Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...