Homeಮುಖಪುಟರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ ಅನ್ನುತ್ತಾರೆ ತುಮಕೂರು ಜನ..

ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎನ್ನುತ್ತಾರೆ ರಂಗಸ್ವಾಮಿ...

- Advertisement -
- Advertisement -

ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಒಂದು ವಾರ ರಜೆ ಘೋಷಣೆ ಮಾಡಿರುವ ಬೆನ್ನಲ್ಲೇ ಜನರು ಕೂಡ ಮನೆಯಿಂದ ಹೊರಬಂದಿಲ್ಲ. ಬಿಸಿಲು, ಧೂಳು ಮತ್ತು ಕೊರೋನ ವೈರಸ್ ಭೀತಿಯಿಂದ ತುಮಕೂರು ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡುಬಂತು. ಸಾರ್ವಜನಿಕ ಸ್ಥಳಗಳು ಬಿಕೋ ಎನ್ನುತ್ತಿದ್ದವು. ಎರಡನೇ ಶನಿವಾರದ ಹಿನ್ನೆಲೆಯಲ್ಲಿ ಎಲ್ಲೆಡೆ ರಜೆಯ ವಾತಾವರಣವಿತ್ತು.

ಜನರಿಂದ ಗಿಜಿಗುಡುತ್ತಿದ್ದ ಬಿ.ಎಚ್.ರಸ್ತೆ, ಅಶೋಕ ರಸ್ತೆ, ಎಂ.ಜಿ.ರಸ್ತೆ, ಸೋಮೇಶ್ವರಪುರಂ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆಗಳಲ್ಲಿ ಜನರೇ ಕಂಡುಬರಲಿಲ್ಲ. ಆಟೋಗಳು ಕೂಡ ರಸ್ತೆಗೆ ಇಳಿದಿರಲಿಲ್ಲ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್‌ಗಳ ಸಂಚಾರವು ಕ್ಷೀಣವಾಗಿತ್ತು. ಕೆಲವೇ ಮಂದಿ ಇದ್ದ ಪ್ರಯಾಣಿಕರು ತಮ್ಮ ಲಗೇಜುಗಳನ್ನು ತಲೆ ಮೇಲೆ ಹೊತ್ತು ಸಾಗಿದರು. ವಾಹನ ಸೌಲಭ್ಯವಿಲ್ಲದೆ ಪ್ರಯಾಣಿಕರ ಪರದಾಡಿದರು.

ರೈಲ್ವೆ ನಿಲ್ದಾಣ, ಸರ್ಕಾರಿ ಬಸ್‌ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಮತ್ತು ಟೌನ್ ಹಾಲ್‌ನಲ್ಲಿ ಜನರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳು, ಚಿತ್ರಮಂದಿರಗಳು, ಸಭೆ ಸಮಾರಂಭಗಳು ನಡೆಸುವುದಕ್ಕೆ ನಿರ್ಬಂಧ ವಿಧಿಸಿದ್ದರಿಂದ ಎಲ್ಲೆಡೆಯೂ ಬಂದ್ ವಾತಾವರಣವಿತ್ತು. ಹೋಟೆಲ್‌ಗಳು, ಬೇಕರಿಗಳು ಮತ್ತು ಅಂಗಡಿ ಮಳಿಗೆಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಕೊರೋನಾ ಭೀತಿಯಿಂದ ಕಡಿಮೆಯಾಗಿದೆ.

ರಾಜ್ಯ ಸರ್ಕಾರ ಕೊರೋನಾ ವೈರಸ್ ಹರಡದಂತೆ ನಿಯಂತ್ರಣ ಹೇರಿರುವುದಕ್ಕೆ ಬಹುತೇಕರು ವಿರೋಧ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ಕೊರೊನಾ ವೈರಸ್ ಬಾದಿತರು ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೆ ಸ್ವಲ್ಪ ಪ್ರಮಾಣದಲ್ಲಾದರೂ ನಿಯಂತ್ರಿಸಬಹುದಿತ್ತು. ಆದರೆ 70ಕ್ಕೂ ಹೆಚ್ಚು ಪ್ರಕರಣಗಳು ಪತ್ರೆಯಾದ ನಂತರ ಬಹಳ ತಡವಾಗಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಈಗ ರಜೆ ನೀಡುವುದರಿಂದ ಪ್ರಯೋಜವಾಗುವುದಿಲ್ಲ. ರಜೆ ನೀಡಿರುವುದು ಜನರು ಮತ್ತಷ್ಟು ಭೀತಿಗೊಳ್ಳಲು ಕಾರಣವಾಗಿದೆ. ಸರ್ಕಾರ ಮಾಸ್ಕ್‌ಗಳನ್ನು ಧರಿಸಬೇಕು ಎಂದು ಹೇಳುತ್ತದೆ ಆದರೆ ಯಾವ ಭಾಗದಲ್ಲೂ ಮಾಸ್ಕ್ ಗಳು ದೊರೆಯುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದೆ.

