Homeಮುಖಪುಟನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

ನಾವು ನಂಬಿಬಿಡುವ ಈ ವಾರದ ಪ್ರಮುಖ ಐದು ಸುಳ್ಳು ಸುದ್ದಿಗಳು ಮತ್ತು ವಾಸ್ತವಾಂಶಗಳು

- Advertisement -
- Advertisement -

ಸುಳ್ಳು 1: ಶಾಹೀನ್ ಬಾಗ್ ಪ್ರತಿಭಟನಾಕಾರರಲ್ಲೊಬ್ಬರಿಗೆ ಕೊರೊನಾ ಸೋಂಕು ಹರಡಿದೆ

ಇದೀಗ ಬಂದ ಸುದ್ದಿ, ಶಾಹೀನ್ ಬಾಗ್ ಪ್ರತಿಭಟನೆಯಲ್ಲಿದ್ದ 43 ವರ್ಷದ ನಜ್ಮಾ ಬೇಗಂ ಎಂಬ ಮಹಿಳೆಗೆ ಕೊರೊನಾ ವೈರಸ್ ಹರಡಿದೆ. ಆದರೆ ಆಕೆ ಚಿಕಿತ್ಸೆಗೆ ನಿರಾಕರಿಸಿದ್ದಾಳೆ ಎಂಬ ಸುದ್ದಿಯನ್ನು ಟ್ವಿಟ್ಟರ್ ಮತ್ತು ವಾಟ್ಸಾಪ್‍ನಲ್ಲಿ ಹರಡಲಾಗಿದೆ.

ವಿಭೋರ್ ಆನಂದ್ ಎಂಬುವವರು ಈ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ. 1600 ಜನ ಲೈಕ್ ಮಾಡಿದರೆ 750 ಜನ ಷೇರ್ ಮಾಡಿದ್ದಾರೆ.

ಸತ್ಯ: ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ ಮೊದಲನೆಯದಾಗಿ ಶಾಹೀನ್ ಬಾಗ್ ಸಂಘಟಕರು ಇದು ಸುಳ್ಳು ಸುದ್ದಿ ಎಂಬುದನ್ನು ಖಚಿತಪಡಿಸಿದ್ದಾರೆ. ಎರಡನೆಯದಾಗಿ ಈ ಕುರಿತು ಯಾವುದೇ ಪತ್ರಿಕೆಯಲ್ಲಿ ವರದಿಯಾಗಿಲ್ಲ. ಮೂರನೆಯದಾಗಿ ಅಲ್ಲಿನ ಸಫ್ದರ್‍ಜಂಗ್ ಮತ್ತು ಡಾ.ರಾಮ್ ಮನೋಹರ್ ಲೋಹಿಯ ಆಸ್ಪತ್ರೆಯ ವೈದ್ಯರು ಇಲ್ಲಿ ಯಾವುದೇ ಕೊರೊನಾ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು 2: ಅಲ್‍ಜಜೀರಾ ವರದಿಗಾರ ಹಿಂದೂಗಳನ್ನು ಕೊಚ್ಚಿಹಾಕಬೇಕು ಎಂದು ಹೇಳಿದ್ದಾನೆ.

ದಿಲ್ವಾರ್ ಶೇಖ್ ಎನ್ನುವ ವ್ಯಕ್ತಿಯ ಟ್ವಿಟ್ಟರ್ ಖಾತೆಯಿಂದ ಹಿಂದೂಗಳನ್ನು ಕೊಚ್ಚಿಹಾಕುವ ಕೆಲಸ ನಡೆಯುತ್ತಿದೆ. ಆಗ ಮಾತ್ರ ಅವರು ಬುದ್ಧಿ ಕಲಿಯುತ್ತಾರೆ ಎಂದು ಸರಣಿ ಟ್ವೀಟ್‍ಗಳನ್ನು ಮಾಡಲಾಗಿದೆ. ಅಲ್ಲದೇ ಹಿಂದೂ ಧರ್ಮದ ವಿರುದ್ಧ ಪ್ರಚೋದನಾಕಾರಿಯಾಗಿ ಹಲವು ಟ್ವೀಟ್‍ಗಳನ್ನು ಮಾಡಲಾಗಿದೆ.

