Homeಮುಖಪುಟಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ದಿವಾಳಿ ಅಂಚಿನಲ್ಲಿರುವ ಮೂವರು ಮಿಲಿಯಾಧಿಪತಿಗಳ ಜೊತೆ ವ್ಯವಹರಿಸುತ್ತಿದ್ದ ಯೆಸ್ ಬ್ಯಾಂಕ್ ಲೆಕ್ಕಪತ್ರಗಳ ಸೂಕ್ಷ್ಮ ಅಪರಾಧಿಕ ಪರಿಶೀಲನೆ ನಡೆಸಿದಲ್ಲಿ ಇನ್ನಷ್ಟು ಅಸ್ತಿಪಂಜರಗಳು ಹೊರಬರಲಿವೆ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಮುಂಬಯಿಯ ಗಜಿಬಿಜಿಯ ಲೋವರ್ ಪರೇಲ್‌ನಲ್ಲಿರುವ ಯಾವುದೇ ದೇಖಾದೇಕಿ ಇಲ್ಲದ ಮೂರು ಗಗನಚುಂಬಿ ಕಟ್ಟಡಗಳನ್ನು ಹೊಂದಿರುವ ಇಂಡಿಯಾ ಬುಲ್ಸ್ ಫೈನಾನ್ಸ್ ಸೆಂಟರ್ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಯೆಸ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಈಗ ಭಯಹುಟ್ಟಿಸುವ ಮೌನವಿದೆ. ಕೆಟ್ಟ ಸಾಲಗಳು ಮತ್ತು ಅಭದ್ರ ಆಸ್ತಿಗಳ ಕಾರಣದಿಂದ ಕಳೆದ ವಾರ ಪ್ರಪಾತದ ಅಂಚಿನಲ್ಲಿದ್ದ ದೇಶದ ನಾಲ್ಕನೇ ಅತಿದೊಡ್ಡ ಖಾಸಗಿ ಬ್ಯಾಂಕಿನಲ್ಲೀಗ ಬದುಕಬಹುದೋ ಏನೋ ಎಂಬ ಆಶಾವಾದ ಮೂಡಿದೆ.

ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ ಈ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿ ಹಣ ಹಿಂತೆಗೆತಕ್ಕೆ ಮಿತಿಯನ್ನು ವಿಧಿಸಿದಾಗ ಹಣ ಕಳೆದುಕೊಳ್ಳುವ ಭೀತಿಗೆ ಒಳಗಾದ ಸಾವಿರಾರು ಜನರು ಈ ಬ್ಯಾಂಕಿನ ವಿಶಾಲವಾದ ಲಾಬಿಯಲ್ಲಿ ಜಮಾಯಿಸಿದ್ದರು. ಈ ಕಟ್ಟಡಗಳಲ್ಲಿರುವ ಹಲವಾರು ಮಧ್ಯಮ ಪ್ರಮಾಣದ ಕಂಪನಿಗಳು ಈ ಬ್ಯಾಂಕಿನ ಕಾರ್ಪೊರೇಟ್ ಗ್ರಾಹಕರಾಗಿದ್ದು, ತಮ್ಮ ನೌಕರರ ಸಂಬಳದ ಖಾತೆಗಳನ್ನು ಇಲ್ಲಿಯೇ ಹೊಂದಿರುವುದು ಬಹುದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು.

ಇದೀಗ ನಿಮ್ಮ ಹಣ ಸುರಕ್ಷಿತ ಎಂದು ಸರಕಾರ ಭರವಸೆ ನೀಡಿರುವುದರಿಂದ ಗ್ರಾಹಕರು ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಿದ್ದಾರೆ. 16 ವರ್ಷಗಳ ಹಿಂದೆ ಈ ಬ್ಯಾಂಕನ್ನು ಸ್ಥಾಪಿಸಿದ್ದ ರಾಣಾ ಕಪೂರ್ ಇದೀಗ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಹೊಸ ಖಳನಾಯಕ ಎನಿಸಿದ್ದಾರೆ. ಅವರೀಗ ಮುಂಬಯಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕ್ರಿಮಿನಲ್ ಸಂಚು, ವಂಚನೆ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಇದೇ ಕಪೂರ್ ಈಗ ಬ್ಯಾಂಕಿನ ಪತನಕ್ಕಾಗಿ ಆರ್ಥಿಕ ಹಿಂಜರಿತ ಮತ್ತು ನೋಟು ಅಮಾನ್ಯೀಕರಣವನ್ನು ದೂರಬಹುದು. ಆದರೆ, ಇವರೇ ಅದನ್ನು ಸರಕಾರದ ಮಾಸ್ಟರ್ ಸ್ಟ್ರೋಕ್ ಎಂದು ಕೊಂಡಾಡಿದ್ದರು. ಬ್ಯಾಂಕಿನ ರಕ್ತಸಿಕ್ತ ಲೆಕ್ಕಪತ್ರದ ವಿವರಗಳು ಏನನ್ನು ತೋರಿಸುತ್ತವೆ ಎಂದರೆ ಹಿಂದೆ ಬಿಲಿಯಾಧಿಪತಿಗಳಾಗಿದ್ದು ನಂತರ ಆಸ್ತಿಪಾಸ್ತಿಗಳ ವಿನಾಶಕರಾಗಿ ಪರಿಣಮಿಸಿದ ಮೂವರು ಮಹಾನುಭಾವರು ಈ ಬ್ಯಾಂಕಿನ ಪತನಕ್ಕೆ ಮುನ್ನುಡಿ ಬರೆದಿದ್ದಾರೆ.

