Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...