Homeಮುಖಪುಟಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

ಕೊಡಗು ದುರಂತದ ಹೊಣೆ ಮತ್ತು ಪುನರ್ ನಿರ್ಮಾಣದ ಸವಾಲುಗಳು

- Advertisement -
- Advertisement -

ಕೊಡಗಿನ ದುರಂತಕ್ಕೆ ಎಲ್ಲರೂ ಸ್ಪಂದಿಸಿದ್ದಾರೆ. ಕೇರಳದ ದುರಂತದ ಮುಂದುವರಿಕೆಯೋ ಎಂಬಂತೆ ಕೊಡಗಿನ ಭೂಕುಸಿತ ಘಟಿಸಿದೆ. ನೂರಾರು ಜನ ಮನೆ ತೋಟ ಕಳೆದುಕೊಂಡಿದ್ದರೆ, ಸಾವಿರಾರು ಜನ ಪ್ರಕೃತಿಯ ಮುನಿಸಿಗೆ ಹೆದರಿ ಊರು ಬಿಟ್ಟಿದ್ದಾರೆ. ಸಂಪರ್ಕ ರಸ್ತೆಗಳೆನ್ನುವ ರಸ್ತೆಗಳೆಲ್ಲವೂ ಕುಸಿದು ಹೋಗಿವೆ. ಮುಖ್ಯತಃ ಬಯಲು ಸೀಮೆ ಮತ್ತು ಕರಾವಳಿಯನ್ನು ಸಂಪರ್ಕಿಸುವ ಜೀವ ನಾಡಿಯಂತಿರುವ ಮುಖ್ಯ ಹೆದ್ದಾರಿಗಳು ಸಂಪೂರ್ಣ ನಾಶವಾಗಿವೆ. ಒಟ್ಟಾರೆ ನಷ್ಟವನ್ನು ಅಂದಾಜು ಮಾಡಲು ಇನ್ನಷ್ಟು ಸಮಯ ಬೇಕು. ಕೊಡಗಿನ ದುರಂತದ ತುರ್ತು ಪರಿಹಾರಗಳಿಗೆ ಎಲ್ಲರೂ ಸ್ಪಂದಿಸುತ್ತಿರುವುದು ಶ್ಲಾಘನೀಯ. ಅದರಿಂದಾಚೆ, ಈ ವರ್ಷಾಂತ್ಯದ ವರೆಗೆ ಮತ್ತು ದೀರ್ಘಕಾಲೀನ ಪರಿಹಾರಗಳ ಬಗ್ಗೆಯೂ ಯೋಚಿಸಬೇಕಾಗಿದೆ.
ಈ ಭೂಕುಸಿತ ಅರ್ಧಕ್ಕರ್ಧ ಮನುಷ್ಯ ಹಸ್ತಕ್ಷೇಪದಿಂದ ಎಂಬುದು ನಿರ್ವಿವಾದ. ಕೊಡಗಿನ ಸ್ಥಳೀಯ ಸಂಸ್ಕøತಿ ಉಳಿದ ಮಲೆನಾಡಿನ ಹಾಗೆ ಬಯಲು ಸೀಮೆಗಿಂತ ಭಿನ್ನ. ಎಲ್ಲರೂ ತಮ್ಮ ಜಮೀನಿನಲ್ಲಿ ಮನೆ ಕಟ್ಟಿಕೊಳ್ಳುತ್ತಾರೆ. ಅದಕ್ಕೆ ರಸ್ತೆಯನ್ನೂ ಮಾಡಿಕೊಳ್ಳುತ್ತಾರೆ. ಇವೆರಡಕ್ಕೂ ಮನೆ ಹಿಂದಿನ ಗುಡ್ಡವನ್ನು ಬಗೆಯಬೇಕು! ಹಾಗೇ ಸರ್ಕಾರೀ ರಸ್ತೆಗಳು ಅಗಲೀಕರಣಗೊಂಡು ನಿರ್ಮಾಣಗೊಂಡಲ್ಲೆಲ್ಲಾ ರಸ್ತೆಗಳನ್ನು ಭೂಮಿ ನುಂಗಿ ಹಾಕಿದೆ. ಜೆಸಿಬಿಯಂಥಾ ಯಂತ್ರಗಳನ್ನು ಬಳಸಿದ ಕಾರಣ ಭೂಮಿ ಒತ್ತಡಕ್ಕೊಳಗಾಗಿದೆ ಎಂಬ ಅಂಶ ಚರ್ಚಿಸಬೇಕಾದ ಸಂಗತಿ.
