Homeಅಂಕಣಗಳುಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

- Advertisement -
- Advertisement -
ಎಲೆಮರೆ-23

ಕಾಲಕಾಲಕ್ಕೆ ಜಾತಿವಾದಿ, ಗಂಡಾಳ್ವಿಕೆ ಸಮಾಜವು ಅಸ್ಪೃಶ್ಯತೆಯ ಪಟ್ಟಿಯಲ್ಲಿ ಹೊಸ ಸಮುದಾಯಗಳನ್ನು ಸೇರಿಸುತ್ತಾ ಮುಟ್ಟದವರೆಂದು ಪಟ್ಟ ಕಟ್ಟಿ ದೂರ ಇಡುವ ಪ್ರಕ್ರಿಯೆ ಸದಾ ಜಾರಿಯಲ್ಲಿರುತ್ತದೆ. ಹೀಗೆ ರೂಪುಗೊಂಡ ನವ ಅಸ್ಪೃಶ್ಯರೆಂದರೆ ಟ್ರಾನ್ಸ್ ಜೆಂಡರ್ ಅಥವಾ ತೃತೀಯ ಲಿಂಗಿಗಳು. ಇವರ ಬಗೆಗೆ ಅನಗತ್ಯ ಭಯ ಹುಟ್ಟಿಸಿ ಅವರನ್ನು ನೋಡುವ ನೋಟಕ್ರಮದಲ್ಲೇ ಕೀಳುತನವನ್ನು ಬೆರೆಸಿ ಹತ್ತಿರ ಬಂದರೆ ಚೇಳು ಕಡಿದಂತೆ ದೂರ ಸರಿಸುವ ಪ್ರವೃತ್ತಿ ಅನೇಕರಲ್ಲಿದೆ. ಹೀಗಾಗಿ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ದೈಹಿಕವಾಗಿ ಕಾಣಿಸಿಕೊಳ್ಳುವ ಕೆಲಸಗಳಿಗಿಂತ ದೈಹಿಕವಾಗಿ ಕಾಣಿಸಿಕೊಳ್ಳದ ಕೆಲಸಗಳು ಸಿಗತೊಡಗಿದವು. ಇದರಲ್ಲಿ ರೇಡಿಯೋ ಜಾಕಿ ವೃತ್ತಿಯೂ ಒಂದು. ಇಲ್ಲಿ ಮಾತನಾಡುತ್ತಿರುವವರು ಯಾರು ಎಂದು ತಕ್ಷಣಕ್ಕೆ ಗುರುತಾಗದು. ಹಾಗಾಗಿಯೇ ಧ್ವನಿಯನ್ನು ಕೇಳಿಸಿಕೊಳ್ಳುವುದಕ್ಕೆ ದೇಹದ ಸೌಂದರ್ಯವಾಗಲಿ, ಅಂಗವೈಕಲ್ಯವಾಗಲಿ, ಜಾತಿಧರ್ಮ ಲಿಂಗದ ತರತಮಗಳಾಗಲಿ ಅಡ್ಡಿ ಬರಲಾರವು. ಈ ಕಾರಣಕ್ಕೆ ಇಂದು ಟ್ರಾನ್ಸ್ ಜೆಂಡರ್ ಸಮುದಾಯ ರೇಡಿಯೋ ಜಾಕಿ ವೃತ್ತಿಯತ್ತ ಆಕರ್ಷಿತರಾಗುತ್ತಿದ್ದಾರೆ. ಇಂತಹದ್ದೊಂದು ಪ್ರಯೋಗಕ್ಕೆ ಮೊದಲ ಹೆಜ್ಜೆ ಇಟ್ಟದ್ದು ಬೆಂಗಳೂರಿನ ಗಿರಿನಗರದ ನಿವಾಸಿ ರೇಡಿಯೋ ಜಾಕಿಯಾದ ಟ್ರಾನ್ಸ್ ಮಹಿಳೆ ಪ್ರಿಯಾಂಕ ದಿವಾಕರ್.

