Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...