Homeಮುಖಪುಟವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ : ಬಾಂಬೆ ಹೈಕೋರ್ಟ್‌

- Advertisement -
- Advertisement -

ವೈಯಕ್ತಿಕ ವಾಟ್ಸಪ್ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ವೈಯಕ್ತಿಕ ಖಾತೆಗಳಿಗೆ ಅಶ್ಲೀಲ ಮಾಹಿತಿ ಕಳಿಸಿದರೆ ಅದು ಭಾರತ ದಂಡ ಸಂಹಿತೆ ಸೆಕ್ಷನ್ 294ರಡಿ ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ.ಕಾಮ್ ವರದಿ ಮಾಡಿದೆ.

ಇಬ್ಬರ ನಡುವಿನ ವಾಟ್ಸಪ್ ವೈಯಕ್ತಿಕ ಖಾತೆಗಳು ಸಾರ್ವಜನಿಕ ಸ್ಥಳವಲ್ಲ. ಇಬ್ಬರ ನಡುವೆ ವೈಯಕ್ತಿಕ ವಾಟ್ಸಪ್ ಖಾತೆಗಳಲ್ಲಿ ಆಶ್ಲೀಲ ಮಾಹಿತಿ ವಿನಿಮಯ ಮಾಡಿಕೊಂಡರೆ ಅದು ಅಪರಾಧವಲ್ಲ. ಆದರೆ ಇದೇ ಅಶ್ಲೀಲ ಮಾಹಿತಿಯನ್ನು ವಾಟ್ಸಪ್ ಗ್ರೂಪ್ ಗೆ ಕಳಿಸಿದರೆ ಅದನ್ನು ಸಾರ್ವಜನಿಕ ಸ್ಥಳವೆಂದು ಕರೆಯಬಹುದು. ಏಕೆಂದರೆ ವಾಟ್ಸಪ್ ಗ್ರೂಪ್ ನಲ್ಲಿ ಹಲವು ಸದಸ್ಯರು ಇರುತ್ತಾರೆ. ಅವರೆಲ್ಲರೂ ಆ ಮಾಹಿತಿಯನ್ನು ಓದುತ್ತಾರೆ ಮತ್ತು ಹೊಂದಿರುತ್ತಾರೆ ಎಂದು ಬಾಂಬೆ ಹೈಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಟಿ.ವಿ ವಲವಾಡೆ ಮತ್ತು ಎಂ.ಜಿ. ಸೆವ್ಲಿಕರ್ ಅವರಿದ್ದ ವಿಭಾಗೀಯ ಪೀಠ ವೈಯಕ್ತಿಕ ಈ ತೀರ್ಪು ನೀಡಿದ್ದು ಚರ್ಚೆಗೆ ಕಾರಣವಾಗಿದೆ.

ಪ್ರಕರಣವೊಂದರಲ್ಲಿ ಆರೋಪಿತನ ವಿರುದ್ಧ ಆತನ ಪತ್ನಿಯು 2018ರಲ್ಲಿ ನಾಂದೇಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆತ ಅವಳ ವೈಯಕ್ತಿಕ ವಾಟ್ಸಪ್ ಖಾತೆಗೆ “ನೀನು ವ್ಯಭಿಚಾರಿಣಿ, ದೇಹವನ್ನು ವ್ಯಾಪಾರ ಮಾಡಿಕೊಂಡು ಹಣ ಗಳಿಸುತ್ತಿದ್ದಿಯ” ಎಂಬ ಅಶ್ಲೀಲ ಮಾಹಿತಿ ಕಳಿಸಿದ್ದ.

ಈ ಸಂಬಂಧ ಪತಿಯ ವಿರುದ್ದ ಭಾರತ ದಂಡ ಸಂಹಿತೆ ಸೆಕ್ಷನ್ 294, 500, 506 ಮತ್ತು 507ರಡಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತು. ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ದ್ವಿಸದಸ್ಯ ಪೀಠ ಐಪಿಸಿ ಸೆಕ್ಷನ್ 294ನ್ನು ಪರಿಶೀಲಿಸಿದಾಗ ಆರೋಪಿತ ವ್ಯಕ್ತಿ ಆಕೆಯ ವೈಯಕ್ತಿಕ ವಾಟ್ಸಪ್ ಖಾತೆಗೆ ಕಳಿಸಿದ್ದಾನೆ. ಇದು ಸಾರ್ವಜನಿಕ ಸ್ಥಳವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಈ ಪ್ರಕರಣದಲ್ಲಿ ಆರೋಪಿತ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾಹಿತಿ ಪ್ರದರ್ಶಿಸಿಲ್ಲ. ಸಾಮಾಜಿಕ ಜಾಲತಾಣ ವಾಟ್ಸಪ್‌ನ ವೈಯಕ್ತಿಕ ಖಾತೆ ಸಾರ್ವಜನಿಕ ಸ್ಥಳವಲ್ಲ ಎಂಬುದನ್ನು ಪುನರುಚ್ಚರಿಸಿದೆ.

