Homeಅಂಕಣಗಳುಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

ಮುಖಕ್ಕೆ ಬೀಳ್ತಿರೊ ಎಂಜಲು ಒರೆಸಿಕೊಳ್ಳಲು ಲೇವಣ್ಣ ಎರಡು ಶಾಮಿಯಾನ ತರಿಸಿಕೊಂಡ ಬ್ರೇಕಿಂಗ್ ನ್ಯೂಸ್!

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಮುಖ್ಯಮಂತ್ರಿ ‘ಸುಮಾರ್ ಸ್ವಾಮಿ’ಯ ಬೆನ್ನಿಗೆ ಬಿದ್ದ ಬೇತಾಳದಂತೆ ಹೋದಲ್ಲಿ ಬಂದಲ್ಲೆಲ್ಲ ರಂಕಲು ಎಬ್ಬಿಸಿಕೊಂಡು ತಿರುಗೋ ಹೆಚ್.ಡಿ. ಲೇವಣ್ಣನ ಹಿಲ್ಲೇರಿಯಸ್ ಅಡ್ವೆಂಚರ್‍ಗಳಿಗೆ ಹೊಸದೊಂದು ಸಾಹಸ ಸೇರ್ಪಡೆಯಾಗಿದೆ. ತನ್ನ ಮನೆಯ ಬೆಡ್ರೂಂ ಮಂಚದ ಮೇಲೆ ಹೋಮಕುಂಡ ಕಟ್ಟಿಸಿಕೊಂಡು ಅದ್ರೊಳಗೇ ಮಲಗಿದ್ದ ಲೇವಣ್ಣನಿಗೆ ಕನಸಿನಲ್ಲಿ ಸನಿಮಾತ್ಮನು ಬಂದು ತನ್ನ ಕಾಗೆ ಕೊಕ್ಕಿನಿಂದ ಲೇವಣ್ಣನ ಕಣ್ಣಿಗೆ ಕುಕ್ಕಿಸಿ ಎಬ್ಬಿಸಿದ್ದಾನೆ. ಪ್ರವಾಹ ಬಂದು ಜನ ಸಾಯ್ತಾವರೆ, ನೀನಿಲ್ಲಿ ಕುಂಡದೊಳಗೆ ಕಾಲೆತ್ತಿಕೊಂಡು ಬಿದ್ಕಂಡಿದೀಯ ಎದ್ದೇಳೋ ಲೋಪರ್ ಎಂದು ಬೈದನಂತೆ. ತಕ್ಷಣ ಕುಂಡದೊಳಗಿನಿಂದ ಕಣ್ಣುಜ್ಜಿಕೊಂಡು ಎದ್ದ ಲೇವಣ್ಣ ಕಾರಲ್ಲಿ ಒಂದೆರಡು ಬಂಡಲ್ ಬಿಸ್ಕತ್ ಪ್ಯಾಕೆಟ್ ಎತ್ಕೊಂಡು ಪ್ರವಾಹ ಸಂತ್ರಸ್ತರ ಗಂಜಿಕೇಂದ್ರಗಳಿಗೆ ಓಡೋಗಿದೆ. ಅಲ್ಲಿ ಮೊದಲೇ ನೊಂದು ಬೆಂದು ಹೈರಾಣಾಗಿದ್ದ ಸಂತ್ರಸ್ತ ಜನರಿಗೆ ನಾಯಿಗೆ ಎಸೆಯುವಂತೆ ಬಿಸ್ಕತ್ ಎಸೆದು ಬಂದಿದೆ. ಈ ಸುದ್ದಿ ಬಹಿರಂಗವಾಗುತ್ತಿದ್ದಂತೆ ಜನ ಕ್ಯಾಕರಿಸಿ ತುಪಾತುಪಾ ಉಗಿಯತೊಡಗಿದ್ದಾರೆ. ದೊಡ್ಡಗೌಡರ ಮಗ ಅನ್ನೋ ಕ್ವಾಲಿಫಿಕೇಷನ್ ಬಿಟ್ರೆ ಗ್ರಾಮಪಂಚಾಯ್ತಿ ಪೀವನ್ ಆಗಲೂ ಲಾಯಕ್ಕಿಲ್ಲದ ಭಯಂಕರ ವದನ ಹೊಂದಿರೋ ಲೇವಣ್ಣ, ಮುಖಕ್ಕೆ ಬೀಳ್ತಿರೋ ಎಂಜಲು ಒರೆಸಿಕೊಳ್ಳಲು ಮನೇಲಿರೋ ಟವೆಲ್ಲು, ಬೆಡ್‍ಶೀಟುಗಳು ಸಾಲದಾಗಿ ಹೊಸ ಎರಡು ಶಾಮಿಯಾನ ತರಿಸಿಕೊಂಡಿದ್ದಾರೆಂದು ಲೇವಣ್ಣನ ಅಧಿಕೃತ ಪುತ್ರ ಹೇಳಿಕೆ ಕೊಟ್ಟಿದ್ದಾರೆ. ಇದರ ನಡುವೆ ಲೇವಣ್ಣನೇನಾದ್ರೂ ಸಂತ್ರಸ್ತ ಶಿಬಿರಗಳಿಗೆ ಅಪ್ಪಿತಪ್ಪಿ ಮತ್ತೆ ಭೇಟಿ ಕೊಟ್ಟರೆ ಅಲ್ಲಿರೋ ಜನರು ಲೇವಣ್ಣನ ಕಾಲುಹಿಡಿದು ದರದರನೆ ಎಳೆದೊಯ್ದು ರಾಜಾಸೀಟ್ ಮೇಲಿಂದ ಕೆಳಕ್ಕೆಸೆಯಲು ಪ್ಲಾನ್ ಮಾಡಿದ್ದಾರೆಂದು ಗುಪ್ತಚರ ಮೂಲಗಳು ಸ್ಪಷ್ಟಪಡಿಸಿವೆ.

