Homeಅಂಕಣಗಳುಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

- Advertisement -
- Advertisement -
ಎಲೆಮರೆ-23

ಕಾಲಕಾಲಕ್ಕೆ ಜಾತಿವಾದಿ, ಗಂಡಾಳ್ವಿಕೆ ಸಮಾಜವು ಅಸ್ಪೃಶ್ಯತೆಯ ಪಟ್ಟಿಯಲ್ಲಿ ಹೊಸ ಸಮುದಾಯಗಳನ್ನು ಸೇರಿಸುತ್ತಾ ಮುಟ್ಟದವರೆಂದು ಪಟ್ಟ ಕಟ್ಟಿ ದೂರ ಇಡುವ ಪ್ರಕ್ರಿಯೆ ಸದಾ ಜಾರಿಯಲ್ಲಿರುತ್ತದೆ. ಹೀಗೆ ರೂಪುಗೊಂಡ ನವ ಅಸ್ಪೃಶ್ಯರೆಂದರೆ ಟ್ರಾನ್ಸ್ ಜೆಂಡರ್ ಅಥವಾ ತೃತೀಯ ಲಿಂಗಿಗಳು. ಇವರ ಬಗೆಗೆ ಅನಗತ್ಯ ಭಯ ಹುಟ್ಟಿಸಿ ಅವರನ್ನು ನೋಡುವ ನೋಟಕ್ರಮದಲ್ಲೇ ಕೀಳುತನವನ್ನು ಬೆರೆಸಿ ಹತ್ತಿರ ಬಂದರೆ ಚೇಳು ಕಡಿದಂತೆ ದೂರ ಸರಿಸುವ ಪ್ರವೃತ್ತಿ ಅನೇಕರಲ್ಲಿದೆ. ಹೀಗಾಗಿ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ದೈಹಿಕವಾಗಿ ಕಾಣಿಸಿಕೊಳ್ಳುವ ಕೆಲಸಗಳಿಗಿಂತ ದೈಹಿಕವಾಗಿ ಕಾಣಿಸಿಕೊಳ್ಳದ ಕೆಲಸಗಳು ಸಿಗತೊಡಗಿದವು. ಇದರಲ್ಲಿ ರೇಡಿಯೋ ಜಾಕಿ ವೃತ್ತಿಯೂ ಒಂದು. ಇಲ್ಲಿ ಮಾತನಾಡುತ್ತಿರುವವರು ಯಾರು ಎಂದು ತಕ್ಷಣಕ್ಕೆ ಗುರುತಾಗದು. ಹಾಗಾಗಿಯೇ ಧ್ವನಿಯನ್ನು ಕೇಳಿಸಿಕೊಳ್ಳುವುದಕ್ಕೆ ದೇಹದ ಸೌಂದರ್ಯವಾಗಲಿ, ಅಂಗವೈಕಲ್ಯವಾಗಲಿ, ಜಾತಿಧರ್ಮ ಲಿಂಗದ ತರತಮಗಳಾಗಲಿ ಅಡ್ಡಿ ಬರಲಾರವು. ಈ ಕಾರಣಕ್ಕೆ ಇಂದು ಟ್ರಾನ್ಸ್ ಜೆಂಡರ್ ಸಮುದಾಯ ರೇಡಿಯೋ ಜಾಕಿ ವೃತ್ತಿಯತ್ತ ಆಕರ್ಷಿತರಾಗುತ್ತಿದ್ದಾರೆ. ಇಂತಹದ್ದೊಂದು ಪ್ರಯೋಗಕ್ಕೆ ಮೊದಲ ಹೆಜ್ಜೆ ಇಟ್ಟದ್ದು ಬೆಂಗಳೂರಿನ ಗಿರಿನಗರದ ನಿವಾಸಿ ರೇಡಿಯೋ ಜಾಕಿಯಾದ ಟ್ರಾನ್ಸ್ ಮಹಿಳೆ ಪ್ರಿಯಾಂಕ ದಿವಾಕರ್.

