Homeಮುಖಪುಟಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ಯೆಸ್ ಬ್ಯಾಂಕ್ ಪತನಕ್ಕೆ ಮುನ್ನುಡಿ ಬರೆದ ಮೂವರು ಮಾಜಿ ಬಿಲಿಯಾಧಿಪತಿಗಳು: ಅಂಬಾನಿ, ವಾಧ್ವಾನ್ ಮತ್ತು ಚಂದ್ರ!

ದಿವಾಳಿ ಅಂಚಿನಲ್ಲಿರುವ ಮೂವರು ಮಿಲಿಯಾಧಿಪತಿಗಳ ಜೊತೆ ವ್ಯವಹರಿಸುತ್ತಿದ್ದ ಯೆಸ್ ಬ್ಯಾಂಕ್ ಲೆಕ್ಕಪತ್ರಗಳ ಸೂಕ್ಷ್ಮ ಅಪರಾಧಿಕ ಪರಿಶೀಲನೆ ನಡೆಸಿದಲ್ಲಿ ಇನ್ನಷ್ಟು ಅಸ್ತಿಪಂಜರಗಳು ಹೊರಬರಲಿವೆ.

- Advertisement -
- Advertisement -

ಸಂಗ್ರಹಾನುವಾದ: ನಿಖಿಲ್ ಕೋಲ್ಪೆ

ಮುಂಬಯಿಯ ಗಜಿಬಿಜಿಯ ಲೋವರ್ ಪರೇಲ್‌ನಲ್ಲಿರುವ ಯಾವುದೇ ದೇಖಾದೇಕಿ ಇಲ್ಲದ ಮೂರು ಗಗನಚುಂಬಿ ಕಟ್ಟಡಗಳನ್ನು ಹೊಂದಿರುವ ಇಂಡಿಯಾ ಬುಲ್ಸ್ ಫೈನಾನ್ಸ್ ಸೆಂಟರ್ ಎಂಬ ವಾಣಿಜ್ಯ ಸಂಕೀರ್ಣದಲ್ಲಿರುವ ಯೆಸ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಈಗ ಭಯಹುಟ್ಟಿಸುವ ಮೌನವಿದೆ. ಕೆಟ್ಟ ಸಾಲಗಳು ಮತ್ತು ಅಭದ್ರ ಆಸ್ತಿಗಳ ಕಾರಣದಿಂದ ಕಳೆದ ವಾರ ಪ್ರಪಾತದ ಅಂಚಿನಲ್ಲಿದ್ದ ದೇಶದ ನಾಲ್ಕನೇ ಅತಿದೊಡ್ಡ ಖಾಸಗಿ ಬ್ಯಾಂಕಿನಲ್ಲೀಗ ಬದುಕಬಹುದೋ ಏನೋ ಎಂಬ ಆಶಾವಾದ ಮೂಡಿದೆ.

ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ ಈ ಬ್ಯಾಂಕಿನ ಮೇಲೆ ನಿರ್ಬಂಧ ಹೇರಿ ಹಣ ಹಿಂತೆಗೆತಕ್ಕೆ ಮಿತಿಯನ್ನು ವಿಧಿಸಿದಾಗ ಹಣ ಕಳೆದುಕೊಳ್ಳುವ ಭೀತಿಗೆ ಒಳಗಾದ ಸಾವಿರಾರು ಜನರು ಈ ಬ್ಯಾಂಕಿನ ವಿಶಾಲವಾದ ಲಾಬಿಯಲ್ಲಿ ಜಮಾಯಿಸಿದ್ದರು. ಈ ಕಟ್ಟಡಗಳಲ್ಲಿರುವ ಹಲವಾರು ಮಧ್ಯಮ ಪ್ರಮಾಣದ ಕಂಪನಿಗಳು ಈ ಬ್ಯಾಂಕಿನ ಕಾರ್ಪೊರೇಟ್ ಗ್ರಾಹಕರಾಗಿದ್ದು, ತಮ್ಮ ನೌಕರರ ಸಂಬಳದ ಖಾತೆಗಳನ್ನು ಇಲ್ಲಿಯೇ ಹೊಂದಿರುವುದು ಬಹುದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು.