ಅವರೇ ಅನಿಲ್ ಅಂಬಾನಿ (ರಿಲಯನ್ಸ್ ಗ್ರೂಪ್), ಕಪಿಲ್ ವಾಧ್ವಾನ್ (ಡಿಎಚ್‌ಎಫ್‌ಎಲ್) ಮತ್ತು ಸುಭಾಷ್ ಚಂದ್ರ (ಎಸ್ಸೆಲ್ ಗ್ರೂಪ್). ಇವರು ಅಪಾಯದೊಂದಿಗೆ ಆಟವಾಡುವ ಚಾಳಿಯ ಶೋಕಿಲಾಲ ಕಪೂರ್ ಜೊತೆ ನಡೆಸಿದ ಗುಪ್ತ ವ್ಯವಹಾರಗಳ ಈಗ ತನಿಖಾ ಸಂಸ್ಥೆಗಳ ಭೂತಕನ್ನಡಿಯ ಅಡಿಯಲ್ಲಿವೆ. ಇವರು ಬ್ಯಾಂಕಿನ ಒಟ್ಟು 50,000 ಕೋಟಿ ರೂ.ಗಳ ಒತ್ತಡದ ಆಸ್ತಿಯಲ್ಲಿ 20,000 ಕೋಟಿ ರೂ.ಗಳ ಆಸ್ತಿಯನ್ನು ಪಡೆಯಲು ಈ ಮೂವರು ಕಪೂರ್‌ಗೆ ನೆರವಾದರು ಎಂದು ಬ್ಯಾಂಕಿನ ಕಾರ್ಪೊರೇಟ್ ಸಾಲಗಳ ಲೆಕ್ಕಪುಸ್ತಕವು ತೋರಿಸುತ್ತದೆ. ಇದಕ್ಕಾಗಿ ಕಪೂರ್ ವಂಚನೆಯ ಪ್ರತಿಯೊಂದು ಕೊಳಕು ತಂತ್ರಗಳನ್ನು ಬಳಸಿದ್ದಾರೆ- ರೌಂಡ್ ಟ್ರಿಪ್ಪಿಂಗ್ ಅಂದರೆ ಮಾಲಕರೇ ಅಥವಾ ಸಹವರ್ತಿಗಳು ಹೊಂದಿರುವ ಶೆಲ್ ಕಂಪನಿಗಳಿಗೆ ಅಂದರೆ ನಕಲಿ ಕಂಪನಿಗಳಿಗೆ ಸಾಲ ನೀಡುವುದು, ಕಪ್ಪು ಹಣ ಬಿಳಿ ಮಾಡುವುದು, ಒಳಗಿನ ಗುಟ್ಟು ಬೇರೆಯವರಿಗೆ ನೀಡಿ ಲಾಭ ಮಾಡುವುದು (ಇನ್‌ಸೈಡರ್ ಟ್ರೇಡಿಂಗ್), ಭ್ರಷ್ಟಾಚಾರ, ಸಾಂಸ್ಥಿಕ ದುರಾಡಳಿತ ಇತ್ಯಾದಿ.

ಈ ಬೇಜವಾಬ್ದಾರಿ ಬ್ಯಾಂಕ್ ಮಾಲಕ ಅಪಾಯಕಾರಿ ಅಟಗಳನ್ನು ವಿಸ್ತರಿಸಿ, ತಾನೊಬ್ಬ ಬಹುದೊಡ್ಡ ಸಾಲ ನೀಡಿಕೆದಾರ ಎಂದು ಎಂದು ಸಾಬೀತುಪಡಿಸುತ್ತಿರುವಾಗ ತಾನೊಂದು ಚತುರ ನಿಯಂತ್ರಕ ಸಂಸ್ಥೆ ಎಂಬ ರಿಸರ್ವ್ ಬ್ಯಾಂಕಿನ ಪ್ರತಿಷ್ಟೆ ನಡುಗಲು ಆ‌ರಂಭಿಸಿತು.

