Homeಮುಖಪುಟನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು...

ನಾನು ಪೌರವಾಣಿ ಪತ್ರಿಕೆಯ ಸಂಪಾದಕನಾಗಿದ್ದು ಹೇಗೆ? ದೊರೆಸ್ವಾಮಿಯವರ ನೆನಪುಗಳು…

38 ದಿನಗಳ ಕಳಪೆ ಸಂಪಾದಕ ಎಂದು ದೊರೆಸ್ವಾಮಿಯವರನ್ನು ಹಂಗಿಸಿದ್ದಕ್ಕೆ ಅವರು ಕೊಟ್ಟ ಉತ್ತರ ಇಲ್ಲಿದೆ.

- Advertisement -
- Advertisement -

ಬಾಬು ಕೃಷ್ಣಮೂರ್ತಿಯವರು ಪತ್ರಕರ್ತರು, ಬರಹಗಾರರು, ಒಳ್ಳೆಯ ಚಾರಿತ್ರಿಕ ಪುಸ್ತಕಗಳನ್ನು ಬರೆದಿದ್ದಾರೆ. ನನಗೆ ಅವರಲ್ಲಿ ಇಂದಿಗೂ ಪ್ರೀತಿ ಇದೆ. ಬಾಬು ಕೃಷ್ಣಮೂರ್ತಿಯವರನ್ನು ಅವರು ಮಗುವಾಗಿದ್ದಾಗಿನಿಂದಲು ಬಲ್ಲೆ. ಅವರ ತಾಯಿ ಸೀತಮ್ಮ, ತಂದೆ ಶಾಸ್ತ್ರಿ ಆಯುರ್ವೇದ ಪಂಡಿತರು. ಸೀತಮ್ಮನವರು ನಿಧನರಾಗುವುದಕ್ಕೆ­ ಮೊದಲು ನಾನು ಅವರನ್ನು ಭಾರತಿ ನರ್ಸಿಂಗ್ ಹೋಂಗೆ ಹೋಗಿ ಮಾತನಾಡಿಸಿಕೊಂಡು ಬಂದಿದ್ದೆ.

ಬಾಬು ನನ್ನನ್ನು ಮೊದಲ ಬಾರಿಗೆ ಈಗ ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡ್ಸೆ ವಿಚಾರದಲ್ಲಿ ಅವರು ನನ್ನ ಮೇಲೆ ಆಗ್ರಹ ಮಾಡಿರುವುದಕ್ಕೆ ನಾನು ಅವರ ಬಗೆಗೆ ಈ ರೀತಿ ಹೇಳುತ್ತಿಲ್ಲ. ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರವನ್ನು ನಾನು ಆನಂತರ ಪ್ರಸ್ತಾಪಿಸುತ್ತೇನೆ.

ಬಾಬು ಕೃಷ್ಣಮೂರ್ತಿ ನನ್ನನ್ನು ಕೆಲಸಕ್ಕೆ ಬಾರದ 38 ದಿನಗಳ ಪತ್ರಿಕಾ ಸಂಪಾದಕ ಎಂದು ಕರೆದು ಹಂಗಿಸಿದ್ದಾರೆ. ಈ ಮಾತು ನನ್ನನ್ನು ಇರಿಯಿತು. ಜೂಲಿಯಸ್ ಸೀಸರ್ ತನ್ನ ಪರಮ ಸ್ನೇಹಿತ ಎಂದುಕೊಂಡಿದ್ದ ಬ್ರೂಟಸ್ ತನ್ನನ್ನು ಇರಿದಾಗ `Yours is the  most unkindest cut of all’  ಎಂದು ಜರಿದ.