ಇದೀಗ ನಿಮ್ಮ ಹಣ ಸುರಕ್ಷಿತ ಎಂದು ಸರಕಾರ ಭರವಸೆ ನೀಡಿರುವುದರಿಂದ ಗ್ರಾಹಕರು ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಟ್ಟಿದ್ದಾರೆ. 16 ವರ್ಷಗಳ ಹಿಂದೆ ಈ ಬ್ಯಾಂಕನ್ನು ಸ್ಥಾಪಿಸಿದ್ದ ರಾಣಾ ಕಪೂರ್ ಇದೀಗ ಭಾರತೀಯ ಬ್ಯಾಂಕಿಂಗ್ ಕ್ಷೇತ್ರದ ಹೊಸ ಖಳನಾಯಕ ಎನಿಸಿದ್ದಾರೆ. ಅವರೀಗ ಮುಂಬಯಿಯ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕ್ರಿಮಿನಲ್ ಸಂಚು, ವಂಚನೆ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಇದೇ ಕಪೂರ್ ಈಗ ಬ್ಯಾಂಕಿನ ಪತನಕ್ಕಾಗಿ ಆರ್ಥಿಕ ಹಿಂಜರಿತ ಮತ್ತು ನೋಟು ಅಮಾನ್ಯೀಕರಣವನ್ನು ದೂರಬಹುದು. ಆದರೆ, ಇವರೇ ಅದನ್ನು ಸರಕಾರದ ಮಾಸ್ಟರ್ ಸ್ಟ್ರೋಕ್ ಎಂದು ಕೊಂಡಾಡಿದ್ದರು. ಬ್ಯಾಂಕಿನ ರಕ್ತಸಿಕ್ತ ಲೆಕ್ಕಪತ್ರದ ವಿವರಗಳು ಏನನ್ನು ತೋರಿಸುತ್ತವೆ ಎಂದರೆ ಹಿಂದೆ ಬಿಲಿಯಾಧಿಪತಿಗಳಾಗಿದ್ದು ನಂತರ ಆಸ್ತಿಪಾಸ್ತಿಗಳ ವಿನಾಶಕರಾಗಿ ಪರಿಣಮಿಸಿದ ಮೂವರು ಮಹಾನುಭಾವರು ಈ ಬ್ಯಾಂಕಿನ ಪತನಕ್ಕೆ ಮುನ್ನುಡಿ ಬರೆದಿದ್ದಾರೆ.