ಪ್ರಸ್ತುತ ನಡೆಯುತ್ತಿರುವ ತನಿಖೆಯು ಬ್ಯಾಂಕಿನ ಬಾಕಿ ಸಾಲಗಳು 2013-14ರಲ್ಲಿ 55,000 ಕೋಟಿ ರೂ.ಗಳಿದ್ದದ್ದು, 2018-19ರಲ್ಲಿ ಬಹುಪಟ್ಟು ಹೆಚ್ಚಳವಾಗಿ 2.4 ಕೋಟಿ ರೂ.ಗಳಿಗೆ ತಲಪಿದವು ಎಂಬುದನ್ನು ತೋರಿಸುತ್ತದೆ. ಇದು ಆರ್ಥಿಕ ಹಿಂಜರಿಕೆಯ ಹೊರತಾಗಿಯೂ ನಡೆದಿದೆ. ಬ್ಯಾಂಕಿನ ಬಾಕಿ ಸಾಲವು 2016-17ರಲ್ಲಿದ್ದ 1.3 ಲಕ್ಷ ಕೋಟಿಯಿಂದ ಎರಡೇ ವರ್ಷಗಳಲ್ಲಿ  80 ಶೇಕಡಾ ರಹಿತ ಕ್ಷೇತ್ರಗಳು ಎಂದರೆ, ಖಾಸಗಿ ನಿರ್ಮಾಣಗಾರರಿಗೆ, ಪ್ರವಾಸೋದ್ಯಮ, ಸೇವೆಗಳು, ವೈಯಕ್ತಿಕ ಸಾಲ ಇತ್ಯಾದಿಗಳಿಗೆ ನೀಡಿದ ಸಾಲ ಅಸಹಜವಾದ ಏರಿಕೆ ಕಂಡಿತು- ಅದೂ ಎಲ್ಲಾ ಭಾರತೀಯ ಕಂಪನಿಗಳು ನಿರಾಶರಾಗಿ 2018-19ರ ವಿಸ್ತರಣಾ ಯೋಜನೆಗ ಕಸದ ಬುಟ್ಟಿಗೆ ಎಸೆದಿರುವ ಸಂದರ್ಭದಲ್ಲಿ! ಇದೇ ಸಂದರ್ಭದಲ್ಲಿ ದುಡಿಯದ ಬಂಡವಾಳವೂ ಅಸಹಜವಾಗಿ ಏರಿಕೆ ಕಂಡಿದೆ. ತುರ್ತು ನಿಧಿಯು 2017-18ರಲ್ಲಿ 1,553.8 ಕೋಟಿ ರೂ. ಇದ್ದದ್ದು, 2018-19ರಲ್ಲಿ ಒಮ್ಮೆಲೇ 272 ಶೇಕಡಾ ಏರಿ 5,777.56 ಕೋಟಿಗೆ ತಲಪಿತು. ಅದೇ ಹೊತ್ತಿಗೆ ಲಾಭವು 2018-19ರ ವಾರ್ಷಿಕ ವರದಿಯಂತೆ 59 ಶೇಕಡಾ ಇಳಿದು 1,720.28 ಕೋಟಿ ರೂ.ಗಳಿಗೆ ತಲಪಿತು.

ಬ್ಯಾಂಕಿನ ಅಂದಾಜು ಅಪಾಯಕಾರಿ ಸಾಲವು 46,000 ಕೋಟಿ ರೂ.ಗಳಷ್ಟಿದೆ ಎಂದು ಜೆಪಿ ಮೋರ್ಗನ್ ಹೇಳಿದ್ದರೆ, ಕೆಲವು ಆರ್ಥಿಕ ತಜ್ಞರು 55,000 ಕೋಟಿ ರೂ. ಎಂದು ಹೇಳುತ್ತಿದ್ದಾರೆ. ಇವೆಲ್ಲವೂ ಕಳೆದ ನಾಲ್ಕೈದು ವರ್ಷಗಳಲ್ಲಿ ಉಂಟಾದವುಗಳು. ಅತ್ಯಂತ ಹೆಚ್ಚು ಸಾಲ ಪಡೆದ 20 ಖಾತೆಗಳ ಸಾಲವು ಒಂದು ವರ್ಷ ಹಿಂದೆ 48,435.4 ಕೋಟಿ ರೂ. ಇದ್ದದ್ದು ಮಾರ್ಚ್ 31, 2019ರಲ್ಲಿ 61,799.3 ಕೋಟಿ ರೂ.ಗಳಿಗೆ ಏರಿರುವುದು ಸಾಲ ನೀಡಿಕೆಯು ಕೆಲವೇ ಆಪ್ತರಿಗೆ ಸೀಮಿತಗೊಳ್ಳುತ್ತಿತ್ತು ಎಂಬುದನ್ನು ಸೂಚಿಸುತ್ತದೆ.

