Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...