Homeಮುಖಪುಟಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

ಸಾಹಿಲ್‌ ಚೀನಾದಿಂದ ತುಮಕೂರಿಗೆ ಬರುವುದಿಲ್ಲ ಎಂದಿದ್ದು ಏಕೆ? ಆತನ ಮಾತುಗಳಲ್ಲೇ ಕೇಳಿ

- Advertisement -
- Advertisement -

ದೇಶಭಕ್ತಿ ತೋರಿಕೆಯದಲ್ಲ. ಅದನ್ನು ಬಹಿರಂಗವಾಗಿ ತೋರಿಸಬೇಕಾಗಿಯೂ ಇಲ್ಲ. ದೇಶಭಕ್ತಿ ವ್ಯಾಪಾರದ ಲಾಭಗಳಿಸುವ ಸರಕೂ ಅಲ್ಲ. ಅದು ಹೃದಯದಲ್ಲಿರಬೇಕು. ಸಂದರ್ಭ ಬಂದಾಗ ಅದಾಗಿ ತೆರೆದುಕೊಳ್ಳಬೇಕು. ಆದರೆ ಕೆಲವೊಂದು ವ್ಯಕ್ತಿ-ಸಂಘಟನೆಗಳು ಸಂಕೇತಗಳನ್ನು ಕೈಯಲ್ಲಿಡಿದು ದೇಶಭಕ್ತಿ ಇದೇ ಎಂದು ಕೂಗಿ ಹೇಳುತ್ತಿರುವ ಹೊತ್ತಿನಲ್ಲಿ ನಿಜದ ದೇಶಭಕ್ತಿ ಹೇಗಿರಬೇಕು ಎಂಬುದಕ್ಕೆ ಈತ ಸಾಕ್ಷಿಯಾಗಿದ್ದಾನೆ. ದೇಶವೆಂದರೆ ಗಡಿ ಮಾತ್ರವಲ್ಲ. ಅದರೊಳಗಿರುವ ಜನರಿಗೆ ತನ್ನಿಂದ ತೊಂದರೆಯಾಗುವುದಾದರೆ, ಸಂಕಷ್ಟ ಬರುವುದಾದರೆ ನಾನು ಅಲ್ಲಿಗೆ ಹೋಗಬಾರದು ಎಂಬ ದೃಢವಾದ ತೀರ್ಮಾನ ಕೈಗೊಳ್ಳುವುದು. ದೇಶ ಜನರ ಪರವಾಗಿ ಹೋರಾಡುವುದು ಎಂಬುದನ್ನು ಸಾಹಿಲ್ ಹುಸೇನ್ ಸಾಧಿಸಿ ತೋರಿದ್ದಾರೆ. ಅವರು ತೆಗೆದುಕೊಂಡಿರುವ ಕ್ರಮ ತನ್ನ ಕುಟುಂಬಕ್ಕೆ ನೋವಾದರೂ ದೇಶಕ್ಕೆ ಹಿತಬಯಸುವುದಾಗಿದೆ. ಇದೇ ನಿಜವಾದ ದೇಶಭಕ್ತಿ.

ಹೌದು, ತುಮಕೂರಿನ ಶಿಕ್ಷಕ ರಿಜ್ಞಾನ್ ಪಾಷಾ ಮತ್ತು ಸಮೀನಾ ಖಾನಂ ದಂಪತಿಯ ಎರಡನೇ ಪುತ್ರ ಸಾಹಿಲ್ ಹುಸೇನ್ ತಾನು ತೆಗೆದುಕೊಂಡು ನಿರ್ಧಾರದಿಂದ ನಕಲಿ ದೇಶಭಕ್ತರಿಗೆ ಮಾದರಿಯಾಗಿದ್ದಾರೆ. ದೇಶಭಕ್ತಿ ಕೂಗುವುದಲ್ಲ, ಸಂದರ್ಭ ಬಂದಾಗ ಮೆರೆಯುವುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ತಾನಿರುವ ಸ್ಥಳದಿಂದ ತನ್ನ ದೇಶಕ್ಕೆ ಬಂದರೆ ಜನರು ಬಾಧಿತರಾಗುತ್ತಾರೆಂಬ ಸಾಹಿಲ್ ಹುಸೇನ್ ತಿಳುವಳಿಕೆ ಮೆಚ್ಚುವಂತಹದ್ದು. ಚಿಕ್ಕ ವಯಸ್ಸಿಗೆ ಇಂತಹ ತೀರ್ಮಾನ ಕೈಗೊಂಡಿರುವುದು ಆತನ ತಂದೆ-ತಾಯಿಗಳಲ್ಲಿ ಮಗನ ಬಗ್ಗೆ ಅಭಿಮಾನ ಉಕ್ಕಿ ಬಂದಿದೆ.

