Homeಮುಖಪುಟತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ತೆಂಗು-ಅಡಿಕೆ ತೋಟ ಕಳೆದುಕೊಂಡ ಸಿದ್ದಮ್ಮನಿಗೆ ಮೊದಲು ಪರಿಹಾರ ಕೊಡಿ, ನಂತರ ತನಿಖೆ ಮಾಡಿ

ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುವ ಯಡಿಯೂರಪ್ಪ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು.

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ತಿಪ್ಪೂರು ಗ್ರಾಮದಲ್ಲಿ ಸಿದ್ದಮ್ಮ ಎಂಬುವವರಿಗೆ ಸೇರಿದ ನೂರಾರು ತೆಂಗು, ಅಡಿಕೆ ಗಿಡಗಳನ್ನು ಕತ್ತರಿಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮೊದಲು ತೋಟ ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಕೊಡಿ, ಅನಂತರ ತಪ್ಪಿತಸ್ಥರ ವಿರುದ್ಧ ತನಿಖೆ ಮಾಡಿ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಮುಂದಾಗಿ ಎಂಬ ಕೂಗು ಜಿಲ್ಲೆಯಾದ್ಯಂತ ಜೋರಾಗಿ ಕೇಳಿಬಂದಿದೆ.

ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು. ಏಕೆಂದರೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ, ತೆಂಗು ಮತ್ತು ಅಡಿಕೆ ಗಿಡ ಗಳನ್ನು ಕಡಿಸಿ ಹಾಕಿಸಿರುವುದು ಅಕ್ಷಮ್ಯ ಅಪರಾಧ. ರೈತರು ಗಿಡಗಳನ್ನು ಕಡಿಯುವಾಗ ನಿಯಮಗಳು ಅಡ್ಡ ಬರುತ್ತವೆ. ಅಧಿಕಾರಿಗಳು ಆ ಕೆಲಸ ಮಾಡಿದಾಗ ನಿಯಮಗಳು ಅಡ್ಡಬರಲಿಲ್ಲವೇ ಎಂಬ ಪ್ರಶ್ನೆ ಜನರಿಂದ ವ್ಯಕ್ತವಾಗಿದೆ.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಗ್ರಾಮ ಲೆಕ್ಕಿಗ, ಕಂದಾಯಾಧಿಕಾರಿ ಮಾಡಿದ ತಪ್ಪಿಗೆ ಅಮಾಯಕ ಮಹಿಳೆಯ ತೋಟ ನಾಶ ಮಾಡಿದ ತಹಶಿಲ್ದಾರ್‌: ಗುಬ್ಬಿಯಲ್ಲೊಂದು ಮನಕಲಕುವ ಕರಾಳ ಘಟನೆ.. ವಿಡಿಯೋ ನೋಡಿ.

Posted by Naanu Gauri on Sunday, March 8, 2020

ಕಾನೂನು ಎಲ್ಲರಿಗೂ ಒಂದೇ ಇರಬೇಕು. ಶ್ರೀಮಂತರಿಗೊಂದು, ಬಡವರಿಗೊಂದು ನ್ಯಾಯ ಇರಬಾರದು. ರೈತರು ಮರಗಳನ್ನು ಕಡಿದರೆ ಅಧಿಕಾರಿಗಳು ಇನ್ನಿಲ್ಲದ ಕಿರುಕುಳ ನೀಡುತ್ತಾರೆ. ಆಗ ಯಾವುದ್ಯಾವುದೋ ನಿಯಮಗಳು ನುಸುಳುತ್ತವೆ. ಅದೇ ಅಧಿಕಾರಿಗಳು ಮುಂದೆ ನಿಂತು ಗಿಡಗಳನ್ನು ಕಡಿಯುವಾಗ ತೋಟಗಾರಿಕೆ ಇಲಾಖೆಯ ನಿಯಮಗಳು ಅಡ್ಡಿಬರಲಿಲ್ಲವೇ? ಈಗ ಕಡಿದು ಹಾಕಿರುವ ಮರಗಳು ಮಧ್ಯವಯಸ್ಕ ಮರಗಳು. ತೋಟಗಾರಿಕೆ ಇಲಾಖೆ ಪಂಚನಾಮೆ ಮಾಡಬೇಕು. ಯಾವ ಪ್ರಭಾವಿಯ ಒತ್ತಡಕ್ಕೂ ಒಳಗಾಗಬಾರದು. 150 ಅಡಿಕೆ ಗಿಡಗಳು ಮತ್ತು 50 ತೆಂಗಿನ ಮರಗಳಿಗೆ ಭೂಪರಿಹಾರ ಕಾಯ್ದೆ ರೀತಿ ಲೆಕ್ಕಾಚಾರ ಹಾಕಿ ನಷ್ಟಪರಿಹಾರದ ಹಲವುಪಟ್ಟು ಪರಿಹಾರ ನೀಡಬೇಕು. ಈ ಪರಿಹಾರವನ್ನು ತಪ್ಪಿತಸ್ಥ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎನ್ನುತ್ತಾರೆ ಕರ್ನಾಟಕ ಪ್ರಾಂತ ರೈತ ಸಂಘದ ಸಂಚಾಲಕ ಬಿ.ಉಮೇಶ್.

