Homeಕರ್ನಾಟಕಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ಗುಬ್ಬಿಯ ಹೊದಲೂರು ಕೆರೆ ಒತ್ತುವರಿ: ತೆರವುಗೊಳಿಸ್ತಾರ ತಹಶೀಲ್ದಾರ್?

ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ತಿಪ್ಪೂರಿನಲ್ಲಿ ತೆಂಗು-ಅಡಿಕೆ ಮರಗಳ ಕಡಿಸಿದ ವಿರುದ್ದ ಜನರ ಪ್ರತಿಭಟನೆ ತೀವ್ರಗೊಂಡಿರುವ ನಡುವೆಯೇ ಹೊಸದೊಂದು ವಿಷಯ ಚರ್ಚೆಗೆ ಗ್ರಾಸವಾಗಿದೆ. ತಹಶೀಲ್ದಾರ್ ಹೊದಲೂರು ಕೆರೆ ಒತ್ತುವರಿ ತೆರವಿಗೆ ಮುಂದಾಗಿದ್ದರು ಎಂಬುದು ಸದ್ಯಕ್ಕಿರುವ ಮಾಹಿತಿ. ಕೆರೆ ಒತ್ತುವರಿ ಮಾಡಿ ತೋಟಗಳನ್ನು ಮಾಡಿಕೊಂಡಿರುವವರನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಗೆ ಸಿದ್ದತೆ ಮಾಡಿಕೊಂಡಿದ್ದರು. ಹೀಗಾಗಿ ತಹಶೀಲ್ದಾರ್ ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಿಸಿದರೆ ಒಂದೇ ಕಲ್ಲಿಗೆ ಹಲವು ಹಕ್ಕಿ ಹೊಡೆದು ತೋಟಗಳು ತೆರವುಗೊಳ್ಳದಂತೆ ತಡೆಯುವ ಹುನ್ನಾರ ಇಲ್ಲಿ ಅಡಗಿದೆ ಎಂದು ತಿಳಿದುಬಂದಿದೆ.

ಹೊದಲೂರು ಕೆರೆ ಸುಮಾರು 250 ಎಕರೆ ವಿಸ್ತೀರ್ಣದಲ್ಲಿ ಹರಡಿಕೊಂಡಿದೆ. ಹೇಮಾವತಿ ನಾಲೆಯಿಂದ ನೀರು ಹರಿಯುತ್ತದೆ. ಈ ಭಾಗ ಫಲವತ್ತಾದ ಭೂಪ್ರದೇಶವಾಗಿದೆ. ಹೊದಲೂರು ಕೆರೆಗೆ ಹೊಂದಿಕೊಂಡಂತೆ ಹಲವು ತೋಟಗಳು ಇವೆ. ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬರ 7 ಎಕರೆ ತೋಟವೂ ಇದೆ. ಈ ಕೆರೆಯ ಬಹುಭಾಗ ಒತ್ತುವರಿ ಮಾಡಿಕೊಂಡು ತೋಟ ಮಾಡಿದ್ದಾರೆ. ಪ್ರಭಾವಿ ರಾಜಕಾರಣಿಯೂ ಈ ಕೆರೆ ಒತ್ತುವರಿ ಫಲಾನುಭವಿ ಮತ್ತು ತೋಟದ ಮಾಲಿಕ. ಹಾಗಾಗಿ ಸುಪ್ರೀಂಕೋರ್ಟ್ ಆದೇಶದಂತೆ ಕೆರೆ ಒತ್ತುವರಿ ತೆರೆವುಗೊಳಿಸುವ ಯೋಜನೆಯನ್ನು ಗುಬ್ಬಿಯ ತಹಶೀಲ್ದಾರ್ ಸಿದ್ದತೆ ಮಾಡಿಕೊಂಡಿದ್ದರು. ಇದೇ ಇಷ್ಟೆಲ್ಲಾ ಅನಾಹುತಕ್ಕೆ ಮೂಲ.

ಕಾನೂನು ರೀತ್ಯ ಕ್ರಮ ಜರುಗಿಸಲು ಈ ಪ್ರಭಾವಿ ರಾಜಕಾರಣಿ ಬಿಡುವುದಿಲ್ಲ. ಅಧಿಕಾರಿ ತನ್ನ ಮಾತು ಕೇಳದಿದ್ದರೆ ಅವರಿಗೆ ವರ್ಗಾವಣೆಯಂತು ಗ್ಯಾರೆಂಟಿ. ಇದೇ ಉದ್ದೇಶದಿಂದ ತಿಪ್ಪೂರು ಕೋಡಿಕೆಂಪಮ್ಮ ದೇವಿ ಪೂಜಾರಿಯ ಅಣ್ಣತಮ್ಮಂದಿರ ನಡುವೆ ಒಡಕು ಮೂಡಿಸಿದರು. ಅಧಿಕಾರಿಗಳ ಮೇಲೆ ಒತ್ತಡ ತಂದರು. ಪ್ರಭಾವಿ ರಾಜಕಾರಣಿಯ ಮಾತುಗಳನ್ನು ಶಿರಸವಹಿಸಿ ಪಾಲಿಸುವ ಗ್ರಾಮ ಲೆಕ್ಕಿಗ ಮತ್ತು ಕಂದಾಯ ಅಧಿಕಾರಿಗಳನ್ನು ಮುಂದಿಟ್ಟುಕೊಂಡು ತೆಂಗು, ಅಡಿಕೆ ಮರಗಳನ್ನು ಕತ್ತರಿಸುವಂತಹ ಕೃತ್ಯಕ್ಕೆ ಕೈಹಾಕಿದರು. ಯಶಸ್ವಿಯೂ ಆದರು ಎಂಬ ಚರ್ಚೆಗಳು ಸಾರ್ವಜನಿಕರ ನಡುವೆ ನಡೆಯುತ್ತಿವೆ.