`ಮಾಗಡಿಯಲ್ಲಿ ಮೇ 30, 1985ರಲ್ಲಿ ಜನಿಸಿದಾಗ ನಾನು ಹುಡುಗನಾಗಿದ್ದೆ. ರಾಜು ಎಂದು ಹೆಸರಿಟ್ಟಿದ್ದ ಅಪ್ಪ-ಅಮ್ಮ ತುಂಬಾ ಪ್ರೀತಿಸುತ್ತಿದ್ದರು. ಆದರೆ ನನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಅವರು ಅರ್ಥಮಾಡಿಕೊಳ್ಳಲಿಲ್ಲ. ಚಾಮರಾಜಪೇಟೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗಲೇ ನಾನು ಹೆಣ್ಣಿನಂತೆ ವರ್ತಿಸಲು ಶುರು ಮಾಡಿದ್ದೆ. ಹುಡುಗಿಯರೊಂದಿಗೆ ಕೂರಬೇಕು, ಅವರಂತೆ ಬಟ್ಟೆ ಧರಿಸಬೇಕು ಎನಿಸುತ್ತಿತ್ತು. ಮನೆಯಲ್ಲಿ ರಂಗೋಲಿ ಹಾಕುತ್ತಿದ್ದೆ. ತಾಯಿಯೊಂದಿಗೆ ಬೇರೆಯವರ ಮನೆ ಕೆಲಸಕ್ಕೆ ಹೋಗುತ್ತಿದ್ದೆ. ಈ ವರ್ತನೆ ಕಂಡು ಪೋಷಕರು ಬೈಯಲು ಶುರು ಮಾಡಿದರು. ಶಾಲೆಯಲ್ಲಿ ಸ್ನೇಹಿತರು ಹಾಗೂ ಶಿಕ್ಷಕರು ಹೀಯಾಳಿಸಿ ಖೋಜಾ ಎನ್ನುತ್ತಿದ್ದರು. ಆಗ ನಾನು ದೈಹಿಕವಾಗಿ ಹುಡುಗನಂತೆ ಇದ್ದೆ. ಆದರೆ ಮನಸ್ಸಿನ ಭಾವನೆಗಳು ಹುಡುಗಿಯಂತಿದ್ದವು. ಕಷ್ಟಪಟ್ಟು 9ನೇ ತರಗತಿಯವರೆಗೆ ಓದಿದೆ. ಆದರೆ ಯಾತನೆ ಶುರುವಾಯಿತು. ಯಾರೂ ನನ್ನನ್ನು ಅರ್ಥಮಾಡಿಕೊಳ್ಳುತ್ತಿಲ್ಲವಲ್ಲ ಎಂಬ ಬೇಸರವಿತ್ತು. ಆಗಲೇ ನಾನು ಮನೆ ಬಿಡುವ ತೀರ್ಮಾನ ಮಾಡಿದೆ’ ಎಂದು ಪ್ರಿಯಾಂಕ ತನ್ನ ಬಾಲ್ಯದ ರೂಪಾಂತರವನ್ನು ನೆನೆಯುತ್ತಾರೆ.

ಮುಂದುವರಿದು `ಗೊರಗುಂಟೆಪಾಳ್ಯದ ಆ ವೇಶ್ಯೆಯರ ಮನೆ (ಹಮಾಮ್) ಸೇರಿಕೊಂಡಾಗ ನನಗಿನ್ನೂ 13 ವರ್ಷ ಗಂಡಾಗಿದ್ದ ನನಗೆ ಹೆಣ್ಣಾಗಬೇಕೆಂಬ ಆಸೆ ಹುಟ್ಟಿತು. ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ದುಡ್ಡು ಹೊಂದಿಸಲು ಮನೆ ಬಿಟ್ಟುಬಂದ ನಾನು ದೇಹ ಮಾರಿಕೊಳ್ಳಲು ಶುರುಮಾಡಿದೆ. ಹತ್ತು ವರ್ಷ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡಿರಬಹುದು. ಆ ಸಂದರ್ಭದಲ್ಲಿ ಹೆಚ್ಚಿನ ಗಂಡಸರು ನನ್ನೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ. ಒಬ್ಬ ಮಾತ್ರ ಎಲ್ಲಾ ಕೆಲಸ ಮುಗಿದ ಮೇಲೆ `ನೀನು ಇಲ್ಲಿ ಯಾಕಿದ್ದೀಯಾ? ಈ ಲೋಕದಿಂದ ಹೊರ ಬಾ. ನೋಡಲು ಸುಂದರವಾಗಿದ್ದೀಯಾ. ಒಳ್ಳೆಯ ಕೆಲಸ ಮಾಡಿಕೊಂಡು ಬದುಕಿಕೊ’ ಎಂದು ಸಲಹೆ ನೀಡಿದ್ದ. ಆ ವ್ಯಕ್ತಿಯ ಮಾತು ಮುದ ನೀಡಿತು. ಈ ವೃತ್ತಿ ತೊರೆಯಬೇಕು ಎಂದು ಮೊದಲ ಬಾರಿ ಅನಿಸಿದ್ದೇ ಆಗ’ ಎನ್ನುತ್ತಾರೆ.

