Homeಮುಖಪುಟನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ನಾಳೆಯೇ ಬಹುಮತ ಸಾಬೀತುಮಾಡಿ: ಕಾಂಗ್ರೆಸ್‌ಗೆ ಮಧ್ಯಪ್ರದೇಶ ಗವರ್ನರ್‌ ತಾಕೀತು

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ "ಬಿಡುಗಡೆ" ಮಾಡುವಂತೆ ಒತ್ತಾಯಿಸಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶ ರಾಜ್ಯಪಾಲರು ಸೋಮವಾರವೇ ವಿಶ್ವಾಸಮತ ಪರೀಕ್ಷೆ ನಡೆಸುವಂತೆ ಸ್ಪೀಕರ್‌ಗೆ ಸೂಚಿಸಿದ್ದು, ವಿಶ್ವಾಸಮತ ಯಾಚನೆಯನ್ನು “ಮುಂದೂಡಲು, ವಿಳಂಬ ಮಾಡಲು ಅಥವಾ ಅಮಾನತುಗೊಳಿಸಲು” ಸಾಧ್ಯವಿಲ್ಲ ಎಂದಿದ್ದಾರೆ.

ಕಮಲ್ ನಾಥ್ ಅವರ 15 ತಿಂಗಳ ಸರ್ಕಾರಕ್ಕೆ 22 ಕಾಂಗ್ರೆಸ್ ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರು ಬಹುಮತ ಪರೀಕ್ಷೆ ನಡೆಸುವಂತೆ ವಿಧಾನಸಭಾ ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿಗೆ ನಿರ್ದೇಶನ ನೀಡಿದ್ದಾರೆ.

“ಮಧ್ಯಪ್ರದೇಶದ ವಿಧಾನಸಭೆಯ ಅಧಿವೇಶನವು 2020ರ ಮಾರ್ಚ್ 16 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ, ಮತ್ತು ನಾನು ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ, ಮೊದಲು ನಡೆಸಬೇಕಾದ ಕೆಲಸ ಬಹುಮತ ಸಾಬೀತುಪಡಿಸುವುದಾಗಿದೆ” ಎಂದು ರಾಜ್ಯಪಾಲರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

“ವಿಶ್ವಾಸಮತ ಯಾಚನೆಯು ಗುಂಡಿಯನ್ನು ಒತ್ತುವ ಮೂಲಕ ನಡೆಯುತ್ತದೆ, ಬೇರೆ ಯಾವುದೇ ಮತದಾನ ಸ್ವೀಕಾರಾರ್ಹವಲ್ಲ” ಎಂದು ಅವರು ಹೇಳಿದರು.

ಆರು ಬಂಡಾಯ ಮಂತ್ರಿಗಳ ರಾಜೀನಾಮೆಯನ್ನು ಸ್ಪೀಕರ್ ಶನಿವಾರ ಅಂಗೀಕರಿಸಿದ್ದಾರೆ. ಈ ನಿರ್ಧಾರದಿಂದಾಗಿ ಸದನದಲ್ಲಿ ಬಹುಮತದ ಸಂಖ್ಯೆ 113ಕ್ಕೆ ಕುಸಿದಿದೆ. ಇದರಿಂದಾಗಿ 230 ಸದಸ್ಯರ ವಿಧಾನಸಭೆಯ ಬಲವು 222 ಕ್ಕೆ ಕುಗ್ಗಿದೆ. (ಇಬ್ಬರು ಶಾಸಕರ ಸಾವಿನಿಂದಾಗಿ ಎರಡು ಸ್ಥಾನಗಳು ಈಗಾಗಲೇ ಖಾಲಿ ಇದ್ದವು). ಕಾಂಗ್ರೆಸ್ ಸದನದಲ್ಲಿ 108 ಶಾಸಕರನ್ನು ಹೊಂದಿದ್ದು, ಏಳು ಮಿತ್ರ ಶಾಸಕರ ಬೆಂಬಲವಿದೆ. ಉಳಿದ ಬಂಡಾಯ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದರೆ, ಕಾಂಗ್ರೆಸ್ ಬಲವು 90ಕ್ಕಿಂತ ಕಡಿಮೆಗೆ ಕುಸಿದು ಬಹುಮತಕ್ಕಿಂತ ಕೆಳಗಿರುತ್ತದೆ ಮತ್ತು 107 ಶಾಸಕರನ್ನು ಹೊಂದಿರುವ ಬಿಜೆಪಿ ದೊಡ್ಡ ಪಕ್ಷವಾಗಲಿದೆ.

ಅತೃಪ್ತ ಶಾಸಕರು ಪ್ರಸ್ತುತ ಬೆಂಗಳೂರಿನಲ್ಲಿ ಒಟ್ಟಿಗೆ ಸೇರಿದ್ದಾರೆ. ಬಿಜೆಪಿ ಅವರನ್ನು ಸೆರೆಯಲ್ಲಿಟ್ಟುಕೊಂಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿ ಕಮಲ್ ನಾಥ್ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಶಾಸಕರ “ಬಿಡುಗಡೆ” ಮಾಡುವಂತೆ ಒತ್ತಾಯಿಸಿದ್ದಾರೆ.

“ದಯವಿಟ್ಟು ಕೇಂದ್ರ ಗೃಹ ಸಚಿವರಾಗಿ ನಿಮ್ಮ ಅಧಿಕಾರವನ್ನು ಬಳಸಿ ಅವರನ್ನು ಬಂಧಮುಕ್ತಗೊಳಿಸಿ. ಇದರಿಂದಾಗಿ ಬಂಧಿತರಾಗಿರುವ 22 ಕಾಂಗ್ರೆಸ್ ಶಾಸಕರು ಸುರಕ್ಷಿತವಾಗಿ ಮಧ್ಯಪ್ರದೇಶವನ್ನು ತಲುಪಬಹುದು ಮತ್ತು ಮಾರ್ಚ್ 16 ರಿಂದ ಪ್ರಾರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಯಾವುದೇ ಆಮಿಷ ಮತ್ತು ಭಯವಿಲ್ಲದೆ ಭಾಗವಹಿಸಬಹುದು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...