ಪತ್ರಿಕಾ ಸಂಪಾದಕರಾಗಿದ್ದ ಬಾಬು ಕೃಷ್ಣಮೂರ್ತಿ ನನ್ನನ್ನು 38 ದಿನಗಳ ಕಳಪೆ ಸಂಪಾದಕ ಎಂದು ಹೇಳಿರುವುದನ್ನು ಕುರಿತು ನಾನೂ ಕೂಡ Yours is the most unkindest cut of all’ಎಂದು ಹೇಳಬೇಕಿದೆ. ಸೀಸರ್ ಬ್ರೂಟಸ್‍ನ ಈ ಗೆಯ್ಮೆಯನ್ನುSuperlatives ನಲ್ಲಿ Unkindest ಎಂದು ಮಾತ್ರ ಹೇಳದೆ Most ಎಂಬ ಇನ್ನೊಂದು Superlatives ಕೂಡಾ ಬಳಸಿದ್ದಾನೆ. ಬ್ರೂಟಸ್‍ನ ಈ ಕೃತ್ಯ ಸೀಜರ್‌ನನ್ನು ದಿಗ್ಭ್ರಮೆಗೋಳಿಸಿದೆ. ಬಾಬುಕೃಷ್ಣಮೂರ್ತಿಯವರ ಈ ಮಾತು ನನ್ನನ್ನು ಸೀಜರ್‌ನಷ್ಟೇ ದಿಗ್ಭ್ರಮೆಗೊಳಿಸಿದೆ.

ಪೌರವಾಣಿ ಪತ್ರಿಕೆಯನ್ನು ಆರಂಭಿಸಿದ ನಮಗೆ – ಸ್ವಾತಂತ್ರ್ಯ ಹೋರಾಟಗಾರ ಯುವಕರು – ಸ್ವಾತಂತ್ರ್ಯ ಬೇಗ ದೊರಕಿಸಿಕೊಳ್ಳಬೇಕು ಎಂಬ ತವಕವಿತ್ತು. ನಮ್ಮ ನಾಯಕರನ್ನು ಪ್ರತಿ ಎಂಪಿಸಿಸಿ ಸಭೆಯಲ್ಲೂ ಜವಾಬ್ದಾರಿ ಸರ್ಕಾರ ಪಡೆಯಲು ತಡಮಾಡದೆ ಹೋರಾಟ ಆರಂಭಿಸಬೇಕೆಂದು ಒತ್ತಾಯ ತರುತ್ತಿದ್ದೆವು. ಇದಕ್ಕೆ ಪೂರಕವಾಗಿ ಒಂದು ಪತ್ರಿಕೆಯನ್ನು ಆರಂಭಿಸಲೂ ತೀರ್ಮಾನಿಸಿದೆವು. ಪೌರವಾಣಿ ಬೆಂಗಳೂರಿನಲ್ಲಿ ಜನ್ಮ ತಾಳಿತು. ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದ ದೊಡ್ಡಬಳ್ಳಾಪುರದ ರುಮಾಲೆ ಭದ್ರಣ್ಣನವರು ಪೌರವಾಣಿಯ ಮೊದಲ ಸಂಪಾದಕರಾದರು. ಪೌರವಾಣಿ ದಿನಪತ್ರಿಕೆ ಬೆಲೆ 3 ಕಾಸು. ರಾಯಟರ್ಸ್ ಮತ್ತು ಪಿಟಿಐ ಸುದ್ದಿಗಳನ್ನು ತರಿಸಿಕೊಳ್ಳುತ್ತಿದ್ದೆವು.

