Homeಆರೋಗ್ಯಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

ಭಯಪಡಬೇಕಿಲ್ಲ, ಇದು ಕೇವಲ ಜ್ವರದಂತೆ ಅಷ್ಟೇ: ಕೊರೊನಾ ವೈರಸ್‌ನಿಂದ ಗುಣಮುಖನಾದವನ ಅನುಭವ

- Advertisement -
- Advertisement -

ಕೊರೊನಾ ವೈರಸ್‌ ಬಗ್ಗೆ ಭಯಪಡಬೇಕಾಗಿಲ್ಲ. ಆರೋಗ್ಯವಂತ ವ್ಯಕ್ತಿಗಳಿಗೆ ಚಿಕಿತ್ಸೆಯು ತುಂಬಾ ಸುಗಮವಾಗಿರುತ್ತದೆ ಎಂದು ದೆಹಲಿಯಲ್ಲಿ ಕೊರೊನಾ ಬಾಧಿತನಾಗಿ ಚೇತರಿಸಿಕೊಂಡ 45 ವರ್ಷದ ಉದ್ಯಮಿಯೊಬ್ಬರು ತಿಳಿಸಿದ್ದಾರೆ.

ದೆಹಲಿಯ ಸಫ್ದರ್‌ ಜಂಗ್ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಅಲ್ಲಿನ ಸೌಲಭ್ಯಗಳನ್ನು ಶ್ಲಾಘಿಸಿದ್ದಾರೆ. “ಭಯಪಡುವ ಅಗತ್ಯವಿಲ್ಲ. ಇದು ಸಾಮಾನ್ಯ ಜ್ವರದಂತೆ. ಆರೋಗ್ಯವಂತ ವ್ಯಕ್ತಿಯು ವೈದ್ಯರನ್ನು ತಲುಪಿದರೆ, ಸುಲಭದಲ್ಲಿ ಗುಣಪಡಿಸಬಹುದು. ನಮ್ಮ ಆರೋಗ್ಯ ವ್ಯವಸ್ಥೆಯು ಉತ್ತಮವಾಗಿದೆ ಎಂದಿದ್ದಾರೆ.

ಭಾನುವಾರದಂದು ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾದ ಅವರು ತಮ್ಮ ಅನುಭವವನ್ನು ವಿವರಿಸುತ್ತಾ, ಆಸ್ಪತ್ರೆಯ ವೈದ್ಯರ ತಂಡವು ತುಂಬಾ ಧೈರ್ಯ ತುಂಬಿದೆ. ಇನ್ನೂ 14 ದಿನಗಳ ಕಾಲ ಮನೆಯಲ್ಲಿಯೇ ಇರಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಫೆಬ್ರವರಿ 25ರಂದು ಯುರೋಪಿನಿಂದ ಮರಳಿದೆ ಮತ್ತು ಮರುದಿನ ನನಗೆ ಜ್ವರ ಬಂತು. ವೈದ್ಯರ ಬಳಿಗೆ ಹೋದೆ. ಇದು ಗಂಟಲಿನ ಸೋಂಕು ಎಂದು ಹೇಳಿದ ಅವರು ನನಗೆ ಮೂರು ದಿನಗಳ ಕಾಲ ಔಷಧಿ ನೀಡಿದರು. ನಾನು 28 ರಂದು ಚೇತರಿಸಿಕೊಂಡೆ. ಆದರೆ 29 ರಂದು ಮತ್ತೆ ಜ್ವರ ಬಂತು. ಆಗ ನಾನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಹೋದೆ. ಮಾರ್ಚ್ 1 ರಂದು ಕೊರೊನಾ ಪರೀಕ್ಷೆ ಮಾಡಿಸಿದಾಗ ಅದು ಇರುವುದು ಖಚಿತವಾಯಿತು” ಎಂದು ಅವರು ಹೇಳಿದರು.

“ಪ್ರಾಮಾಣಿಕವಾಗಿ, ನನಗೆ ಸೋಂಕು ತಗುಲಿದೆ ಎಂದು ಅವರು ಹೇಳಿದ ಸಮಯದಲ್ಲಿ ಮಾತ್ರ ಇದು ಕಷ್ಟವೆನಿಸಿತ್ತು. ಆದರೆ ಮರುದಿನ ನನ್ನನ್ನು ಸ್ಥಳಾಂತರಿಸಿದ ಸಫ್ದರ್ ಜಂಗ್‌ ವೈದ್ಯರ ತಂಡವು ನನ್ನನ್ನು ನೋಡಲು ಬಂದಾಗ, ಅವರು ನನ್ನನ್ನು ತುಂಬಾ ಆರಾಮದಾಯಕವಾಗಿಸಿದರು ‘ಇದು ಗುಣಪಡಿಸಬಹುದು , ನೀವು ಆರೋಗ್ಯವಂತ ವ್ಯಕ್ತಿ ಮತ್ತು ಅದು ಕೇವಲ ಶೀತ ಮತ್ತು ಕೆಮ್ಮು ಇದ್ದಷ್ಟೇ ಮಾತ್ರ. ಹಾಗಾಗಿ ಅದು ಹೋಗುತ್ತದೆ. ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ‘ಎಂದು ಅವರು ಹೇಳಿದರು.

“ನಾನು ವೈದ್ಯನಲ್ಲ. ಆದರೆ ಇದು ಸಾಮಾನ್ಯ ಶೀತ ಮತ್ತು ಕೆಮ್ಮುಗಿಂತ ಸ್ವಲ್ಪ ಭಿನ್ನವಾಗಿತ್ತು. ನಾನು ಸಫ್ದರ್ಜಂಗ್‌ನ ಪ್ರತ್ಯೇಕ ವಾರ್ಡ್‌ನಲ್ಲಿದ್ದೆ, ಇದಕ್ಕಾಗಿ ಭಾರತ ಸರ್ಕಾರವು ಕಲ್ಪಿಸಿರುವ ಸೌಲಭ್ಯಗಳು ತುಂಬಾ ಉತ್ತಮವಾಗಿವೆ, ಇದು ನಾನು ನೋಡಿದ ಅತ್ಯುತ್ತಮವಾದ ಆಸ್ಪತ್ರೆಯಾಗಿದೆ. ನಾನು ಸ್ನಾನಗೃಹದೊಂದಿಗೆ ಖಾಸಗಿ ಕೋಣೆಯನ್ನು ಹೊಂದಿದ್ದೆ” ಎಂದು ಅವರು ಹೇಳಿದರು.

ನಗರದಲ್ಲಿ ವರದಿಯಾದ ಏಳು ಸಕಾರಾತ್ಮಕ ಪ್ರಕರಣಗಳಲ್ಲಿ ದೆಹಲಿ ನಿವಾಸಿಯೂ ಸೇರಿದ್ದಾರೆ. ಈ ಪೈಕಿ ಈ ಹಿಂದೆ COVID-19 ಖಾಯಿಲೆ ಇದೆಯೆಂದು ಪರೀಕ್ಷೆಯಿಂದ ಖಚಿತವಾಗಿ ಆಸ್ಪತ್ರೆಗಳಿಗೆ ದಾಖಲಾಗಿರುವ ಇಬ್ಬರು ವ್ಯಕ್ತಿಗಳು ಗುಣಮುಖರಾಗಿದ್ದು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...