ಆ ಖಾತೆಯ ಬಯೋನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ವರದಿಗಾರ ಎಂದು ಬರೆಯಲಾಗಿದೆ. ಹಾಗಾಗಿ ಬಲಪಂಥೀಯ ಸಂಘಟನೆಗಳು ಮತ್ತು ವ್ಯಕ್ತಿಗಳು ಟ್ವಿಟ್ಟರ್‍ನಲ್ಲಿ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳ ಮೇಲೆ ಮುಗಿಬೀಳಲಾಗಿದೆ.

ಸತ್ಯ: ಆದರೆ ದಿಲ್ವಾರ್ ಶೇಖ್ ಎನ್ನುವ ಖಾತೆಯೇ ನಕಲಿ ಖಾತೆಯಾಗಿದೆ. ಅಲ್ಲದೇ ಅಲ್‍ಜಜೀರಾ ಮತ್ತು ದಿ ವೈರ್ ಮಾಧ್ಯಮಗಳಲ್ಲಿ ಅಂತಹ ಯಾವುದೇ ವ್ಯಕ್ತಿ ನಮ್ಮಲ್ಲಿ ಕೆಲಸದಲ್ಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸುಳ್ಳು 3: ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್..

ದಿವಾಳಿಯಾಗಿರುವ ಯೆಸ್ ಬ್ಯಾಂಕ್ ಸುತ್ತಾ ನೂರಾರು ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿ ಪ್ರಿಯಾಂಕ ಗಾಂಧಿಗೆ ಯೆಸ್ ಬ್ಯಾಂಕ್‍ನ ರಾಣಾ ಕಪೂರ್ ಎರಡು ಕೋಟಿ ಕೊಟ್ಟು ಪಡೆದಿದ್ದು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ.

ಸತ್ಯ: ರಾಜೀವ್ ಗಾಂಧಿಯವರ ಚಿತ್ರವಿರುವ ಪೇಂಟಿಂಗ್ ಅನ್ನು ಪ್ರಿಯಾಂಕ ಗಾಂಧಿ ರಾಣಾ ಕಪೂರ್‌ಗೆ ಮಾರಾಟ ಮಾಡಿದ್ದರು. ಕಿಡಿಗೇಡಿಗಳು ಕತ್ತೆ ಫೋಟೊ ಇರುವ ಪೇಂಟಿಂಗ್ ಎಂದು ಸುಳ್ಳು ಹಬ್ಬಿಸಿದ್ದಾರೆ.

ನಿಜವಾದ ಫೋಟೊ ಇಲ್ಲಿದೆ ನೋಡಿ

ಸುಳ್ಳು 4: ಯೆಸ್ ಬ್ಯಾಂಕ್ ಮುಳುಗಲು ಮನಮೋಹನ್ ಸಿಂಗ್, ಚಿದಂಬರಂ ಕಾರಣ..

ಯೆಸ್ ಬ್ಯಾಂಕ್ 2004ರಲ್ಲಿ ಸ್ಥಾಪನೆಯಾಯಿತು. ಆಗ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರು. ಯುಪಿಎ ಎರಡನೇ ಅವಧಿಗೆ ಪಿ ಚಿದಂಬರಂ ಹಣಕಾಸು ಸಚಿವರಾಗಿದ್ದರು. ಪಿ ಚಿದಂಬರಂ ಯೆಸ್ ಬ್ಯಾಂಕ್‍ನ ಸ್ಥಾಪಕ ರಾಣಾ ಕಪೂರ್ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾಗಿ ಇಂದು ಯೆಸ್ ಬ್ಯಾಂಕ್ ಮುಳುಗಿಹೋಗಲು ಇವರಿಬ್ಬರೂ ಕಾರಣ ಎಂದು ಫೇಕ್ ಸುದ್ದಿ ಹರಡುವ ಪೋಸ್ಟ್‍ಕಾರ್ಡ್ ಕನ್ನಡ ಹೇಳಿದೆ.