ಪತ್ರಿಕೆ ಬಹಳ ಬೇಗ ಜನಾದರಣೆ ಗಳಿಸಿತು. ಭದ್ರಣ್ಣನವರು ನಾಯಿ ಕಚ್ಚಿ ಹೈಡ್ರೋಫೋಬಿಯಾ ಎಂಬ ರೋಗಕ್ಕೆ ಬಲಿಯಾದರು. ಅವರು ಸಾಯುವ ಮೊದಲು ನಮ್ಮ ಯುವಬಳಗವೆಲ್ಲ ಆಸ್ಪತ್ರೆಗೆ ಹೋಗಿ ಅವರನ್ನು ಕಂಡೆವು. ಅವರು ನಮ್ಮೆಲ್ಲರನ್ನು ಕುರಿತು “ಭಾರತಕ್ಕೆ ಸ್ವಾತಂತ್ರ್ಯ ಬಂತು. ಆದರೆ ಮೈಸೂರಿನ ಪ್ರಜೆಗಳಿಗೆ ಸ್ವಾತಂತ್ರ್ಯ ಬಂದಿಲ್ಲ. ಮಹಾರಾಜರು Accession  ಒಪ್ಪುತ್ತಿಲ್ಲ. ಅವರನ್ನು ಒಪ್ಪಿಸುವುದಕ್ಕಾಗಿ ಹೋರಾಟ ಮಾಡಬೇಕಾಗಿದೆ. ಪೌರವಾಣಿ ಪತ್ರಿಕೆ ಈ ಹೋರಾಟಕ್ಕೆ ಹೊಯ್‍ಕೈಯಾಗಿಸಿಲ್ಲ ಬೆಂಬಲಿಸಿದೆ. ಪೌರವಾಣಿ ಪತ್ರಿಕೆ ಈಗ ಜನಪ್ರಿಯವಾಗಿದೆ ನೀವು ಈ ಪತ್ರಿಕೆಯನ್ನು ಅಂತಿಮ ಗುರಿ ಮುಟ್ಟುವವರೆಗೂ ನಡೆಸಿಕೊಂಡು ಹೋಗಬೇಕು” ಎಂದು ಕೈಮುಗಿದು ಕೇಳಿಕೊಂಡರು.

ಕೆಲಹೊತ್ತಿನಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಯಿತು. ಭದ್ರಣ್ಣನವರ ನೆಂಟರು, ನಾವೂ ಸೇರಿ ಅವರ ಅಂತ್ಯಕ್ರಿಯೆ ಮುಗಿಸಿದೆವು. ರಾತ್ರಿ ಪೌರವಾಣಿ ಕಚೇರಿಯಲ್ಲಿ ಸೇರಿದ್ದ ನಾವೆಲ್ಲ ಮುಂದೆ ಯಾರು ಸಂಪಾದಕರಾಗಬೇಕೆಂದು ಚರ್ಚಿಸಿದೆವು. ಕೊನೆಗೆ ನನ್ನನ್ನು ಸಂಪಾದಕನಾಗುವಂತೆ ಒತ್ತಾಯಿಸಿದರು. ನಾನು ಆಗ ಮೈಸೂರಿನಲ್ಲಿ ಸಾಹಿತ್ಯ ಮಂದಿರ ಎಂಬ ಪುಸ್ತಕದಂಗಡಿ ಮತ್ತು ಪ್ರಕಾಶನ ಸಂಸ್ಥೆ ನಡೆಸುತ್ತಿದ್ದೆ. ನಾನು ಪುಸ್ತಕದಂಗಡಿ ಮುಚ್ಚಿ ಇದ್ದ ಪುಸ್ತಕದ ದಾಸ್ತಾನನೆಲ್ಲ ಕಾಂಗ್ರೆಸ್ ಮುಖಂಡ ಎಂ.ಎನ್.ಜೋಯಿಸರ ಮನೆಯಲ್ಲಿಟ್ಟು, ಬೆಂಗಳೂರಿಗೆ ಬಂದು ಪೌರವಾಣಿ ಪತ್ರಿಕೆ ಸಂಪಾದಕನಾಗಿ ನೋಂದಾಯಿಸಿಕೊಂಡೆ. ಮೈಸೂರು ಕಾಂಗ್ರೆಸ್ ಕಮಿಟಿ ಆಗ `ಮೈಸೂರ್ ಚಲೋ’ ಕೊನೆಯ ಚಳವಳಿಯನ್ನು ಆರಂಭಿಸುವ ವಿಚಾರ ಮಾಡುತ್ತಿತ್ತು.