ಹೋಟೆಲ್ ಉದ್ಯಮ ಲಾಸ್ ಆಗುತ್ತಿದೆ. ಕಟ್ಟಡ ಕಾರ್ಮಿಕರು, ದಿನಗೂಲಿ ನೌಕರರಿಗೆ ಕೆಲಸ  ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಧ್ಯಮಗಲು ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಇದೇ ಕಾರಣಕ್ಕೆ ಜನರು ಮತ್ತಷ್ಟು ಭಯಗ್ರಸ್ತರಾಗಿದ್ದಾರೆ. ರಾಜ್ಯದಲ್ಲಿ ಏನಾಗುತ್ತಿದೆ ಎಂದು ತಿಳಿಯುತ್ತಲೇ ಇಲ್ಲ. ಕೊರೋನ ವೈರಸ್ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತುಹೋಗುವ ಭೀತಿ ಎದುರಾಗಿದೆ. ಸರ್ಕಾರಗಳು ಜನರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ ಎಂದು ರಂಗಸ್ವಾಮಿ ಆರೋಪಿಸಿದರು.

ಬೀದಿಬದಿ ವ್ಯಾಪಾರಿಗಳು, ಹಣ್ಣಿನ ವ್ಯಾಪಾರಿಗಳು, ಕಾಫಿ ಟೀ ಅಂಗಡಿಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ. ಟೌನ್ ಹಾಲ್‌ನಲ್ಲಿ ಶೆಟ್ಟಿಹಳ್ಳಿ ಟೀ ಸ್ಟಾಲ್ ತುಮಕೂರಿನಲ್ಲೇ ಪ್ರಸಿದ್ದವಾದುದು. ಒಳ್ಳೆಯ ಟೀ ಕೊಡುತ್ತಿದ್ದರು. ಅದೇ ಕಾರಣಕ್ಕೆ ಜನರು ಹುಡುಕಿಕೊಂಡು ಹೋಗಿ ಶೆಟ್ಟಿಹಳ್ಳಿ ಟೀ ಸ್ಟಾಲ್ ನಲ್ಲಿ ಬಗೆಬಗೆಯ ಟೀ ಸವಿಯುತ್ತಿದ್ದರು. ಕೋವಿಡ್-19 ಬಂದ ಮೇಲೆ ಜನರೇ ಇಲ್ಲದಂತಾಗಿದೆ. ನಮಗೆ ವ್ಯಾಪಾರ ನಡೆಯುತ್ತಿಲ್ಲ. ಜೀವನ ನಡೆಯಬೇಕಲ್ಲ.ಅಂಗಡಿ ತೆರೆದಿದ್ದೇನೆ. ಜನರು ಬರುತ್ತಿಲ್ಲ. ಎಲ್ಲ ಭಯ ಬಿದ್ದಿದ್ದಾರೆ ಸರ್ ಎಂದು ನಗುತ್ತಲೇ ಹೇಳುತ್ತಾರೆ ಟೀ ಸ್ಟಾಲ್ ಉಮೇಶ್.

ಒಟ್ಟಾರೆ ಕೊರೊನಾ ವೈರಸ್ ಸುದ್ದಿ ಹರಡುತ್ತಿರುವ ವೇಗದಲ್ಲಿಯೇ ವ್ಯಾಪಾರ-ವಹಿವಾಟು ಕುಸಿಯುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಸರ್ಕಾರಕ್ಕೆ ಬರಬೇಕಾದ ಪರೋಕ್ಷ ತೆರಿಗೆಯ ಪ್ರಮಾಣದಲ್ಲೂ ಇಳಿಕೆ ಕಂಡುಬರುತ್ತದೆ. ಸರ್ಕಾರವನ್ನು ನಡೆಸುವುದು ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವೂ ತನ್ನ ಪಾಲಿನ ಹಣವನ್ನು ನೀಡುತ್ತಿಲ್ಲ. ಕೊರೋನಾ ವೈರಸ್ ಆರ್ಥಿಕ ವ್ಯವಸ್ಥೆ ಮತ್ತಷ್ಟು ಕುಸಿಯಲು ಕಾರಣವಾಗಬಹುದು. ಹೀಗಾಗಿ ಸರ್ಕಾರ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನರನ್ನು ಬೀತಿಯಿಂದ ಹೊರತರಬೇಕು. ವ್ಯಾಪಾರ ವಹಿವಾಟು ಮತ್ತು ಆರ್ಥಿಕ ಚೇತರಿಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಸಮಸ್ಯೆ ಎದುರಿಸಲು ಸಾಧ್ಯವಾಗದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...