HomeಮುಖಪುಟNPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

NPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

"ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ" ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ "ಪೌರತ್ವ ಪರಿಶೀಲನೆಯ" ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ..

- Advertisement -
- Advertisement -

ನಿನ್ನೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾರವರು NPRಗೆ ದಾಖಲೆ ತೋರಿಸಬೇಕಿಲ್ಲ. ನಿಮಗೆ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ. ನಿಮ್ಮನ್ನು ಡೌಟ್‌ಫುಲ್‌ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಹಲವು ವಯಲಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಖ್ಯಾತ ಚಿಂತಕ ಮತ್ತು ಹೋರಾಟಗಾರ ಶಿವಸುಂದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಪೌರತ್ವ ನೊಂದಣಿ ಹಾಗು ಎನ್ ಪಿ ಆರ್ ಬಗ್ಗೆ ಗೃಹಮಂತ್ರಿ ಅಮಿತ್ ಷಾ ರಾಜ್ಯ ಸಭೆಯಲ್ಲಿ ಗಳಹಿದ ಸುಳ್ಳುಗಳ ಕುರಿತು :

NPR-NRC- CAAಗಳ ವಿರುದ್ಧ ದೇಶಾದ್ಯಂತ ಜನರು ರಾಜಿಯಿಲ್ಲದ ಹೋರಾಟ ನಡೆಸುತ್ತಿರುವುದರಿದ ಕಂಗೆಟ್ಟಿರುವ ಮೊ-ಷಾ ಸರ್ಕಾರ ಸುಳ್ಳುಗಳನ್ನು ಹೇಳುವ ಮೂಲಕ ಹೋರಾಟವನ್ನು ದಾರಿ ತಪ್ಪಿಸುವ ಹುನ್ನಾರ ನಡೆಸಿದೆ. ನಿನ್ನೆ ರಾಜ್ಯಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಗಳು ಅದಕ್ಕೆ ತಾಜಾ ಉದಾಹರಣೆ. ಆದ್ದರಿಂದ ದೇಶದ ಜನತೆ ಗೃಹಮಂತ್ರಿಯವರ ಹೇಳಿಕೆಯಲ್ಲಿರುವ ಈ ಕೆಳಗಿನ ಸುಳ್ಳುಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

ಸುಳ್ಳು-1- NPR ಮಾಹಿತಿ ಸಂಗ್ರಹಣೆ ಹಂತದಲ್ಲಿ ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ.

ವಾಸ್ತವ : NPR ಮಾಡುತ್ತಿರುವುದೇ ದೇಶದ ಎಲ್ಲಾ ಜನರ ಪೌರತ್ವವನ್ನು ಪರೀಕ್ಷಿಸಲು. ಅದ್ಕಕೆಂದೇ ಪ್ರತಿಯೊಬ್ಬ ಪೌರನ ತಂದೆ ಮತ್ತು ತಾಯಿಯರ ಹುಟ್ಟಿದ ದಿನ ಹಾಗು ಸ್ಥಳದ ಮಾಹಿತಿಯನ್ನು ನಿರ್ದಿಷ್ಟವಾಗಿ ಕೇಳಲಾಗುತ್ತದೆ. ಅದಕ್ಕೆ ಕೊಟ್ಟ ಉತ್ತರವನ್ನು ಆಧರಿಸಿಯೇ ದೇಶದ ಜನರ ಪೌರತ್ವವು ಪರೀಕ್ಷೆಗೆ ಒಳಪಡುತ್ತದೆ.

NPR ಮತ್ತು NRC ಗಳ ಹುಟ್ಟಿಗೆ ಕಾರಣವಾದ Citizenship (Registration Of Citizens and Issue Of National Identity Cards) Rules 2003ದ ಉಪನಿಯಮ 4 (1)ರ ಪ್ರಕಾರ – ಕೇಂದ್ರ ಸರ್ಕಾರವು ಒಂದು ರಾಷ್ಟ್ರೀಯ ಪೌರತ್ವ ನೊಂದಣಿ ಪಟ್ಟಿಯನ್ನು ತಯಾರಿಸುವ ಸಲುವಾಗಿ ದೇಶದಲ್ಲಿ ವಾಸಿಸುತ್ತಿರುವ ಎಲ್ಲಾ ವ್ಯಕ್ತಿಗಳ ಮತ್ತು ಕುಟುಂಬಗಳ ಪೌರತ್ವ ವಿವರಗಳನ್ನೂ ಒಳಗೊಂಡಂತೆ ಅಗತ್ಯವಿರುವ ಎಲ್ಲಾ ವಿವರಗಳನ್ನು ದೇಶಾದ್ಯಂತ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬಹುದು .

