Homeಮುಖಪುಟದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ...

ದೆಹಲಿ ಗಲಭೆ: ಐಬಿ ಉದ್ಯೋಗಿ ಅಂಕಿತ್‌ ಶರ್ಮಾನಿಗೆ ಇರಿದಿದ್ದು 400 ಬಾರಿ ಎಂಬುದು ಸುಳ್ಳು ಎಂದ ಮರಣೋತ್ತರ ಪರೀಕ್ಷೆ

- Advertisement -
- Advertisement -

ಈಶಾನ್ಯ ದೆಹಲಿ ಹಿಂಸಾಚಾರದ ಸಂದರ್ಭದಲ್ಲಿ ಗುಪ್ತಚರ ದಳದ 26 ವರ್ಷದ ಅಂಕಿತ್ ಶರ್ಮಾ ಅವರ ಶವ ಪತ್ತೆಯಾದ ಎರಡು ವಾರಗಳ ನಂತರ ಬಂದ ಮರಣೋತ್ತರ ವರದಿಯು ಶರ್ಮಾ ಅವರಿಗೆ “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂಬ ಹೇಳಿಕೆಯನ್ನು ತಳ್ಳಿಹಾಕಿದೆ.

ಫೆಬ್ರವರಿ 26 ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದ ಚರಂಡಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಬಲಪಂಥೀಯ ವೆಬ್‌ಸೈಟ್‌ಗಳು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿ ಮಾಡಿದ ನಂತರ ಮಂತ್ರಿಗಳು, ಸಂಸದರು, ಸೋಷಿಯಲ್ ಮೀಡಿಯಾ ಪ್ರಭಾವಿಗಳು ಸಹ ಅದೇ ಮಾತುಗಳನ್ನಾಡಿದ್ದರು.

ಫೆಬ್ರವರಿ 24 ರಿಂದ 26 ರವರೆಗೆ ರಾಷ್ಟ್ರ ರಾಜಧಾನಿಯನ್ನು ಹಿಡಿತದಲ್ಲಿಟ್ಟುಕೊಂಡ ಕೋಮು ಹಿಂಸಾಚಾರದ ಸಂದರ್ಭದಲ್ಲಿ ದಾಳಿಯಲ್ಲಿ ಅಂಕಿತ್ ಶರ್ಮಾ ತೀವ್ರ ಮಾರಣಾಂತಿಕ ಗಾಯಗಳನ್ನು ಅನುಭವಿಸಿದ್ದು ನಿಜ. ಆದರೆ ಅವರಿಗೆ ಚಿತ್ರಹಿಂಸೆ ಕೊಟ್ಟು ಸಾಯಿಸಲಾಗಿದೆ ಎಂಬುದು ಉತ್ಪ್ರೇಕ್ಷೆಯಾಗಿದೆ ಪ್ರಸಾರ್ ಭಾರತಿ ಸಿಇಒ ಬಿಬಿಸಿಗೆ ಅಧಿಕೃತ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಮರಣೋತ್ತರ ವರದಿಯ ಪ್ರಕಾರ, ಅಂಕಿತ್‌ ಶರ್ಮಾ ಅವರಿಗೆ 12 ಬಾರಿ ಇರಿತ ಮತ್ತು ಒಟ್ಟು 51 ಗಾಯಗಳಾಗಿವೆ.

ಮರಣೋತ್ತರ ವರದಿಯಲ್ಲೇನಿದೆ?

ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ ಸಾವಿಗೆ ಕಾರಣವೆಂದರೆ, “ಶ್ವಾಸಕೋಶ ಮತ್ತು ಮೆದುಳಿಗೆ ಗಾಯಗಳಿಂದಾಗಿ ರಕ್ತಸ್ರಾವವುಂಟಾಗಿ ಆಘಾತ ಉಂಟಾಗಿದೆ. ಚೂಪಾದ ಆಯುಧಗಳಿಂದ ಕೆಲವು ಗಾಯಗಳು ಸಂಭವಿಸಿವೆ”.

