Homeಅಂಕಣಗಳುಅಂದು ನಾದಿರ್ ಶಾ ಇಂದು ಅಮಿತ್ ಶಾ

ಅಂದು ನಾದಿರ್ ಶಾ ಇಂದು ಅಮಿತ್ ಶಾ

- Advertisement -
- Advertisement -

ಕಳೆದ ಮಾರ್ಚ್ ಎಂಟಕ್ಕೆ ಲಂಕೇಶರ ಹುಟ್ಟುಹಬ್ಬ ಸಂಭವಿಸಿತು. ಆ ಕುರಿತು ಧ್ಯಾನಿಸಿದಾಗ, ಅವರು ಕಳೆದ ಇಪ್ಪತ್ತೈದು ವರ್ಷದ ಹಿಂದೆ ಬರೆದ ಗುಣಮುಖ ನಾಟಕದ ದೃಶ್ಯ ಮುತ್ತಿಕೊಂಡು ಕಾಡಿಸಿತಲ್ಲಾ. ಪರ್ಶಿಯಾದಿಂದ ದಂಡೆತ್ತಿ ಬಂದ ನಾದಿರ್ ಶಾ ಭಾರತದ ಜಾತೀಯತೆ, ಅಸ್ಪೃಶ್ಯತೆ, ಆತ್ಮವಂಚನೆ ಮತ್ತು ಸುಳ್ಳುಗಳಿಂದ ರೋಸಿ ಹೋಗಿದ್ದಲ್ಲದೆ, ಮಾನಸಿಕ ರೋಗಕ್ಕೆ ತುತ್ತಾಗಿದ್ದಾನೆ. ಸ್ಥಳೀಯ ಮುಸ್ಲಿಂ ದೊರೆ, ಹುಡುಗಿಯರೊಂದಿಗೆ ಶಾಯಿರಿ ಬರೆದು ಹೇಳುತ್ತ, ಮದ್ಯ ಮಾಂಸದಲ್ಲಿ ಮುಳುಗಿದ್ದಾನೆ. ನಾದಿರ್ ಶಾಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಮಾನಸಿಕ ರೋಗಿಯಾದ ನಾದಿರ್ ಶಾನ ಸೈನ್ಯ ದೆಹಲಿಯನ್ನು ತೆರೆದಿಡುತ್ತದೆ. ಕಡೆಗೆ ಬಂದ ವೈದ್ಯ ಹಕೀಮ ನಾದಿರ್‍ಶಾನ ಹಿಂಸೆಯ ವ್ಯಸನವನ್ನು ತಹಬಂದಿಗೆ ತಂದು ಗುಣಮುಖನನ್ನಾಗಿಸಿ ಭಾರತ ಬಿಟ್ಟು ಹೋಗುವಂತೆ ಮಾಡುತ್ತಾನೆ. ಇದು ಇತಿಹಾಸ. ಇಂತಹ ರಕ್ತಸಿಕ್ತ ಇತಿಹಾಸ ಮರುಕಳಿಸಿದೆ. ನಾದಿರ್ ಶಾನ ಜಾಗದಲ್ಲಿ ಅಮಿತ್ ಶಾ ಇದ್ದಾನೆ. ಅವನ ಪಡೆ ದೆಹಲಿಯಲ್ಲಿ ಪಿಸ್ತೂಲು ಹಿಡಿದು ಜನರನ್ನ ಕೊಲ್ಲುತ್ತಿದೆ. ಹಕೀಮನ ಜಾಗದಲ್ಲಿ ಕೇಜ್ರಿವಾಲನಿದ್ದಾನೆ. ಕೇಜ್ರಿವಾಲನ ಕೆಲಸಗಳು ಅಮಿತ್ ಶಾನ ಕಣ್ಣು ತೆರೆಸಿದರೆ ದೆಹಲಿ ಏಳಿಗೆಯಾಗಬಲ್ಲದು ಇಲ್ಲವಾದರೆ, ಸರ್ವನಾಶ. ಆ ಮುಖಾಂತರ ಭಾರತವೂ ನಾಶದ ಅಂಚಿಗೆ ಬಂದು ನಿಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲವಂತಲ್ಲ ಥೂತ್ತೇರಿ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರನ್ನು ನೋಡಿ ಬೊಗಳಿದ ಯತ್ನಾಳ್ ಎಂಬ ಯಬಡನನ್ನು ಕುರಿತು ಬಿಜೆಪಿಯ ಯಾರೂ ಗದರಲಿಲ್ಲವಂತಲ್ಲಾ. ಇದಲ್ಲದೆ, ಪರವಾಗಿಲ್ಲ ಅವನ ಜೊತೆ ಮಾತಾಡಬಹುದು ಎಂಬಂತಿದ್ದ ಸುರೇಶ್ ಕುಮಾರ್ ಎಂಬ ಸಧಾರಿತ ಚೆಡ್ಡಿಯ ಬಗ್ಗೆ ಶಾನೆ ಬೇಜಾರು ಮಾಡಿಕೊಂಡಿರುವ ದೊರೆಸ್ವಾಮಿ ಸಂಬಂಧಿಯಾದ ದೇವನೂರು ಮಹಾದೇವ ಕೊಳೆತ ಹಣ್ಣಿನ ಜೊತೆಯಿರುವ ಒಳ್ಳೆ ಹಣ್ಣು ಎಂದು ಭಾವಿಸಿ ಮೋಸ ಹೋಗಿದ್ದಾರಲ್ಲಾ. ಯಾರು ಸ್ವಾಮಿ ಇದು ಶ್ರೇಷ್ಠ ಹಣ್ಣು ಎಂದು ತಮಗೆ ಹೇಳಿದ್ದು. ಸಿ.ಟಿ.ರವಿ, ರೇಣುಕಾಚಾರಿ ಯತ್ನಾಳ್ ಹೇಳುವ ಮಾತನ್ನೇ ಶಿಷ್ಟಭಾಷೆಯಲ್ಲಿ ಹೇಳುವ ಸುರೇಶ್‍ಕುಮಾರ್ ಯಡ್ಡಿ ಕಾಲದಲ್ಲಿ ಬೆಂಗಳೂರಲ್ಲಿ ಮಾಡಿಕೊಂಡ ಸೈಟಿನ ಬಗ್ಗೆ ತಲೆದೂಗುವ ಭಾಷೆಯಲ್ಲಿ ಸಮರ್ಥಿಸಿಕೊಂಡಿದ್ದರು. ಇದೆಲ್ಲಕ್ಕಿಂತ ಮುಖ್ಯವಾಗಿ ಯತ್ನಾಳ ದನಿ ಇಡೀ ಬಿಜೆಪಿಗಳ ದನಿ. ಅದಕ್ಕೆ ಆತನ ಪರ ನಿಂತರು. ಅದಾಳು ಬಿದ್ದೋಗಲಿ ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ತಲೆ ಕೆಡಿಸಿಕೊಂಡಿರುವ ವಿಶ್ವನಾಥ್ ಎಂಬ ಕಾಂಗ್ರೆಸ್ ಪ್ರವಾದಿ ಬಾಯಿಗೆ ಅದಾವ ಗೂಟ ಬಡಿದುಕೊಂಡಿದ್ದರೆಂದು ಹಾಲಿ ಕಾಂಗ್ರೆಸ್‍ಗಳು ಗುಸುಗುಟ್ಟುತ್ತಿವೆಯಂತಲ್ಲಾ ಥೂತ್ತೇರಿ.