ಸಿದ್ದಮ್ಮ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಮಕ್ಕಳು ಬೆಳೆಸಿದಂತೆ ಬೆಳೆಸಿದ್ದರು. ಭೋಗವಾಗಿ ಬೆಳೆದಿದ್ದವು. ಜೀವತೇದು ಬೆಳೆಸಿದ ಮರಗಳನ್ನು ಕತ್ತರಿಸಿ ಹಾಕಿದರೆ ಎಂಥವರಿಗೂ ಹೊಟ್ಟೆ ಉರಿದುಹೋಗುತ್ತದೆ. ಅವು ಸಿದ್ದಮ್ಮನ ಜೀವನಾಧಾರವಾಗಿದ್ದವು. 50 ತೆಂಗಿನ ಮರಗಳು 150 ವರ್ಷ ಫಲ ಕೊಡುತ್ತವೆ. ವರ್ಷಕ್ಕೆ ಒಂದು ಮರ 250 ಕಾಯಿ ಕೊಡುತ್ತದೆಂದು ಲೆಕ್ಕಹಾಕಿದರೂ 50 ಮರಕ್ಕೆ 12,500 ಕಾಯಿ ಆಗುತ್ತದೆ. ಕಾಯಿಗೆ 20 ರೂನಂತೆ ಲೆಕ್ಕಹಾಕಿದರೂ ವರ್ಷಕ್ಕೆ 2 ಲಕ್ಷ 50 ಸಾವಿರ ಆದಾಯ ಬರುತ್ತದೆ. ಹಾಗಾಗಿ ಮುಂದಿನ 50 ವರ್ಷಗಳಿಗೆ ಅಡಿಕೆ ಮತ್ತು ತೆಂಗಿನ ಜೀವಿತಾವಧಿ ಎಂದು ಭಾವಿಸಿದರೂ 12 ಕೋಟಿ ಪರಿಹಾರ ನೀಡಬೇಕು. ಅವುಗಳನ್ನು ಶ್ರಮಪಟ್ಟು ಬೆಳೆಸಿಲ್ಲವೇ? ಹಾರೈಕೆ ಮಾಡಿಲ್ಲವೇ? ಎಂದು ರೈತರು ಪ್ರಶ್ನಿಸುತ್ತಾರೆ.

ಮರಗಳನ್ನು ಕಡಿದು ಹಾಕಿದ ಮೇಲೆ ಸಿದ್ದಮ್ಮರನ್ನು ಅಧಿಕಾರಿಗಳು ದಾಖಲೆ ಕೇಳಲು ಶುರುಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ಆದರೆ ಏಕೆ ಹೀಗಾಯ್ತು ಎಂಬುದನ್ನು ಸ್ಥಳೀಯ ಶಾಸಕರಾಗಲೀ, ಸಂಸದರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಸ್ಪಷ್ಟೀಕರಣ ಕೇಳುತ್ತಿಲ್ಲ. ಕಂದಾಯ ಅಧಿಕಾರಿ, ಗ್ರಾಮ ಲೆಕ್ಕಿಗರು ಹಾಗೂ ತಹಶೀಲ್ದಾರ್ ಬೇಜವಾಬ್ದಾರಿತನ ಈ ಪ್ರಕರಣದಲ್ಲಿ ಎದ್ದುಕಾಣುತ್ತಿದೆ. ಮರ ಕಡಿಯುವ ಸಂದರ್ಭದಲ್ಲಿ ದಾಖಲೆಗಳನ್ನು ಕೇಳಬಹುದಿತ್ತು. ಅದನ್ನು ಅಧಿಕಾರಿಗಳು ಮಾಡಿಲ್ಲ. ಮೊದಲೇ ದಾಖಲೆ ಪರಿಶೀಲಿಸಿದ್ದರೆ ಮರಗಳನ್ನು ಉಳಿಸಲು ಸಾಧ್ಯವಿತ್ತು. ಆದರೆ ಸಮಾಧಾನದಿಂದ ಪರಿಶೀಲಿಸುವ ಗೋಜಿಗೂ ಹೋಗಿಲ್ಲ ಅಂದರೆ ಅಧಿಕಾರಿಗಳ ತಪ್ಪು ಎದ್ದುಕಾಣುತ್ತಿದೆ. ಈ ತಪ್ಪಿಗೆ ಶಿಕ್ಷೆಯಾಗುವ ಮೊದಲು ಅವರಿಂದಲೇ ಪರಿಹಾರ ಕೊಡಿಸಬೇಕು. ಆಗ ಈ ಪ್ರಕರಣದ ಹಿಂದೆ ಯಾರು ಇದ್ದಾರೆ ಎಂಬುದು ಬಯಲಿಗೆ ಬರುತ್ತದೆ.