ಕಳೆದ 2-3 ವರ್ಷಗಳಿಂದ ಬಿಲಿಯಾಧಿಪತಿಗಳ ಏಣಿಯಿಂದ ಉರುಳುತ್ತಲೇ ಬಂದಿರುವ ಅನಿಲ್ ಅಂಬಾನಿ ಮತ್ತು ಈ ಬ್ಯಾಂಕಿನ ಜೊತೆ ಸಂಬಂಧ ಹೊಂದಿರುವ ಬಹುತೇಕ ಎಲ್ಲಾ ಉದ್ಯಮ ಸಂಸ್ಥೆಗಳು ಉರುಳುತ್ತಲೇ ಇರುವುದು ಬ್ಯಾಂಕಿನ ದುರ್ಗತಿಗೆ ಕಾರಣ. ಡಿಸೆಂಬರ್ 31, 2019ರ ಲೆಕ್ಕಾಚಾರದಂತೆ ಅನಿಲ್ ಅಂಬಾನಿಯ ಟೆಲಿಕಾಂ, ಮೂಲಸೌಕರ್ಯ, ನೌಕಾ ಮತ್ತು ವಿದ್ಯುತ್ ಕ್ಷೇತ್ರದ ಕಂಪನಿಗಳು ಯೆಸ್ ಬ್ಯಾಂಕಿಗೆ 43,800 ರೂ. ಮುಳುಗಿಸಿವೆ. ಇದರಲ್ಲಿ ಕಾಲು ಭಾಗ ಯೆಸ್ ಬ್ಯಾಂಕಿನಿಂದ ಪಡೆದುದಾಗಿದೆ. ಈ ಎಲ್ಲಾ ಕಂಪನಿಗಳು ಇಸ್ಪೀಟ್ ಎಲೆಗಳಂತೆ ಉರುಳಿದವು. ಹಣಕಾಸು ಒದಗಿಸುವವರು ಭಾರೀ ತಳಮಳಕ್ಕೆ ಒಳಗಾದರು.

ಯೆಸ್ ಬ್ಯಾಂಕ್ ಭಾರಿ ಪ್ರಮಾಣದಲ್ಲಿ ಶೇರುಗಳ ಅಡಮಾನಿನ ಆಧಾರದಲ್ಲಿ ಸಾಲಗಳನ್ನು ನೀಡಲು ಆರಂಭಿಸಿತು. ಇದು ಕಡಲ ತಡಿಯಲ್ಲಿ ನೆಟ್ಟಗೆ ನಿಂತಂತೆ. ಕಾಲಡಿಯ ಉಸುಕು ಅಥವಾ ಹೊಯ್ಗೆ ಕೊಚ್ಚಿಹೋಗಿ ಯಾವಾಗ ಉರುಳುವಿರೋ ಗೊತ್ತಾಗದು. ಅನಿಲ್ ಅಂಬಾನಿಯ ರಿಲಯನ್ಸ್ ಪವರ್ 685 ಕೋಟಿ ಕೋಟಿ ರೂ.ಗಳ ಸಾಲ ಬಾಕಿ ಇರಿಸಿ ಇದೇ ಅಡವು ಸಾಲದ ಮೇಲೆ ತನ್ನದೇ ಸಬ್ಸಿಡರಿ ಕಂಪನಿಯಾದ ರೋಸಾ ಪಲರ್ ಸಪ್ಲೈ ಕಂಪನಿಯಿಂದ 30 ಶೇಕಡಾ ಪಾಲುದಾರಿಕೆ ಖರೀದಿಸಿತು.

ಸುಬಾಷ್ ಚಂದ್ರ ಅವರ ಎಸ್ಸೆಲ್ ಗ್ರೂಪ್ ಅದೇ ರೀತಿಯಲ್ಲಿ 3,330 ಕೋಟಿ ರೂ.ಗಳ ಧೋಕಾ ಮಾಡಿತು. ಈ ರೀತಿಯಲ್ಲಿ 20 ದೊಡ್ಡ ಸಾಲಗಾರ ಕುಳಗಳು ಬ್ಯಾಂಕಿನ ಮಾಲಕರ ಸಹಕಾರದ ಮೂಲಕವೇ ಸಾವಿರಾರು ಕೋಟಿ ಸಾಲ ಮಾಡಿ ಮುಳುಗಿಸಿದ್ದಾರೆ. ಠೇವಣಿದಾರರ ಹಣ ಮತ್ತು ನಂಬಿಕೆ ಮುಳುಗಿಸಿದ್ದಾರೆ. ಇದು ಸರಕಾರ ಜನರಿಗೆ ಒದಗಿಸುತ್ತಿರುವ ಆರ್ಥಿಕ ಭದ್ರತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...