Homeಅಂಕಣಗಳುಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

- Advertisement -
- Advertisement -
ಎಲೆಮರೆ-23

ಕಾಲಕಾಲಕ್ಕೆ ಜಾತಿವಾದಿ, ಗಂಡಾಳ್ವಿಕೆ ಸಮಾಜವು ಅಸ್ಪೃಶ್ಯತೆಯ ಪಟ್ಟಿಯಲ್ಲಿ ಹೊಸ ಸಮುದಾಯಗಳನ್ನು ಸೇರಿಸುತ್ತಾ ಮುಟ್ಟದವರೆಂದು ಪಟ್ಟ ಕಟ್ಟಿ ದೂರ ಇಡುವ ಪ್ರಕ್ರಿಯೆ ಸದಾ ಜಾರಿಯಲ್ಲಿರುತ್ತದೆ. ಹೀಗೆ ರೂಪುಗೊಂಡ ನವ ಅಸ್ಪೃಶ್ಯರೆಂದರೆ ಟ್ರಾನ್ಸ್ ಜೆಂಡರ್ ಅಥವಾ ತೃತೀಯ ಲಿಂಗಿಗಳು. ಇವರ ಬಗೆಗೆ ಅನಗತ್ಯ ಭಯ ಹುಟ್ಟಿಸಿ ಅವರನ್ನು ನೋಡುವ ನೋಟಕ್ರಮದಲ್ಲೇ ಕೀಳುತನವನ್ನು ಬೆರೆಸಿ ಹತ್ತಿರ ಬಂದರೆ ಚೇಳು ಕಡಿದಂತೆ ದೂರ ಸರಿಸುವ ಪ್ರವೃತ್ತಿ ಅನೇಕರಲ್ಲಿದೆ. ಹೀಗಾಗಿ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ದೈಹಿಕವಾಗಿ ಕಾಣಿಸಿಕೊಳ್ಳುವ ಕೆಲಸಗಳಿಗಿಂತ ದೈಹಿಕವಾಗಿ ಕಾಣಿಸಿಕೊಳ್ಳದ ಕೆಲಸಗಳು ಸಿಗತೊಡಗಿದವು. ಇದರಲ್ಲಿ ರೇಡಿಯೋ ಜಾಕಿ ವೃತ್ತಿಯೂ ಒಂದು. ಇಲ್ಲಿ ಮಾತನಾಡುತ್ತಿರುವವರು ಯಾರು ಎಂದು ತಕ್ಷಣಕ್ಕೆ ಗುರುತಾಗದು. ಹಾಗಾಗಿಯೇ ಧ್ವನಿಯನ್ನು ಕೇಳಿಸಿಕೊಳ್ಳುವುದಕ್ಕೆ ದೇಹದ ಸೌಂದರ್ಯವಾಗಲಿ, ಅಂಗವೈಕಲ್ಯವಾಗಲಿ, ಜಾತಿಧರ್ಮ ಲಿಂಗದ ತರತಮಗಳಾಗಲಿ ಅಡ್ಡಿ ಬರಲಾರವು. ಈ ಕಾರಣಕ್ಕೆ ಇಂದು ಟ್ರಾನ್ಸ್ ಜೆಂಡರ್ ಸಮುದಾಯ ರೇಡಿಯೋ ಜಾಕಿ ವೃತ್ತಿಯತ್ತ ಆಕರ್ಷಿತರಾಗುತ್ತಿದ್ದಾರೆ. ಇಂತಹದ್ದೊಂದು ಪ್ರಯೋಗಕ್ಕೆ ಮೊದಲ ಹೆಜ್ಜೆ ಇಟ್ಟದ್ದು ಬೆಂಗಳೂರಿನ ಗಿರಿನಗರದ ನಿವಾಸಿ ರೇಡಿಯೋ ಜಾಕಿಯಾದ ಟ್ರಾನ್ಸ್ ಮಹಿಳೆ ಪ್ರಿಯಾಂಕ ದಿವಾಕರ್.