ಕುಮಾರಸ್ವಾಮಿ ಮಗನ ಮದುವೆ ವಿಷಯದಲ್ಲಿ ಮೂಗು ತೂರಿಸಿ ಕುಮಾರಣ್ಣನಿಂದಲೇ ಸರಿಯಾಗಿ ಇಕ್ಕಿಸಿಕೊಂಡಿದ್ದಾರಲ್ಲಾ ಈ ವಿಶ್ವನಾಥ. ನನ್ನ ಮಗನ ಖರ್ಚಿನ ವಿಷಯದಲ್ಲಿ ಮಾತನಾಡುವ ಈ ವಿಶ್ವನಾಥ ಇದ್ದಕ್ಕಿದ್ದಂತೆ ರಾಜಿನಾಮೆ ನೀಡಿ ಹತ್ತಾರು ಕೋಟಿ ಖರ್ಚಿನಿಂದ ಮತ್ತೆ ಚುನಾವಣೆ ಎದುರಿಸಿದರಲ್ಲಾ ಅದು ಯಾರ ದುಡ್ಡು ಎಂದಿದ್ದಾರಲ್ಲಾ. ಇಬ್ಬರ ಅಭಿಪ್ರಾಯಗಳು ಅರ್ಥವತ್ತಾಗಿವೆ. ಹೇಗೆಂದರೆ, ಚುನಾವಣೆಗೆ ನಿಂತು ಖರ್ಚು ಮಾಡಿಕೊಂಡು ಸಾಲ ಮಾಡಿದ್ದ ವಿಶ್ವನಾಥ್ ಅದನ್ನ ತೀರಿಸಲು ಬಿಜೆಪಿ ಸೇರಿ ಚುನಾವಣೆಗೆ ಹಣ ಖರ್ಚು ಮಾಡಿದರು. ಇತ್ತ ಕುಮಾರಣ್ಣ ಮಂಡ್ಯ ಲೋಕಸಭಾ ಚುನಾವಣೆಗೆ ಮಗನನ್ನು ನಿಲ್ಲಿಸಿ ನೂರು ಕೋಟಿ ಸುರಿದರು. ಈಗ ಅಷ್ಟೇ ದುಡ್ಡಿನಿಂದ ಮಗನ ಮದುವೆ ಮಾಡುತ್ತಿದ್ದಾರೆ. ಇವರಿಬ್ಬರೂ ಖರ್ಚು ಮಾಡಿದ ಹಣ ಸ್ವಂತ ದುಡಿಮೆಯಿಂದ ಸಂಗ್ರಹಿಸಿದ್ದಲ್ಲ. ಅಷ್ಟಕ್ಕೂ ಸಾರ್ವಜನಿಕ ಹಣ ಇಟ್ಟುಕೊಂಡು ಏನು ಮಾಡುವುದು. ಅವರಿಗೇ ಖರ್ಚು ಮಾಡಬೇಕು. ಅದಕ್ಕಾಗಿ ಕುಮಾರಣ್ಣ ಮಗನ ಮದುವೆ ನೆಪದಲ್ಲಿ ಕಾರ್ಯಕರ್ತರಿಗೆ ಊಟ ಉಡುಗೊರೆ ಕೊಟ್ಟು ಪಾರ್ಟಿ ಬಲಪಸುತ್ತಿದ್ದಾರಂತೆ. ಇದನ್ನ ನೋಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಜೆಡಿಎಸ್ ಜನಸಮೂಹ ಪ್ರತಿನಿಧಿಸುವ ಪಾರ್ಟಿ ಅಲ್ಲ ಎಂದು ಕಾಲ್ಕೀಳುತ್ತಿದ್ದಾರೆ. ಎಷ್ಟು ತಡವಾಗಿ ಜ್ಞಾನೋದಯವಾಯಿತ್ತಲ್ಲ ಥೂತ್ತೇರಿ.

