Homeಮುಖಪುಟದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ದಿಲ್ಲಿ ಗಲಭೆಗಳ ಕುರಿತು ಗೃಹ ಸಚಿವ ಅಮಿತ್ ಶಾಗೆ ಮೂರು ಪ್ರಶ್ನೆಗಳು..

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

- Advertisement -
- Advertisement -

ಕೃಪೆ: ಸ್ಕ್ರೋಲ್‌ -ರೋಹನ್ ವೆಂಕಟರಾಮಕೃಷ್ಣನ್

ಅನುವಾದ: ನಿಖಿಲ್ ಕೋಲ್ಪೆ

ದಿಲ್ಲಿ ಪೊಲೀಸರು ಕೇಂದ್ರ ಗೃಹಸಚಿವ ಅಮಿತ್ ಶಾ ಅಡಿಯಲ್ಲಿ ಕೆಲಸ ಮಾಡುತ್ತಾರೆ. ಹೀಗಿರುವಾಗ ಅವರ ಕ್ರೌರ್ಯ ಹಿಂಸೆಗಳ ಬಗ್ಗೆ ವಿಡಿಯೋ ಸಾಕ್ಷ್ಯಗಳು ಇರುವಾಗ ಈ ಅಮಿತ್ ಶಾ ಅವರನ್ನು ಸಮರ್ಥಿಸಿ ಭಾಷಣ ಮಾಡುವುದು ಹೇಗೆ ಸಾಧ್ಯ?

ದಶಕಗಳ ನಂತರ ಅತ್ಯಂತ ಕ್ರೂರ ಕೋಮುಗಲಭೆಗೆ ಒಳಗಾಗಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡ ದಿಲ್ಲಿಯ ಘಟನೆಗಳ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕೊನೆಗೂ ಸಂಸತ್ತಿನಲ್ಲಿ ಬಾಯಿ ಬಿಟ್ಟಿದ್ದಾರೆ. ದಿಲ್ಲಿಯಲ್ಲಿ ನಡೆದ ಗಲಭೆಗಳ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗಳ ಕೊನೆಯಲ್ಲಿ, “ಇದೊಂದು ಅತ್ಯಂತ ಯೋಜಿತ ಸಂಚಿನ ಹೊರತು” ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ. ಗಲಭೆಗಳ ನಿಯಂತ್ರಣಕ್ಕೆ 36 ಗಂಟೆಗಳನ್ನು ತೆಗೆದುಕೊಂಡ ದಿಲ್ಲಿ ಪೊಲೀಸರನ್ನು ಅವರು ಶ್ಲಾಘಿಸಿದ್ದಾರೆ. ಅದೂ ಕೂಡಾ ಪೊಲೀಸರು ತಮ್ಮ ನಾಲಾಯಕ್‌ತನ ಮತ್ತು ನೇರ ಶಾಮೀಲಾತಿಯ ಆರೋಪಗಳಿಗೆ ಗುರಿಯಾಗಿರುವಾಗ…!!

ಈಶಾನ್ಯ ದಿಲ್ಲಿಯ ಮುಖ್ಯ ರಸ್ತೆಯೊಂದರಲ್ಲಿ ಪೌರತ್ವ ಕಾಯಿದೆಗೆ ನಡೆದ ತಿದ್ದುಪಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ದಾಳಿಗಳು ನಡೆದ ಬಳಿಕ ಫೆಬ್ರವರಿ 23ರಂದು ಗಲಭೆಗಳು ಆರಂಭಗೊಂಡಿದ್ದವು. ಭಾರತೀಯ ಜನತಾ ಪಕ್ಷದ ನಾಯಕ ಕಪಿಲ್ ಮಿಶ್ರಾ ಜನರನ್ನು ಬೀದಿಗಿಳಿಯುವಂತೆ ಪ್ರಚೋದನೆ ನೀಡಿದ್ದರು. ಫೆಬ್ರವರಿ 26ರಂದು ಕೊನೆಗೂ ಶಾಂತಿ ಸ್ಥಾಪನೆಯಾಗುವ ಹೊತ್ತಿಗೆ ಮುಖ್ಯವಾಗಿ ಮುಸ್ಲಿಮರನ್ನೇ ಗುರಿಯಾಗಿಸಿದ ದೊಡ್ಡ ಪ್ರಮಾಣದ ಹಿಂಸಾಚಾರ, ಲೂಟಿ, ಬೆಂಕಿಹಚ್ಚುವಿಕೆ ನಡೆದವು. 53 ಜನರು ಪ್ರಾಣ ಕಳೆದುಕೊಂಡರು ಮತ್ತು ಬಹಳಷ್ಟು ಜನರ ಜೀವನವೇ ನಷ್ಟವಾಯಿತು.