ಅವರೇ ಅನಿಲ್ ಅಂಬಾನಿ (ರಿಲಯನ್ಸ್ ಗ್ರೂಪ್), ಕಪಿಲ್ ವಾಧ್ವಾನ್ (ಡಿಎಚ್‌ಎಫ್‌ಎಲ್) ಮತ್ತು ಸುಭಾಷ್ ಚಂದ್ರ (ಎಸ್ಸೆಲ್ ಗ್ರೂಪ್). ಇವರು ಅಪಾಯದೊಂದಿಗೆ ಆಟವಾಡುವ ಚಾಳಿಯ ಶೋಕಿಲಾಲ ಕಪೂರ್ ಜೊತೆ ನಡೆಸಿದ ಗುಪ್ತ ವ್ಯವಹಾರಗಳ ಈಗ ತನಿಖಾ ಸಂಸ್ಥೆಗಳ ಭೂತಕನ್ನಡಿಯ ಅಡಿಯಲ್ಲಿವೆ. ಇವರು ಬ್ಯಾಂಕಿನ ಒಟ್ಟು 50,000 ಕೋಟಿ ರೂ.ಗಳ ಒತ್ತಡದ ಆಸ್ತಿಯಲ್ಲಿ 20,000 ಕೋಟಿ ರೂ.ಗಳ ಆಸ್ತಿಯನ್ನು ಪಡೆಯಲು ಈ ಮೂವರು ಕಪೂರ್‌ಗೆ ನೆರವಾದರು ಎಂದು ಬ್ಯಾಂಕಿನ ಕಾರ್ಪೊರೇಟ್ ಸಾಲಗಳ ಲೆಕ್ಕಪುಸ್ತಕವು ತೋರಿಸುತ್ತದೆ. ಇದಕ್ಕಾಗಿ ಕಪೂರ್ ವಂಚನೆಯ ಪ್ರತಿಯೊಂದು ಕೊಳಕು ತಂತ್ರಗಳನ್ನು ಬಳಸಿದ್ದಾರೆ- ರೌಂಡ್ ಟ್ರಿಪ್ಪಿಂಗ್ ಅಂದರೆ ಮಾಲಕರೇ ಅಥವಾ ಸಹವರ್ತಿಗಳು ಹೊಂದಿರುವ ಶೆಲ್ ಕಂಪನಿಗಳಿಗೆ ಅಂದರೆ ನಕಲಿ ಕಂಪನಿಗಳಿಗೆ ಸಾಲ ನೀಡುವುದು, ಕಪ್ಪು ಹಣ ಬಿಳಿ ಮಾಡುವುದು, ಒಳಗಿನ ಗುಟ್ಟು ಬೇರೆಯವರಿಗೆ ನೀಡಿ ಲಾಭ ಮಾಡುವುದು (ಇನ್‌ಸೈಡರ್ ಟ್ರೇಡಿಂಗ್), ಭ್ರಷ್ಟಾಚಾರ, ಸಾಂಸ್ಥಿಕ ದುರಾಡಳಿತ ಇತ್ಯಾದಿ.

ಈ ಬೇಜವಾಬ್ದಾರಿ ಬ್ಯಾಂಕ್ ಮಾಲಕ ಅಪಾಯಕಾರಿ ಅಟಗಳನ್ನು ವಿಸ್ತರಿಸಿ, ತಾನೊಬ್ಬ ಬಹುದೊಡ್ಡ ಸಾಲ ನೀಡಿಕೆದಾರ ಎಂದು ಎಂದು ಸಾಬೀತುಪಡಿಸುತ್ತಿರುವಾಗ ತಾನೊಂದು ಚತುರ ನಿಯಂತ್ರಕ ಸಂಸ್ಥೆ ಎಂಬ ರಿಸರ್ವ್ ಬ್ಯಾಂಕಿನ ಪ್ರತಿಷ್ಟೆ ನಡುಗಲು ಆ‌ರಂಭಿಸಿತು.