ಪೌರವಾಣಿ ಪತ್ರಿಕೆಯಲ್ಲಿ ಮೈಸೂರು ಮಹಾರಾಜರ ಆಡಳಿತ ವೈಖರಿ ಕುರಿತು ವಿಶ್ವ ಕರ್ನಾಟಕ ಸಂಪಾದಕರಾಗಿದ್ದ ತಿರುಮಲ ತಾತಾಚಾರ್ಯ ಶರ್ಮರು 8 ಲೇಖನಗಳನ್ನು ಬರೆದುಕೊಟ್ಟರು. ಆರು ಲೇಖನಗಳನ್ನು ಪ್ರಕಟಿಸಿ ಆಗಿತ್ತು. ಆಗ ಚೀಫ್ ಸೆಕ್ರೆಟರಿಯವರು ನಮಗೊಂದು ನೋಟಿಸ್ ನೀಡಿ ಇನ್ನು ಮೇಲೆ ಯಾವುದೇ ಲೇಖನಗಳನ್ನು ಮತ್ತು ಅಗ್ರ ಲೇಖನಗಳನ್ನು ಪ್ರಕಟಿಸುವ ಮುನ್ನ ನಮಗೆ ಅದನ್ನು ಕಳುಹಿಸಿ, ಸರ್ಕಾರಕ್ಕೆ ಒಪ್ಪಿಗೆಯಾಗುವ ಲೇಖನಗಳನ್ನು ಮಾತ್ರ ಪ್ರಕಟಿಸತಕ್ಕದ್ದು. ಈ ಆಜ್ಞೆಯನ್ನು ಮಿರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಸರ್ಕಾರಕ್ಕೆ ಉಳಿದ ಲೇಖನಗಳನ್ನು ಕಳಿಸದೆಯೇ 7 ಮತ್ತು 8ನೇ ಕಂತಿನ ಲೇಖನಗಳನ್ನು ಅಚ್ಚುಮಾಡಿ ಅದರ ಜೊತೆಗೆ ಒಂದು Box news ಅನ್ನು ಹಾಕಿದೆವು. ಸರ್ಕಾರ ನಮ್ಮ ಮೇಲೆ ಪ್ರತಿಬಂಧಕಗಳನ್ನು ಹೇರಲು ತೊಡಗಿದೆ. ಸರ್ಕಾರದ ಈ ಬೆದರಿಕೆಗೆ ಸೊಪ್ಪು ಹಾಕದೆ 7 ಮತ್ತು 8ನೇ ಕಂತಿನ ಲೇಖನಗಳನ್ನು ಸರ್ಕಾರಕ್ಕೆ ಕಳಿಸದೆ ಪ್ರಕಟಿಸುತ್ತಿದ್ದೇವೆ. ಸರ್ಕಾರದ ಧೋರಣೆಯನ್ನು ಒಪ್ಪದೆ ಪ್ರತಿಭಟನಾರ್ಥವಾಗಿ ನಾಳೆಯಿಂದ ಪತ್ರಿಕೆಯನ್ನು ನಿಲ್ಲಿಸಿದ್ದೇವೆ ಎಂದು ಅಚ್ಚು ಮಾಡಲಾಯಿತು. ಮೂರು ದಿನದ ನಂತರ ಪೊಲೀಸರು ಬಂದು ಪತ್ರಿಕಾಲಯಕ್ಕೆ ಬೀಗ ಹಾಕಿದರು.