ಇದನ್ನೂ ಓದಿ: ನನ್ನ ತೆಂಗು, ಅಡಿಕೆ ಮರಗಳನ್ನು ವಾಪಸ್‌ ಕೊಡಿ : ಧರಣಿ ಕೂತ ಮಹಿಳೆ, ಗ್ರಾಮಸ್ಥರ ಬೆಂಬಲ


ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಟ್ವೀಟ್ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಅವರದೇ ಪಕ್ಷದ ಮಾಜಿ ಸಚಿವರು ಹಾಲಿ ಶಾಸಕ ಶ್ರೀನಿವಾಸ್ ಆ ಕ್ಷೇತ್ರದವರೇ ಆಗಿದ್ದಾರೆ. ಹಾಗಾಗಿ ಇದು ಕೇವಲ ಕಣ್ಣೊರೆಸುವ ತಂತ್ರವಾಗಬಾರದು. ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು. ಬಿಜೆಪಿ ಸರ್ಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹೋದಲ್ಲಿ ಬಂದಲ್ಲಿ ರೈತರ ನೆರವಿಗೆ ಸದಾಸಿದ್ದ ಎಂದು ಹೇಳುತ್ತಿದ್ದಾರೆ. ಆದರೆ ಗುಬ್ಬಿಯ ತಿಪ್ಪೂರು ಘಟನೆಯ ಬಗ್ಗೆ ಒಂದು ಚಕಾರವೂ ಇಲ್ಲ. ಭರವಸೆಗಳು ಬರೀ ಭಾಷಣಕ್ಕೆ ಸೀಮಿತವಾಗಬಾರದು. ಅದು ಅನುಷ್ಠಾನಕ್ಕೆ ಬರಬೇಕು ಅಷ್ಟೇ ಅನ್ನುತ್ತಾರೆ ರೈತರು.

ತೋಟ ಕಳೆದುಕೊಂಡಿರುವ ಸಿದ್ದಮ್ಮ ನಡೆಸುತ್ತಿರುವ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಯುವ ಕಾಂಗ್ರೆಸ್ ಮುಖಂಡ ಆರ್ ರಾಜೇಂದ್ರ ಭೇಟಿ ನೀಡಿ ಇನ್ನು ಮೂರು ದಿನಗಳಲ್ಲಿ ಸೂಕ್ತ ಪರಿಹಾರ ನೀಡದಿದ್ದರೆ ಬೃಹತ್ ಹೋರಾಟದ ಎಚ್ಚರಿಕೆ ನೀಡಿ ಬಂದಿದ್ದಾರೆ. ಇಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಂತ್ರಸ್ಥೆಯ ನೆರವಿಗೆ ಧಾವಿಸಬೇಕು. ಮೊದಲು ಪರಿಹಾರ ಸಿಗಬೇಕು. ಆನಂತರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಘಟನೆಯ ಹಿಂದೆ ಎಂಥಾ ಪ್ರಭಾವಿಯೇ ಇದ್ದ ಶಿಕ್ಷೆಗೆ ಗುರಿಪಡಿಸಬೇಕು. ಸಿದ್ದಮ್ಮ ಅವರಿಗೆ ಸೂಕ್ತ ನ್ಯಾಯ ದೊರೆಯಬೇಕು ಕೇವಲ ಅಧಿಕಾರಿಗಳನ್ನು ವರ್ಗ ಮಾಡುವುದರಿಂದ ನ್ಯಾಯ ದೊರೆಯುವುದಿಲ್ಲ ಎಂಬ ಸತ್ಯ ಹಲವು ಪ್ರಕರಣ ಗಳಲ್ಲಿ ಸ್ಪಷ್ಟವಾಗಿದೆ. ಈಗ ಸಂಸದ ಬಸವರಾಜು, ಸ್ಥಳೀಯ ಶಾಸಕ ಎಸ್.ಆರ್. ಶ್ರೀನಿವಾಸ್ ಪರಿಹಾರ ಕೊಡಿಸಲು ಮುಂದಾಗಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...