ಪ್ರಸ್ತುತ ನಡೆಯುತ್ತಿರುವ ತನಿಖೆಯು ಬ್ಯಾಂಕಿನ ಬಾಕಿ ಸಾಲಗಳು 2013-14ರಲ್ಲಿ 55,000 ಕೋಟಿ ರೂ.ಗಳಿದ್ದದ್ದು, 2018-19ರಲ್ಲಿ ಬಹುಪಟ್ಟು ಹೆಚ್ಚಳವಾಗಿ 2.4 ಕೋಟಿ ರೂ.ಗಳಿಗೆ ತಲಪಿದವು ಎಂಬುದನ್ನು ತೋರಿಸುತ್ತದೆ. ಇದು ಆರ್ಥಿಕ ಹಿಂಜರಿಕೆಯ ಹೊರತಾಗಿಯೂ ನಡೆದಿದೆ. ಬ್ಯಾಂಕಿನ ಬಾಕಿ ಸಾಲವು 2016-17ರಲ್ಲಿದ್ದ 1.3 ಲಕ್ಷ ಕೋಟಿಯಿಂದ ಎರಡೇ ವರ್ಷಗಳಲ್ಲಿ  80 ಶೇಕಡಾ ರಹಿತ ಕ್ಷೇತ್ರಗಳು ಎಂದರೆ, ಖಾಸಗಿ ನಿರ್ಮಾಣಗಾರರಿಗೆ, ಪ್ರವಾಸೋದ್ಯಮ, ಸೇವೆಗಳು, ವೈಯಕ್ತಿಕ ಸಾಲ ಇತ್ಯಾದಿಗಳಿಗೆ ನೀಡಿದ ಸಾಲ ಅಸಹಜವಾದ ಏರಿಕೆ ಕಂಡಿತು- ಅದೂ ಎಲ್ಲಾ ಭಾರತೀಯ ಕಂಪನಿಗಳು ನಿರಾಶರಾಗಿ 2018-19ರ ವಿಸ್ತರಣಾ ಯೋಜನೆಗ ಕಸದ ಬುಟ್ಟಿಗೆ ಎಸೆದಿರುವ ಸಂದರ್ಭದಲ್ಲಿ! ಇದೇ ಸಂದರ್ಭದಲ್ಲಿ ದುಡಿಯದ ಬಂಡವಾಳವೂ ಅಸಹಜವಾಗಿ ಏರಿಕೆ ಕಂಡಿದೆ. ತುರ್ತು ನಿಧಿಯು 2017-18ರಲ್ಲಿ 1,553.8 ಕೋಟಿ ರೂ. ಇದ್ದದ್ದು, 2018-19ರಲ್ಲಿ ಒಮ್ಮೆಲೇ 272 ಶೇಕಡಾ ಏರಿ 5,777.56 ಕೋಟಿಗೆ ತಲಪಿತು. ಅದೇ ಹೊತ್ತಿಗೆ ಲಾಭವು 2018-19ರ ವಾರ್ಷಿಕ ವರದಿಯಂತೆ 59 ಶೇಕಡಾ ಇಳಿದು 1,720.28 ಕೋಟಿ ರೂ.ಗಳಿಗೆ ತಲಪಿತು.

ಬ್ಯಾಂಕಿನ ಅಂದಾಜು ಅಪಾಯಕಾರಿ ಸಾಲವು 46,000 ಕೋಟಿ ರೂ.ಗಳಷ್ಟಿದೆ ಎಂದು ಜೆಪಿ ಮೋರ್ಗನ್ ಹೇಳಿದ್ದರೆ, ಕೆಲವು ಆರ್ಥಿಕ ತಜ್ಞರು 55,000 ಕೋಟಿ ರೂ. ಎಂದು ಹೇಳುತ್ತಿದ್ದಾರೆ. ಇವೆಲ್ಲವೂ ಕಳೆದ ನಾಲ್ಕೈದು ವರ್ಷಗಳಲ್ಲಿ ಉಂಟಾದವುಗಳು. ಅತ್ಯಂತ ಹೆಚ್ಚು ಸಾಲ ಪಡೆದ 20 ಖಾತೆಗಳ ಸಾಲವು ಒಂದು ವರ್ಷ ಹಿಂದೆ 48,435.4 ಕೋಟಿ ರೂ. ಇದ್ದದ್ದು ಮಾರ್ಚ್ 31, 2019ರಲ್ಲಿ 61,799.3 ಕೋಟಿ ರೂ.ಗಳಿಗೆ ಏರಿರುವುದು ಸಾಲ ನೀಡಿಕೆಯು ಕೆಲವೇ ಆಪ್ತರಿಗೆ ಸೀಮಿತಗೊಳ್ಳುತ್ತಿತ್ತು ಎಂಬುದನ್ನು ಸೂಚಿಸುತ್ತದೆ.