ಉಪನಿಯಮ 4 (3) ರ ಪ್ರಕಾರ – ಸ್ಥಳೀಯ ಮಟ್ಟದ ರಾಷ್ಟ್ರೀಯ ನಾಗರಿಕರ ಪಟ್ಟಿಯನ್ನು ತಯಾರಿಸುವ ಸಲುವಾಗಿ NPR ನಲ್ಲಿ ಸಂಗ್ರಹಿಸಲಾದ ವ್ಯಕ್ತಿಗಳ ಮತ್ತು ಕುಟುಂಬಗಳ ವಿವರಗಳನ್ನು ಸ್ಥಳೀಯ ನಾಗರಿಕ ನೊಂದಣಿ ರಿಜಿಸ್ಟ್ರಾರ್ (ಅಂದರೆ ಸ್ಥಳೀಯ ತಹಸೀಲ್ದಾರರು) VERIFY AND SCRUTINIZE ಅಂದರೆ ಪರೀಕ್ಷಿಸಿ ಪರಿಶೀಲಿಸುತ್ತಾರೆ.

ಉಪನಿಯಮ 4 (4) ರ ಪ್ರಕಾರ – ಈ ಪರಿಶೀಲನಾ ಹಂತದಲ್ಲಿ ಯಾವುದಾದರೂ ವ್ಯಕ್ತಿಯ ಪೌರತ್ವ ಸಂಬಂಧಿ ವಿವರಗಳು ಸಂಶಯಾಸ್ಪದವಾಗಿ ಕಂಡುಬಂದಲ್ಲಿ ಮತ್ತಷ್ಟು ಪರಿಶೀಲನೆ ಮಾಡಲು NPR ಪಟ್ಟಿಯಲ್ಲಿರುವ ಆ ವ್ಯಕ್ತಿಯ ಹೆಸರಿನ ಮುಂದೆ ಸ್ಥಳೀಯ ರಿಜಿಸ್ಟ್ರಾರ್ ಅವರು ಸೂಕ್ತ ಟಿಪ್ಪಣಿಗಳನ್ನು ದಾಖಲಿಸುತ್ತಾರೆ ಮತ್ತು ಪರಿಶೀಲನೆ ಪೂರ್ಣಗೊಂಡ ನಂತರ ಅನುಮಾನಾಸ್ಪದವಾದ ಪೌರತ್ವವೆಂದು ಕಂಡುಬಂದಲ್ಲಿ ಸೂಕ್ತವಾದ ನಮೂನೆಯಲ್ಲಿ ಆ ವ್ಯಕ್ತಿಗಳಿಗೆ ಅಥವಾ ಕುಟುಂಬಗಳಿಗೆ ತಿಳಿಸುತ್ತಾರೆ.

ಉಪನಿಯಮ 7 ((2) ರ ಪ್ರಕಾರ- ತನ್ನ ಕುಟುಂಬಕ್ಕೆ ಸಂಬಂಧಪಟ್ಟ NPR ಪ್ರಶ್ನಾವಳಿಗಳಿಗೆ ಸರಿಯಾದ ಉತ್ತರ ಕೊಡುವುದು ಕುಟುಂಬದ ಮುಖ್ಯಸ್ಥನ ಜವಾಬ್ದಾರಿಯಾಗಿದೆ.

ಇದು ಹಾಲಿ ಇರುವ ನಿಯಮಾವಳಿಗಳು. ಇದಕ್ಕೆ ಈವರೆಗೆ ಸರ್ಕಾರ ಯಾವುದೇ ತಿದ್ದುಪಡಿ ಮಾಡಿಲ್ಲ.

ಹಾಗೂ NPR ಪ್ರಕ್ರಿಯೆಯಲ್ಲಿ ಉತ್ತರ ಇಲ್ಲದಿರುವುದು ಮತ್ತು ಕೊಡದಿರುವುದು ನಮ್ಮ ಪೌರತ್ವವನ್ನೇ ಪ್ರಶ್ನೆಗೊಳಪಡಿಸುತ್ತದೆ.

ಆದ್ದರಿಂದ “ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ” ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ “ಪೌರತ್ವ ಪರಿಶೀಲನೆಯ” ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ.

ಎಲ್ಲಿಯತನಕ Citizenship (Registration Of Citizens and Issue Of National Identity Cards) Rules 2003 ನಿಮಯದ ಮೇಲಿನ ಉಪನಿಯಮಾವಳಿಗಳನ್ನು ರದ್ದುಮಾಡುವುದಿಲ್ಲವೋ / ತಿದ್ದುಪಡಿ ಮಾಡುವುದಿಲ್ಲವೋ ಅಲ್ಲಿಯವರೆಗೆ ಗೃಹಮಂತ್ರಿಯವರ ಹೇಳಿಕೆ ಕೇವಲ ದಾರಿ ತಪ್ಪಿಸುವ ಹೇಳಿಕೆಯಷ್ಟೇ ಆಗಿರುತ್ತದೆ.

