಾಡಿದ್ದಾನೆ. ಈ ಕುರಿತು ಆತ ಮತ್ತು ಆತನ ಸಹೋದರ ಶ್ರವಣ್ ನಡುವೆ ಜಗಳ ಸಹ ನಡೆಯುತ್ತಿತ್ತು.

ಮಾರುತಿರಾವ್‌ ಸಹೋದರ ಶ್ರವಣ್‌ ಕೂಡ ಕೊಲೆ ಆರೋಪಿಯಾಗಿದ್ದ. ಹಾಗಾಗಿ ಆತ ಪದೇ ಪದೇ ಕೊಲೆ ಕೇಸಿನಲ್ಲಿ ನಾನು ಅಲೆಯುತ್ತಿದ್ದೇನೆ. ನಿನಗಿದ್ದ ಒಬ್ಬಳೇ ಮಗಳು ಸಹ ನಿನ್ನ ಜೊತೆಗಿಲ್ಲ ಮಾತ್ರವಲ್ಲದೇ ನಿನ್ನ ವಿರುದ್ಧವೇ ದೂರು ನೀಡುತ್ತಿದ್ದಾಳೆ. ಹಾಗಾಗಿ ಆಕೆಯನ್ನು ಮುಗಿಸಿಬಿಡು, ನಿನ್ನ ಆಸ್ತಿಯನ್ನೆಲ್ಲ ನನ್ನ ಹೆಸರಿಗೆ ಬರೆದುಕೊಂಡು ಎಂದು ದುಂಬಾಲು ಬಿದ್ದಿದ್ದ ಎಂಬ ಸತ್ಯಗಳು ಒಂದೊಂದೇ ಹೊರಬರುತ್ತಿವೆ.

ಇದೆಲ್ಲವೂ ಅಮೃತಾಳ ಗಮನಕ್ಕೆ ಬಂದಿತ್ತು. ಹಾಗಾಗಿಯೇ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅಕೆ “ನನ್ನ ತಂದೆ ಮಾರುತಿರಾವ್ ಹೆದರಿಕೆಯ ವ್ಯಕ್ತಿಯಲ್ಲ. ಪಶ್ಚಾತ್ತಾಪದಿಂದ ಆತ್ಮಹತ್ಯೆ ಮಾಡಿಕೊಳ್ಳುವವರಾಗಿದ್ದರೆ ಈ ಹಿಂದೆಯೇ ಮಾಡಿಕೊಳ್ಳುತ್ತಿದ್ದರು. ನಮ್ಮ ಚಿಕ್ಕಪ್ಪ ಶ್ರವಣ್ ಜೊತೆ ನಮ್ಮ ತಂದೆಗೆ ಹಲವಾರು ಭಾರಿ ಆಸ್ತಿ ಜಗಳ ಆಗಿದೆ ಎಂದು ಕೇಳಿದ್ದೆ, ಈ ಆತ್ಮಹತ್ಯೆಗೆ ಇದೇ ಕಾರಣವು ಇರಬಹುದು” ಎಂಬ ಸಂದೇಹ ವ್ಯಕ್ತಪಡಿಸಿದ್ದಾಳೆ.

ಒಬ್ಬ ವ್ಯಕ್ತಿಗೆ ತನ್ನನ್ನು ತಾನು ಕೊಂದುಕೊಳ್ಳುವ ಮತ್ತು ಇನ್ನೊಬ್ಬರನ್ನು ಕೊಲ್ಲವ ಯಾವುದೇ ಹಕ್ಕು ಇಲ್ಲ. ನ್ಯಾಯಾಲಯದ ಮೂಲಕ ನಮ್ಮ ತಂದೆಗೆ ಯಾವುದೇ ರೀತಿಯ ಶಿಕ್ಷೆ ಆಗಿದ್ದರೂ ಸಹ ನಾನು ಸ್ವಾಗತಿಸುತ್ತಿದ್ದೆ. ಆದರೆ ಈ ಆತ್ಮಹತ್ಯೆ ಮಾಡಿಕೊಂಡಿರುವ ವೀಚಾರ ನೋವನ್ನು ತಂದಿದೆ. ಗಂಡ ತೀರಿಕೊಂಡರೆ ಆ ಹೆಂಡತಿಯ ಸ್ಥಿತಿ ಹೇಗಿರುತ್ತದೆ ಎಂದು ನನಗೆ ಒಂದೂವರೆ ವರ್ಷದಿಂದ ಅನುಭವವಾಗಿದೆ. ಹಾಗಾಗಿಯೇ ನಮ್ಮ ತಾಯಿಯನ್ನು ಮಾತಾಡಿಸಲು ಹೋಗಿದ್ದೆ. ಆದರೆ ಅಲ್ಲಿನ ನಮ್ಮ ಕುಟುಂಬಸ್ಥರು ನನಗೆ ಅನುಮತಿ ನೀಡಲಿಲ್ಲ. ಮಗನನ್ನು ಕಳೆದುಕೊಂಡ ನನ್ನ ಅತ್ತೆ-ಮಾವನನ್ನು ನಾನು ಬಿಟ್ಟುಹೋಗಲು ಸಾಧ್ಯವಿಲ್ಲ. ಆದರೆ ನನ್ನ ತಾಯಿಯು ನನ್ನ ಜೊತೆ ಬಂದರೆ ನಾನೇ ನೋಡಿಕೊಳ್ಳುತ್ತೇನೆ. ನನಗೆ ಮಾರುತಿರಾವ್‍ನ ಯಾವ ಆಸ್ತಿಯ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾಳೆ.


ಇದನ್ನೂ ಓದಿ: ಅಂತರ್ಜಾತಿ ವಿವಾಹದಿಂದ ಹತ್ಯೆಯಾದ ಪ್ರಣಯ್ ಹೆಂಡತಿ ಅಮೃತಗೆ ತಂದೆಯಿಂದ ಮತ್ತೆ ಬೆದರಿಕೆ: ದೂರು ದಾಖಲು


ಆ ಮೂಲಕ ಜಾತಿಗಿಂತ ಮಾನವೀಯತೆ ಮತ್ತು ಮನುಷ್ಯ ಸಂಬಂಧಗಳು ಮುಖ್ಯ ಎಂದು ಸಾರಿದ್ದಾಳೆ. ಆಕೆ ಪ್ರಬುದ್ಧವಾಗಿ ನಡೆದುಕೊಂಡಿದ್ದಾಳೆ. ಆದರೆ ಆಕೆಯ ಕುಟುಂಬ ಮಾತ್ರ ಇನ್ನು ಜಾತಿಗ್ರಸ್ಥ ಮನಸ್ಥಿತಿಯಿಂದ ಹೊರಬಂದಿಲ್ಲ. ಇದು ಈ ದೇಶದ ದುಸ್ಥಿತಿಯಾಗಿದೆ. ಹಾಗಾಗಿಯೇ ಜಸ್ಟೀಸ್ ಫಾರ್‌ ಪ್ರಣಯ್‌ ಎಂಬ ಅಭಿಯಾನದ ಮೂಲಕ ಅಮೃತಾ ತನ್ನ ಹೋರಾಟವನ್ನು ಮುಂದುವರೆಸಿದ್ದಾಳೆ. ಸಮಾಜ ಈ ಸಂದರ್ಭದಲ್ಲಿ ಆಕೆಯ ಪರ ನಿಲ್ಲಬೇಕೆ ಹೊರತು ಜಾತಿವಾದಿ ಆಕೆಯ ತಂದೆಯ ಪರವಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...