ಕಾಫಿ ತೋಟಗಳ ಎಗ್ಗಿಲ್ಲದ ವಿಸ್ತರಣೆ ಇನ್ನೊಂದು ಕಾರಣ. ಈ ವಿಸ್ತರಣೆಯಲ್ಲಿ ಜಮೀನಿನಲ್ಲಿದ್ದ ಕಾಡುಮರಗಳನ್ನು ಬಹುತೇಕ ಟಿಂಬರ್ ಅಂತ ಮಾರಿಯಾಗಿದೆ. ಅಲ್ಲಿ ಉಳಿದಿರುವುದು ಸಿಲ್ವರ್‍ನಂಥಾ ಮೃದು ಮರಗಳು ಮಾತ್ರಾ. ಕೊಡಗಿನ ಮಣ್ಣು ಕೊಂಚ ಮರಳು ಮಿಶ್ರಿತ. ಅದು ಲ್ಯಾಟರೈಟ್ ಕುಲಕ್ಕೆ ಸೇರಿದ್ದಲ್ಲ. ಕೊಡಗಿನ ಅಂಚಿನ ಭಾಗಗಳು ತಾಂತ್ರಿಕವಾಗಿ ಲ್ಯಾಟರೈಟ್ ಆದರೂ ಅದರಲ್ಲಿ ಕ್ಲೇ ಅಂಶ ಯಥೇಚ್ಛ ಇದೆಯಂತೆ. ಈ ಕಾರಣಕ್ಕೇ ಅದು ಬೇಗ ಸಡಿಲವಾಗುತ್ತದೆ. ಮರಗಳು ದೈತ್ಯಾಕಾರವಾಗಿ ಬೆಳೆಯಲೂ ಇದೇ ಕಾರಣ. ಬೇರು ಇಳಿಸುವುದು ಸುಲಭ. ಇವು ಗ್ರಾಮೀಣ ಪರಿಸರದ ಭೂಕುಸಿತದ ಬಗ್ಗೆ.
ಇನ್ನು ಮಡಿಕೇರಿಯಂಥಾ ಪಟ್ಟಣದಲ್ಲಿ ಹೊಸ ಬಡಾವಣೆಗಳ ಮನೆಗಳನ್ನು ಕಟ್ಟುವಾಗ ಜಲ್ಲಿ ಸಿಮೆಂಟ್ ಕಬ್ಬಿಣದ ಮೇಲೆ ವಿಶ್ವಾಸವಿಟ್ಟೇ ಕಟ್ಟಿದ್ದು ಹೊರತು, ಮಣ್ಣಿನ ಗುಣ ಸ್ವಭಾವದ ಬಗ್ಗೆ ಯಾವ ಎಂಜಿನಿಯರೂ ತಲೆ ಕೆಡಿಸಿಕೊಂಡಿಲ್ಲ. ಬೆಂಕಿ ಪೊಟ್ಟಣ ಇಟ್ಟ ಹಾಗೆ ಗುಡ್ಡದ ಇಳಿಜಾರು ಪೂರ್ತಿ ಮನೆಗಳು ಕಟ್ಟಿದ ರೀತಿ ಅಪಾಯವನ್ನು ಮೈಮೇಲೆ ಎಳೆದುಕೊಂಡ ಪರಿಯನ್ನು ಅನಾವರಣಗೊಳಿಸಿದೆ.
ಕುಶಾಲನಗರದಂಥಾ ಊರುಗಳಲ್ಲಿ ನದೀ ಪಾತ್ರದ ಗದ್ದೆಗಳಲ್ಲಿ ಲೇ ಔಟ್ ಮಾಡುವ ಖಯಾಲಿ ಶುರುವಾಗಿದ್ದೇ, ಈ ಬಾರಿ ಅಲ್ಲೆಲ್ಲಾ ನೀರು ನುಗ್ಗಲು ಕಾರಣವಾಗಿದೆ.
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮಟ್ಟದ ರಸ್ತೆಗಳನ್ನು ನಿರ್ಮಿಸಿದ ರೀತಿ ಎಷ್ಟು ಅವೈಜ್ಞಾನಿಕ ಎಂಬುದಕ್ಕೆ ಈ ರಸ್ತೆಗಳೆಲ್ಲಾ ಸರ್ವ ನಾಶವಾಗಿರುವುದೇ ಪುರಾವೆ. ಇವನ್ನು ಪೋಸ್ಟ್‍ಮಾರ್ಟಮ್ ಎಂದು ಭಾವಿಸೋಣ.