ಇನ್ನು ಇಲ್ಲಿದ್ದರೆ ಬಂಧಿಸಲಿದ್ದಾರೆ, ಬೇರೆ ಪ್ರಾಂತಕ್ಕೆ ಹೋಗಿ ಪೌರವಾಣಿಯನ್ನು ಅಲ್ಲಿ ಅಚ್ಚು ಮಾಡಿಸಿ, ಮೈಸೂರು ಸಂಸ್ಥಾನದ ಊರುಗಳಿಗೆ ಏಕೆ ಕಳುಹಿಸಬಾರದು ಎಂದು ಆಲೋಚಿಸಿದೆ. ನಾನು ಮತ್ತು ನನ್ನ ಸ್ನೇಹಿತ ಶ್ರೀಧರಮೂರ್ತಿ ಪಕ್ಕದ ಹಿಂದೂಪುರಕ್ಕೆ ಹೋದೆವು ಸುದರ್ಶನ ಪ್ರೆಸ್‍ನಲ್ಲಿ ಪತ್ರಿಕೆಯನ್ನು ಅಚ್ಚುಮಾಡಿ ಕೊಡಲು ಮಾಲಿಕರಲ್ಲೊಬ್ಬರಾದ ಆದಯ್ಯ ಶೆಟ್ಟರು ಒಪ್ಪಿಕೊಂಡರು. ನಾನು ಪೌರವಾಣಿ, ಪೌರವೀರ ಪೌರಮಾರ್ತಾಂಡ, ಪೌರಭಾಸ್ಕರ ಈ ಹೆಸರುಗಳಲ್ಲಿ ಪತ್ರಿಕೆಯನ್ನು ನೋಂದಾಯಿಸಿಕೊಂಡೆ. ಮೈಸೂರು ಸಂಸ್ಥಾನದೊಳಕ್ಕೆ ಹೋಗುವ ಪೌರವಾಣಿ ಪತ್ರಿಕೆಯನ್ನು ಸರ್ಕಾರ ತಡೆಹಿಡಿದರೆ ಮತ್ತೊಂದು ಹೆಸರಿನಲ್ಲಿ ಪತ್ರಿಕೆಯನ್ನು ಕಳುಹಿಸಬಹುದಲ್ಲಾ ಎಂಬ ದೂರದೃಷ್ಟಿಯಿಂದ 5 ಹೆಸರಿನ ಪತ್ರಿಕೆಗಳನ್ನು ನೋಂದಾಯಿಸಿಕೊಂಡಿದ್ದೆ. ಕೆಲದಿನಗಳ ಮೇಲೆ ನಮ್ಮ ನಿರೀಕ್ಷೆಯಂತೆಯೇ ಪೌರವಾಣಿ ಪತ್ರಿಕೆ ಮೈಸೂರು ಸಂಸ್ಥಾನದೊಳಕ್ಕೆ ಬರದಂತೆ ತಡೆದರು. ನಾವು ಪೌರವೀರ ಹೆಸರಿನಲ್ಲಿ ಪತ್ರಿಕೆಯನ್ನು ಅಲ್ಲಿಂದಾಚೆಗೆ ಕಳುಹಿಸಿದೆವು.

ಮೈಸೂರು ಚಲೋ ಸತ್ಯಾಗ್ರಹ ನಡೆದ 38 ದಿನಗಳೂ ಪತ್ರಿಕೆ ಮೈಸೂರಿನ ಎಲ್ಲ ಕಡೆಗೆ ತಲುಪಿತು. ಬೆಂಗಳೂರಿಗೆ ದಿನಕ್ಕೊಬ್ಬ ಸತ್ಯಾಗ್ರಹಿಯ ಕೈಯಲ್ಲಿ ಪತ್ರಿಕೆಯನ್ನು ಕಳುಹಿಸುತ್ತಿದ್ದರು. ಪತ್ರಿಕೆ ಹೊರತರುವುದಕ್ಕೆ ಸಹಾಯಕರಾಗಿರುವ ರುಮಾಲೆ ಚನ್ನಬಸವಣ್ಣ, ಮೈಸೂರಿನ ಸುಬ್ಬರಾಯರು, ತಿರುಮಲ ಶ್ರೀರಂಗಾಚಾರ್ ಮುಂತಾದವರಿದ್ದರು.