ಶರ್ಮಾರವರು ದೇಹದಾದ್ಯಂತ ಇರಿತದ ಗಾಯಗಳನ್ನು ಅನುಭವಿಸಿದ್ದರು. ಹೆಚ್ಚಾಗಿ ಅವರ ಬೆನ್ನು ಮತ್ತು ಬೆನ್ನುಮೂಳೆಯ ಮೇಲೆ. ಮೊಂಡಾದ ವಸ್ತುವಿನಿಂದ ಹೊಡೆಯುವುದರಿಂದ ಅವರು 13 ಗಾಯಗಳನ್ನು ಸಹ ಅನುಭವಿಸಿದ್ದಾರೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿ: Fact check: ವೈರಲ್ ಫೋಟೊದಲ್ಲಿನ ಮಗುವನ್ನು ಹಿಂದೂ ಎಂದು ಸುದ್ದಿ ಹರಡಿದ ನರೇಂದ್ರ ಮೋದಿ ಬೆಂಬಲಿಗರು!


ರಾಜಕಾರಣಿಗಳು, ಮಾಧ್ಯಮಗಳು ಮಾಡಿದ ಸುಳ್ಳು ಪ್ರಚಾರಗಳು

ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು “400 ಬಾರಿ ಇರಿಯಲಾಗಿದೆ” ಎಂಬ ಅಂಕಿ ಅಂಶವನ್ನು ಉಲ್ಲೇಖಿಸಿದ್ದಾರೆ. ರಿಪಬ್ಲಿಕ್, ಟೈಮ್ಸ್ ನೌ, ದಿ ಫ್ರೀ ಪ್ರೆಸ್ ಜರ್ನಲ್ ಮತ್ತು ಬಲಪಂಥೀಯ ವೆಬ್‌ಸೈಟ್ ಒಪಿಂಡಿಯಾ ಸೇರಿದಂತೆ ಹಲವಾರು ಮಾಧ್ಯಮಗಳು ಐಬಿ ಉದ್ಯೋಗಿಯನ್ನು “400 ಕ್ಕೂ ಹೆಚ್ಚು ಬಾರಿ ಇರಿದಿದೆ” ಎಂದು ವರದಿಗಳನ್ನು ನೀಡಿವೆ.

ಬಿಜೆಪಿ ದೆಹಲಿ ಅಧ್ಯಕ್ಷ ಮನೋಜ್ ತಿವಾರಿ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಕೂಡ ತಮ್ಮ ಸಾಮಾಜಿಕ ಮಾಧ್ಯಮಗಳ ಮೂಲಕ ಇದೇ ನಿರೂಪಣೆಯನ್ನು ಮುಂದಿಟ್ಟಿದ್ದರು.

ಈ ಬಗ್ಗೆ ಹೆಸರು ಹೇಳಲು ಇಚ್ಚಿಸದ ಈ ಪ್ರಕರಣದ ಪರಿಚಯವಿರುವ ವೈದ್ಯಕೀಯ ವಿಧಿವಿಜ್ಞಾನ ತಜ್ಞರು ದಿ ಕ್ವಿಂಟ್‌ನೊಂದಿಗೆ ಮಾತನಾಡಿ ಈ ವರದಿಗಳನ್ನು “ಪ್ರಚೋದಿತ ವರದಿಗಳು” ಎಂದಿದ್ದಾರೆ.

“ಅವನ ದೇಹದ ಮೇಲೆ ಕತ್ತರಿಸಿದ ಗುರುತುಗಳು ಇದ್ದವು. ಮೂಗೇಟುಗಳು, ಒರಟಾದ ಗಾಯಗಳು ಮತ್ತು ಅನೇಕ ಇರಿತದ ಗಾಯಗಳು ಇದ್ದವು, ಆದರೆ ಅವನನ್ನು 400 ಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ ಎಂಬ ಹೇಳಿಕೆ 100% ಸುಳ್ಳು ಎಂದಿದ್ದಾರೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...