ಮುಂದಿನ ಸರಣಿ ಸಮಸ್ಯೆಗಳೇನು ಎಂಬುದನ್ನು ಗಮನಿಸೋಣ. ಈ ಬಾರಿಯ ಮಳೆಯಿಂದಾಗಿ ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿ ನೆಲ ಕಚ್ಚುವ ಸಾಧ್ಯತೆ ನಿಚ್ಚಳವಾಗಿದೆ. ತೋಟಗಳೆಲ್ಲಾ ಅಸ್ತವ್ಯಸ್ತ ಆಗಿರುವ ಕಾರಣ ಇದನ್ನೇ ನಂಬಿರುವ ಸಾವಿರಾರು ಕೂಲಿಕಾರ ಕುಟುಂಬಗಳು ಬೀದಿಗೆ ಬೀಳುತ್ತಾರೆ, ಮುಂದಿನ ಮೂರು ನಾಲ್ಕು ತಿಂಗಳು ಕೂಲಿ ಸೃಷ್ಟಿಯಾಗುವ ಸಾಧ್ಯತೆಗಳೇ ಇಲ್ಲ. ಇದರೊಂದಿಗೆ ಆದಿವಾಸಿಗಳು, ದಲಿತ ಕಾರ್ಮಿಕರ ಗುಡಿಸಲುಗಳೆಲ್ಲಾ ಮೂರಾಬಟ್ಟೆ ಆಗಿರುವ ವರದಿಗಳಿವೆ. ಇವೆಲ್ಲಾ ಫೋಟೋಜೆನಿಕ್ ಅಲ್ಲದ ಕಾರಣ ಟಿವಿ ಚಾನೆಲುಗಳ ಕಣ್ಣಿಗೆ ಬಿದ್ದಿಲ್ಲ.
ಊರಿನ ಸಂಪರ್ಕ ರಸ್ತೆಗಳೆಲ್ಲಾ ನಾಶವಾಗಿರುವ ಕಾರಣ ಹೊರಹೋಗಲೂ ವ್ಯವಸ್ಥೆ ಇಲ್ಲ. ಸ್ಥಳೀಯವಾಗಿ ಸಂಪನ್ಮೂಲಗಳೂ ಇಲ್ಲ. ನೆನಪಿಡಿ, ಮಳೆಗಾಲದ ಅರ್ಧ ಮಾತ್ರಾ ಮುಗಿದಿದೆ. ಸುಮಾರಾಗಿ ಕಾವೇರಿ ಸಂಕ್ರಮಣದವರೆಗೂ ಕೊಡಗಲ್ಲಿ ಮಳೆ ಬರುತ್ತಿರುತ್ತದೆ. ಈ ಒಂದೊಂದು ಮಳೆಯೂ ಹಸಿ ಮಣ್ಣನ್ನು ಇನ್ನಷ್ಟು ತೇವಗೊಳಿಸುವ ಶಕ್ತಿ ಹೊಂದಿದೆ.
ಅರ್ಥಾತ್ ಈ ಕುಟುಂಬಗಳಿಗೆ ಮುಂದಿನ ಕನಿಷ್ಠ ಆರು ತಿಂಗಳು ಸಹಾಯ ಹಸ್ತ ಬೇಕು. ಅಷ್ಟೇ ಅಲ್ಲ, ಮನೆ, ರಸ್ತೆ ನಿರ್ಮಿಸುವುದೆಂದರೆ ಏನಿದ್ದರೂ ಸಂಕ್ರಾಂತಿ ಕಳೆಯಬೇಕು. ಅಂದರೆ ಈ ಬೇಸಿಗೆಯಲ್ಲಿ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ಬೇಕು. ಮಲೆನಾಡಿನಲ್ಲಿ ಮನೆ ಕಟ್ಟಿಸುವುದೆಂದರೆ ಮನೆಯೊಂದಕ್ಕೆ ಕನಿಷ್ಠ ಐದು ಲಕ್ಷ ಬೇಕು. ಇನ್ನು ಭೂಕುಸಿತ ನಿರೋಧಕ ರೀತಿಯಲ್ಲಿ ರಸ್ತೆ ನಿರ್ಮಾಣದ ಬಗ್ಗೆ ಮರುಚಿಂತನೆ ನಡೆಯಬೇಕಾಗಿದೆ. ಇದು ಗ್ರಾಮೀಣ ಪರಿಸರದ ಬಡವರ ಬದುಕು ಕಟ್ಟುವ ಬಗ್ಗೆ. ನಾಶವಾದ ತೋಟಗಳ ಮರು ಸೃಷ್ಟಿಗೆ ರ್ದೀಕಾಲೀನ ಹಣಕಾಸಿನ ನೆರವು ಬೇಕು.