********

ಆಡಳಿತ ನಡೆಸಿ ಅನುಭವವಿರದ ಎಲ್ ಬೋರ್ಡ್ ಎನ್.ಡಿ.ಎ ಸರ್ಕಾರ, ಎಲ್ಲಿ ಕೈ ಇಟ್ಟರೂ ಅಲ್ಲೊಂದು ಕೊಳಕುಮಂಡಲದ ಹಾವಿನ ಕೈಲಿ ಗಚ್ಚನೆ ಕಡಿಸಿಕೊಂಡು ಕಿಟಾರ್ ಎಂದು ಕಿರುಚಿಕೊಳ್ಳುತ್ತಿರುವ ಸುದ್ದಿಗಳು ಲಭ್ಯವಾಗಿವೆ. ಕೇಂದ್ರ ಅಂಕಿಅಂಶ ಆಯೋಗ ನಡೆಸಿದ ಅವಲೋಕನದಲ್ಲಿ ಕೇಂದ್ರದ ‘ಹಾಫ್ ಮೆಂಟ್ಲು ಓಲ್ಡ್ ಮ್ಯಾನ್’ ಸರ್ಕಾರದ ಕಾಲದ ಜಿ.ಡಿ.ಪಿಯು ಹಿಂದಿನ ಯುಪಿಎ ಸರ್ಕಾರದ ಕಾಲದ ಜಿಡಿಪಿಯ ಕಾಲಧೂಳಿಗೂ ಸಮವಿಲ್ಲದಂತೆ ಯಕ್ಕುಟ್ಟಿ ಹೋಗಿರುವುದು ಬಯಲಾಗಿದೆ. ಇದನ್ನೇ ಸರ್ಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಿದಾಗ ತಲೆಯಿರುವ ಮಾಧ್ಯಮಗಳು ಪೊರಕೆ ಎತ್ತಿಕೊಂಡು ‘ಗಟರ್ ಗ್ಯಾಸ್ ಮೆಂಟ್ಲುಮ್ಯಾನ್’ ಮುಖಕ್ಕೆ ಹೆಟ್ಟಿ ‘ಏನಲೇ ಇದು ಭಾಡಕೋ’ ಎಂದು ಮಕ್ಕುಗಿದಿವೆ. ಇದರಿಂದ ನೊಂದ ಮೆಂಟ್ಲುತಾತ.. ಆ ರಿಪೋರ್ಟನ್ನೇ ವೆಬ್‍ಸೈಟಿಂದ ಕಿತ್ತು ಬಚ್ಚಿಡಲು ಹೇಳಿ, ಮತ್ತೊಮ್ಮೆ ಸಿಕ್ಕಿ ಬಿದ್ದಿದೆ. ಚಡ್ಡಿ ಹರಿದೋಗಿ ಏನೇನೋ ಕಾಣ್ತಿದೆ ನೋಡ್ಕಳಯ್ಯ ಅಂದ್ರೆ ‘ ನಾನಿರದೇ ಹಿಂಗೆ, ನೋಡಕ್ಕಾಗದಿದ್ರೆ ನೀವೇ ಕಣ್ ಮುಚ್ಕಳಿ ಅಂದ್ನಂತೆ’ ಅನ್ನೋ ಗಾದೆಯನ್ನ ಈ ಓಲ್ಡ್ ಬಫೆಲೋನ ನೋಡಿಯೇ ಬರೆದಿರಬಹುದೆಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

