Homeಆರೋಗ್ಯGood News: ಕೊರೊನಾ ವಿರುದ್ಧ ಸಮರ - ಭಾರತದಲ್ಲಿ 7 ರೋಗಿಗಳು ಗುಣಮುಖ

Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

- Advertisement -
- Advertisement -

ಭಾರತದಲ್ಲಿ ಶನಿವಾರ ಬೆಳಿಗ್ಗೆ ಕೊರೊನಾ ವೈರಸ್ (ಕೋವಿಡ್ -19)ನ ಒಂದು ಹೊಸ ಪ್ರಕರಣ ವರದಿಯಾಗಿದ್ದರೂ ಸಹ, ವೈರಲ್ ಕಾಯಿಲೆಯಿಂದ ಸೋಂಕಿತರಾದ ಒಟ್ಟು 83ರೋಗಿಗಳ ಪೈಕಿ ಏಳು ಜನರನ್ನು ರೋಗದಿಂದ ಗುಣಪಡಿಸಲಾಗಿದೆ ಮತ್ತು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಅಲ್ಲಿಗೆ ಸೋಂಕು ತಗುಲಿದ ನಂತರವೂ ಭಾರತದಲ್ಲಿ ಗುಣಮುಖರಾದ ಒಟ್ಟು ರೋಗಿಗಳ ಸಂಖ್ಯೆ ಈಗ 10 ಆಗಿದೆ.

ಕೋವಿಡ್ -19 ಪ್ರಕರಣದಲ್ಲಿ ಇತ್ತೀಚೆಗೆ ಗುಣಮುಖವಾದ ಏಳು ಪ್ರಕರಣಗಳಲ್ಲಿ ಐದು ಪ್ರಕರಣಗಳು ಉತ್ತರ ಪ್ರದೇಶದವರಾದರೆ, ಮತ್ತು ರಾಜಸ್ಥಾನ ಮತ್ತು ದೆಹಲಿಯಲ್ಲಿ ತಲಾ ಒಬ್ಬರು ಗುಣಮುಖರಾಗಿದ್ದಾರೆ. ಈ ಮೊದಲು ಕೇರಳದಲ್ಲಿ ಮೂವರು ಗುಣಮುಖರಾಗಿದ್ದರು. ಅವರಿಗೆ ಮತ್ತೆ ಸೋಂಕು ಮರಕಳಿಸುವಿಕೆಯ ವರಿದಯಾಗಿಲ್ಲ.

“ಈ ರೋಗಿಗಳನ್ನು ಡಿಸ್ಚಾರ್ಜ್ ಮಾಡಲಾಗಿರುವುದರಿಂದ ಅವರ ಎಲ್ಲಾ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿವೆ ಎಂದರ್ಥ, ಮತ್ತು ಅವರನ್ನು ರೋಗ ಮುಕ್ತ ಎಂದು ಕರೆಯಬಹುದು” ಎಂದು ಅಧಿಕಾರಿ ಹೇಳಿದರು.

ಕೊರೊನಾ ವೈರಸ್‌ ಅಂತಹ ಮಾರಣಾಂತಿಕ ಖಾಯಿಲೆಯಲ್ಲ. ಕೆಮ್ಮು ನೆಗಡಿ ರೀತಿ ಸಾಂಕ್ರಾಮಿಕ ರೋಗ ಅಷ್ಟೇ. ಇದರಿಂದಾಗಿಯೇ ಸಾವು ಸಂಭವಿಸುವುದಿಲ್ಲ. ಈಗಾಗಲೇ ರೋಗ ನಿರೋಧಕ ಶಕ್ತಿ ಕಡಿಮೆಯಿರುವ ವೃದ್ಧರಿಗೆ ಮತ್ತು ಹಲವು ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಸೋಂಕು ತಲುಲಿದರೆ ಮಾತ್ರ ಸಾವಿನ ಸಾಧ್ಯತೆ ಇರುತ್ತದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಮಕ್ಕಳು ಮತ್ತು ವಯಸ್ಕರು ಸೋಂಕು ತಗುಲಿದರೂ ಸಹ ಗುಣಮುಖರಾಗುವ ಸಾಧ್ಯತೆ ಹೆಚ್ಚಿದೆ.

ಭಾರತದಲ್ಲಿ ಈವರೆಗೆ ಇಬ್ಬರು ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯದ ಪ್ರಕಾರ ಎರಡೂ ಪ್ರಕರಣಗಳು ಅಧಿಕ ರಕ್ತದೊತ್ತಡ, ಮಧುಮೇಹ, ಆಸ್ತಮಾ ಮುಂತಾದ ರೋಗಗಳು ಮೊದಲೇ ಇದ್ದು ಕೊರೊನಾ ಅವರ ದೇಹ ಸ್ಥಿತಿಯನ್ನು ಉಲ್ಬಣಗೊಳಿಸಿದ ಕಾರಣ ಮರಣ ಸಂಭವಿಸಿದೆ.

ಆದರೆ ಮಾಧ್ಯಮಗಳು ಕೊರೊನಾ ಬಗ್ಗೆ ಜನರನ್ನು ಭಯಭೀತಗೊಳಿಸುತ್ತಿವೆ. ಸರ್ಕಾರಗಳು ಮುಂಜಾಗ್ರತ ಕ್ರಮವಾಗಿ ತೆಗೆದುಕೊಂಡ ಕ್ರಮಗಳು, ತುರ್ತುಪರಿಸ್ಥಿತಿಯು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಸದ್ಯಕ್ಕೆ 7 ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿರುವುದರಿಂದ ರೋಗ ಗುಣಪಡಿಸುವ ಹೋರಾಟಕ್ಕೆ ಮತ್ತಷ್ಟು ಶಕ್ತಿ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...