Homeಆರೋಗ್ಯಕೊರೊನಾ ಬಗ್ಗೆ ಭಯ ಬಿಡಿ - ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ...

ಕೊರೊನಾ ಬಗ್ಗೆ ಭಯ ಬಿಡಿ – ತುರ್ತುಪರಿಸ್ಥಿತಿಯ ಅಗತ್ಯವಿಲ್ಲವೆಂದು ಸಿಎಂ ಪತ್ರ ಬರೆದ ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

- Advertisement -
- Advertisement -

ಕೊರೊನಾ ಬೀತಿಯಿಂದಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದು ವಾರಗಳ ಕಾಲ ಸಿನಿಮಾ ಮಂದಿರ, ಮದುವೆ, ನಾಮಕರಣ ಸೇರಿದಂತೆ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಇದು ಜನರನ್ನು ಜಾಗೃತಿ ಉಂಟು ಮಾಡುವ ಬದಲು ಮತ್ತಷ್ಟು ಭಯವನ್ನುಉಂಟುಮಾಡುತ್ತದೆ, ಇದರ ಅಗತ್ಯವಿಲ್ಲ ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಈ ವಿಷಯದ ಕುರಿತು ಜನಪರ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯರವರು ಕರ್ನಾಟಕದ ಮುಖ್ಯಮಂತ್ರಿ ಮತ್ತು ಆರೋಗ್ಯ ಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದರ ಪೂರ್ಣ ವಿವರ ಕೆಳಗಿನಂತಿದೆ.

ಮಾನ್ಯ ಮುಖ್ಯಮಂತ್ರಿಗಳೇ,

ಕೊರೊನಾ ತಡೆಯುವುದಕ್ಕೆ ಇಡೀ ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳನ್ನು ಮುಚ್ಚುವ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ. ಈಗಾಗಲೇ ನಮ್ಮ ಜನರು ಕೆಲಸವಿಲ್ಲದೆ ಕಷ್ಟದಲ್ಲಿದ್ದಾರೆ, ಅಂತದ್ದರಲ್ಲಿ ಇಡೀ ರಾಜ್ಯದ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ನೀಡುವ ಈ ನಿರ್ಧಾರ ಸಾಧುವಲ್ಲ, ಅಗತ್ಯವೂ ಇಲ್ಲ.

ಅದರ ಬದಲಿಗೆ, ಕೊರೊನಾ ಅಂದರೆ ಏನು, ಅದರ ಲಕ್ಷಣಗಳೇನು, ಹರಡುವುದು ಹೇಗೆ, ರೋಗ ತಗಲಿದವರನ್ನು ಹೇಗೆ ಆರೈಕೆ ಮಾಡಬೇಕು, ಯಾರನ್ನು ಮನೆಯಲ್ಲೇ ನೋಡಿಕೊಳ್ಳಬೇಕು(ಬಹುದು), ಯಾರನ್ನು ಆಸ್ಪತ್ರೆಗೆ ತರಬೇಕು, ಮನೆಯಲ್ಲಿ ಆರೈಕೆ ಮಾಡುವುದಿದ್ದರೆ ರೋಗಿ ಹಾಗೂ ಮನೆಯವರು ಯಾವ ಜಾಗ್ರತೆ ವಹಿಸಬೇಕು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ರಾಜ್ಯದ ಜನರಿಗೆ ಈ ಕೂಡಲೇ ತಲುಪಿಸಲು ವ್ಯವಸ್ಥೆ ಮಾಡಿ.

ಜೊತೆಗೆ, ಸೋಂಕು ಹರಡಿದಾಗ ಹಲವರು ಆಸ್ಪತ್ರೆಗಳಿಗೆ ದಾಖಲಾಗಬೇಕಾದ ಅಗತ್ಯವುಂಟಾಗಬಹುದು, ಕೆಲವರಿಗೆ ಕೃತಕ ಉಸಿರಾಟದ ಅಗತ್ಯವೂ ಬರಬಹುದು. ಅದನ್ನು ನಿಭಾಯಿಸಲು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳನ್ನು ಈ ಕೂಡಲೇ ಒದಗಿಸಿ, ಹಾಗೂ ಅಂತಹ ರೋಗಿಗಳ ಚಿಕಿತ್ಸೆಗಾಗಿಯೇ ಕೆಲವು ಆಸ್ಪತ್ರೆಗಳನ್ನು ಪ್ರತ್ಯೇಕವಾಗಿಡುವುದು ಒಳ್ಳೆಯದು.

ಸೋಂಕು ತಗಲಿದವರ ಸಂಪರ್ಕಕ್ಕೆ ಬಂದ, ಸೋಂಕಿನ ಲಕ್ಷಣಗಳಿದ್ದವರು ಸಮೀಪದ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಿರಿ. ಮನೆಯ ಸದಸ್ಯರಿಗಾಗಲೀ, ಇತರರಿಗಾಗಲೀ ಅದು ಹರಡದಂತೆ ತಾವೇ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು.

ಆದಷ್ಟು ಮಟ್ಟಿಗೆ ಮನೆಯೊಳಗೆ ಒಂದೇ ಕೋಣೆಯಲ್ಲಿ ಇದ್ದು, ಆದಷ್ಟು ಕಡಿಮೆ ಜನರ ಸಂಪರ್ಕವಿರಬೇಕು, ಇತರರೊಂದಿಗೆ ಸಂಪರ್ಕದಿಂದ ಕನಿಷ್ಠ 1 ಮೀಟರ್ ದೂರವನ್ನು ಕಾಯಬೇಕು. ಕೋಣೆಯನ್ನು ದಿನಕ್ಕೊಮ್ಮೆಯಾದರೂ ಶುಚಿಕಾರಕ ಬಳಸಿ ಸ್ವಚ್ಛಗೊಳಿಸಬೇಕು. ಬಟ್ಟೆಗಳನ್ನು ಪ್ರತ್ಯೇಕವಾಗಿಟ್ಟು, 60 ಡಿಗ್ರಿ ಬಿಸಿಯಿರುವ ನೀರಲ್ಲಿ ತೊಳೆದು ಒಣಗಿಸಿಕೊಳ್ಳಬೇಕು. ಅವರ ಸಂಪರ್ಕಕ್ಕೆ ಬಂದವರು 14 ದಿನಗಳ ಕಾಲ ತಮ್ಮ ಮೇಲೆ ನಿಗಾ ವಹಿಸಿಕೊಳ್ಳಬೇಕು, ರೋಗಲಕ್ಷಣಗಳಿದ್ದರೆ ತಾವೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಎಲ್ಲಾ ಜಾಗ್ರತೆಗಳನ್ನೂ ವಹಿಸಬೇಕು. ಉಸಿರಾಟದ ಸಮಸ್ಯೆಯುಂಟಾದವರು ಕೂಡಲೇ ಆಸ್ಪತ್ರೆಗೆ ಹೋಗಬೇಕು.

ಸೋಂಕುಳ್ಳವರನ್ನು ನಿರ್ಬಂಧಿಸಿದರೆ ಸಾಕು, ಇಡೀ ರಾಜ್ಯವನ್ನು ನಿರ್ಬಂಧಿಸುವ ಅಗತ್ಯ ಈಗಂತೂ ಇಲ್ಲ.

ಶ್ರೀನಿವಾಸ ಕಕ್ಕಿಲ್ಲಾಯ


ಇದನ್ನೂ ಓದಿ: Good News: ಕೊರೊನಾ ವಿರುದ್ಧ ಸಮರ – ಭಾರತದಲ್ಲಿ 7 ರೋಗಿಗಳು ಗುಣಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...