Homeಮುಖಪುಟಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ...

ಮತ್ತೆ ಹೋರಾಟಕ್ಕೆ ಧುಮುಕಿದ 103 ವರ್ಷದ ಸ್ವಾತಂತ್ರ್ಯ ಸೇನಾನಿ. ಜನತೆಯ ಸಮಸ್ಯೆಗಳ ಪರಿಹಾರಕ್ಕೆ ದೊರೆಸ್ವಾಮಿ ನೇತೃತ್ವದಲ್ಲಿ ಮೂರು ದಿನಗಳ ಧರಣಿ.

ಮಾರ್ಚ್‌ 14, 15, 16ರಂದು ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ.

- Advertisement -
- Advertisement -

ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿಯವರು ಜನತೆಯ ನೈಜ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಆದ್ಯತೆಯಿಂದ ಗಮನ ಕೊಡಬೇಕೆಂದು ಆಗ್ರಹಿಸಿ ಮಾರ್ಚ್‌ 14, 15, 16ರಂದು ’ಪ್ರಜಾಧಿಕಾರ ಹೋರಾಟ ಸಮಿತಿ’ಯ ನೇತೃತ್ವದಲ್ಲಿ ಮೂರು ದಿನಗಳ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ.

ದೇಶದಲ್ಲಿ ಜನಸಮಾನ್ಯರ ಸಮಸ್ಯೆಗಳು ‌ಮಿತಿ ಮೀರಿವೆ. ನಿರುದ್ಯೋಗ ತಾಂಡವವಾಡುತ್ತಿದೆ, ಉದ್ಯೋಗ ಕಲ್ಪಿಸುವ ಕೈಗಾರಿಕೆಗಳು, ಉದ್ಯಮ ಸಂಸ್ಥೆಗಳೆಲ್ಲ ಸರಕಾರದ ಕಾರ್ಪೊರೇಟ್-ಪರ ಆರ್ಥಿಕ ನೀತಿಗಳಿಂದಾಗಿ ಬಾಗಿಲು ಮುಚ್ಚುತ್ತಿವೆ. ರೈತರ, ವಿದ್ಯಾರ್ಥಿಗಳ, ಭೂಮಿ-ವಸತಿ ರಹಿತರ, ಸಣ್ಣಪುಟ್ಟ ವ್ಯಾಪಾರ-ವ್ಯವಹಾರಸ್ಥರ, ದಲಿತರ-ಹಿಂದುಳಿದವರ-ಮಹಿಳೆಯರ ಸಮಸ್ಯೆಗಳಿಗೆ ಸರಕಾರ ಯಾವುದೇ ಪರಿಹಾರೋಪಾಯ ರೂಪಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ದುರ್ಬಲರ ಮೇಲೆ, ಅಲ್ಪಸಂಖ್ಯಾತರ ಮೇಲೆ ಜಾತಿ-ಧರ್ಮಗಳ ನೆಲೆಯಲ್ಲಿ ಗುಂಪು ಹಿಂಸೆ, ಬಡಿದು ಕೊಲ್ಲುವಂತಹ ಕ್ರೌರ್ಯದ ಕೃತ್ಯಗಳು ಹಾದಿಬೀದಿಗಳಲ್ಲಿ ಜರುಗುತ್ತಿವೆ. ರಕ್ಷಣೆ ಕೊಡಬೇಕಾದ ಪೊಲೀಸರೇ ದೊಂಬಿಕೋರ ಗ್ಯಾಂಗುಗಳ ಜೊತೆ ಸೇರಿ ಅಶಕ್ತರ ಮೇಲೆ ಹಿಂಸೆ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮೊದಲು ಕೊಟ್ಟಿದ್ದ ಯಾವ ಆಶ್ವಾಸನೆಯನ್ನೂ ಕೇಂದ್ರ ಸರ್ಕಾರ ಈಡೇರಿಸಿಲ್ಲ. ಅದರ ಬದಲು ಮತ್ತಷ್ಟು ಸಮಸ್ಯೆಗಳನ್ನೇ ಹುಟ್ಟುಹಾಕಿದೆ. ತನ್ನ ವಿಫಲತೆಗಳನ್ನು ಮರೆಮಾಚಲು, ಜನರ ಬದುಕಿಗೆ ಸಂಬಂಧವಿಲ್ಲದ ಯಾವಯಾವುದೋ ಕ್ರಮಗಳನ್ನು ಜಾರಿಗೆ ತರುತ್ತ ದೇಶವನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತ, ಕಳೆದ ಕೆಲವು ವರ್ಷಗಳಿಂದ ನಮ್ಮ ರಾಜ್ಯಕ್ಕೆ ನ್ಯಾಯವಾಗಿ ಸಲ್ಲಬೇಕಾದ ಸಂಪನ್ಮೂಲದ ಪಾಲು, ಪ್ರಕೃತಿ ವಿಕೋಪ ಪರಿಹಾರದ ನೆರವು ಮುಂತಾದ ಹಣಕಾಸಿನ ಬಾಬತ್ತನ್ನೆಲ್ಲ ವಿಪರೀತ ಕಡಿತಗೊಳಿಸಿ, ಅತಿಯಾಗಿ ತಾರತಮ್ಯ ಮಾಡುತ್ತಿದೆ. ಇದರಿಂದಾಗಿ ಇನ್ನು ಎರಡು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮ ಪೂರ್ತಿ ಸ್ಥಗಿತಗೊಳ್ಳಲಿದೆಯೆಂದು ವರದಿಗಳು ಹೇಳಿವೆ. ಕೇಂದ್ರ ಸರಕಾರದ ನಿರಂಕುಶ ದಬ್ಬಾಳಿಕೆ, ದುರಾಡಳಿತಗಳನ್ನು ಪ್ರಶ್ನಿಸುವವರನ್ನು, ಪ್ರತಿಭಟಿಸುವವರನ್ನು ದೇಶದ್ರೋಹಿಗಳೆಂದು ಘೋಷಿಸಿ ಅವರ ವಿರುದ್ಧ ರಾಜದ್ರೋಹದ ಆಪಾದನೆ ಹೊರಿಸಿ ದೀರ್ಘಕಾಲ ಜೈಲಿಗೆ ತಳ್ಳಲಾಗುತ್ತಿದೆ ಎಂದು ದೊರೆಸ್ವಾಮಿಯವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಗಳನ್ನೂ ಒಳಗೊಂಡಂತೆ ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನೂ, ಪ್ರಭಾವಿ ಮಾಧ್ಯಮಗಳನ್ನೂ ಸರಕಾರದ ಆಣತಿಗೆ ತಕ್ಕಂತೆ ಕುಣಿಯುವ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಬಗ್ಗದವರಿಗೆ ಸತತ ಕಿರುಕುಳ ನೀಡಲಾಗುತ್ತಿದೆ. ಇದೆಲ್ಲಕ್ಕೆ ಕಳಸವಿಟ್ಟಂತೆ ಇದೀಗ ದೇಶವನ್ನು ಧಾರ್ಮಿಕ ಆಧಾರದಲ್ಲಿ ಛಿದ್ರಛಿದ್ರಗೊಳಿಸುವ, ದಲಿತರು-ಆದಿವಾಸಿಗಳು-ಅಲೆಮಾರಿಗಳು ಮತ್ತಿತರ ಅಂಚಿಗೆ ಒತ್ತಲ್ಪಟ್ಟಿರುವ ಸಮುದಾಯಗಳನ್ನು ದೇಶಭ್ರಷ್ಟಗೊಳಿಸುವ ‘ಪೌರತ್ವ ತಿದ್ದುಪಡಿ ಕಾಯ್ದೆ’ ತಂದು, ದೇಶದಲ್ಲಿ ಅಶಾಂತಿಯ ಬೆಂಕಿ ಹಚ್ಚಲಾಗಿದೆ. ದೇಶ ದಿನದಿನಕ್ಕೆ ಅಧಃಪತನದತ್ತ ಜಾರಿಹೋಗುತ್ತಿದೆ. ಹಾಗಾಗಿ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರಕಾರದ ಈ ಎಲ್ಲ ದುರಾಡಳಿತ, ಸರ್ವಾಧಿಕಾರ, ದಿಕ್ಕುತಪ್ಪಿಸುವ ತಂತ್ರಗಳನ್ನು ವಿರೋಧಿಸುತ್ತ, ಜನತೆಯ ಬದುಕಿನ ನೈಜ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಕ್ರಮಗಳನ್ನು ಕೈಗೊಳ್ಳುವುದಲ್ಲದೆ, ಸುಸ್ಥಿರ ಆರ್ಥಿಕ ಕ್ರಮಗಳನ್ನು ಅನುಷ್ಠಾನಕ್ಕೆ ತಂದು ದೇಶವನ್ನು ಪುನಃ ಅಭಿವೃದ್ಧಿ ಹಾದಿಯಲ್ಲಿ ನಡೆಸುವಂತೆ ಸರಕಾರಕ್ಕೆ ಗಟ್ಟಿ ದನಿಯಲ್ಲಿ ಎಚ್ಚರಿಕೆ ನೀಡುವುದಕ್ಕಾಗಿ, ‘ಪ್ರಜಾಧಿಕಾರ ಹೋರಾಟ ಸಮಿತಿ’ ವೇದಿಕೆಯು  ಮಾರ್ಚ್‌ 14, 15, 16ರ ಶನಿವಾರ, ಭಾನುವಾರ ಮತ್ತು ಸೋಮವಾರ ಧರಣಿ ಸತ್ಯಾಗ್ರಹ ಶಾಂತಿಯುತ ಪ್ರತಿಭಟನಾ ಸತ್ಯಾಗ್ರಹವನ್ನು ನಡೆಸಲಿದ್ದೇವೆ ಎಂದಿದ್ದಾರೆ.

ಬೆಂಗಳೂರಿನ ಮೌರ್ಯ ಹೋಟೆಲ್ ವೃತ್ತದ, ಗಾಂಧೀ ಪ್ರತಿಮೆ ಬಳಿ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಧರಣಿ ನಡೆಯಲಿದೆ. ಪ್ರಜ್ಞಾವಂತರು ಪಾಲ್ಗೊಳ್ಳಬೇಕೆಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...