Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...