Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...