Homeಆರೋಗ್ಯಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

- Advertisement -
- Advertisement -

ಕೊರೋನಾ ವೈರಸ್‌ ಹರಡುತ್ತಿರುವ ಸಮಯದಲ್ಲಿ ಅದಕ್ಕಿಂತಲೂ ವೇಗವಾಗಿ ಅದರ ಕುರಿತ ಸುಳ್ಳು ಸುದ್ದಿಯಗಳು, ತಪ್ಪು ಅಭಿಪ್ರಾಯಗಳು ಹರಡುತ್ತಿವೆ. ಈ ಕುರಿತು ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಒಂದಷ್ಟು ಸ್ಪಷ್ಟನೆಗಳನ್ನು ನೀಡಿದೆ. ಅವುಗಳೆಂದರೆ…

  • ಬೆಳ್ಳುಳ್ಳಿಯು ಆರೋಗ್ಯಕರ ಆಹಾರ; ಅದರಲ್ಲಿ ಹಲವು ಸೂಕ್ಷ್ಮಾಣುಗಳ ನಿರೋಧಕ ಶಕ್ತಿ ಇರಬಹುದು; ಆದರೆ ಅದನ್ನು ತಿನ್ನುವುದರಿಂದ ಹೊಸ ಕೊರೋನಾವೈರಸ್ ವಿರುದ್ಧ ರಕ್ಷಣೆ ಸಿಗುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ.
  • ಮೂಗನ್ನು ಪದೇ ಪದೇ ಸಲೈನ್‌ನಿಂದ (ಉಪ್ಪು ನೀರು, ಕ್ಷಾರ) ತೊಳೆಯುವುದರಿಂದ ಉಸಿರಾಟದ ಸೋಂಕು ತಡೆದ ಬಗ್ಗೆ ನಿದರ್ಶನಗಳಿಲ್ಲ.
  • ಚೀನಾದ ವಸ್ತುಗಳಿಂದ ಕೊರೋನಾವೈರಸ್ ಬರುತ್ತದೆ ಎಂದೇನಿಲ್ಲ; ಹಾಗಿದ್ದೂ ಚೀನಾದ ವಸ್ತುಗಳನ್ನು ಪಡೆಯುವಾಗ ಅದರ ಪೊಟ್ಟಣವನ್ನು ಶುಚಿಗೊಳಿಸಿ ಮತ್ತು ಅದನ್ನು ಮುಟ್ಟಿದ ಮೇಲೆ ಕೈಗಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳಿರಿ.
  • ಹೊಸ ಕೊರೋನಾವೈರಸ್ ಉಷ್ಣ ಮತ್ತು ಶೀತ ಪ್ರದೇಶಗಳೆಂದು ಪರಿಗಣಿಸದೆ ಎಲ್ಲಾ ಪ್ರದೇಶಗಳಲ್ಲೂ ವರ್ಗಾವಣೆ ಆಗುತ್ತದೆ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಇದಕ್ಕಿರುವ ಅತ್ಯುತ್ತಮ ತಡೆ.
  • ಶೀತಗಾಳಿ ಮತ್ತು ಮಂಜಿನಿಂದ ಕೊರೋನಾವೈರಸ್ ಸಾಯುವುದಿಲ್ಲ.
  • ಬಿಸಿನೀರಿನ ಸ್ನಾನ ಮಾಡುವುದರಿಂದ ಹೊಸ ಕೊರೋನಾವೈರಸ್ ಕಾಯಿಲೆಯನ್ನು ತಡೆಯಲು ಆಗುವುದಿಲ್ಲ.
  • ಸೊಳ್ಳೆ ಕಡಿತದಿಂದ ಹೊಸ ಕೊರೋನಾವೈರಸ್ ಸೋಂಕು ಬರುವುದಿಲ್ಲ. ಇದು ಮುಖ್ಯತಃ ಶ್ವಾಸನಾಳದ ವೈರಸ್; ಸೋಂಕಿನ ವ್ಯಕ್ತಿ ಸೀನಿದಾಗ, ಕೆಮ್ಮಿದಾಗ ಹೊರಬೀಳುವ ಎಂಜಲಿನ ಕಣಗಳಿಂದ ಹರಡುತ್ತದೆ.
