Homeನಿಜವೋ ಸುಳ್ಳೋFact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

Fact Check: ಭಾರತದ ಮ್ಯಾಗಿ ನೂಡಲ್ಸ್ ನಲ್ಲಿ ಗೋಮಾಂಸವಿದೆಯೆ?

- Advertisement -
- Advertisement -

ಅಂತರಾಷ್ಟ್ರೀಯವಾಗಿ ಮಾರಾಟವಾಗುವ ಬೀಫ್ ಫ್ಲೇವರ್ ಮ್ಯಾಗಿ ನೂಡೆಲ್ಸ್ ಪ್ಯಾಕೆಟ್ ಒಂದರ ಚಿತ್ರವೊಂದನ್ನು ಹಾಕಿ, ಭಾರತದಲ್ಲಿ ಇದನ್ನು ಮಾರಾಟ ಮಾಡಲಾಗುತ್ತಿದೆ ಅದನ್ನು ಬ್ಯಾನ್ ಮಾಡಬೇಕು ಎಂದು ಫೇಸ್ಬುಕ್ಕಿನಾದ್ಯಂತ ಪೋಸ್ಟಂದು ವೈರಲಾಗಿತ್ತು. ಅದನ್ನು ಫ್ಯಾಕ್ಟ್ ಚೆಕ್ಕರ್ ನ್ಯೂಸ್ ವೆಬ್ ಪೋರ್ಟಲ್‌ ಆದ “ಭೂಮ್ ಲೈವ್” ಫ್ಯಾಕ್ಟ್ ಚೆಕ್ ನಡೆಸಿದ್ದು ಸುದ್ದಿಯ ಸತ್ಯಾಸತ್ಯತೆಯನ್ನು ಹೊರ ಹಾಕಿದೆ.

ನೆಸ್ಲೇ ಇಂಡಿಯಾವನ್ನು ಸಂಪರ್ಕಿಸಿದ ಭೂಮ್ ಲೈವ್, ಫೇಸ್ ಬುಕ್ಕಿನಲ್ಲಿ ಹರಿದಾಡುತ್ತಿರುವ ಬೀಫ್ ಫ್ಲೇವರ್ ಮ್ಯಾಗಿಯು ಆಸ್ಟ್ರೇಲಿಯಾದಲ್ಲಿ ಮಾರಾಟ ಮಾಡುವ ಮ್ಯಾಗಿಯಾಗಿದೆ ಎಂದು ವರದಿ ಮಾಡಿದೆ.

ಅದರ ಫೋಟೋವನ್ನು ಹಾಕಿ “ಮ್ಯಾಗಿಯಲ್ಲಿ ಗೋಮಾಂಸದ ಫ್ಲೇವರ್ ಹಾಕಲು ಪ್ರಾರಂಭಿಸಿದ್ದಾರೆ, ಇಂದಿನಿಂದ ನಾನು ಮ್ಯಾಗಿಯನ್ನು ಬಹಿಷ್ಕಾರ ಮಾಡುತ್ತಿದ್ದೇನೆ. ದಯವಿಟ್ಟು ಯಾರು ದನಕ್ಕೆ ತಾಯಿಯ ಸ್ಥಾನಮಾನ ನೀಡಿದ್ದೀರೊ ಅವರೆಲ್ಲರೂ ಮ್ಯಾಗಿಯನ್ನು ಬಹಿಷ್ಕಾರ ಮಾಡಿ” ಎಂದು ಬರೆಯಲಾಗಿದೆ.

मैगी में गोमांस का फ्लेवर डालना शुरू कर दिया मैं आज से मैगी का बहिष्कार करता हूँ , कृपया आप भी जो गाय को माता का दर्जा देतें हैं मैगी का बहिष्कार करें मैगी का बहिष्कार करो

Posted by क्षत्रिय सिंह on Tuesday, March 10, 2020

ಇನ್ನೊಂದು ಚಿತ್ರದಲ್ಲಿ ಕೂಡಾ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮ್ಯಾಗಿ ಕಂಪೆನಿಯ ಬೀಫ್ ಫ್ಲೇವರಿನ ಕ್ಯೂಬುಗಳ ಬಗ್ಗೆ ಕೂಡಾ ಇದೇ ರೀತಿಯ ಸುಳ್ಳುಗಳನ್ನು ಹರಿಯಬಿಡಲಾಗಿದೆ.

मैगी में गोमांस का फ्लेवर डालना शुरू कर दिया ?? कृपया आप भी जो गाय को माता का दर्जा देतें हैं मैगी का बहिष्कार करें ?#मैगी_का_बहिष्कार_करो…

Posted by Shubham Sharma on Tuesday, March 10, 2020

ಭೂಮ್ ಲೈವ್, ನಸ್ಲೇ ಇಂಡಿಯಾ ವಕ್ತಾರರನ್ನು ಸಂಪರ್ಕಿಸಿ ಈ ಬಗ್ಗೆ ಸ್ಪಷ್ಟನೆ ಕೇಳಿದಾಗ “ಮ್ಯಾಗಿಯ ಬೀಫ್ ಫ್ಲೇವರ್ ಉತ್ಪನ್ನಗಳು ಭಾರತಲ್ಲಿ ಮಾರಾಟಕ್ಕೆ ಲಭ್ಯವಿಲ್ಲ” ಎಂದು ಹೇಳಿದ್ದಾರಲ್ಲದೆ “ಭಾರತದಲ್ಲಿ ಲಭ್ಯವಿರುವ ಮ್ಯಾಗಿಯ ಯಾವುದೇ ಉತ್ಪನ್ನದಲ್ಲಿ ದನದ ಫ್ಲೇವರ್ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಮ್ಯಾಗಿ ಇಂಡಿಯಾ ವೆಬ್ ಸೈಟಿನಲ್ಲಿ ಮಾಂಸಾಹಾರಿ ವಿಭಾಗದಲ್ಲಿ ಕೇವಲ ಚಿಕನ್ ಫ್ಲೇವರ್ ಮಾತ್ರ ಹಾಕಿದೆ. ಜೊತೆಗೆ ತನ್ನ ಫೇಸ್ ಬುಕ್ ಪೇಜಲ್ಲಿ ಕೂಡಾ ಇದೆ ಮಾಹಿತಿಯನ್ನು ಹಾಕಿದೆ.

ಭೂಮ್ ಲೈವ್ ಗೋಮಾಂಸವಿದೆ ಎಂದು ವೈರಲಾದ ಫೋಟೋವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು “ಮ್ಯಾಗಿ ಆಸ್ಟ್ರೇಲಿಯಾ”ದ ವೆಬ್ಸೈಟಿನ ಫೋಟೋ ಎಂದು ಪತ್ತೆಯಾಗಿದೆ.

ಅಲ್ಲದೆ ಭೂಮ್ ಲೈವ್ ಫೇಸ್ ಬುಕ್ಕಲ್ಲಿ ಹರಿದಾಡುವ ಇನ್ನೊಂದು ಚಿತ್ರವಾದ ಗೋಮಾಂಸದ ಕ್ಯೂಬನ್ನು ಅಮೇರಿಕಾದ ಅಮೇಜಾನ್ ವೆಬ್ಸೈಟಲ್ಲಿ ಇರುವುದನ್ನು ಪತ್ತೆ ಹಚ್ಚಿದೆ. ಅದು ಕೂಡ ಭಾರತದಲ್ಲಿ ಲಭ್ಯವಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...