`ಮಾಗಡಿಯಲ್ಲಿ ಮೇ 30, 1985ರಲ್ಲಿ ಜನಿಸಿದಾಗ ನಾನು ಹುಡುಗನಾಗಿದ್ದೆ. ರಾಜು ಎಂದು ಹೆಸರಿಟ್ಟಿದ್ದ ಅಪ್ಪ-ಅಮ್ಮ ತುಂಬಾ ಪ್ರೀತಿಸುತ್ತಿದ್ದರು. ಆದರೆ ನನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಅವರು ಅರ್ಥಮಾಡಿಕೊಳ್ಳಲಿಲ್ಲ. ಚಾಮರಾಜಪೇಟೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗಲೇ ನಾನು ಹೆಣ್ಣಿನಂತೆ ವರ್ತಿಸಲು ಶುರು ಮಾಡಿದ್ದೆ. ಹುಡುಗಿಯರೊಂದಿಗೆ ಕೂರಬೇಕು, ಅವರಂತೆ ಬಟ್ಟೆ ಧರಿಸಬೇಕು ಎನಿಸುತ್ತಿತ್ತು. ಮನೆಯಲ್ಲಿ ರಂಗೋಲಿ ಹಾಕುತ್ತಿದ್ದೆ. ತಾಯಿಯೊಂದಿಗೆ ಬೇರೆಯವರ ಮನೆ ಕೆಲಸಕ್ಕೆ ಹೋಗುತ್ತಿದ್ದೆ. ಈ ವರ್ತನೆ ಕಂಡು ಪೋಷಕರು ಬೈಯಲು ಶುರು ಮಾಡಿದರು. ಶಾಲೆಯಲ್ಲಿ ಸ್ನೇಹಿತರು ಹಾಗೂ ಶಿಕ್ಷಕರು ಹೀಯಾಳಿಸಿ ಖೋಜಾ ಎನ್ನುತ್ತಿದ್ದರು. ಆಗ ನಾನು ದೈಹಿಕವಾಗಿ ಹುಡುಗನಂತೆ ಇದ್ದೆ. ಆದರೆ ಮನಸ್ಸಿನ ಭಾವನೆಗಳು ಹುಡುಗಿಯಂತಿದ್ದವು. ಕಷ್ಟಪಟ್ಟು 9ನೇ ತರಗತಿಯವರೆಗೆ ಓದಿದೆ. ಆದರೆ ಯಾತನೆ ಶುರುವಾಯಿತು. ಯಾರೂ ನನ್ನನ್ನು ಅರ್ಥಮಾಡಿಕೊಳ್ಳುತ್ತಿಲ್ಲವಲ್ಲ ಎಂಬ ಬೇಸರವಿತ್ತು. ಆಗಲೇ ನಾನು ಮನೆ ಬಿಡುವ ತೀರ್ಮಾನ ಮಾಡಿದೆ’ ಎಂದು ಪ್ರಿಯಾಂಕ ತನ್ನ ಬಾಲ್ಯದ ರೂಪಾಂತರವನ್ನು ನೆನೆಯುತ್ತಾರೆ.

ಮುಂದುವರಿದು `ಗೊರಗುಂಟೆಪಾಳ್ಯದ ಆ ವೇಶ್ಯೆಯರ ಮನೆ (ಹಮಾಮ್) ಸೇರಿಕೊಂಡಾಗ ನನಗಿನ್ನೂ 13 ವರ್ಷ ಗಂಡಾಗಿದ್ದ ನನಗೆ ಹೆಣ್ಣಾಗಬೇಕೆಂಬ ಆಸೆ ಹುಟ್ಟಿತು. ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ದುಡ್ಡು ಹೊಂದಿಸಲು ಮನೆ ಬಿಟ್ಟುಬಂದ ನಾನು ದೇಹ ಮಾರಿಕೊಳ್ಳಲು ಶುರುಮಾಡಿದೆ. ಹತ್ತು ವರ್ಷ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡಿರಬಹುದು. ಆ ಸಂದರ್ಭದಲ್ಲಿ ಹೆಚ್ಚಿನ ಗಂಡಸರು ನನ್ನೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ. ಒಬ್ಬ ಮಾತ್ರ ಎಲ್ಲಾ ಕೆಲಸ ಮುಗಿದ ಮೇಲೆ `ನೀನು ಇಲ್ಲಿ ಯಾಕಿದ್ದೀಯಾ? ಈ ಲೋಕದಿಂದ ಹೊರ ಬಾ. ನೋಡಲು ಸುಂದರವಾಗಿದ್ದೀಯಾ. ಒಳ್ಳೆಯ ಕೆಲಸ ಮಾಡಿಕೊಂಡು ಬದುಕಿಕೊ’ ಎಂದು ಸಲಹೆ ನೀಡಿದ್ದ. ಆ ವ್ಯಕ್ತಿಯ ಮಾತು ಮುದ ನೀಡಿತು. ಈ ವೃತ್ತಿ ತೊರೆಯಬೇಕು ಎಂದು ಮೊದಲ ಬಾರಿ ಅನಿಸಿದ್ದೇ ಆಗ’ ಎನ್ನುತ್ತಾರೆ.