  • ಸಾಕುಪ್ರಾಣಿಗಳಿಗೆ ಕೊರೋನಾವೈರಸ್ ಬರುತ್ತದೆ ಎಂಬುದಕ್ಕೆ ಪುರಾವೆಗಳಿಲ್ಲ; ಆದಾಗ್ಯೂ ಅಂತಹ ಸಾಕುಪ್ರಾಣಿಗಳನ್ನು ಮುಟ್ಟಿದಾಗ ಚೆನ್ನಾಗಿ ಕೈ ತೊಳೆದುಕೊಳ್ಳಿ.
  • ಹೊಸ ಕೊರೋನಾವೈರಸ್ ಯಾವುದೇ ವಯಸ್ಸಿನ ವ್ಯಕ್ತಿಗೂ ಬರಬಹುದು.
  • ಆಂಟಿ-ಬಯಾಟಿಕ್‌ಗಳು ಕೇವಲ ಬ್ಯಾಕ್ಟೀರಿಯಾ ತಡೆಗೆ ನೆರವಾಗುತ್ತವೆಯೇ ಹೊರತು ಕೊರೋನಾವೈರಸ್ ವಿರುದ್ಧ ಬಳಕೆಗೆ ಬರುವುದಿಲ್ಲ.
  • ನ್ಯೂಮೋನಿಯ ಲಸಿಕೆಯು ಕೊರೋನಾವೈರಸ್ ಗೆ ಚಿಕಿತ್ಸೆ ಅಲ್ಲ. ಆದಾಗ್ಯೂ ನಿಮ್ಮ ಆರೋಗ್ಯಕ್ಕಾಗಿ ಉಸಿರಾಟ ಸಂಬಂಧಿ ಲಸಿಕೆ ಹಾಕಿಸಿಕೊಳ್ಳಬಹುದು.
  • ಥರ್ಮಲ್ ಸ್ಕಾನರ್‌ನಿಂದ ಜ್ವರ ಬಂದವರನ್ನು ಗುರುತಿಸಬಹುದೇ ಹೊರತು 10 ದಿನಗಳ ಒಳಗಿರುವ ಸೋಂಕು ಪೀಡಿತರನ್ನಲ್ಲ; ಅವರಲ್ಲಿ ಇನ್ನೂ ಜ್ವರ ಬರದೇ ಇರಲೂಬಹುದು. (ಸೋಂಕಿನಿಂದ ಜ್ವರ ಬರಲು ಎರಡರಿಂದ ಹತ್ತು ದಿನಗಳು ಬೇಕು).
  • ಹ್ಯಾಂಡ್ ಡ್ರೈಯರ್‌ಗಳಿಂದ ಈ ವೈರಸನ್ನು ಸಾಯಿಸಲು ಸಾಧ್ಯವಿಲ್ಲ. ಆಗಾಗ್ಗೆ ಕೈ ತೊಳೆದುಕೊಳ್ಳುವುದೇ ಸೂಕ್ತ ವಿಧಾನ.
  • ಅಲ್ಟ್ರಾವಯಲೆಟ್ ದೀಪದಿಂದ ಹೊಸ ಕೊರೋನಾವೈರಸ್‌ ಅನ್ನು ಸಾಯಿಸಲು ಬರುವುದಿಲ್ಲ. ಅದನ್ನು ಕೈ ಶುದ್ಧೀಕರಣಕ್ಕೆ ಬಳಸಬಾರದು.
  • ಹೊಸ ಕೊರೋನಾವೈರಸ್ಗೆ ಸದ್ಯಕ್ಕಂತೂ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ಆದರೆ ಸೋಂಕು ಪೀಡಿತರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಸೂಕ್ತ ಬೆಂಬಲ ನೀಡಬೇಕು.

ದೇಹದ ಮೇಲೆಲ್ಲ ಆಲ್ಕೋಹಾಲ್ ಅಥವಾ ಕ್ಲೋರಿನ್ ಸಿಂಪಡಣೆ ಮಾಡಿದರೆ ದೇಹದ ಒಳಗೆ ಅದಾಗಲೇ ಹೊಕ್ಕಿರಬಹುದಾದ ಹೊಸ ಕೊರೋನಾವೈರಸ್ ಸಾಯುವುದಿಲ್ಲ.

ಮೂಲ: ವಿಶ್ವ ಆರೋಗ್ಯ ಸಂಸ್ಥೆ ವೆಬ್‌ಸೈಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...