ಕಳೆದ 2-3 ವರ್ಷಗಳಿಂದ ಬಿಲಿಯಾಧಿಪತಿಗಳ ಏಣಿಯಿಂದ ಉರುಳುತ್ತಲೇ ಬಂದಿರುವ ಅನಿಲ್ ಅಂಬಾನಿ ಮತ್ತು ಈ ಬ್ಯಾಂಕಿನ ಜೊತೆ ಸಂಬಂಧ ಹೊಂದಿರುವ ಬಹುತೇಕ ಎಲ್ಲಾ ಉದ್ಯಮ ಸಂಸ್ಥೆಗಳು ಉರುಳುತ್ತಲೇ ಇರುವುದು ಬ್ಯಾಂಕಿನ ದುರ್ಗತಿಗೆ ಕಾರಣ. ಡಿಸೆಂಬರ್ 31, 2019ರ ಲೆಕ್ಕಾಚಾರದಂತೆ ಅನಿಲ್ ಅಂಬಾನಿಯ ಟೆಲಿಕಾಂ, ಮೂಲಸೌಕರ್ಯ, ನೌಕಾ ಮತ್ತು ವಿದ್ಯುತ್ ಕ್ಷೇತ್ರದ ಕಂಪನಿಗಳು ಯೆಸ್ ಬ್ಯಾಂಕಿಗೆ 43,800 ರೂ. ಮುಳುಗಿಸಿವೆ. ಇದರಲ್ಲಿ ಕಾಲು ಭಾಗ ಯೆಸ್ ಬ್ಯಾಂಕಿನಿಂದ ಪಡೆದುದಾಗಿದೆ. ಈ ಎಲ್ಲಾ ಕಂಪನಿಗಳು ಇಸ್ಪೀಟ್ ಎಲೆಗಳಂತೆ ಉರುಳಿದವು. ಹಣಕಾಸು ಒದಗಿಸುವವರು ಭಾರೀ ತಳಮಳಕ್ಕೆ ಒಳಗಾದರು.

ಯೆಸ್ ಬ್ಯಾಂಕ್ ಭಾರಿ ಪ್ರಮಾಣದಲ್ಲಿ ಶೇರುಗಳ ಅಡಮಾನಿನ ಆಧಾರದಲ್ಲಿ ಸಾಲಗಳನ್ನು ನೀಡಲು ಆರಂಭಿಸಿತು. ಇದು ಕಡಲ ತಡಿಯಲ್ಲಿ ನೆಟ್ಟಗೆ ನಿಂತಂತೆ. ಕಾಲಡಿಯ ಉಸುಕು ಅಥವಾ ಹೊಯ್ಗೆ ಕೊಚ್ಚಿಹೋಗಿ ಯಾವಾಗ ಉರುಳುವಿರೋ ಗೊತ್ತಾಗದು. ಅನಿಲ್ ಅಂಬಾನಿಯ ರಿಲಯನ್ಸ್ ಪವರ್ 685 ಕೋಟಿ ಕೋಟಿ ರೂ.ಗಳ ಸಾಲ ಬಾಕಿ ಇರಿಸಿ ಇದೇ ಅಡವು ಸಾಲದ ಮೇಲೆ ತನ್ನದೇ ಸಬ್ಸಿಡರಿ ಕಂಪನಿಯಾದ ರೋಸಾ ಪಲರ್ ಸಪ್ಲೈ ಕಂಪನಿಯಿಂದ 30 ಶೇಕಡಾ ಪಾಲುದಾರಿಕೆ ಖರೀದಿಸಿತು.

ಸುಬಾಷ್ ಚಂದ್ರ ಅವರ ಎಸ್ಸೆಲ್ ಗ್ರೂಪ್ ಅದೇ ರೀತಿಯಲ್ಲಿ 3,330 ಕೋಟಿ ರೂ.ಗಳ ಧೋಕಾ ಮಾಡಿತು. ಈ ರೀತಿಯಲ್ಲಿ 20 ದೊಡ್ಡ ಸಾಲಗಾರ ಕುಳಗಳು ಬ್ಯಾಂಕಿನ ಮಾಲಕರ ಸಹಕಾರದ ಮೂಲಕವೇ ಸಾವಿರಾರು ಕೋಟಿ ಸಾಲ ಮಾಡಿ ಮುಳುಗಿಸಿದ್ದಾರೆ. ಠೇವಣಿದಾರರ ಹಣ ಮತ್ತು ನಂಬಿಕೆ ಮುಳುಗಿಸಿದ್ದಾರೆ. ಇದು ಸರಕಾರ ಜನರಿಗೆ ಒದಗಿಸುತ್ತಿರುವ ಆರ್ಥಿಕ ಭದ್ರತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...