ಪ್ರಿಯಾಂಕ ಒಂದು ದಿನ ರಸ್ತೆ ಬದಿಯಲ್ಲಿ ಗಿರಾಕಿಗಳಿಗಾಗಿ ಕಾಯುತ್ತಿರುವಾಗ, ಮೂರುನಾಲ್ಕು ಮಂದಿ ಕಾರಿನಲ್ಲಿ ಎಲ್ಲಿಗೋ ಕರೆದೊಯ್ದು ಒಬ್ಬರ ಬಳಿಕ ಒಬ್ಬರು ಮೈಮೇಲೆ ಎರಗಿ ದುಡ್ಡು ಕೊಡದೆ ಓಡುತ್ತಾರೆ. ಈ ಘಟನೆ ಪ್ರಿಯಾಂಕಳನ್ನು ಘಾಸಿಗೊಳಿಸುತ್ತದೆ. `ಸೆಕ್ಸ್ ವರ್ಕ್ ಇನ್ನು ಸಾಕು’ ಅನ್ನಿಸುತ್ತದೆ. ಏನಾದರೂ ಸಾಧಿಸಬೇಕು ಎಂಬ ಭಾವನೆ ಮೊಳೆಯುತ್ತದೆ. ಈ ಸಂದರ್ಭಕ್ಕೆ ಎನ್‍ಜಿಒ ಸಂಸ್ಥೆ ಸಂಗಮ ನೆರವಿಗೆ ಬರುತ್ತದೆ. ಈ ಹಂತದಲ್ಲಿ 2010 ರಲ್ಲಿ ಜೈನ್ ಸಮೂಹ ಸಂಸ್ಥೆ ನಡೆಸುತ್ತಿರುವ ಎಫ್.ಎಂ. 90.4 ರೇಡಿಯೊ ಆಕ್ಟೀವ್ ಪ್ರಿಯಾಂಕಳನ್ನು ಸಂದರ್ಶಿಸಿ, ರೇಡಿಯೋ ಜಾಕಿಯನ್ನಾಗಿ ಸೇರಿಸಿಕೊಳ್ಳುತ್ತದೆ. ಇದೀಗ ಪ್ರತಿ ಗುರುವಾರ `ಯಾರಿವರು’ ಎನ್ನುವ ಜನಪ್ರಿಯ ಕಾರ್ಯಕ್ರಮದಲ್ಲಿ ಸ್ವತಃ ಪ್ರಿಯಾಂಕ ಟ್ರಾನ್ಸ್ ಜೆಂಡರ್ ಸಮುದಾಯದ ನೋವಿಗೆ ಧ್ವನಿಯಾಗಿದ್ದಾರೆ.

ಈಚೆಗೆ ಮುಂಬೈನ ಹಮ್ ಸಫರ್ ಸಂಸ್ಥೆಯು ಪ್ರಿಯಾಂಕ ನಡೆಸುವ ‘ಯಾರಿವರು?’ ಅತ್ಯುತ್ತಮ ಕಾರ್ಯಕ್ರಮ ಎಂದು ಪ್ರಶಸ್ತಿ ನೀಡಿದೆ. ಮುಂಬೈನ ರೇಡಿಯೋ ಕಾನೆಕ್ಸ್ ಸಂಸ್ಥೆಯು 2018ರಲ್ಲಿ ‘ಯಾರಿವರು?’ ಕಾರ್ಯಕ್ರಮಕ್ಕೆ ‘ಗೋಲ್ಡನ್ ಅವಾರ್ಡ್‘ ಪ್ರಶಸ್ತಿ ನೀಡಿತ್ತು. ಇದರೊಂದಿಗೆ, ಸುವರ್ಣ ರಾಜ್ಯ ಪ್ರಶಸ್ತಿ, ಯುವ ಸಾಧಕಿ ಪ್ರಶಸ್ತಿ, ನಮ್ಮ ಬೆಂಗಳೂರು ಪ್ರಶಸ್ತಿ, 2018ರ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಒಳಗೊಂಡಂತೆ, ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಎಂದು ‘ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್’ನಲ್ಲಿ ಪ್ರಿಯಾಂಕ ಹೆಸರು ಸೇರಿಕೊಂಡಿದೆ. ಪ್ರಿಯಾಂಕಳ ಸಾಧನೆಯ ಹಾದಿ ಗುರುತಿಸಿ ವಿವಿಧ ಸಂಸ್ಥೆಗಳು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ನೀಡಿವೆ. ನಟ ಧನಂಜಯ ಅವರೊಂದಿಗೆ ‘ಜಯನಗರ 4ನೇ ಬ್ಲಾಕ್’ ಕಿರುಚಿತ್ರದಲ್ಲಿ ನಟಿಸಿ ಪ್ರಿಯಾಂಕ ಗಮನ ಸೆಳೆದಿದ್ದಾಳೆ. ಇದೇ ದಾರಿಯಲ್ಲಿ ಸೌಮ್ಯ, ಏ ಮಾಮ, ನೀನ್ ಗಂಡ್ಸ ಹೆಂಗ್ಸ, ಅವ್ನಿ, ಸಿದ್ಧಿ ಸೀರೆ ಹೀಗೆ ಅನೇಕ ಕಿರುಚಿತ್ರಗಳಲ್ಲಿ ಪ್ರಿಯಾಂಕ ನಟಿಸಿದ್ದಾಳೆ. ಪಯಣ ಎನ್ನುವ ಎನ್.ಜಿ.ಓ ಸಹಾಯದಿಂದ ಮೆನಿ ಕ್ವೀನ್ಸ್ ಪ್ರಾಜೆಕ್ಟ್ ನಲ್ಲಿ ಸಂಜೋತ ತೆಲಂಗ್ ಅವರು ಪ್ರಿಯಾಂಕ ಅವರನ್ನು ಅಂತಾರಾಷ್ಟ್ರೀಯ ಮಟ್ಟದ ಫ್ಯಾಶನ್ ಶೋಗೆ ಫೋಟೋಗ್ರಫಿ ಮಾಡಿದ್ದರು. ಪ್ಯಾರಿಸ್‍ನಲ್ಲಿ ಪ್ರಿಯಾಂಕ ಮಿಂಚಿದ್ದರು. ಈ ಕುರಿತು ಬಿ.ಬಿ.ಸಿ ವರದಿ ಮಾಡಿತ್ತು. ಹೀಗೆ ರಸ್ತೆ ಬದಿ ನಿಂತು ಗಿರಾಕಿಗಳಿಗಾಗಿ ಕಾಯುತ್ತಿದ್ದ ಪ್ರಿಯಾಂಕ ತಾನೆ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