ಸಂದೇಶ ಪ್ರಕಟವಾಗಿರುವುದು ವಾಟ್ಸಪ್‌ನ ಇಬ್ಬರ ವೈಯಕ್ತಿಕ ಖಾತೆಯಲ್ಲಿ. ಅದು ಒಬ್ಬರಿಂದ ಇನ್ನೊಬ್ಬರಿಗೆ ಕಳಿಸಿರುವ ಮಾಹಿತಿ. ಈ ಕೊನೆಯಿಂದ ಆ ಕೊನೆಗೆ ಮಾತ್ರ ಮಾಹಿತಿ ಹೋಗಿದೆ. ಒಬ್ಬರು ಕಳಿಸಿದ್ದರೆ ಮತ್ತೊಬ್ಬರು ಆ ಮಾಹಿತಿಯನ್ನು ಸ್ವೀಕರಿಸಿದ್ದಾರೆ. ಅವರಿಬ್ಬರೇ ಆ ಮಾಹಿತಿ ಹೊಂದಿದ್ದು ಅವರಿಬ್ಬರು ಮಾತ್ರ ಓದಲು ಸಾಧ್ಯವಾಗಿದೆ. ಇವರಿಬ್ಬರ ನಡುವೆ ಬೇರೆ ಯಾರೂ ಇಲ್ಲ. ವಾಟ್ಸಪ್ ಕೂಡ ಈ ಮಾಹಿತಿಯನ್ನು ಓದಿಲ್ಲ. ಈ ಮಾಹಿತಿ ಸುಭದ್ರವಾಗಿದೆ ಮತ್ತು ಬೀಗಮುದ್ರೆ ಹಾಕಲಾಗಿದೆ. ಮಾಹಿತಿ ಕಳಿಸಿದವರು ಮತ್ತು ಸ್ವೀಕರಿಸಿದವರು ಮಾತ್ರ ಬೀಗ ತೆಗೆದು ನೋಡುವ, ಓದುವ ಅವಕಾಶವಿದೆ. ವಾಟ್ಸಪ್ ಕೂಡ ಆ ಮಾಹಿತಿಯನ್ನು ತನ್ನ ಸರ್ವರ್ ನಲ್ಲಿ ಸಂಗ್ರಹಿಸಿಲ್ಲ.

ಈ ಮಾಹಿತಿ ತುಂಬಾ ವೈಯಕ್ತಿಕ. ವಾಟ್ಸಪ್ ಗ್ರೂಪ್ ನಲ್ಲಿ ಕಳಿಸಿದರೆ ಎಲ್ಲರೂ ಹೊಂದುತ್ತಾರೆ ಮತ್ತು ಓದುತ್ತಾರೆ. ಆಗ ಕಾನೂನು ಕ್ರಮ ಕೈಗೊಳ್ಳಬಹುದು. ಆದರೆ ಅರ್ಜಿದಾರರು ಈ ಪ್ರಕರಣದಲ್ಲಿ ಆರೋಪಿಸಿರುವಂತೆ ಆಧುನಿಕ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಅವಮಾನ ಮಾಡಿರುವುದು ಸ್ಪಷ್ಟವಾಗಿದೆ. ಹಾಗಾಗಿ ಇದು ಭಾರತ ದಂಡ ಸಂಹಿತೆ 509ರಡಿ ಬರುತ್ತದೆ ಎಂದು ನ್ಯಾಯ ಪೀಠ ಹೇಳಿದೆ ಎಂದು ಲೈವ್ ಲಾ ತಿಳಿಸಿದೆ.

ಮೂಲ: ಲೈವ್ ಲಾ.ಕಾಮ್

ಕನ್ನಡಕ್ಕೆ: ಕೆ.ಈ.ಸಿದ್ದಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...