Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...