********

ಭೂಮಿಯ ಮೇಲೆ ಎಲ್ಲೂ ಕಾಣಸಿಗದ ಅತ್ಯಂತ ಶ್ರೇಷ್ಟ ಮುಠ್ಠಾಳರ ಕೊಂಪೆಯಾಗಿರೋ ಮೋತಿಜೀ ಭಕ್ತರು ಕೇರಳ ಪ್ರವಾಹದ ಸಂದರ್ಭದಲ್ಲು ತಮ್ಮ ಸೈಕೋಬುದ್ದಿಗಳನ್ನು ಬಿಡದಿರುವುದು ಆಶ್ಚರ್ಯವೇನಲ್ಲ. ಸುಪ್ರೀಂಕೋರ್ಟ್ ಶಬರಿಮಲೆ ದೇವರ ದರ್ಶನಕ್ಕೆ ಹೆಂಗಸರನ್ನು ಬಿಟ್ಟಿದ್ದೇ ಕಾರಣವೆಂದು ಈ ಅನ್ಯಗ್ರಹ ಮೂದೇವಿಗಳು ತಲೆಚಚ್ಚಿಕೊಂಡು ಅಳುತ್ತಿವೆ. ಆ ಲೆಕ್ಕದಲ್ಲಿ ನೋಡಿದರೆ ಸುಪ್ರೀಂ ತೀರ್ಪಿಗೆ ಸಿಟ್ಟಿಗೆದ್ದ ಅಯ್ಯಪ್ಪಸ್ವಾಮಿ ಕೋರ್ಟನ್ನೇ ಪ್ರವಾಹದೊಳಗೆ ಮುಳುಗಿಸುವ ಬದಲು ತನ್ನ ಟೆಂಪಲ್ಲನ್ನೇ ಯಾಕೆ ಪಂಪಾನದಿಯೊಳಗೆ ಕಂಠಮಟ್ಟ ಮುಳುಗಿಸಿಕೊಂಡನೆಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಉತ್ತರಾಖಂಡದಲ್ಲಿ ನೆರೆ ಬಂದು ಇಡೀ ಕಣಿವೆ ದೇಗುಲದ ಊರನ್ನು ಕೊಚ್ಚಿಕೊಂಡು ಹೋದಾಗ ಆ ದೇವರೇನು ಶಾಪ ಕೊಟ್ಟಿತ್ತು? ಗುಜರಾತಲ್ಲಿ ಭೂಕಂಪ ಸಂಭವಿಸಿದಾಗ ಆ ರಾಜ್ಯವೇನು ಪಾಪ ಮಾಡಿತ್ತು? ಅನ್ನತಕ್ಕಂಥ ಪ್ರಶ್ನೆಗಳು ಜನರಿಂದ ಬರುತ್ತಿದ್ದಂತೆ.. ಸೆಗಣಿ ಬ್ರೈನ್ ಸೈಕೋಭಕ್ತರು ಕಣ್ಣಿಗೆ ಬಿದ್ದ ಇಲಿಬಿಲಗಳನ್ನು ಹೊಕ್ಕಿದ್ದು, ಅಲ್ಲಿ ವಾಸವಿದ್ದ ಮೂಗಿಲಿಗಳೊಡನೆ ವೀರಾವೇಶದಿಂದ ಹೋರಾಡಿ ಅವನ್ನು ಹೊರಗಾಕಿ ಬಿಲದಲ್ಲೇ ಠಿಕಾಣಿ ಹೂಡಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*********