ಮೂರು ದಿನಗಳ ಹಿಂಸಾಚಾರದ ಬಳಿಕ ಎದ್ದಿರುವ ಹಲವಾರು ಪ್ರಶ್ನೆಗಳಿಗೆ ಉತ್ತರಿಸುವ ಬದಲು ಅಮಿತ್ ಶಾ ಭಾಷಣವು ಕೇವಲ ರಾಜಧಾನಿ ಮತ್ತು ದೇಶದ ಜನರ ರಕ್ಷಣೆ ಹೊತ್ತಿರುವ, ಕಾನೂನು ಮತ್ತು ಶಿಸ್ತು ಕಾಪಾಡುವ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳಿಂದ ಇನ್ನಷ್ಟು ವಿವರಣೆಗಳನ್ನು ಮಾತ್ರ ಕೇಳುತ್ತಿದೆ.

ಗುಪ್ತಚರ ವೈಫಲ್ಯವೇ?

ದಿಲ್ಲಿ ಗಲಭೆಗಳು “ಅತ್ಯಂತ ಯೋಜಿತ ಸಂಚಿನ” ಪರಿಣಾಮ ಎಂದು ಅಮಿತ್ ಶಾ ಹೇಳಿಕೊಂಡಿದ್ದಾರೆ. ಉತ್ತರಪ್ರದೇಶದಿಂದ ಬಂದ ನೂರಾರು ಜನರು ಇದರಲ್ಲಿ ಶಾಮೀಲಾಗಿದ್ದಾರೆಂದು ತನಿಖೆಗಳು ತಿಳಿಸಿವೆ ಎಂದೂ ಹೇಳಿದ್ದಾರೆ. ಮೊದಲೇ ಹೇಳಿರುವಂತೆ ಹಿಂಸಾಚಾರಗಳು ಕಪಿಲ್ ಮಿಶ್ರಾ ಭಾಷಣದ ಬಳಿಕ ಆರಂಭವಾಗಿದ್ದವು. ಮಿಶ್ರಾ ಭಾಷಣ ಈಶಾನ್ಯ ದಿಲ್ಲಿಯ ಅತ್ಯುನ್ನತ ಪೊಲೀಸ್ ಅಧಿಕಾರಿಯ ಕಣ್ಣುಗಳ ಮುಂದೆಯೇ ನಡೆದಿತ್ತು ಎಂದು ವರದಿಗಳು ಹೇಳುತ್ತವೆ. ಪ್ರತಿಭಟನಕಾರರನ್ನು ತೆರವು ಮಾಡಲು ಪೊಲೀಸರಿಗೆ ಗಡು ನೀಡಿದ್ದ ಮಿಶ್ರಾ, ಇಲ್ಲದಿದ್ದರೆ ತಾನು ಮತ್ತು ತನ್ನ ಬೆಂಬಲಿಗರೇ ಅವರನ್ನು ತೆರವು ಮಾಡುವುದಾಗಿ ಬೆದರಿಕೆ ಹಾಕಿದ್ದ.

ಫೆಬ್ರವರಿ 24ರ ಭಾನುವಾರವೇ ಸಂಭಾವ್ಯ ಹಿಂಸಾಚಾರಗಳ ಕುರಿತು ಕನಿಷ್ಟ ಆರು ಗುಪ್ತಚರ ವರದಿಗಳನ್ನು ಸಲ್ಲಿಸಲಾಗಿತ್ತು. ಮೇಲಾಗಿ ಗಲಭೆ ಎಬ್ಬಿಸುವುದಕ್ಕೆ ಜನರು ಬಂದಿದ್ದ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಆಡಳಿತವಿದೆ ಮತ್ತು ಗಲಭೆ ನಿಯಂತ್ರಿಸಬೇಕಾದ ದಿಲ್ಲಿ ಪೊಲೀಸರು ಅಮಿತ್ ಶಾ ನಿಯಂತ್ರಣದಲ್ಲಿಯೇ ಇದ್ದಾರೆ. ಹೀಗಿರುವಾಗ ಇದೊಂದು ಅತ್ಯಂತ ಯೋಜಿತ ಸಂಚಿನ ಪರಿಣಾಮವೇ ಆಗಿದ್ದರೆ, ಹಿಂಸಾಚಾರ ನಡೆಯಲಿದೆ ಎಂದು ಮೊದಲೇ ಗುಪ್ತಚರ ವರದಿಗಳು ಬಂದಿದ್ದರೆ, ಮೂರು ದಿನಗಳ ಕಾಲ ಹಿಂಸಾಚಾರ ಯಾಕೆ ಮುಂದುವರಿಯಿತು?