`ಮಾಗಡಿಯಲ್ಲಿ ಮೇ 30, 1985ರಲ್ಲಿ ಜನಿಸಿದಾಗ ನಾನು ಹುಡುಗನಾಗಿದ್ದೆ. ರಾಜು ಎಂದು ಹೆಸರಿಟ್ಟಿದ್ದ ಅಪ್ಪ-ಅಮ್ಮ ತುಂಬಾ ಪ್ರೀತಿಸುತ್ತಿದ್ದರು. ಆದರೆ ನನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಅವರು ಅರ್ಥಮಾಡಿಕೊಳ್ಳಲಿಲ್ಲ. ಚಾಮರಾಜಪೇಟೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗಲೇ ನಾನು ಹೆಣ್ಣಿನಂತೆ ವರ್ತಿಸಲು ಶುರು ಮಾಡಿದ್ದೆ. ಹುಡುಗಿಯರೊಂದಿಗೆ ಕೂರಬೇಕು, ಅವರಂತೆ ಬಟ್ಟೆ ಧರಿಸಬೇಕು ಎನಿಸುತ್ತಿತ್ತು. ಮನೆಯಲ್ಲಿ ರಂಗೋಲಿ ಹಾಕುತ್ತಿದ್ದೆ. ತಾಯಿಯೊಂದಿಗೆ ಬೇರೆಯವರ ಮನೆ ಕೆಲಸಕ್ಕೆ ಹೋಗುತ್ತಿದ್ದೆ. ಈ ವರ್ತನೆ ಕಂಡು ಪೋಷಕರು ಬೈಯಲು ಶುರು ಮಾಡಿದರು. ಶಾಲೆಯಲ್ಲಿ ಸ್ನೇಹಿತರು ಹಾಗೂ ಶಿಕ್ಷಕರು ಹೀಯಾಳಿಸಿ ಖೋಜಾ ಎನ್ನುತ್ತಿದ್ದರು. ಆಗ ನಾನು ದೈಹಿಕವಾಗಿ ಹುಡುಗನಂತೆ ಇದ್ದೆ. ಆದರೆ ಮನಸ್ಸಿನ ಭಾವನೆಗಳು ಹುಡುಗಿಯಂತಿದ್ದವು. ಕಷ್ಟಪಟ್ಟು 9ನೇ ತರಗತಿಯವರೆಗೆ ಓದಿದೆ. ಆದರೆ ಯಾತನೆ ಶುರುವಾಯಿತು. ಯಾರೂ ನನ್ನನ್ನು ಅರ್ಥಮಾಡಿಕೊಳ್ಳುತ್ತಿಲ್ಲವಲ್ಲ ಎಂಬ ಬೇಸರವಿತ್ತು. ಆಗಲೇ ನಾನು ಮನೆ ಬಿಡುವ ತೀರ್ಮಾನ ಮಾಡಿದೆ’ ಎಂದು ಪ್ರಿಯಾಂಕ ತನ್ನ ಬಾಲ್ಯದ ರೂಪಾಂತರವನ್ನು ನೆನೆಯುತ್ತಾರೆ.

ಮುಂದುವರಿದು `ಗೊರಗುಂಟೆಪಾಳ್ಯದ ಆ ವೇಶ್ಯೆಯರ ಮನೆ (ಹಮಾಮ್) ಸೇರಿಕೊಂಡಾಗ ನನಗಿನ್ನೂ 13 ವರ್ಷ ಗಂಡಾಗಿದ್ದ ನನಗೆ ಹೆಣ್ಣಾಗಬೇಕೆಂಬ ಆಸೆ ಹುಟ್ಟಿತು. ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ದುಡ್ಡು ಹೊಂದಿಸಲು ಮನೆ ಬಿಟ್ಟುಬಂದ ನಾನು ದೇಹ ಮಾರಿಕೊಳ್ಳಲು ಶುರುಮಾಡಿದೆ. ಹತ್ತು ವರ್ಷ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡಿರಬಹುದು. ಆ ಸಂದರ್ಭದಲ್ಲಿ ಹೆಚ್ಚಿನ ಗಂಡಸರು ನನ್ನೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ. ಒಬ್ಬ ಮಾತ್ರ ಎಲ್ಲಾ ಕೆಲಸ ಮುಗಿದ ಮೇಲೆ `ನೀನು ಇಲ್ಲಿ ಯಾಕಿದ್ದೀಯಾ? ಈ ಲೋಕದಿಂದ ಹೊರ ಬಾ. ನೋಡಲು ಸುಂದರವಾಗಿದ್ದೀಯಾ. ಒಳ್ಳೆಯ ಕೆಲಸ ಮಾಡಿಕೊಂಡು ಬದುಕಿಕೊ’ ಎಂದು ಸಲಹೆ ನೀಡಿದ್ದ. ಆ ವ್ಯಕ್ತಿಯ ಮಾತು ಮುದ ನೀಡಿತು. ಈ ವೃತ್ತಿ ತೊರೆಯಬೇಕು ಎಂದು ಮೊದಲ ಬಾರಿ ಅನಿಸಿದ್ದೇ ಆಗ’ ಎನ್ನುತ್ತಾರೆ.