ಪಾಕಿಸ್ತಾನದ ಹೊಸ ಪ್ರಧಾನಮಂತ್ರಿ ಇಮ್ರಾನ್ ಖಾನ್ ಪದವಿ ಸ್ವೀಕಾರ ಪ್ರೋಗ್ರಾಂಗೆ ಹೋಗಿಬಂದ ಮಾಜಿ ಕ್ರಿಕೆಟರ್ ಸಿಕ್ಸರ್ ಸಿದ್ದುವಿನ ಮೇಲೆ ಬ್ರಿಟಿಷರ ಬೂಟನ್ನು ನಾಲಿಗೆಯಿಂದ ಸ್ವಚ್ಛಗೊಳಿಸುತ್ತಿದ್ದ ದ್ವೇಷಭಕ್ತರು ಮುಗಿಬಿದ್ದಿದ್ದಾರೆ. ಶತ್ರು ದೇಶಕ್ಕೆ ಯಾಕೆ ಹೋದ್ರಿ, ಅಲ್ಲಿನ ಆರ್ಮಿ ಚೀಫನ್ನ ಯಾಕ್ ತಬ್ಕೊಂಡ್ರಿ, ಲೊಟ್ಟೆ ಲೊಸಕು ಅಂತ ಕೂಗಾಡುತ್ತಿದ್ದಾರೆ. ಆಲ್ ಇಂಡಿಯ ನಿರುದ್ಯೋಗಿಗಳ ಸಂಘದ ‘ಭಜ ಮಂಗದಳ’ದ ಕಮಂಗಿಗಳು ಸಿದ್ದು ತಲೆ ತೆಗೆದವರಿಗೆ 5 ಲಕ್ಷ ದುಡ್ಡನ್ನ ಪೇಟಿಎಂಲಿ ಕಳಿಸ್ತೀವಿ ಅಂತ ಬೊಗಳಾಡುತ್ತಿದ್ದಾರೆ. ಎಲ್ಲವನ್ನು ಕೇಳಿಸಿಕೊಂಡ ಸಿಕ್ಸರ್ ಸಿದ್ದು ಇದೀಗ ಅರಚಾಡುತ್ತಿರೋ ‘ಬ್ರಿಟಿಶ್ ಬೂಟ್ ಪಾಲಿಶ್’ ಗ್ಯಾಂಗಿಗೆ ಒಂದೊಂದೇ ಪ್ರಶ್ನೆಗಳನ್ನು ಹಳೇಕೆರಗಳಿಗೆ ಸಿಕ್ಕಿಸಿ ಎಸೆಯತೊಡಗಿದ್ದಾರೆ. ವಾಜಪೇಯಿ ಕಾಲದಲ್ಲಿ ಕಾರ್ಗಿಲ್ ಯುದ್ಧಕ್ಕೆ ಕಾರಣನಾಗಿ ನಮ್ಮ ಸಾವಿರಾರು ಸೈನಿಕರನ್ನು ಕೊಂದ ಪರ್ವೆಜ್ ಮುಶರಫ್‍ನನ್ನು ಅ’ತಾತ’ಶತ್ರು ವಾಜಪೇಯಿ ಇಂಡಿಯಾಗೆ ಆಹ್ವಾನಿಸಿ ತಬ್ಬಿಕೊಂಡಿದ್ರಲ್ಲ.. ಅವಾಗ ಈ ‘ಬ್ರಿಟಿಶ್ ಬೂಟ್ ಪಾಲಿಶ್ ಗ್ಯಾಂಗ್’ ಯಾವ ಹೋಟೆಲಿನಲ್ಲಿ ಎಂಜಲೆತ್ತುತ್ತಿತ್ತು? “ಕರೆಯದೇ ಬರುವನ ಕರೆದು ಹಳೆಯ ರೀಬೋಕ್ ಬೂಟಲ್ಲಿ ಹೊಡೆಯೆಂದ ಸರ್ವಜ್ಞ” ಎಂಬ ಗಾದೆಯಂತೆ ಕರೆಯದಿದ್ರೂ ನವಾಜ್ ಶರೀಫ್ ಮಗಳ ಮದ್ವೆಗೆ ಪಾಕಿಸ್ತಾನಕ್ಕೆ ಓಡೋಗಿ “ಮಮ್ಮಿಗೆ ಸೀರೆ ಇಲ್ಲ, ಇರೋ ಸೀರೆಗಳೆಲ್ಲ ಹರಿದು ಹೋಗಿವೆ, ನನಗೆ ಕೊಡಿಸೋ ತಾಕತ್ತಿಲ್ಲ, ಒಂದೆರಡು ಸೀರೆ ಕೊಡ್ರಿ” ಅಂತ ನವಾಜ್ ಶರೀಫನಿಂದ ಸೀರೆ ತಗೊಂಡು ಬಂದ ‘ಗಟರ್ ಗ್ಯಾಸ್ ಮೋರಿ’ಯ ತಲೆಗೆಷ್ಟು ಬಹುಮಾನ ಕಟ್ತೀರಿ? ಪಠಾಣ್ ಕೋಟ್ ಆರ್ಮಿಬೇಸಿಗೆ ಬಾಂಬೆಸೆದು ಹೋದ ಪಾಕ್ ಉಗ್ರರನ್ನು ಸದೆ ಬಡೆಯೋದು ಬಿಟ್ಟು ಪಾಕ್ ಗುಪ್ತಚರ ದಳದ ಐಎಸ್‍ಐ ಅಧಿಕಾರಿಗಳನ್ನ ಪಠಾಣ್ ಕೋಟಿನಲ್ಲಿ ರತ್ನಗಂಬಳಿ ಹಾಸಿ ಕರೆದುಕೊಂಡ ಅರುಳುಮರುಳು ಪಕೋಡತಾತನ್ನ ಯಾವ ಸಮುದ್ರದ ಒಳಗೆ ಎಸೀತೀರಿ? ಅಂತ ಸೈಕೋ ದ್ವೇಷಭಕ್ತರನ್ನು ಕಂಡಕಂಡಲ್ಲಿ ಒದೆಯುತ್ತಿರೋ ಸಿಕ್ಸರ್ ಸಿದ್ದು ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...