ಕೋಡಿಕೆಂಪಮ್ಮ ದೇವಿ ಪೂಜಾರಿಗಳು ತೋಟಗಳನ್ನು ತೆರವು ಮಾಡಲು ಜನರಿಂದೇನು ಒತ್ತಡ ಇರಲಿಲ್ಲ. ಆದರೂ ಅಧಿಕಾರಿಗಳು ಮಾಡಿದ ತಪ್ಪಿಗೆ ಸಿದ್ದಮ್ಮ ಸಂಕಟ ಅನುಭವಿಸಬೇಕಾಗಿದೆ. ಜನರು ತೋಟವನ್ನು ತೆರವುಗೊಳಿಸುವಂತಹ ಕೆಲಸಕ್ಕೆ ಖಂಡಿತ ಒಪ್ಪುವುದಿಲ್ಲ. ಅದರ ಬದಲಿಗೆ ಹೊದಲೂರು ಕೆರೆ ಒತ್ತುವರಿ ಮಾಡಿಕೊಂಡಿರುವುದನ್ನು ಮೊದಲು ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕು ಎಂಬ ಒತ್ತಾಯ ಕೇಳಿ ಬರತೊಡಗಿದೆ.

ಗುಬ್ಬಿ ತಾಲೂಕು ಹೊತ್ತಿ ಉರಿಯುತ್ತಿದೆ. ಯಾವುದನ್ನೂ ಕೇಳಬೇಡಿ. ಹೊದಲೂರು ಕೆರೆ ಒತ್ತುವರಿ ವಿಷಯ ಪ್ರಸ್ತಾಪಿಸಬೇಡಿ. ಅದು ತುಂಬ ಸೂಕ್ಷ್ಮವಾದುದು. ತೋಟ ಕಡಿದುಹಾಕಿರುವುದೇ ದೊಡ್ಡ ಚರ್ಚೆ ಆಗುತ್ತಿದೆ. ಇನ್ನು ಆ ವಿಷಯಕ್ಕೆ ಕೈಹಾಕಿದರೆ ನೆಮ್ಮದಿ ಇರುವುದಿಲ್ಲ. ಈಗ ಬಿಜೆಪಿ ಮತ್ತು ಜೆಡಿಎಸ್ ವಿರುದ್ದದ ಜಗಳವಾಗಿ ಪರಿಣಮಿಸಿದೆ. ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿದ್ದಾರೆ. ತಿಪ್ಪೂರು ಪ್ರಕರಣವನ್ನು ಇಟ್ಟುಕೊಂಡು ರಾಜಕೀಯ ಜೋರಾಗಿ ನಡೆಯುತ್ತಿದೆ. ಸಾಕು ಸಹವಾಸ ಎನ್ನುತ್ತಿದ್ದಾರೆ ಸ್ಥಳೀಯ ಪತ್ರಕರ್ತರು.

ತಹಶೀಲ್ದಾರ್ ಪರ-ವಿರುದ್ದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಕೆರೆ ಒತ್ತುವರಿ ಮಾಡಿಸಿದರೆ ಪ್ರಭಾವಿ ರಾಜಕಾರಣಿಗೆ ತೊಂದರೆಯಾಗಲಿದೆ. ಅದೇ ಕಾರಣಕ್ಕೆ ಕೆಲವು ಮಾಧ್ಯಮಗಳು ಕೂಡ ಪ್ರಭಾವಿ ರಾಜಕಾರಣಿ ಬೆಂಬಲಕ್ಕೆ ನಿಂತು, ತಹಶೀಲ್ದಾರ್ ವಿರುದ್ದ ಕತ್ತಿ ಮಸೆಯುತ್ತಿವೆ. ನಿಜವಾಗಿ ಮರಗಳನ್ನು ಕಳೆದುಕೊಂಡಿರುವ ಸಿದ್ದಮ್ಮ ಅವರಿಗೆ ಪರಿಹಾರ ಸಿಗಬೇಕು. ಹಿಂದೆ ನಿಂತು ಕಲ್ಲು ಹೊಡೆಯುತ್ತಿರುವುದು ಯಾರು ಎಂಬುದು ಬಹಿರಂಗಗೊಳ್ಳಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...