ಪ್ರಿಯಾಂಕ ಒಂದು ದಿನ ರಸ್ತೆ ಬದಿಯಲ್ಲಿ ಗಿರಾಕಿಗಳಿಗಾಗಿ ಕಾಯುತ್ತಿರುವಾಗ, ಮೂರುನಾಲ್ಕು ಮಂದಿ ಕಾರಿನಲ್ಲಿ ಎಲ್ಲಿಗೋ ಕರೆದೊಯ್ದು ಒಬ್ಬರ ಬಳಿಕ ಒಬ್ಬರು ಮೈಮೇಲೆ ಎರಗಿ ದುಡ್ಡು ಕೊಡದೆ ಓಡುತ್ತಾರೆ. ಈ ಘಟನೆ ಪ್ರಿಯಾಂಕಳನ್ನು ಘಾಸಿಗೊಳಿಸುತ್ತದೆ. `ಸೆಕ್ಸ್ ವರ್ಕ್ ಇನ್ನು ಸಾಕು’ ಅನ್ನಿಸುತ್ತದೆ. ಏನಾದರೂ ಸಾಧಿಸಬೇಕು ಎಂಬ ಭಾವನೆ ಮೊಳೆಯುತ್ತದೆ. ಈ ಸಂದರ್ಭಕ್ಕೆ ಎನ್‍ಜಿಒ ಸಂಸ್ಥೆ ಸಂಗಮ ನೆರವಿಗೆ ಬರುತ್ತದೆ. ಈ ಹಂತದಲ್ಲಿ 2010 ರಲ್ಲಿ ಜೈನ್ ಸಮೂಹ ಸಂಸ್ಥೆ ನಡೆಸುತ್ತಿರುವ ಎಫ್.ಎಂ. 90.4 ರೇಡಿಯೊ ಆಕ್ಟೀವ್ ಪ್ರಿಯಾಂಕಳನ್ನು ಸಂದರ್ಶಿಸಿ, ರೇಡಿಯೋ ಜಾಕಿಯನ್ನಾಗಿ ಸೇರಿಸಿಕೊಳ್ಳುತ್ತದೆ. ಇದೀಗ ಪ್ರತಿ ಗುರುವಾರ `ಯಾರಿವರು’ ಎನ್ನುವ ಜನಪ್ರಿಯ ಕಾರ್ಯಕ್ರಮದಲ್ಲಿ ಸ್ವತಃ ಪ್ರಿಯಾಂಕ ಟ್ರಾನ್ಸ್ ಜೆಂಡರ್ ಸಮುದಾಯದ ನೋವಿಗೆ ಧ್ವನಿಯಾಗಿದ್ದಾರೆ.

ಈಚೆಗೆ ಮುಂಬೈನ ಹಮ್ ಸಫರ್ ಸಂಸ್ಥೆಯು ಪ್ರಿಯಾಂಕ ನಡೆಸುವ ‘ಯಾರಿವರು?’ ಅತ್ಯುತ್ತಮ ಕಾರ್ಯಕ್ರಮ ಎಂದು ಪ್ರಶಸ್ತಿ ನೀಡಿದೆ. ಮುಂಬೈನ ರೇಡಿಯೋ ಕಾನೆಕ್ಸ್ ಸಂಸ್ಥೆಯು 2018ರಲ್ಲಿ ‘ಯಾರಿವರು?’ ಕಾರ್ಯಕ್ರಮಕ್ಕೆ ‘ಗೋಲ್ಡನ್ ಅವಾರ್ಡ್‘ ಪ್ರಶಸ್ತಿ ನೀಡಿತ್ತು. ಇದರೊಂದಿಗೆ, ಸುವರ್ಣ ರಾಜ್ಯ ಪ್ರಶಸ್ತಿ, ಯುವ ಸಾಧಕಿ ಪ್ರಶಸ್ತಿ, ನಮ್ಮ ಬೆಂಗಳೂರು ಪ್ರಶಸ್ತಿ, 2018ರ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಒಳಗೊಂಡಂತೆ, ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಎಂದು ‘ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್’ನಲ್ಲಿ ಪ್ರಿಯಾಂಕ ಹೆಸರು ಸೇರಿಕೊಂಡಿದೆ. ಪ್ರಿಯಾಂಕಳ ಸಾಧನೆಯ ಹಾದಿ ಗುರುತಿಸಿ ವಿವಿಧ ಸಂಸ್ಥೆಗಳು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ನೀಡಿವೆ. ನಟ ಧನಂಜಯ ಅವರೊಂದಿಗೆ ‘ಜಯನಗರ 4ನೇ ಬ್ಲಾಕ್’ ಕಿರುಚಿತ್ರದಲ್ಲಿ ನಟಿಸಿ ಪ್ರಿಯಾಂಕ ಗಮನ ಸೆಳೆದಿದ್ದಾಳೆ. ಇದೇ ದಾರಿಯಲ್ಲಿ ಸೌಮ್ಯ, ಏ ಮಾಮ, ನೀನ್ ಗಂಡ್ಸ ಹೆಂಗ್ಸ, ಅವ್ನಿ, ಸಿದ್ಧಿ ಸೀರೆ ಹೀಗೆ ಅನೇಕ ಕಿರುಚಿತ್ರಗಳಲ್ಲಿ ಪ್ರಿಯಾಂಕ ನಟಿಸಿದ್ದಾಳೆ. ಪಯಣ ಎನ್ನುವ ಎನ್.ಜಿ.ಓ ಸಹಾಯದಿಂದ ಮೆನಿ ಕ್ವೀನ್ಸ್ ಪ್ರಾಜೆಕ್ಟ್ ನಲ್ಲಿ ಸಂಜೋತ ತೆಲಂಗ್ ಅವರು ಪ್ರಿಯಾಂಕ ಅವರನ್ನು ಅಂತಾರಾಷ್ಟ್ರೀಯ ಮಟ್ಟದ ಫ್ಯಾಶನ್ ಶೋಗೆ ಫೋಟೋಗ್ರಫಿ ಮಾಡಿದ್ದರು. ಪ್ಯಾರಿಸ್‍ನಲ್ಲಿ ಪ್ರಿಯಾಂಕ ಮಿಂಚಿದ್ದರು. ಈ ಕುರಿತು ಬಿ.ಬಿ.ಸಿ ವರದಿ ಮಾಡಿತ್ತು. ಹೀಗೆ ರಸ್ತೆ ಬದಿ ನಿಂತು ಗಿರಾಕಿಗಳಿಗಾಗಿ ಕಾಯುತ್ತಿದ್ದ ಪ್ರಿಯಾಂಕ ತಾನೆ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