38 ದಿನಗಳು ಪೌರವಾಣಿ ನಡೆದದ್ದು ಬೆಂಗಳೂರಿನಲ್ಲಲ್ಲ. ಪೌರವಾಣಿ ಪತ್ರಿಕೆಯನ್ನು ಮೈಸೂರು ಸಂಸ್ಥಾನದಲ್ಲಿ ಮುಟ್ಟುಗೋಲು ಹಾಕಿಕೊಂಡ ನಂತರ ನಾವು ಮಾಡಿದ ಈ ಸಾಹಸದ ನಮ್ಮ ಕೆಲಸವನ್ನು ಅರಿಯದ ಬಾಬು ಕೃಷ್ಣಮೂರ್ತಿ ನನ್ನನ್ನು ಮೂರು ಕಾಸಿಗೆ ಹರಾಜು ಹಾಕಿದ್ದಾರೆ.

ಬಾಬು ಕೃಷ್ಣಮೂರ್ತಿಯವರ ಮೂದಲಿಕೆ ಮಾತನ್ನ ಕೇಳಿದಮೇಲೆ ಈ ಸುಳ್ಳನ್ನು, ಉತ್ಪ್ರೇಕ್ಷೆಯ ಮಾತನಾಡಲು ಯಾರು ಇವರಿಗೆ ಪ್ರೇರಣೆ ನೀಡಿರಬಹುದೆಂದು ಯೋಚನೆ ಮಾಡಿದೆ. ಆರ್‌ಎಸ್‍ಎಸ್‍ನಲ್ಲಿ ಇದ್ದುಹೋದ ಕೃಷ್ಣಮೂರ್ತಿಗೆ ಬಹುಕಾಲ ಧರ್ಮಾಂಧತೆಯ ವಿಷವುಣಿಸಲಾಗಿದೆ. ಅದು ಈ ರೀತಿ ನನ್ನ ಮೇಲೆ ಎಂದೂ ಇಲ್ಲದಷ್ಟು ಹರಿಹಾಯಲು ಪ್ರೇರಣೆ ನೀಡಿರಬಹುದು ಅಥವಾ ಆರ್‌ಎಸ್‍ಎಸ್ ಮುಖ್ಯರ ಆಜ್ಞಾನುಸಾರ ಕೃಷ್ಣಮೂರ್ತಿ ನಡೆದುಕೊಂಡಿರಬಹುದು.

ನನಗೆ ಪತ್ರಿಕೆ ಅಕಾಡೆಮಿ ಅವಾರ್ಡ್ ಬಂದಿದೆ. ನಾನು 5 ವರ್ಷಕಾಲ ಪೌರವಾಣಿಯ ಸಂಪಾದಕನಾಗಿದ್ದೆ, 38 ದಿನಗಳಲ್ಲ. Freelance Journalist ಆಗಿ ಪತ್ರಿಕೆಗಳಿಗೆ ಲೇಖನಗಳನ್ನೂ ಬರೆಯುತ್ತೇನೆ. ಮೈಸೂರು ಸಂಸ್ಥಾನದ ಪತ್ರಿಕಾಸಂಘ ನನ್ನ ಸಕ್ರಿಯ ಪತ್ರಿಕೋದ್ಯಮವನ್ನು ಗುರುತಿಸಿ ನನಗೆ ಆ ಸಂಘದ ಅಧ್ಯಕ್ಷತೆಯನ್ನು ನೀಡಿ ಗೌರವಿಸಿದೆ ಎಂಬುದನ್ನು ಬಾಬುಕೃಷ್ಣಮೂರ್ತಿ ತಿಳಿಯಬೇಕು.

ಬಾಬುಕೃಷ್ಣಮೂರ್ತಿಯವರು ಗೋಡ್ಸೆ ಬೆಂಗಳೂರಿಗೆ ಬಂದಿದ್ದ ವಿಚಾರ ಪ್ರಸ್ತಾಪಿಸಿದ್ದಾರೆ. ಅದರ ಪ್ರಸ್ತಾಪ ಮುಂದಿನ ಸಂಚಿಕೆಯಲ್ಲಿ…..

– ಎಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...