Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...