`ಹತ್ತು ವರ್ಷದ ಬಳಿಕ ಮನೆಯವರು ನನ್ನನ್ನು ಒಪ್ಪಿಕೊಂಡಿದ್ದಾರೆ. ನಾನು ಇದೀಗ ಪೋಷಕರೊಂದಿಗೆ ಗಿರಿನಗರದಲ್ಲಿ ನೆಲೆಸಿದ್ದೇನೆ. ಅವರನ್ನು ನಾನೇ ಸಲಹುತ್ತಿದ್ದೇನೆ. ಮದುವೆ ಆಗಬೇಕೆಂಬ ಆಸೆ ಇದೆ. ನನ್ನ ಮನಸ್ಸನ್ನು ಅರ್ಥಮಾಡಿಕೊಂಡು ಬದುಕುವ ಹುಡುಗ ಸಿಕ್ಕಿದರೆ ವಿವಾಹವಾಗಿ ಒಂದು ಮಗುವನ್ನು ದತ್ತು ತೆಗೆದುಕೊಳ್ಳುತ್ತೇನೆ. ಇಷ್ಟು ವರ್ಷಗಳ ನನ್ನ ಅನುಭವಗಳ ಕುರಿತು ಪುಸ್ತಕ ಬರೆಯುತ್ತಿದ್ದೇನೆ. ಕಾರ್ ಡ್ರೈವಿಂಗ್, ಇಂಗ್ಲಿಷ್ ಕಲಿಯುತ್ತಿದ್ದು ಶಿಕ್ಷಣ ಮುಂದುವರಿಸಬೇಕೆಂಬ ಆಸೆ ಇದೆ. ನೃತ್ಯವೆಂದರೆ ಇಷ್ಟ. ಹಲವು ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ರೇಡಿಯೋ ಜಾಕಿ ಎಂದು ಇದೀಗ ಎಲ್ಲರೂ ನನ್ನನ್ನು ಗೌರವಿಸುತ್ತಾರೆ. ಇದು ಬದುಕಿನ ಬಗ್ಗೆ ಪ್ರೀತಿ ಮೂಡಿಸಿದೆ. ಆದರೆ ನನ್ನ ಅದೆಷ್ಟೋ ಸ್ನೇಹಿತರು ಇನ್ನೂ ಆ ವೇಶ್ಯಾಗೃಹಗಳಲ್ಲಿ ಕರಗುತ್ತಿದ್ದಾರೆ. ಖಂಡಿತ ಅವರಿಗೆಲ್ಲಾ ಸಹಾಯ ಮಾಡುವ ತುಡಿತವಿದೆ’ ಎಂದು ಪ್ರಿಯಾಂಕ ತನ್ನ ಕನಸು ಕಾಣ್ಕೆಗಳನ್ನು ಹೇಳಿಕೊಳ್ಳುತ್ತಾರೆ. ಪ್ರಿಯಾಂಕಳ ಕನಸುಗಳು ಈಡೇರಲಿ, ಮತ್ತಷ್ಟು ಎತ್ತರೆತ್ತರಕ್ಕೆ ಬೆಳೆದು ಟ್ರಾನ್ಸ್ ಜೆಂಡರ್ ಸಮುದಾಯದಲ್ಲಿ ಹೊಸ ಕನಸುಗಳ ಕಟ್ಟಲು ಪ್ರೇರಣೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...