ಮುಖ್ಯಮಂತ್ರಿಯಾಗಿದ್ದಾಗ ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಿದ್ದ ಸಿದ್ದರಾಮಯ್ಯ ಅದ್ದೂರಿ ಮದುವೆ ಹುಡುಕಿಕೊಂಡು ತಿರುಗುತ್ತಿದ್ದಾರಲ್ಲಾ. ರಾಮುಲು ಮಗಳ ಮದುವೆಗೆ ಹೋಗಿ ಮುಖತೋರಿದ ಸಿದ್ದುವನ್ನ ಎದುರುಗೊಂಡ ಜನಾರ್ಧನರೆಡ್ಡಿ ಎಂಬ ಗಣಿಕಳ್ಳ ಮದುವೆ ಉಸ್ತುವಾರಿ ಹೊತ್ತವನಂತೆ ಓಡಿಬಂದು ಕೈಕುಲುಕಿ, ಹಲ್ಲು ಬಿಟ್ಟಿದ್ದನ್ನು ಹಾದರಕ್ಕೆ ಹುಟ್ಟಿದಂತಿರುವ ಕೆಲವು ಟಿವಿಯ ತಿರುಬೋಕಿಗಳು ಇಡೀ ದಿನ ತೋರಿ ಅದರಲ್ಲೇ ಉಂಡುತಿಂದು ತೇಗಿದವಂತಲ್ಲಾ. ಇದೇ ಜನ ಸಿದ್ದು ಅದ್ದೂರಿ ಮದುವೆಗೆ ಕಡಿವಾಣ ಹಾಕಲು ಹೊರಟಾಗ ವಿರೋಧವಾಗಿ ಮಾತನಾಡುವವರನ್ನ ತಂದು ಕೂರಿಸಿಕೊಂಡು ಸರಳ ಮದುವೆ ಸಾಧ್ಯವೇಯಿಲ್ಲ ನಾವು ಹೊಡೆದು ಮಡಗಿರುವ ಕಳ್ಳಧನವನ್ನ ಖರ್ಚು ಮಾಡುವುದೇಗೆ ಎಂಬಂತೆ ಊಳಿಡಲು ಅವಕಾಶಮಡಿಕೊಟ್ಟಿದ್ದರು. ಸದ್ಯದ ಆತಂಕ ಯಾವುದೆಂದರೆ, ಕೋಟ್ಯಾನುಕೋಟಿ ಖರ್ಚು ಮಾಡಿ ಮಾಡುವ ಮದುವೆಗಳು ಮುಂದೆ ಮುರಿದುಬಿದ್ದರೆ ಕತೆಯೇನು ಎಂಬುದು ಅದ್ದೂರಿ ಮದುವೆ ಕಂಡರಾಗದವರ ವ್ಯಾಖ್ಯಾನವಾಗಿದೆಯಂತಲ್ಲಾ ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...