ಮುಖ ಚಹರೆ ಗುರುತು ತಂತ್ರಜ್ಞಾನ?

ಮುಖ ಚಹರೆ ಗುರುತು ಪತ್ತೆ ತಂತ್ರಜ್ಞಾನ ಬಳಸಿ ಹಿಂಸಾಚಾರದಲ್ಲಿ ಪಾಲುಗೊಂಡ 1,100ರಷ್ಟು ಜನರನ್ನು ಗುರುತಿಸಲಾಗಿದೆ ಎಂದು ಗೃಹಸಚಿವ ತನ್ನ ಭಾಷಣದಲ್ಲಿ ಹೇಳಿದ್ದಾರೆ. ಜನರ ಮತದಾರರ ಗುರುತುಚೀಟಿ, ಡ್ರೈವಿಂಗ್ ಲೈಸನ್ಸ್ ಮುಂತಾದ ಮಾಹಿತಿ ಸಂಗ್ರಹದಿಂದ ಸಿ.ಸಿ. ಕ್ಯಾಮರಾದ ಫೊಟೊಗಳನ್ನು ಹೋಲಿಸಿ ಈ ತಂತ್ರಜ್ಞಾನವು ಜನರನ್ನು ಗುರುತಿಸುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನು ಹೇಗೆ ಬಳಸಲಾಗುತ್ತದೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಪೊಲೀಸರು ಬಳಸಿದಾಗ ಈ ಮುಖ ಚಹರೆ ಪತ್ತೆ ತಂತ್ರಜ್ಞಾನ ತೀರಾ ದೋಷಯುಕ್ತವಾಗಿದೆ ಎಂಬುದು ನಮಗೆ ಗೊತ್ತಿದೆ. ಇಂಗ್ಲೆಂಡ್‌ನಲ್ಲಿ ನಡೆದ ಒಂದು ಸಂಶೋಧನೆಯು ಅಲ್ಲಿನ ನಗರ ಪೊಲೀಸರು ಬಳಸುವ ಮುಖ ಚಹರೆ ಪತ್ತೆ ತಂತ್ರಜ್ಞಾನದಲ್ಲಿ ಐದರಲ್ಲಿ ನಾಲ್ಕು ಸಲ ಅಮಾಯಕ ಜನರನ್ನು ಗುರುತಿಸಲಾಗಿದೆ ಎಂದು ತಿಳಿಸುತ್ತದೆ.

ಇಂತಹಾ ತಂತ್ರಜ್ಞಾನಗಳು ಜನರು ಮತ್ತು ಮಾಹಿತಿಯನ್ನು ಕಂಪ್ಯೂಟರಿಗೆ ತುಂಬುವವರ ಪೂರ್ವಗ್ರಹಗಳನ್ನು ಪ್ರತಿಫಲಿಸುತ್ತವೆ ಎಂದೂ ಸಂಶೋಧಕರು ತೋರಿಸಿಕೊಟ್ಟಿದ್ದಾರೆ. ಯಾವುದೇ ಖಾಸಗಿತನ ರಕ್ಷಣಾ ಕಾಯಿದೆಯಾಗಲೀ, ಸ್ಪಷ್ಟ ನಿರ್ದೇಶನಗಳಾಗಲೀ ಇಲ್ಲದೇ ಇರುವಾಗ ಈ ತಂತ್ರಜ್ಞಾನ ತೀರಾ ಅಪಾಯಕಾರಿಯಗಬಲ್ಲದು.

ಪೊಲೀಸರ ಮೇಲೇ ಪೊಲೀಸ್?