ಎಂಬಿಬಿಎಸ್ ವ್ಯಾಸಂಗ ಮಾಡಲೆಂದು ಕರ್ನಾಟಕದಿಂದ ಚೀನಾದ ವಾಸ್ಲಿ ಡಿಸ್ಟ್ರಿಕ್ ನಾನ್ ಚೆಂಗ್ ಪ್ರಾವಿನ್ಸ್ ಗೆ 5 ಮಂದಿ ಸ್ನೇಹಿತರು ತೆರಳುತ್ತಾರೆ. ಈ ಐವರಲ್ಲಿ ಇಬ್ಬರು ಯುವತಿಯರು ಮತ್ತು ಮೂವರು ಯುವಕರು ಸೇರಿರುತ್ತಾರೆ. ನಾಬ್ ಆಫ್ರಿನ್, ಅರುಣ್ ಕುಮಾರ್, ಲೋಕೇಶ್ ಮತ್ತು ತುಮಕೂರಿನಿಂದ ಸಾಹಿಲ್ ಹುಸೇನ್ ಜಿಯಾಂಗ್ ಯೂನಿವರ್ ಸಿಟಿ ಆಫ್ ಚೈನೀಸ್ ಟ್ರೆಡಿಷನ್ಸ್ ಮೆಡಿಸನ್ ವಿವಿಗೆ ಎಂಬಿಬಿಎಸ್ ಓದಲು ಹೋಗುತ್ತಾರೆ. ಈಗ ಅವರೆಲ್ಲರೂ 6ನೇ ಸೆಮಿಸ್ಟರ್ ಓದುತ್ತಿದ್ದಾರೆ. ಆದರೆ ಚೀನಾದಲ್ಲಿ ಕರೋನಾ ವೈರಸ್ ದಾಳಿ ಇಡುತ್ತಿದ್ದಂತೆಯೇ ವಿವಿಗೆ ರಜೆ ಘೋಷಿಸಲಾಗುತ್ತದೆ. ತನ್ನ ತವರು ದೇಶಗಳಿಗೆ ತೆರಳುವಂತೆ ಸೂಚಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಎಂಬಿಬಿಎಸ್ ವ್ಯಾಸಂಗಕ್ಕೆ ಹೋಗಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅವರ ಪೋಷಕರು ಕೂಡಲೇ ಸ್ವದೇಶಕ್ಕೆ ವಾಪಸ್ ಕರೆಸಿಕೊಳ್ಳುತ್ತಾರೆ. ಕೊರೋನ ವೈರಸ್ ಇಡೀ ಚೀನಾವನ್ನೇ ಬಾಧಿಸುತ್ತಿರುವಾಗ ಸಾಹಿಲ್ ಹುಸೇನ್ ತನ್ನ ತವರಿಗೆ ಹೋಗದೇ ಇರಲು ತೀರ್ಮಾನಿಸುತ್ತಾರೆ. ಎಲ್ಲಾ ಪೋಷಕರಂತೆ ರಿಜ್ವನ್ ಪಾಷಾ ಅವರು ಕೂಡ ತನ್ನ ಮಗನಿಗೆ ಪೋನ್ ಮಾಡಿ ತುಮಕೂರಿಗೆ ವಾಪಸ್ ಆಗುವಂತೆ ಕೇಳಿಕೊಳ್ಳುತ್ತಾರೆ. ಆಗ ಸಾಹಿಲ್ ತನ್ನ ನಿರ್ಧಾರವನ್ನು ತಿಳಿಸುತ್ತಾರೆ. ಇದರಿಂದ ರಿಜ್ವನ್ ಪಾಷ ಅವರು ಅದಕ್ಕೆ ತಲೆದೂಗುತ್ತಾರೆ.