ಹಾಗೊಂದು ವೇಳೆ ಈ ನಿಯಮಗಳನ್ನು ರದ್ದು ಮಾಡಿಬಿಟ್ಟರೆ ಅಥವಾ ತಿದ್ದುಪಡಿಯಾದರೆ ನಿರ್ದಿಷ್ಟ ಜನಸಮುದಾಯಗಳ ಪೌರತ್ವ ಪರಿಶೀಲನೆ ಮಾಡಬೇಕೆಂಬ ಬಿಜೆಪಿ ಸರ್ಕಾರದ ಉದ್ದೇಶವೇ ಈಡೇರುವುದಿಲ್ಲ.

ಆದ್ದರಿಂದಲೇ ಯಾವ ತಿದ್ದುಪಡಿಯನ್ನು ಮಾಡದೆ ಕೇವಲ ಹೇಳಿಕೆಯನ್ನು ನೀಡುತ್ತಾ ಜನರನ್ನು NPR ಗೆ ಒಪ್ಪಿಸುವ ಹಾಗು NPR-NRC- CAA ಗಳ ವಿರುದ್ಧದ ಹೋರಾಟವನ್ನು ಹಾದಿತಪ್ಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.

ಆದ್ದರಿಂದ ಎಲ್ಲಿಯ ತನಕ ಸರ್ಕಾರವು ದೇಶದ ಜನರ ಪೌರತ್ವ ವನ್ನೇ ಅನುಮಾನಿಸುವ ಹಾಗು ಇಡೀ ಜನಕೋಟಿಯನ್ನು ಪೌರತ್ವ ಸಾಬೀತು ಪಡಿಸುವ ಅಸಾಧ್ಯ ಪರೀಕ್ಷೆಗೆ ಒಡ್ಡುವ

1. ಭಾರತದ ಪೌರತ್ವ ಕಾಯಿದೆ-1955ಕ್ಕೆ ವಾಜಪೇಯಿ ಸರ್ಕಾರ ತಂದ 14-A ತಿದ್ದುಪಡಿಯನ್ನು ಹಾಗು
2. Citizenship (Registration Of Citizens and Issue Of National Identity Cards) Rules 2003 ಗಳನ್ನುರದ್ದುಗೊಳಿಸುವುದಿಲ್ಲವೋ ಅಲ್ಲಿಯತನಕ ಜನರು ಹಾಗು ವಿರೋಧ ಪಕ್ಷಗಳು ಸರ್ಕಾರದ ಯಾವುದೇ ದುರುದ್ದೇಶದ ಮಾತುಗಳು ಮತ್ತು ಹೇಳಿಕೆಗಳಿಗೆ ಬಲಿಯಾಗಬಾರದು.

ಸುಳ್ಳು-2- NPR ಹಂತದಲ್ಲಿ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ.

ವಾಸ್ತವ- ಇದು ಅರ್ಧ ಸತ್ಯ . ಕೇಂದ್ರ ಸರ್ಕಾರ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಿರುವ NPR Training Manual ಪ್ರಕಾರ NPR ಮಾಹಿತಿ ಸಂಗ್ರಹ ಮಾಡಲು ಬರುವ ಅಧಿಕಾರಿಗಳಿಗೆ ಆಧಾರ್, ಡ್ರೈವಿಂಗ್ ಲೈಸೆನ್ಸ್ , ಮೊಬೈಲ್ ನಂಬರ್, ವೋಟರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ದಾಖಲೆಗಳನ್ನು ತೋರಿಸಬೇಕು.
– ಈ ನಿಯಮವನ್ನು ಸರ್ಕಾರ ಈ ಕ್ಷಣದವರೆಗೂ ಹಿಂತೆಗೆದುಕೊಂಡಿಲ್ಲ.

ಸುಳ್ಳು – 3- CAA ಪೌರತ್ವ ಕೊಡುವ ಕಾಯಿದೆಯೇ ಹೊರತು ಪೌರತ್ವವನ್ನು ಕಿತ್ತುಕೊಳ್ಳುವ ಕಾಯಿದೆಯಲ್ಲ

ವಾಸ್ತವ: ಇದು ಸುಳ್ಳು ಮತ್ತು ಅರ್ಧಸತ್ಯದಿಂದ ಕೂಡಿರುವ ಹೇಳಿಕೆಯಾಗಿದೆ.
CAA ಕಾಯಿದೆ ಬಾಂಗ್ಲಾದೇಶ, ಪಾಕಿಸ್ತಾನ ಹಾಗು ಅಫ್ಘಾಅನಿಸ್ತಾನ ಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಅಥವಾ ದೌರ್ಜನ್ಯಗಳ ಭಯದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬರುವ ಹಿಂದು,ಸಿಖ್ಖ, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿಗಳಿಗೆ ಆಶ್ರಯ ಮತ್ತು ಪೌರತ್ವವನ್ನು ಕೊಡುವ ಕಾಯಿದೆಯಾಗಿದೆ.

