Homeಆರೋಗ್ಯಕೊರೊನಾ ಬಗ್ಗೆ ಭಯ ಬಿಡಿ - ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ...

ಕೊರೊನಾ ಬಗ್ಗೆ ಭಯ ಬಿಡಿ – ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

- Advertisement -
- Advertisement -

ಕೊರೊನಾ ಬೀತಿಯಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದು ವಾರಗಳ ಕಾಲ ಸಿನಿಮಾ ಮಂದಿರ, ಮದುವೆ, ನಾಮಕರಣ ಸೇರಿದಂತೆ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಇದು ಜನರನ್ನು ಜಾಗೃತಿ ಉಂಟು ಮಾಡುವ ಬದಲು ಮತ್ತಷ್ಟು ಭಯವನ್ನುಉಂಟುಮಾಡುತ್ತದೆ, ಇದರ ಅಗತ್ಯವಿಲ್ಲ ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಕುರಿತು ಜನಪರ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯರವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ.

ಮಾನ್ಯ ಮುಖ್ಯಮಂತ್ರಿಗಳೇ,

ಕೊರೊನಾ ತಡೆಯುವುದಕ್ಕೆ ಇಡೀ ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ. ಈಗಾಗಲೇ ನಮ್ಮ ಜನರು ಕೆಲಸವಿಲ್ಲದೆ ಕಷ್ಟದಲ್ಲಿದ್ದಾರೆ, ಅಂತದ್ದರಲ್ಲಿ ಇಡೀ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ನೀಡುವ ಈ ನಿರ್ಧಾರ ಸಾಧುವಲ್ಲ, ಅಗತ್ಯವೂ ಇಲ್ಲ.

ಅದರ ಬದಲಿಗೆ, ಕೊರೊನಾ ಅಂದರೆ ಏನು, ಅದರ ಲಕ್ಷಣಗಳೇನು, ಹರಡುವುದು ಹೇಗೆ, ರೋಗ ತಗಲಿದವರನ್ನು ಹೇಗೆ ಆರೈಕೆ ಮಾಡಬೇಕು, ಯಾರನ್ನು ಮನೆಯಲ್ಲೇ ನೋಡಿಕೊಳ್ಳಬೇಕು(ಬಹುದು), ಯಾರನ್ನು ಆಸ್ಪತ್ರೆಗೆ ತರಬೇಕು, ಮನೆಯಲ್ಲಿ ಆರೈಕೆ ಮಾಡುವುದಿದ್ದರೆ ರೋಗಿ ಹಾಗೂ ಮನೆಯವರು ಯಾವ ಜಾಗ್ರತೆ ವಹಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ರಾಜ್ಯದ ಜನರಿಗೆ ಈ ಕೂಡಲೇ ತಲುಪಿಸಲು ವ್ಯವಸ್ಥೆ ಮಾಡಿ.

ಜೊತೆಗೆ, ಸೋಂಕು ಹರಡಿದಾಗ ಹಲವರು ಆಸ್ಪತ್ರೆಗಳಿಗೆ ದಾಖಲಾಗಬೇಕಾದ ಅಗತ್ಯವುಂಟಾಗಬಹುದು, ಕೆಲವರಿಗೆ ಕೃತಕ ಉಸಿರಾಟದ ಅಗತ್ಯವೂ ಬರಬಹುದು. ಅದನ್ನು ನಿಭಾಯಿಸಲು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಈ ಕೂಡಲೇ ಒದಗಿಸಿ, ಹಾಗೂ ಅಂತಹ ರೋಗಿಗಳ ಚಿಕಿತ್ಸೆಗಾಗಿಯೇ ಕೆಲವು ಆಸ್ಪತ್ರೆಗಳನ್ನು ಪ್ರತ್ಯೇಕವಾಗಿಡುವುದು ಒಳ್ಳೆಯದು.

ಸೋಂಕು ತಗಲಿದವರ ಸಂಪರ್ಕಕ್ಕೆ ಬಂದ, ಸೋಂಕಿನ ಲಕ್ಷಣಗಳಿದ್ದವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿರಿ. ಮನೆಯ ಸದಸ್ಯರಿಗಾಗಲೀ, ಇತರರಿಗಾಗಲೀ ಅದು ಹರಡದಂತೆ ತಾವೇ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು.

ಆದಷ್ಟು ಮಟ್ಟಿಗೆ ಮನೆಯೊಳಗೆ ಒಂದೇ ಕೋಣೆಯಲ್ಲಿ ಇದ್ದು, ಆದಷ್ಟು ಕಡಿಮೆ ಜನರ ಸಂಪರ್ಕವಿರಬೇಕು, ಇತರರೊಂದಿಗೆ ಸಂಪರ್ಕದಿಂದ ಕನಿಷ್ಠ 1 ಮೀಟರ್ ದೂರವನ್ನು ಕಾಯಬೇಕು. ಕೋಣೆಯನ್ನು ದಿನಕ್ಕೊಮ್ಮೆಯಾದರೂ ಶುಚಿಕಾರಕ ಬಳಸಿ ಸ್ವಚ್ಛಗೊಳಿಸಬೇಕು. ಬಟ್ಟೆಗಳನ್ನು ಪ್ರತ್ಯೇಕವಾಗಿಟ್ಟು, 60 ಡಿಗ್ರಿ ಬಿಸಿಯಿರುವ ನೀರಲ್ಲಿ ತೊಳೆದು ಒಣಗಿಸಿಕೊಳ್ಳಬೇಕು. ಅವರ ಸಂಪರ್ಕಕ್ಕೆ ಬಂದವರು 14 ದಿನಗಳ ಕಾಲ ತಮ್ಮ ಮೇಲೆ ನಿಗಾ ವಹಿಸಿಕೊಳ್ಳಬೇಕು, ರೋಗಲಕ್ಷಣಗಳಿದ್ದರೆ ತಾವೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಎಲ್ಲಾ ಜಾಗ್ರತೆಗಳನ್ನೂ ವಹಿಸಬೇಕು. ಉಸಿರಾಟದ ಸಮಸ್ಯೆಯುಂಟಾದವರು ಕೂಡಲೇ ಆಸ್ಪತ್ರೆಗೆ ಹೋಗಬೇಕು.

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

ಶ್ರೀನಿವಾಸ ಕಕ್ಕಿಲ್ಲಾಯ


ಇದನ್ನೂ ಓದಿ: Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...