ತಂದೆ ರಿಜ್ವಾನ್ ಪಾಷ ಅವರಿಗೆ ಮಗ ಸಾಹಿಲ್ ಕಳಿಸಿರುವ ವಿಡಿಯೋದಲ್ಲಿ ಹೇಳಿರುವಂತೆ “ನಾನು ಇಲ್ಲಿ ಚನ್ನಾಗಿಯೇ ಇದ್ದೇನೆ. ಚೀನಾ ಸರ್ಕಾರ ಉತ್ತಮ ಕ್ರಮ ಕೈಗೊಂಡಿದೆ. ವಿಶ್ವವಿದ್ಯಾಲಯವೂ ನಮಗೆ ಬೆಂಬಲಕ್ಕೆ ನಿಂತಿದೆ. ನೀವು ಹೆದರಬೇಡಿ. ನಾನು ದೇಶಕ್ಕೆ ಬರಬೇಕಾದರೆ ಮೂರು ವಿಮಾನಗಳನ್ನು ಬದಲಿಸಿ ಬರಬೇಕು. ಇದರಿಂದ ನಾನು ಭಾರತಕ್ಕೆ ಬಂದರೆ ಅಲ್ಲಿಗೂ ಕೊರೋನ ವೈರಸ್ ಹರಡುತ್ತದೆ. ಹಾಗಾಗಿ ನಾನು ಬರುವುದಿಲ್ಲ. ನೀವು ಭಯಬೀಳಬೇಡಿ”  ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಶಿಕ್ಷಕ ರಿಜ್ವಾನ್ ಪಾಷ, ನಾನು ಮಗನಿಗೆ ಪೋನ್ ಮಾಡಿದೆ. ಬೇಗ ಚೀನಾ ಬಿಟ್ಟುಬರುವಂತೆ ಹೇಳಿದೆ. ಆದರೆ ಮಗ ಬರುವುದಿಲ್ಲ ಹೇಳಿದ. ನಾನು ಇರುವ ಜಾಗದಿಂದ ಬ್ಯಾಂಕಾಕ್‌ಗೆ ಬರಬೇಕು. ಅಲ್ಲಿಂದ ದೆಹಲಿ ಅಥವಾ ಮುಂಬೈಗೆ ಬರಬೇಕು. ನಾನು ದೇಶಕ್ಕೆ ಬಂದರೆ ತೊಂದರೆಯಾಗಬಹುದು. ಹಾಗಾಗಿ ನಾನು ಬರುತ್ತಿಲ್ಲ. ಇಲ್ಲಿ ನಾನು ಚೆನ್ನಾಗಿಯೇ ಇದ್ದೇನೆ. ನೀವು ಆರಾಮವಾಗಿರಿ ಎಂದು ಹೇಳಿದ. ನನಗೆ ಮಗನ ಬಗ್ಗೆ ಅಭಿಮಾನ ಉಕ್ಕಿಬಂತು. ಸಣ್ಣ ವಯಸ್ಸಿನಲ್ಲಿ ಇಷ್ಟೊಂದು ತಿಳುವಳಿಕೆ ಇದೆ. ದೇಶದ ಬಗ್ಗೆ ಆತನಿಗಿರುವ ಅಭಿಮಾನ ಕಂಡು ನನ್ನ ಕಣ್ಣು ನೀರಾಡಿತು. ಒಳ್ಳೆಯ ಮಗನನ್ನು ಪಡೆದಿದ್ದೇನೆ. ಆಯ್ತು ಚನ್ನಾಗಿರು ಎಂದು ಹೇಳಿದೆ ಎಂದು ತಿಳಿಸಿದರು.

ಈಗ ಚೀನಾದಲ್ಲಿ ಆರೋಗ್ಯಕರ ವಾತಾವರಣ ಇಲ್ಲ. ಸಾವಿರಾರು ಮಂದಿ ಕೊರೋನ ವೈರಸ್ ಗೆ ಬಲಿಯಾಗಿದ್ದಾರೆ. ಲಕ್ಷಾಂತರ ಮಂದಿ ಸೋಂಕಿನಿಂದ ನರಳುತ್ತಿದ್ದಾರೆ. ಕೊರೋನ ಸೋಂಕು ಇಡೀ ವಿಶ್ವಕ್ಕೆ ಹಬ್ಬುತ್ತಿದೆ. ಭಾರತದಲ್ಲೂ ಸುಮಾರು 80ಕ್ಕೂ ಹೆಚ್ಚು ಕೊರೋನ ವೈರಸ್ ಸೋಂಕಿನ ಪ್ರಕರಣಗಳು ಪತ್ತೆ ಆಗಿವೆ. ಜನರು ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲೂ ತಾನು ಚೀನಾದಲ್ಲಿಯೇ ಇರುತ್ತೇನೆ. ಭಾರತಕ್ಕೆ ಬಂದರೆ ಕೋರೋನಾ ವೈರಸ್ ಹರಡಿದರೆ ನನ್ನ ಜನರು ಸಂಕಟ, ನೋವು ಅನುಭವಿಸುತ್ತಾರೆಂದು ತೀರ್ಮಾನಿಸಿರುವುದು ನಿಜವಾಗಿಯೇ ಆತನ ದೇಶಪ್ರೇಮಕ್ಕೆ ಬೆಲೆ ಕಟ್ಟುವಂತಿಲ್ಲ. ತಾನು ಎಷ್ಟೇ ಕಷ್ಟ ಎದುರಿಸಿದರೂ ನನ್ನ ಜನರಿಗೆ ನೋವಾಗದಿರಲಿ ಎಂಬ ಅಚಲ ನಿಲುವಿಗೆ ಹ್ಯಾಟ್ಸಪ್ ಹೇಳಲೇಬೇಕು. ನಿಜಕ್ಕೂ ರಿಜ್ವಾನ್ ಪಾಷ ಮತ್ತು ಸಮೀನಾ ಖಾನಂ ದಂಪತಿಗೆ ಅಭಿನಂದನೆ ಸಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...