ಸತ್ಯ: ಮೋದಿ ಅಧಿಕಾರಕ್ಕೆ ಬರುವವರೆಗೂ ಅಂದರೆ 2014ರವರೆಗೆ ಯೆಸ್ ಬ್ಯಾಂಕ್ ಸುಸ್ಥಿತಿಯಲ್ಲಿತ್ತು. ಆದರೆ ಮೋದಿ ಬಂದನಂತರ ಅವರ ಸ್ನೇಹಿತರಾದ ಮುಖೇಶ್ ಅಂಬಾನಿ, ಅದಾನಿ ಮತ್ತು ವೇದಾಂತ ಕಂಪನಿಗೆ ಇದೇ ಯೆಸ್ ಬ್ಯಾಂಕ್ ಸಾವಿರಾರು ಕೋಟಿ ರೂಗಳನ್ನು ಸಾಲ ನೀಡಿದೆ. 2014: 55,000 ಕೋಟಿ ಸಾಲ ನೀಡಿದ್ದ ಬ್ಯಾಂಕ್ 2019ರಷ್ಟರಲ್ಲಿ 2,41,000 ಕೋಟಿಗೆ ತಲುಪಿದೆ. ಆ ರೀತಿ ಸಾಲ ಪಡೆದವರೆಲ್ಲಾ ಬೇಕಂತಲೇ ಸಾಲವನ್ನು ವಾಪಸ್ ಮಾಡಿಲ್ಲ. ಸಾಲ ಕಟ್ಟದವರು ಮೋದಿಯ ಪರಮಾಪ್ತರು ಎಂಬುದನ್ನು ಮರೆಯಬಾರದು. ಹಾಗಾಗಿ ಯೆಸ್ ಬ್ಯಾಂಕ್ ದಿವಾಳಿಯಾಗಿದೆ.

ಸುಳ್ಳು 5: ಉತ್ತರ ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ಸದಾಫ್ ಜಫರ್ ಮನೆ ಉಳಿಸಿಕೊಳ್ಳಲು ಕಷ್ಟಪಡುತ್ತಿದ್ದಾರೆ.

ಪೋಸ್ಟ್ ಕಾರ್ಡ್ ಕನ್ನಡ ಈ ರೀತಿಯ ಸುಳ್ಳನ್ನು ಹರಡಿದೆ. ಯೋಗಿ ಸರ್ಕಾರ ಸಿಎಎ ವಿರುದ್ಧದ ರ್ಯಾಲಿಯಲ್ಲಿ ಗಲಭೆಯೆಬ್ಬಿಸಿದವರು ಎಂದು ಕೆಲವರನ್ನು ಟಾರ್ಗೆಟ್ ಮಾಡಿ ಬಹಿರಂಗ ಸ್ಥಳಗಳಲ್ಲಿ ಅವರ ಫೋಟೊ ಮತ್ತು ವಿಳಾಸವಿರುವ ಹೋರ್ಡಿಂಗ್‍ಗಳನ್ನು ಹಾಕಿತ್ತು.

ಸತ್ಯ: ಇದನ್ನು ಗಮನಿಸಿದ ಅಲಹಾಬಾದ್ ಹೈಕೋರ್ಟ್ ಭಾನುವಾರವೇ ವಿಶೇಷ ವಿಚಾರಣೆ ನಡೆಸಿ ಯೋಗಿ ಸರ್ಕಾರಕ್ಕೆ ತಪರಾಕಿ ಹಾಕಿದೆ. ಕೂಡಲೇ ಹೋರ್ಡಿಂಗ್‍ಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದೆ. ಯೋಗಿ ಸರ್ಕಾರ ಹೋರ್ಡಿಂಗ್‍ಗಳನ್ನು ತೆಗೆದುಹಾಕಿ ಮುಖಭಂಗ ಅನುಭವಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...