ಅಷ್ಟರಮಟ್ಟಿಗೆ ಅದು ಪೌರತ್ವವನ್ನು ಕೊಡುವ ಕಾಯಿದೆ. ಆದರೆ ಅದೇ ದೇಶಗಳಲ್ಲಿ ಅಹ್ಮದೀಯರು, ಹಜಾರಗಳು ಹಾಗು ಶಿಯಾಗಳು ಸಹ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆಂದು ಮೋದಿ ಸರ್ಕಾರವೇ 2018ರ ಸೆಪ್ಟೆಂಬರ್ ನಲ್ಲಿ ವಿಶ್ವಸಂಸ್ಥೆಗೆ ದೂರಿತ್ತಿದೆ. ಆದರೆ CAA ಕಾಯಿದೆ ಅದೇ ದೇಶಗಳಿದ ಅದೇ ಬಗೆಯ ಧಾರ್ಮಿಕ ದೌರ್ಜನ್ಯಗಳಿಗೆ ತುತ್ತಾಗಿ ವಲಸೆ ಬರುವ ಈ ಸಮುದಾಯಗಳಿಗೆ ಬಾಗಿಲನ್ನು ಮುಚ್ಚುತ್ತದೆ.

ಆ ಅರ್ಥದಲ್ಲಿ CAA ಕಾಯಿದೆ ಉಳಿದ ಧರ್ಮಿಯರಿಗೆ ಪೌರತ್ವವನ್ನು ನಿರಾಕರಿಸುವ ಕಾಯಿದೆಯೇ ಆಗಿದೆ.

ಅಲ್ಲದೆ CAA ಕಾಯಿದೆಯ ನಿಮಿತ್ತವಿಲ್ಲದೆ ಈವರೆಗೆ ಯಾವುದೇ ದೇಶದಿಂದ ಯಾವುದೇ ಬಗೆಯ ದೌರ್ಜನ್ಯಗಳಿಗೆ ತುತ್ತಾಗಿ ಆಶ್ರಯ ಕೋರಿ ಬರುತ್ತಿದ್ದವರಿಗೆ ಭಾರತ ಆಶ್ರಯ ಕೊಡುವಂತಹ ಮತ್ತು ಅವರು ಕೋರಿದಲ್ಲಿ 7-11 ವರ್ಶಗಳ ನಂತರ ಪೌರತ್ವ ಕೊಡುವಂತ ಅವಕಾಶ 1955ರಲ್ಲಿ ರಚಿಸಲಾದ ಕಾಯಿದೆಯಲ್ಲೇ ಅಂತರ್ಗತವಾಗಿದೆ.

ಅಲ್ಲದೆ, CAA ಮೂಲಕ NRC ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ತೋರಿಸಲಾಗದೆ ಅನುಮಾನಾಸ್ಪದರೆಂದು ಘೋಷಿತರಾಗುವ ಹಿಂದುಗಳಿಗೆ ಪೌರತ್ವ ಕೊಡಲಾಗುವುದೆಂಬ ಸರ್ಕಾರದ ಮತ್ತು ಬಿಜೆಪಿಯ ಗುಪ್ತ ಪ್ರಚಾರವು ಸಹ ಹಸಿಸುಳ್ಳಿನದಾಗಿದೆ.

ಏಕೆಂದರೆ CAA ಮೂಲಕ ಪೌರತ್ವ ಪಡೆಯಲು NRC ಯಿಂದ ಹೊರಬೀಳುವ ಭಾರತೀಯ ಹಿಂದುಗಳು ಮೊದಲು ತಾವು ಬಾಂಗ್ಲಾದೇಶೀಯರೊ ಅಥವಾ ಪಾಕಿಸ್ತಾನಿಯರೋ ಎಂದು ಸಾಬೀತು ಮಾಡಿಕೊಳ್ಳಬೇಕಾಗುತ್ತದೆ.

ಏಕೆಂದರೆ CAA ಸೌಲಭ್ಯ ಸಿಗುವುದು ಬಾಂಗ್ಲಾದೇಶ ಅಥವಾ ಪಾಕಿಸ್ತಾನಗಳಿಂದ ವಲಸೆ ಬಂದ ಹಿಂದುಗಳಿಗೆ ಹೊರತು ದಾಖಲೆಗಳಿಲ್ಲವೆಂಬ ಕಾರಣಕ್ಕೆ ಪೌರತ್ವ ಕಳೆದುಕೊಳ್ಳುವ ಭಾರತೀಯ ಹಿಂದುಗಳಿಗಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...