ಇನ್ನೊಂದೆಡೆ ಸಂಪರ್ಕ ರಸ್ತೆಗಳನ್ನು ಸರ್ಕಾರ ಮರು ನಿರ್ಮಿಸಲು ಸಮರೋಪಾದಿಯಲ್ಲಿ ತಯಾರಾಗಬೇಕು. ಮಡಿಕೇರಿ-ಸುಳ್ಯ, ಮಡಿಕೇರಿ-ಸೋಮವಾರಪೇಟೆ-ಸಕಲೇಶಪುರ ; ಬಿಸಿಲೆ- ಸುಬ್ರಮಣ್ಯ ರಸ್ತೆಗಳು ಸಂಪೂರ್ಣ ಪಾತಾಳಕ್ಕಿಳಿದಿವೆ. ಇವನ್ನು ನಿರ್ಮಿಸಲು ವೆಚ್ಚ ಮಾಡಿದ್ದಕ್ಕಿಂತ ಹೆಚ್ಚು ರಿಪೇರಿ ಮಾಡಲು ವೆಚ್ಚ ಮಾಡಬೇಕಿದೆ. ಮತ್ತೆ ಅದೇ ಅವೈಜ್ಞಾನಿಕ ರೀತಿಯಲ್ಲಿ ರಸ್ತೆ ನಿರ್ಮಿಸಿದರೆ ಘೋರ ಭವಿಷ್ಯದ ಅಪಾಯಕ್ಕೆ ಮುನ್ನುಡಿ ಬರೆದ ಹಾಗೆಯೇ ಸೈ. ಅಂದರೆ ಇಡೀ ಪುನರ್ನಿರ್ಮಾಣ ಪರಿಸರ ಸಂವೇದೀ ಸೂಕ್ಷ್ಮಗಳನ್ನು ಒಳಗೊಳ್ಳಬೇಕಾಗಿದೆ.
ಪರಿಹಾರ ಕಾಮಗಾರಿಗಳ ಜವಾಬ್ದಾರಿ ಗಮನಿಸಿದರೆ, ಲೋಕೋಪಯೋಗಿ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳ ಜವಾಬ್ದಾರಿ ಹೆಚ್ಚು. ಅನುದಾನವೂ ಇದೇ ರಿತಿಯಲ್ಲಿ ಹರಿದು ಬರಲಿದೆ. ಈ ಇಲಾಖೆಗಳಿಗೆ ಅನುಕಂಪ ಬಿಡಿ, ದಕ್ಷತೆ ಇರುವ ಪುರಾವೆಯೂ ಇಲ್ಲ. ಇದರೊಂದಿಗೇ ಕೊಕ್ಕೆ ಹಾಕುವ ಮೂಲಕ ಕಾಮಗಾರಿಗಳನ್ನು ತ್ರಿಶಂಕು ಸ್ಥಿತಿಯಲ್ಲಿಡುವ ಸಾಮಥ್ರ್ಯ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಗಿವೆ. ಇವೆರಡೂ ಇಲಾಖೆಗಳ ಆದಾಯ ಮೂಲವೇ ಇದು. ಈ ಇಲಾಖೆಗಳಿಗೆ ಇಡೀ ಕೊಡಗು ಜಿಲ್ಲೆಯೇ ಒಂದು ಊಟದ ತಟ್ಟೆಯ ಹಾಗೆ ಕಂಡರೆ ಅಚ್ಚರಿ ಇಲ್ಲ!
ರೈತರ ಸಾಲಮನ್ನಾ ಮಾಡಿ ಈಗಾಗಲೇ ನಿರ್ಧನ ಯೋಗದಲ್ಲಿರುವ ರಾಜ್ಯ ಸರ್ಕಾರ ಪರಿಹಾರ ಕಾಮಗಾರಿಗಳಿಗೆ ಕನಿಷ್ಠ 2-3 ಸಾವಿರ ಕೋಟಿ ವಿನಿಯೋಗಿಸಬೇಕಿದೆ. ಕೇಂದ್ರದ ಅನುದಾನ ದೊಡ್ಡ ಮಟ್ಟದಲ್ಲಿ ಬಂದರೆ ಪರಿಸ್ಥಿತಿ ಸುಧಾರಿಸೀತು. ಆದರೆ ಪುನರ್ನಿರ್ಮಾಣ ಏನಿದ್ದರೂ ಜನವರಿಯಿಂದಾಚೆ ಎಂಬ ಸತ್ಯದೊಂದಿಗೆ ಲೋಕಸಭಾ ಚುನಾವಣೆಯ ಭರಾಟೆ ನೆನಪಿಸಿಕೊಂಡರೆ ಪರಿಹಾರ ಎಷ್ಟರ ಮಟ್ಟಿಗೆ ಸಕಾಲದಲ್ಲಿ ಪೂರೈಸೀತು ಎಂಬ ಚಿಂತೆ ನಮ್ಮನ್ನು ಕಾಡಬೇಕು.
ಆದ್ದರಿಂದಲೇ ನಾವು ಈ ಆಡಳಿತ ಯಂತ್ರದ ನಡೆಗಳ ಮೇಲೆ ಕಣ್ಣಿಡಲು ಸನ್ನದ್ಧರಾಗಬೇಕಿದೆ.

 

– ಕೆ.ಪಿ.ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...