ಒಂದು ಬೀಸು ಹೇಳಿಕೆಯಲ್ಲಿ ಅಮಿತ್ ಶಾ ದಿಲ್ಲಿ ಪೊಲೀಸರ ಮೇಲಿರುವ ಎಲ್ಲಾ ಆರೋಪಗಳನ್ನು ಬದಿಗೆ ಗುಡಿಸಿ, ಇಂತಹಾ ಆರೋಪಗಳು ಅವರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುತ್ತವೆ ಎಂದು ಹೇಳಿ ಕೈತೊಳೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ, 36 ಗಂಟೆಗಳ ದೀರ್ಘಕಾಲದಲ್ಲಿ ಗಲಭೆಯನ್ನು ನಿಯಂತ್ರಿಸಿದಕ್ಕಾಗಿ ದಿಲ್ಲಿ ಪೊಲೀಸರನ್ನು ಅಭಿನಂದಿಸಿದ್ದಾರೆ. ಆ ಸಮಯದಲ್ಲಿ ಯಾಕೆ ಅವರು ಹೆಚ್ಚು ಸಕ್ರಿಯವಾಗಿ ಕೆಲಸಮಾಡಲಿಲ್ಲ ಎಂಬುದಕ್ಕೆ ತೀರಾ ದುರ್ಬಲ ಸಮರ್ಥನೆಯನ್ನೂ ನೀಡಿದ್ದಾರೆ. ಅದೆಂದರೆ, ತಾನು ತನ್ನ ಸಂಸದೀಯ ಕ್ಷೇತ್ರವಾದ ಅಹಮದಾಬಾದ್‌ಗೆ ಯುಎಸ್‌ಎ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂದಿದ್ದುದರಿಂದ ತಾನು ಅಲ್ಲಿ ವ್ಯಸ್ತವಾಗಿದ್ದೆ; ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ಗೆ ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಿದ್ದೆ ಎಂದು ನುಣುಚಿಕೊಂಡಿರುವುದು.

ಆದರೆ, ವಿಡಿಯೋ ದಾಖಲೆಗಳೂ, ವರದಿಗಳೂ ಪೊಲೀಸರು ಮುಸ್ಲಿಮ್ ವಿರೋಧಿ ಗುಂಪುಗಳ ಪರ ಪಕ್ಷಪಾತದಿಂದ ವರ್ತಿಸಿರುವುದು ಮತ್ತು ನೇರವಾಗಿ ಕಲ್ಲೆಸತದಲ್ಲಿ ಭಾಗವಹಿಸಿರುವುದು ಸ್ಪಷ್ಟವಾಗಿದೆ.

ಒಂದು ಘಟನೆಯಲ್ಲಂತೂ ದಿಲ್ಲಿ ಪೊಲೀಸರೇ ಮುಸ್ಲಿಮ್ ಯುವಕನೊಬ್ಬನ ಸಾವಿಗೆ ಕಾರಣವಾಗಿರುವುದಕ್ಕೆ ಸ್ಪಷ್ಟ ದಾಖಲೆಗಳಿವೆ. ಆತನಿಗೆ ಮತ್ತು ಇನ್ನೊಬ್ಬ ಯುವಕನಿಗೆ ಪೊಲೀಸರೇ ಹೊಡೆದು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಿಸುವ ಘಟನೆ ಹಲವಾರು ವಿಡಿಯೋಗಳಲ್ಲಿ ದಾಖಲಾಗಿದೆ.

ದಿಲ್ಲಿ ಪೊಲೀಸರು ಹೇಗೆ ಗಲಭೆಗಳ ನಂತರದಲ್ಲಿ ಹಲವಾರು ದೂರುಗಳನ್ನು ದಾಖಲಿಸಲು ನಿರಾಕರಿಸಿ ತನಿಖೆಯನ್ನೂ ನಡೆಸಲಿಲ್ಲ ಎಂಬ ಬಗ್ಗೆ ‘ಸ್ಕ್ರೋಲ್ ಡಾಟ್ ಇನ್’ ವರದಿ ಮಾಡಿದೆ. ದಿಲ್ಲಿ ಪೊಲೀಸರು ಪ್ರಶ್ನಾರ್ಹವಾಗಿ ವರ್ತಿಸುತ್ತಿರುವಾಗ, ಅದು ಹೇಗೆ ಈ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ಕೊಡಬಲ್ಲರು? ಗೃಹ ಸಚಿವ ಮತ್ತು ಸರಕಾರವೇ ದಿಲ್ಲಿ ಪೊಲೀಸರ ಧಣಿಗಳಾಗಿರುವಾಗ ಹೇಗೆ ಇದನ್ನು ಮಾಡಬಲ್ಲರು? ಆದುದರಿಂದ ಸರಕಾರವನ್ನು ಹೊರತುಪಡಿಸಿದ ಬೇರೊಂದು ಸ್ವತಂತ್ರ ಸಂಸ್ಥೆ ಇದರ ತನಿಖೆ ನಡೆಸುವುದು ನ್ಯಾಯವಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...