`ಹತ್ತು ವರ್ಷದ ಬಳಿಕ ಮನೆಯವರು ನನ್ನನ್ನು ಒಪ್ಪಿಕೊಂಡಿದ್ದಾರೆ. ನಾನು ಇದೀಗ ಪೋಷಕರೊಂದಿಗೆ ಗಿರಿನಗರದಲ್ಲಿ ನೆಲೆಸಿದ್ದೇನೆ. ಅವರನ್ನು ನಾನೇ ಸಲಹುತ್ತಿದ್ದೇನೆ. ಮದುವೆ ಆಗಬೇಕೆಂಬ ಆಸೆ ಇದೆ. ನನ್ನ ಮನಸ್ಸನ್ನು ಅರ್ಥಮಾಡಿಕೊಂಡು ಬದುಕುವ ಹುಡುಗ ಸಿಕ್ಕಿದರೆ ವಿವಾಹವಾಗಿ ಒಂದು ಮಗುವನ್ನು ದತ್ತು ತೆಗೆದುಕೊಳ್ಳುತ್ತೇನೆ. ಇಷ್ಟು ವರ್ಷಗಳ ನನ್ನ ಅನುಭವಗಳ ಕುರಿತು ಪುಸ್ತಕ ಬರೆಯುತ್ತಿದ್ದೇನೆ. ಕಾರ್ ಡ್ರೈವಿಂಗ್, ಇಂಗ್ಲಿಷ್ ಕಲಿಯುತ್ತಿದ್ದು ಶಿಕ್ಷಣ ಮುಂದುವರಿಸಬೇಕೆಂಬ ಆಸೆ ಇದೆ. ನೃತ್ಯವೆಂದರೆ ಇಷ್ಟ. ಹಲವು ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ರೇಡಿಯೋ ಜಾಕಿ ಎಂದು ಇದೀಗ ಎಲ್ಲರೂ ನನ್ನನ್ನು ಗೌರವಿಸುತ್ತಾರೆ. ಇದು ಬದುಕಿನ ಬಗ್ಗೆ ಪ್ರೀತಿ ಮೂಡಿಸಿದೆ. ಆದರೆ ನನ್ನ ಅದೆಷ್ಟೋ ಸ್ನೇಹಿತರು ಇನ್ನೂ ಆ ವೇಶ್ಯಾಗೃಹಗಳಲ್ಲಿ ಕರಗುತ್ತಿದ್ದಾರೆ. ಖಂಡಿತ ಅವರಿಗೆಲ್ಲಾ ಸಹಾಯ ಮಾಡುವ ತುಡಿತವಿದೆ’ ಎಂದು ಪ್ರಿಯಾಂಕ ತನ್ನ ಕನಸು ಕಾಣ್ಕೆಗಳನ್ನು ಹೇಳಿಕೊಳ್ಳುತ್ತಾರೆ. ಪ್ರಿಯಾಂಕಳ ಕನಸುಗಳು ಈಡೇರಲಿ, ಮತ್ತಷ್ಟು ಎತ್ತರೆತ್ತರಕ್ಕೆ ಬೆಳೆದು ಟ್ರಾನ್ಸ್ ಜೆಂಡರ್ ಸಮುದಾಯದಲ್ಲಿ ಹೊಸ ಕನಸುಗಳ ಕಟ್ಟಲು ಪ್ರೇರಣೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...