Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...