ಪ್ರಿಯಾಂಕ ಒಂದು ದಿನ ರಸ್ತೆ ಬದಿಯಲ್ಲಿ ಗಿರಾಕಿಗಳಿಗಾಗಿ ಕಾಯುತ್ತಿರುವಾಗ, ಮೂರುನಾಲ್ಕು ಮಂದಿ ಕಾರಿನಲ್ಲಿ ಎಲ್ಲಿಗೋ ಕರೆದೊಯ್ದು ಒಬ್ಬರ ಬಳಿಕ ಒಬ್ಬರು ಮೈಮೇಲೆ ಎರಗಿ ದುಡ್ಡು ಕೊಡದೆ ಓಡುತ್ತಾರೆ. ಈ ಘಟನೆ ಪ್ರಿಯಾಂಕಳನ್ನು ಘಾಸಿಗೊಳಿಸುತ್ತದೆ. `ಸೆಕ್ಸ್ ವರ್ಕ್ ಇನ್ನು ಸಾಕು’ ಅನ್ನಿಸುತ್ತದೆ. ಏನಾದರೂ ಸಾಧಿಸಬೇಕು ಎಂಬ ಭಾವನೆ ಮೊಳೆಯುತ್ತದೆ. ಈ ಸಂದರ್ಭಕ್ಕೆ ಎನ್‍ಜಿಒ ಸಂಸ್ಥೆ ಸಂಗಮ ನೆರವಿಗೆ ಬರುತ್ತದೆ. ಈ ಹಂತದಲ್ಲಿ 2010 ರಲ್ಲಿ ಜೈನ್ ಸಮೂಹ ಸಂಸ್ಥೆ ನಡೆಸುತ್ತಿರುವ ಎಫ್.ಎಂ. 90.4 ರೇಡಿಯೊ ಆಕ್ಟೀವ್ ಪ್ರಿಯಾಂಕಳನ್ನು ಸಂದರ್ಶಿಸಿ, ರೇಡಿಯೋ ಜಾಕಿಯನ್ನಾಗಿ ಸೇರಿಸಿಕೊಳ್ಳುತ್ತದೆ. ಇದೀಗ ಪ್ರತಿ ಗುರುವಾರ `ಯಾರಿವರು’ ಎನ್ನುವ ಜನಪ್ರಿಯ ಕಾರ್ಯಕ್ರಮದಲ್ಲಿ ಸ್ವತಃ ಪ್ರಿಯಾಂಕ ಟ್ರಾನ್ಸ್ ಜೆಂಡರ್ ಸಮುದಾಯದ ನೋವಿಗೆ ಧ್ವನಿಯಾಗಿದ್ದಾರೆ.

ಈಚೆಗೆ ಮುಂಬೈನ ಹಮ್ ಸಫರ್ ಸಂಸ್ಥೆಯು ಪ್ರಿಯಾಂಕ ನಡೆಸುವ ‘ಯಾರಿವರು?’ ಅತ್ಯುತ್ತಮ ಕಾರ್ಯಕ್ರಮ ಎಂದು ಪ್ರಶಸ್ತಿ ನೀಡಿದೆ. ಮುಂಬೈನ ರೇಡಿಯೋ ಕಾನೆಕ್ಸ್ ಸಂಸ್ಥೆಯು 2018ರಲ್ಲಿ ‘ಯಾರಿವರು?’ ಕಾರ್ಯಕ್ರಮಕ್ಕೆ ‘ಗೋಲ್ಡನ್ ಅವಾರ್ಡ್‘ ಪ್ರಶಸ್ತಿ ನೀಡಿತ್ತು. ಇದರೊಂದಿಗೆ, ಸುವರ್ಣ ರಾಜ್ಯ ಪ್ರಶಸ್ತಿ, ಯುವ ಸಾಧಕಿ ಪ್ರಶಸ್ತಿ, ನಮ್ಮ ಬೆಂಗಳೂರು ಪ್ರಶಸ್ತಿ, 2018ರ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಒಳಗೊಂಡಂತೆ, ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಎಂದು ‘ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್’ನಲ್ಲಿ ಪ್ರಿಯಾಂಕ ಹೆಸರು ಸೇರಿಕೊಂಡಿದೆ. ಪ್ರಿಯಾಂಕಳ ಸಾಧನೆಯ ಹಾದಿ ಗುರುತಿಸಿ ವಿವಿಧ ಸಂಸ್ಥೆಗಳು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ನೀಡಿವೆ. ನಟ ಧನಂಜಯ ಅವರೊಂದಿಗೆ ‘ಜಯನಗರ 4ನೇ ಬ್ಲಾಕ್’ ಕಿರುಚಿತ್ರದಲ್ಲಿ ನಟಿಸಿ ಪ್ರಿಯಾಂಕ ಗಮನ ಸೆಳೆದಿದ್ದಾಳೆ. ಇದೇ ದಾರಿಯಲ್ಲಿ ಸೌಮ್ಯ, ಏ ಮಾಮ, ನೀನ್ ಗಂಡ್ಸ ಹೆಂಗ್ಸ, ಅವ್ನಿ, ಸಿದ್ಧಿ ಸೀರೆ ಹೀಗೆ ಅನೇಕ ಕಿರುಚಿತ್ರಗಳಲ್ಲಿ ಪ್ರಿಯಾಂಕ ನಟಿಸಿದ್ದಾಳೆ. ಪಯಣ ಎನ್ನುವ ಎನ್.ಜಿ.ಓ ಸಹಾಯದಿಂದ ಮೆನಿ ಕ್ವೀನ್ಸ್ ಪ್ರಾಜೆಕ್ಟ್ ನಲ್ಲಿ ಸಂಜೋತ ತೆಲಂಗ್ ಅವರು ಪ್ರಿಯಾಂಕ ಅವರನ್ನು ಅಂತಾರಾಷ್ಟ್ರೀಯ ಮಟ್ಟದ ಫ್ಯಾಶನ್ ಶೋಗೆ ಫೋಟೋಗ್ರಫಿ ಮಾಡಿದ್ದರು. ಪ್ಯಾರಿಸ್‍ನಲ್ಲಿ ಪ್ರಿಯಾಂಕ ಮಿಂಚಿದ್ದರು. ಈ ಕುರಿತು ಬಿ.ಬಿ.ಸಿ ವರದಿ ಮಾಡಿತ್ತು. ಹೀಗೆ ರಸ್ತೆ ಬದಿ ನಿಂತು ಗಿರಾಕಿಗಳಿಗಾಗಿ ಕಾಯುತ್ತಿದ್ದ ಪ್ರಿಯಾಂಕ ತಾನೆ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

