Homeಮುಖಪುಟದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ...

ದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ ಮರಣೋತ್ತರ ಪರೀಕ್ಷೆ

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಗುಪ್ತಚರ ದಳದ 26 ವರ್ಷದ ಅಂಕಿತ್ ಶರ್ಮಾ ಅವರ ಶವ ಪತ್ತೆಯಾದ ಎರಡು ವಾರಗಳ ನಂತರ ಬಂದ ಮರಣೋತ್ತರ ವರದಿಯು ಶರ್ಮಾ ಅವರಿಗೆ “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ.

ಫೆಬ್ರವರಿ 26 ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದ ಚರಂಡಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಬಲಪಂಥೀಯ ವೆಬ್‌ಸೈಟ್‌ಗಳು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿ ಮಾಡಿದ ನಂತರ ಮಂತ್ರಿಗಳು, ಸಂಸದರು, ಸೋಷಿಯಲ್ ಮೀಡಿಯಾ ಪ್ರಭಾವಿಗಳು ಸಹ ಅದೇ ಮಾತುಗಳನ್ನಾಡಿದ್ದರು.

ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಹಿಡಿತದಲ್ಲಿಟ್ಟುಕೊಂಡ ಕೋಮು ಹಿಂಸಾಚಾರದ ಸಂದರ್ಭದಲ್ಲಿ ದಾಳಿಯಲ್ಲಿ ಅಂಕಿತ್ ಶರ್ಮಾ ತೀವ್ರ ಮಾರಣಾಂತಿಕ ಗಾಯಗಳನ್ನು ಅನುಭವಿಸಿದ್ದು ನಿಜ. ಆದರೆ ಅವರಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗಿದೆ ಎಂಬುದು ಉತ್ಪ್ರೇಕ್ಷೆಯಾಗಿದೆ ಪ್ರಸಾರ್ ಭಾರತಿ ಸಿಇಒ ಬಿಬಿಸಿಗೆ ಅಧಿಕೃತ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಮರಣೋತ್ತರ ವರದಿಯ ಪ್ರಕಾರ, ಅಂಕಿತ್‌ ಶರ್ಮಾ ಅವರಿಗೆ 12 ಬಾರಿ ಇರಿತ ಮತ್ತು ಒಟ್ಟು 51 ಗಾಯಗಳಾಗಿವೆ.

ಮರಣೋತ್ತರ ವರದಿಯಲ್ಲೇನಿದೆ?

ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ ಸಾವಿಗೆ ಕಾರಣವೆಂದರೆ, “ಶ್ವಾಸಕೋಶ ಮತ್ತು ಮೆದುಳಿಗೆ ಗಾಯಗಳಿಂದಾಗಿ ರಕ್ತಸ್ರಾವವುಂಟಾಗಿ ಆಘಾತ ಉಂಟಾಗಿದೆ. ಚೂಪಾದ ಆಯುಧಗಳಿಂದ ಕೆಲವು ಗಾಯಗಳು ಸಂಭವಿಸಿವೆ”.

ಶರ್ಮಾರವರು ದೇಹದಾದ್ಯಂತ ಇರಿತದ ಗಾಯಗಳನ್ನು ಅನುಭವಿಸಿದ್ದರು. ಹೆಚ್ಚಾಗಿ ಅವರ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ. ಮೊಂಡಾದ ವಸ್ತುವಿನಿಂದ ಹೊಡೆಯುವುದರಿಂದ ಅವರು 13 ಗಾಯಗಳನ್ನು ಸಹ ಅನುಭವಿಸಿದ್ದಾರೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿ: Fact check: ವೈರಲ್ ಫೋಟೊದಲ್ಲಿನ ಮಗುವನ್ನು ಹಿಂದೂ ಎಂದು ಸುದ್ದಿ ಹರಡಿದ ನರೇಂದ್ರ ಮೋದಿ ಬೆಂಬಲಿಗರು!


ರಾಜಕಾರಣಿಗಳು, ಮಾಧ್ಯಮಗಳು ಮಾಡಿದ ಸುಳ್ಳು ಪ್ರಚಾರಗಳು

ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು “400 ಬಾರಿ ಇರಿಯಲಾಗಿದೆ” ಎಂಬ ಅಂಕಿ ಅಂಶವನ್ನು ಉಲ್ಲೇಖಿಸಿದ್ದಾರೆ. ರಿಪಬ್ಲಿಕ್, ಟೈಮ್ಸ್ ನೌ, ದಿ ಫ್ರೀ ಪ್ರೆಸ್ ಜರ್ನಲ್ ಮತ್ತು ಬಲಪಂಥೀಯ ವೆಬ್‌ಸೈಟ್ ಒಪಿಂಡಿಯಾ ಸೇರಿದಂತೆ ಹಲವಾರು ಮಾಧ್ಯಮಗಳು ಐಬಿ ಉದ್ಯೋಗಿಯನ್ನು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿಗಳನ್ನು ನೀಡಿವೆ.

ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ್ ತಿವಾರಿ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಕೂಡ ತಮ್ಮ ಸಾಮಾಜಿಕ ಮಾಧ್ಯಮಗಳ ಮೂಲಕ ಇದೇ ನಿರೂಪಣೆಯನ್ನು ಮುಂದಿಟ್ಟಿದ್ದರು.

ಈ ಬಗ್ಗೆ ಹೆಸರು ಹೇಳಲು ಇಚ್ಚಿಸದ ಈ ಪ್ರಕರಣದ ಪರಿಚಯವಿರುವ ವೈದ್ಯಕೀಯ ವಿಧಿವಿಜ್ಞಾನ ತಜ್ಞರು ದಿ ಕ್ವಿಂಟ್‌ನೊಂದಿಗೆ ಮಾತನಾಡಿ ಈ ವರದಿಗಳನ್ನು “ಪ್ರಚೋದಿತ ವರದಿಗಳು” ಎಂದಿದ್ದಾರೆ.

“ಅವನ ದೇಹದ ಮೇಲೆ ಕತ್ತರಿಸಿದ ಗುರುತುಗಳು ಇದ್ದವು. ಮೂಗೇಟುಗಳು, ಒರಟಾದ ಗಾಯಗಳು ಮತ್ತು ಅನೇಕ ಇರಿತದ ಗಾಯಗಳು ಇದ್ದವು, ಆದರೆ ಅವನನ್ನು 400 ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ ಎಂಬ ಹೇಳಿಕೆ 100% ಸುಳ್ಳು ಎಂದಿದ್ದಾರೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...