`ಹತ್ತು ವರ್ಷದ ಬಳಿಕ ಮನೆಯವರು ನನ್ನನ್ನು ಒಪ್ಪಿಕೊಂಡಿದ್ದಾರೆ. ನಾನು ಇದೀಗ ಪೋಷಕರೊಂದಿಗೆ ಗಿರಿನಗರದಲ್ಲಿ ನೆಲೆಸಿದ್ದೇನೆ. ಅವರನ್ನು ನಾನೇ ಸಲಹುತ್ತಿದ್ದೇನೆ. ಮದುವೆ ಆಗಬೇಕೆಂಬ ಆಸೆ ಇದೆ. ನನ್ನ ಮನಸ್ಸನ್ನು ಅರ್ಥಮಾಡಿಕೊಂಡು ಬದುಕುವ ಹುಡುಗ ಸಿಕ್ಕಿದರೆ ವಿವಾಹವಾಗಿ ಒಂದು ಮಗುವನ್ನು ದತ್ತು ತೆಗೆದುಕೊಳ್ಳುತ್ತೇನೆ. ಇಷ್ಟು ವರ್ಷಗಳ ನನ್ನ ಅನುಭವಗಳ ಕುರಿತು ಪುಸ್ತಕ ಬರೆಯುತ್ತಿದ್ದೇನೆ. ಕಾರ್ ಡ್ರೈವಿಂಗ್, ಇಂಗ್ಲಿಷ್ ಕಲಿಯುತ್ತಿದ್ದು ಶಿಕ್ಷಣ ಮುಂದುವರಿಸಬೇಕೆಂಬ ಆಸೆ ಇದೆ. ನೃತ್ಯವೆಂದರೆ ಇಷ್ಟ. ಹಲವು ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ರೇಡಿಯೋ ಜಾಕಿ ಎಂದು ಇದೀಗ ಎಲ್ಲರೂ ನನ್ನನ್ನು ಗೌರವಿಸುತ್ತಾರೆ. ಇದು ಬದುಕಿನ ಬಗ್ಗೆ ಪ್ರೀತಿ ಮೂಡಿಸಿದೆ. ಆದರೆ ನನ್ನ ಅದೆಷ್ಟೋ ಸ್ನೇಹಿತರು ಇನ್ನೂ ಆ ವೇಶ್ಯಾಗೃಹಗಳಲ್ಲಿ ಕರಗುತ್ತಿದ್ದಾರೆ. ಖಂಡಿತ ಅವರಿಗೆಲ್ಲಾ ಸಹಾಯ ಮಾಡುವ ತುಡಿತವಿದೆ’ ಎಂದು ಪ್ರಿಯಾಂಕ ತನ್ನ ಕನಸು ಕಾಣ್ಕೆಗಳನ್ನು ಹೇಳಿಕೊಳ್ಳುತ್ತಾರೆ. ಪ್ರಿಯಾಂಕಳ ಕನಸುಗಳು ಈಡೇರಲಿ, ಮತ್ತಷ್ಟು ಎತ್ತರೆತ್ತರಕ್ಕೆ ಬೆಳೆದು ಟ್ರಾನ್ಸ್ ಜೆಂಡರ್ ಸಮುದಾಯದಲ್ಲಿ ಹೊಸ ಕನಸುಗಳ ಕಟ್ಟಲು ಪ್ರೇರಣೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...